Tumkur; ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ
Team Udayavani, Dec 25, 2023, 11:33 PM IST
ತುಮಕೂರು : ಹಬ್ಬದ ಸಂಭ್ರಮದಲ್ಲಿದ್ದ ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಯುವಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ವರದಿಯಾಗಿದೆ.
ತುಮಕೂರು ತಾಲೂಕಿನ ಗ್ರಾಮಾಂತರ ವ್ಯಾಪ್ತಿಯ ಬೆತ್ತಲೂರು ಗ್ರಾಮದಲ್ಲಿ ಘಟನೆ ನಡೆದಿದ್ದು ಕೊಲೆಯಲ್ಲಿ ಮೃತಪಟ್ಟ ಯುವಕನನ್ನ ನಿರಂಜನ್ (30) ಎಂದು ಗುರುತಿಸಲಾಗಿದೆ.
ಯುವಕರ ನಡುವೆ ನಡೆದ ಗಲಾಟೆ ವೇಳೆ ಮೃತಪಟ್ಟ ನಿರಂಜನ್ ಗೆ ಕೆಲವರು ಡ್ರ್ಯಾಗರ್ ನಿಂದ ಚುಚ್ಚಿದ್ದಾರೆ ಎನ್ನಲಾಗಿದೆ ಅದರ ಹಿನ್ನೆಲೆಯಲ್ಲಿ ತೀವ್ರವಾಗಿ ಗಾಯಗೊಂಡ ನಿರಂಜನ್ ನನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಯಿತಾದರೂ ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಘಟನೆ ನಡೆದ ಕೂಡಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ. ತುಮಕೂರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ ಅಶೋಕ್ ರವರು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಇನ್ನು ಪೊಲೀಸರು ಎಲ್ಲಾ ಆಯಾಮದಲ್ಲೂ ತನಿಖೆ ಕೈಗೊಂಡಿದ್ದು ಕೊಲೆ ಮಾಡಿರುವ ಆರೋಪಿಗಳಿಗಾಗಿ ಶೋಧ ಮುಂದುವರಿಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.