ಗ್ರಾಮೀಣ ಭಾಗಕ್ಕೆ ಸಾರಿಗೆ ಸೌಲಭ್ಯ ಶೀಘ್ರ

ಸಾಧನೆ ಮಾಡುವ ಹಂಬಲವಿದೆ | ರಾಜ್ಯ ಸಾರಿಗೆ ನಿಗಮದ ಅಧ್ಯಕ್ಷ ಸತ್ಯನಾರಾಯಣ ಭರವಸೆ

Team Udayavani, Jun 10, 2019, 12:41 PM IST

tk-tdy-2..

ಶಿರಾ ನಗರದ ಸಾರಿಗೆ ಘಟಕದಲ್ಲಿ ಜರುಗಿದ ಸಾರಿಗೆ ಅದಾಲತ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿರಾ ಶಾಸಕ ಹಾಗೂ ಸಾರಿಗೆ ನಿಗಮದ ಅಧ್ಯಕ್ಷರಾದ ಬಿ.ಸತ್ಯನಾರಾಯಣ.

ಶಿರಾ: ಸಾರಿಗೆ ನಿಗಮ ಮಂಡಳಿ ಅಧ್ಯಕ್ಷರಾದ ನಂತರ ಹಂತ ಹಂತವಾಗಿ ನಿಗಮ ಮೂಲಗಳ ಸಮಸ್ಯೆಗಳ ಬಗ್ಗೆ ಗಮನಹರಿಸಿದ್ದು, ಗ್ರಾಮೀಣ ಸಾರಿಗೆ ಕಡೆ ಹೆಚ್ಚಿನ ಗಮನ ಹರಿಸುವುದರ ಮೂಲಕ ಗ್ರಾಮೀಣ ಸಾರಿಗೆ ರಸ್ತೆಗೆ ತುರ್ತುಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಸಕ ಹಾಗೂ ರಾಜ್ಯ ಸಾರಿಗೆ ನಿಗಮದ ಅಧ್ಯಕ್ಷ ಬಿ.ಸತ್ಯನಾರಾಯಣ ತಿಳಿಸಿದರು.

ನಗರದ ಸಾರಿಗೆ ಘಟಕದಲ್ಲಿ ಶನಿವಾರ ನಡೆದ ಸಾರಿಗೆ ಅದಾಲತ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಹಳ್ಳಿಗೆ ಸಾರಿಗೆ ಸೌಲಭ್ಯ: ನನಗೆ ಈ ಇಲಾಖೆ ಹೊಸದಾಗಿರಬಹುದು. ಆದರೆ ಸದರಿ ಇಲಾಖೆಯಲ್ಲಿ ಒಳ್ಳೆ ಸಾಧನೆ ಮಾಡುವ ಹಂಬಲ ನನಗಿದೆ. ಬರದ ನಾಡುಗಳ ಅನೇಕ ಗ್ರಾಮೀಣ ಭಾಗಗಳು ಇಂದಿಗೂ ಕೆಂಪು ಬಸ್ಸಿನ ಮುಖ ನೋಡದ ಹಳ್ಳಿಗಳಿವೆ. ಅಂತಹ ಅಗತ್ಯವಾದ ಗ್ರಾಮೀಣ ಪ್ರದೇಶಗಳ ಹಳ್ಳಿಗೆ ಸಾರಿಗೆ ಸೌಲಭ್ಯ ಒದಗಿಸಬೇಕಾಗಿದೆ ಎಂದರು.

ಚಿತ್ರದುರ್ಗದ ವಿಭಾಗಕ್ಕೆ ಶಿರಾ ಘಟಕವನ್ನು ಈ ಹಿಂದೆ ಸೇರಿಸಲಾಗಿತ್ತು. ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿತ್ತು. ನಾನು ನಿಗಮದ ಅಧ್ಯಕ್ಷನಾದ ಕೋಡಲೇ ಶಿರಾ ಘಟಕವನ್ನು ತುಮಕೂರಿಗೆ ಮತ್ತೆ ವರ್ಗಾಯಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ತಿಳಿಸಿದರು.

ಸಾರಿಗೆ ಅದಾಲತ್‌ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಕುಂದು ಕೊರತೆಗಳ ಬಗ್ಗೆಯೂ ಚರ್ಚಿಸಲಾಗಿ ಸಾರ್ವಜನಿಕರು ಸಾರಿಗೆ ನಿಗಮದ ಸಮಸ್ಯೆಯನ್ನು ಶಾಸಕರ ಗಮನಕ್ಕೆ ತಂದರು.

ನಗರಕ್ಕೆ ಬರುತ್ತಿಲ್ಲ ಬಸ್‌: ಶಿರಾ ನಗರದ ಬಿಜೆಪಿ ಘಟಕದ ಅಧ್ಯಕ್ಷ ಬಿ.ಗೋವಿಂದಪ್ಪ ಮಾತನಾಡಿ, ಸತ್ಯನಾರಾಯಣ ಅಧ್ಯಕ್ಷರಾದ ನಂತರ ಚಿತ್ರದುರ್ಗಕ್ಕೆ ಸೇರಿದ್ದ ಶಿರಾ ಘಟಕವನ್ನು ಮತ್ತೆ ತುಮಕೂರು ವಿಭಾಗಕ್ಕೆ ಸೇರ್ಪಡೆ ಮಾಡಿಸಿದ್ದಕ್ಕೆ ಹೆಮ್ಮೆ ಇದೆ. ಈವರೆಗೂ ರಾತ್ರಿ 8 ಗಂಟೆ ನಂತರ ಬೆಂಗಳೂರು-ತುಮಕೂರು ಮಾರ್ಗವಾಗಿ ಬರುವ ಸಾರಿಗೆ ಬಸ್‌ಗಳು ಶಿರಾ ನಗರಕ್ಕೆ ಬರುತ್ತಿಲ್ಲ. ಈ ಬಗ್ಗೆ ಸಾಕಷ್ಟು ದೂರು ನೀಡಿದರೂ ಪ್ರಯೋಜನವಾಗಿಲ್ಲ. ಚಾಲಕ, ನಿರ್ವಾಹಕರು ಪ್ರಯಾಣಿಕರ ಮೇಲೆ ದಬ್ಟಾಳಿಕೆ ನಡೆಸುತ್ತಿದ್ದಾರೆ ಎಂದು ದೂರಿದರು.

ಡಿಎಸ್‌ಎಸ್‌ ಕಾರ್ಯಕರ್ತ ನರಸಿಂಹಯ್ಯ ಮಾತನಾಡಿ, ದೊಡ್ಡ ಆಲದಮರದ ಮೂಲಕ ಕಾಳಾಪುರದ ಮಾರ್ಗವಾಗಿ ಬಡವನಹಳ್ಳಿ ಕಥಮರದವರೆಗೆ ಸಾರಿಗೆ ವ್ಯವಸ್ಥೆ ಕಲ್ಪಿಸಿದರೆ ಈ ಭಾಗದ ಜನಕ್ಕೆ ಅನುಕೂಲವಾಗಲಿದೆ ಎಂದರು.

ಸಮಸ್ಯೆ ನಿವಾರಿಸುವ ಭರವಸೆ: ಚಿತ್ರದುರ್ಗ ವಿಭಾಗೀಯ ನಿಯಂತ್ರಣಾಧಿಕಾರಿಪ್ರಸನ್ನಕುಮಾರ್‌ ಬಾಲಾನಾಯ್ಕ ಮಾತನಾಡಿ, ಸಾರ್ವಜನಿಕರ ಅಹವಾಲುಗಳಿಗೆ ನಿಗಮ ಕೂಡಲೇ ಗಮನಹರಿಸಲಿದೆ ಎಂದು ಭರವಸೆ ನೀಡಿದರು.

ಸೀಗಲಹಳ್ಳಿ ವೀರೇಂದ್ರ ಮಾತನಾಡಿ, ಪ.ನಾ.ಹಳ್ಳಿ ಸಮೀಪದ ಸೀಗಲಹಳ್ಳಿ ಒಂದು ಕುಗ್ರಾಮದಂತಾಗಿದೆ. ಈ ಗ್ರಾಮದಿಂದ ನಡೆದುಕೊಂಡು ಮುಖ್ಯರಸ್ತೆಗೆ ಬಂದು ಶಿರಾ ಕಡೆ ಬಸ್‌ ಹತ್ತಬೇಕಿದ್ದು, ಈ ಮಾರ್ಗವಾಗಿ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದರು.

ತಾಲೂಕು ಪಂಚಾಯಿತತಿ ಅಧ್ಯಕ್ಷೆ ಹಂಸವೇಣಿ ಶ್ರೀನಿವಾಸ್‌, ಜಿಪಂ ಸದಸ್ಯ ರಾಮಕೃಷ್ಣ, ಪಿಎಲ್ಡಿ ಬ್ಯಾಂಕ್‌ ಅಧ್ಯಕ್ಷ ಟಿ.ಡಿ.ಮಲ್ಲೇಶ್‌, ತುಮಕೂರು ವಿಭಾಗೀಯ ನಿಯಂತ್ರಣಾಧಿಕಾರಿ ಗಜೇಂದ್ರ ಕುಮಾರ್‌, ಮುಖ್ಯ ಇಂಜಿನಿಯರ್‌ ಜಗದೀಶ್‌ಚಂದ್ರ, ಎಕ್ಸಿಕ್ಯೂಟೀವ್‌ ಇಂಜಿನಿಯರ್‌ ನಾರಾಯಣಸ್ವಾಮಿ, ರೇಣುಕೇಶ್‌, ಡಿಟಿಒ ಫ‌ಕೃದ್ದೀನ್‌, ವಿಜಯ್‌ಕುಮಾರ್‌ ಮುಂತಾದರು ಹಾಜರಿದ್ದರು.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.