ತುಮಕೂರು: 30 ಸಾವಿರ ಹೆಕ್ಟೇರ್‌ ಅರಣ್ಯ ಹೆಚ್ಚಳ


Team Udayavani, Jun 5, 2020, 6:46 AM IST

tmk-30savira

ತುಮಕೂರು: ಎಲ್ಲಾ ಕಡೆ ಅರಣ್ಯ ಸಂಪತ್ತು ನಾಶವಾಗುತ್ತಿರುವ ಸಂದರ್ಭದಲ್ಲಿ ತುಮಕೂರು ಜಿಲ್ಲೆಯಲ್ಲಿ 30 ಸಾವಿರ ಹೆಕ್ಟೇರ್‌ ಅರಣ್ಯ ಪ್ರದೇಶ ಹೆಚ್ಚಳವಾಗಿರು ವುದುರಾಜ್ಯ ಅರಣ್ಯ ಇಲಾಖೆ ನಡೆಸಿರುವ ಸ್ಯಾಟಲೈಟ್‌ ಸಮೀಕ್ಷೆಯಲ್ಲಿ  ಕಂಡು ಬಂದಿದೆ. ಪರಿಸರ ರಕ್ಷಣೆಗೆ ಸರ್ಕಾರ ಮೊದಲಿಂದಲೂ  ಒತ್ತು ನೀಡುತ್ತಲೇ ಬಂದಿದೆ. ಆದರೆ ಕೆಲವು ಅರಣ್ಯ ಭಕ್ಷಕರು ಪರಿಸರ ರಕ್ಷಣೆಯ ಅರಿವಿಲ್ಲದೇ ಅರಣ್ಯ ನಾಶಕ್ಕೆ ಮುಂದಾಗುತ್ತಿದ್ದಾರೆ. ಇಂಥ ಪರಿಸ್ಥಿತಿಯಲ್ಲೂ ಜಿಲ್ಲೆಯಲ್ಲಿ 30  ಸಾವಿರ ಹೆಕ್ಟೇರ್‌ ಅರಣ್ಯ  ಪ್ರದೇಶ ಹೆಚ್ಚಳವಾಗಿರುವುದು ಪರಿಸರ ಪ್ರೇಮಿಗಳಲ್ಲಿ ಸಂತಸ ಮೂಡಿಸಿದೆ.

ಅರಣ್ಯ ಪ್ರದೇಶದ ಮಾಹಿತಿ: ಜಿಲ್ಲೆಯಲ್ಲಿ ಈಗ ಇರುವ ಅರಣ್ಯ ಪ್ರದೇಶದ ಅಂಕಿ ಅಂಶ ಪ್ರಕಾರ ಮೀಸಲು ಅರಣ್ಯ 80,969.45 ಹೆಕ್ಟೇರ್‌, ಗ್ರಾಮ ಅರಣ್ಯ 2973.50, ರಕ್ಷಿತ ಅರಣ್ಯ 3966.35, ಸೆಕ್ಷನ್‌-4 12466.14, ಡೀಮ್ಡ್ ಫಾರೆಸ್ಟ್‌ 12571.69,  ಒಟ್ಟು 112947.13 ಹೆಕ್ಟೇರ್‌ ಪ್ರದೇಶದಲ್ಲಿ ಅರಣ್ಯ ಸಂಪತ್ತು ಇದೆ.

ಕಾಡು ಪ್ರಾಣಿಗಳ ಸಂತತಿ ಹೆಚ್ಚಳ: ಅರಣ್ಯ ಪ್ರದೇಶದಲ್ಲಿ ಮರಗಿಡಗಳು ದಟ್ಟವಾಗಿ ಬೆಳೆ ದಿರುವುದರಿಂದ ಅರಣ್ಯ ಪ್ರಾಣಿಗಳ ಸಂತತಿ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಚಿರತೆ, ಕರಡಿ, ಜಿಂಕೆ, ನವಿಲು ಸೇರಿದಂತೆ ಅನೇಕ ಕಾಡು ಪ್ರಾಣಿಗಳು ತಮ್ಮ  ಸಂತತಿ ಹೆಚ್ಚಿಸಿ ಕೊಂಡಿವೆ. ಇದರಿಂದ ಅರಣ್ಯ ಸಂಪತ್ತಿನೊಂದಿಗೆ ವನ್ಯ ಜೀವಿ ಸಂಪತ್ತೂ ಹೆಚ್ಚಳವಾಗಿರುವುದು ಜಿಲ್ಲೆಯ ಜನರಿಗೆ ಸಂತಸದ ಸಂಗತಿಯಾಗಿದೆ.

ಗಿಡ ಬೆಳೆಸಲು ಆಸಕ್ತಿ: ಅರಣ್ಯ ಪ್ರದೇಶ ತನ್ನ ವಿಸ್ತೀರ್ಣ ಹೆಚ್ಚಿಸಿಕೊಳ್ಳಲು  ಅರಣ್ಯದಿಂದ ಮನೆಗಳಿಗೆ ಸೌದೆ ತರುವುದು ನಿಂತಿದೆ. ಸರ್ಕಾರ ಹಳ್ಳಿ ಹಳ್ಳಿಗೆ ಗ್ಯಾಸ್‌ ನೀಡಿರುವುದ ರಿಂದ ಅಡುಗೆ ಮಾಡಲು ಗ್ಯಾಸ್‌ ಬಳಸು ತ್ತಿದ್ದಾರೆ. ಅರಣ್ಯ ರಕ್ಷಕರು ಮರಕಡಿಯದಂತೆ ಗಮನ ಹರಿಸುತ್ತಿದ್ದಾರೆ. ಜೊತೆಗೆ ರೈತರು  ಅರಣ್ಯ  ಕೃಷಿ ಮಾಡಲು ಹೆಚ್ಚು ಆಸಕ್ತಿ ತೋರು ತ್ತಿರುವುದು ಮತ್ತು ಜನರಲ್ಲಿಯೇ ಮರ ಬೆಳೆಸ ಬೇಕು ಎನ್ನುವ ಆಸಕ್ತಿ ಮೂಡುತ್ತಿರುವುದು ಅರಣ್ಯ ಹೆಚ್ಚಲು ಪ್ರಮುಖ ಕಾರಣವಾಗಿದೆ.

ಜಾಗೃತಿ ಅಗತ್ಯ: ಒಟ್ಟಾರೆ ಪ್ರತಿ ವರ್ಷ ವಿಶ್ವ ಪರಿಸರ ದಿನದಂದು ಅರಣ್ಯ ಬೆಳೆಸುವುದರ ಬಗ್ಗೆ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತವೆ. ಜನ ಇದನ್ನು ಅರಿತು ಮುಂದೆ ಉತ್ತಮ ಪರಿಸರ ನಿರ್ಮಾಣವಾಗಲು ಪ್ರತಿಯೊಬ್ಬರು ಕನಿಷ್ಠ  ಒಂದು ಮರ ಬೆಳೆಸಿ ಪರಿಸರ ಉಳಿಸಿ ಎನ್ನುವುದೇ ಉದಯವಾಣಿ ಕಾಳಜಿಯಾಗಿದೆ.

ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯಡಿ ಸಸಿ ವಿತರಣೆ: ತುಮಕೂರು ಪ್ರಾದೇಶಿಕ ಅರಣ್ಯ ವಿಭಾಗದ ವಿವಿಧ ಸಸ್ಯಕ್ಷೇತ್ರಗಳಲ್ಲಿ 2019-20ನೇ ಸಾಲಿನಲ್ಲಿ ತೇಗ, ಸಿಲ್ವರ್‌ಓಕ್‌, ಮಹಾಘನಿ, ಶ್ರೀಗಂಧ, ಹಲಸು, ಬೆಟ್ಟನೆಲ್ಲಿ, ಹೆಬ್ಬೇವು,  ಜಂಬುನೇರಳೆ, ಹೊನ್ನೆ, ಬೀಟೆ, ಹುಣಸೆ, ಬೇವು ಇತ್ಯಾದಿ 13.921 ಲಕ್ಷ ಸಸಿಗಳನ್ನು ವಿತರಣೆಗಾಗಿ ಬೆಳೆಸಲಾಗಿದ್ದು, ಈ ಸಸಿಗಳನ್ನು 2020ನೇ ಮಳೆಗಾಲದಲ್ಲಿ ಸಾರ್ವಜನಿಕರಿಗೆ, ರೈತರಿಗೆ ವಿತರಿಸಲಾಗುತ್ತದೆ. ಫ‌ಲಾನುಭವಿಗಳು  ಸಂಬಂಧಪಟ್ಟ ತಾಲೂಕಿನಲ್ಲಿ ಪ್ರಾದೇಶಿಕ ಅರಣ್ಯ ವಲಯ ಅರಣ್ಯಾಧಿಕಾರಿಗಳ ಕಚೇರಿಯನ್ನು ದಾಖಲಾತಿಗಳೊಂದಿಗೆ ಸಂಪರ್ಕಿಸುವಂತೆ ಉಪ ಅರಣ್ಯ ಸಂರûಾಣಾಧಿಕಾರಿ ಎಚ್‌.ಸಿ. ಗಿರೀಶ್‌ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೃಷಿ ಅರಣ್ಯಕ್ಕೆ ಒತ್ತು ನೀಡಲಾಗಿದೆ. ಈವರೆಗೆ ಕೋಲಾರದಲ್ಲಿ ಶ್ರೀಗಂಧ ಸಸಿ ಬೆಳೆಸಿ ರೈತರಿಗೆ ನೀಡಲಾಗುತ್ತಿತ್ತು. ಈ ಬಾರಿ ನಮ್ಮ ಜಿಲ್ಲೆಯಲ್ಲಿಯೂ 3.50 ಲಕ್ಷ ಶ್ರೀಗಂಧ ಸಸಿಗಳನ್ನು ಬೆಳೆಸಿ ರೈತರಿಗೆ ನೀಡಲಾಗಿದೆ. 
-ಎಚ್‌.ಸಿ.ಗಿರೀಶ್‌, ಉಪ ಅರಣ್ಯ ಸಂರಕ್ಷಣಾಧಿಕಾರಿ, ತುಮಕೂರು

* ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.