ಕಲ್ಪತರುನಾಡಲ್ಲಿ ಅಕ್ಟೋಬರ್ ವೇಳೆಗೆ 10 ಸಾವಿರ ಸೋಂಕು! ದಿನೇ ದಿನೆ ಹೆಚ್ಚಾಗುತ್ತಿರುವ ಸೋಂಕು
Team Udayavani, Sep 3, 2020, 10:47 AM IST
ತುಮಕೂರು: ಮಳೆಗಾಲದಲ್ಲಿ ಕಲ್ಪತರು ನಾಡಿನ ಜನರಲ್ಲಿ ಸಹಜವಾಗಿ ಕಾಣಿಸಿಕೊಳ್ಳುತ್ತಿದ್ದ ಮಲೇರಿಯಾ, ಡೆಂಗ್ಯೂ,
ಚಿಕೂನ್ ಗುನ್ಯಾ, ಕರಳು ಬೇನೆಯಂತಹ ಸಾಂಕ್ರಾಮಿಕ ರೋಗಗಳನ್ನು ಹಿಂದಿಕ್ಕಿ ಕೋವಿಡ್ ವೈರಸ್ ಅಟ್ಟಹಾಸ ಮೆರೆಯುತ್ತಿದೆ.
ಜಿಲ್ಲೆಯಲ್ಲಿ ಕೋವಿಡ್ ಮಹಾಮಾರಿ ದಿನೇ ದಿನೆ ವೇಗವನ್ನು ಹೆಚ್ಚಳ ಮಾಡಿಕೊಳ್ಳುತ್ತಲಿದೆ. ಸೋಂಕಿನಿಂದ ಮೃತಪಡುವವರ
ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದೆ. ಈವರೆಗೆ ಸೋಂಕಿಗೆ ಜಿಲ್ಲೆಯಲ್ಲಿ 169 ಮಂದಿ ಮೃತಪಟ್ಟಿದ್ದಾರೆ.
ಹತ್ತು ಸಾವಿರಕ್ಕೇರಿಕೆ: ದಿನೇ ದಿನೆ ಬರುತ್ತಿರುವ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಒಂದು ದಿನಕ್ಕೆ ಕನಿಷ್ಠ 150 ರಿಂದ 200
ಸೋಂಕಿತರು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಸೆ.1ರ ವರೆಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರು 6148 ಇದ್ದು, ಇದೇ ರೀತಿ
ಜಿಲ್ಲೆಯಲ್ಲಿ ಕೋವಿಡ್ ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಾ ಹೋದರೆ ಅಕ್ಟೋಬರ್ ವೇಳೆಗೆ ಜಿಲ್ಲೆಯಲ್ಲಿ 10 ಸಾವಿರಕ್ಕೂ ಹೆಚ್ಚು
ಸೋಂಕಿತರಾಗುವ ಸಾಧ್ಯತೆ ನಿಶ್ಚಳವಾಗಿದೆ.
ಸೋಂಕು ಹೆಚ್ಚಳ: ಈಗ ಬರುತ್ತಿರುವ ಅಂಕಿ ಅಂಶಗಳನ್ನು ಗಮನಿಸಿದರೆ ಈ ಕೋವಿಡ್ ವೈರಸ್ ಈಗ ಹಳ್ಳಿಗಳಲ್ಲಿಯೇ ಹೆಚ್ಚು
ಸೋಂಕು ವ್ಯಾಪಿಸಿದ್ದು ಅಲ್ಲಿಯೇ ಸಾವಿನ ಪ್ರಮಾಣವೂ ಹೆಚ್ಚುತ್ತಿದೆ. ಒಂದು ಗ್ರಾಮದಲ್ಲಿ ಒಬ್ಬರಿಗೆ ಬಂದರೆ ಸುತ್ತಮುತ್ತ ವ್ಯಾಪಿಸುತ್ತಿದೆ, ನಗರವೂ ಸೇರಿದಂತೆ ಜಿಲ್ಲೆಯ ವಿವಿಧ ಕಡೆ ಸರ್ಕಾರಿ ಇಲಾಖೆಗಳ ನೌಕರರಿಗೆ ಕೋವಿಡ್ ದೃಢವಾಗುತ್ತಲೇ ಇದೆ.
4375 ಮಂದಿ ಗುಣಮುಖ: ತುಮಕೂರು ಕೋವಿಡ್-19 ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ಒದಗಿಸುವಲ್ಲಿ ಜಿಲ್ಲೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಈವರೆಗೆ ಒಟ್ಟು 6148 ಮಂದಿ ಆಸ್ಪತ್ರೆಗೆ ಸೇರಿರುವ ಸೋಂಕಿತರಲ್ಲಿ 4375 ಮಂದಿ ಗುಣಮುಖರಾಗಿ ತಮ್ಮ ಮನೆಗೆ ತೆರಳಿದ್ದಾರೆ ಎನ್ನುವುದು ಸಮಾಧಾನದ ವಿಷಯವಾಗಿದೆ.
ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ: ಗುಣಮುಖರಾದ ಸೋಂಕಿತರಲ್ಲಿ ಮತ್ತೂಮ್ಮೆ ಸೋಂಕು ದೃಢಪಡುವ ಸಾಧ್ಯತೆಯಿರುವುದ ರಿಂದ ಅವರೂ ಮುಂಜಾಗ್ರತೆಯಿಂದಿರ ಬೇಕು. ತಮ್ಮಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು, ಸರ್ಕಾರದ ಮಾರ್ಗಸೂಚನೆಗಳನ್ನು ಅನುಸರಿಸುವುದರಿಂದ ರೋಗ ಹರಡುವಿಕೆಯನ್ನು ನಿಯಂತ್ರಿಸಬಹುದು ಎನ್ನುತ್ತಾರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ