ತುಮಕೂರು: ಮಸ್ಕಲ್ ಗ್ರಾಮದಲ್ಲಿ ಜೆಲಿಟಿನ್ ಕಡ್ಡಿ ಸ್ಪೋಟ; ಮನೆ ಧ್ವಂಸ
Team Udayavani, Feb 2, 2021, 12:55 PM IST
ತುಮಕೂರು: ಶಿವಮೊಗ್ಗದ ಹುಣಸೋಡು ದುರಂತ ಮಾಸುವ ಮುನ್ನವೇ ತುಮಕೂರು ಜಿಲ್ಲೆಯ ಮಸ್ಕಲ್ ಗ್ರಾಮದಲ್ಲಿ ಜೆಲಿಟಿನ್ ಕಡ್ಡಿ ಸ್ಪೋಟಗೊಂಡಿದ್ದು ಮನೆಯೊಂದು ಧ್ವಂಸಗೊಂಡಿದೆ.
ಕ್ರಷರ್ ಹಾಗೂ ಕಲ್ಲು ಬಂಡೆಗಳನ್ನು ಸ್ಪೋಟಿಸಲು ಬಳಸುವ ಜಿಲಿಟಿನ್ ಕಡ್ಡಿಗಳನ್ನು ಮನೆಯಲ್ಲಿ ಸಂಗ್ರಹಿಸಲಾಗಿದ್ದು, ಮಸ್ಕಲ್ ಗ್ರಾಮದ ಲಕ್ಷ್ಮಿಕಾಂತ್ ಅವರ ಮನೆ ಸಂಪೂರ್ಣ ಧ್ವಂಸಗೊಂಡಿದೆ. ಇವರು ಕಲ್ಲು ಕ್ವಾರೆಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಸೋಮವಾರ (ಫೆ.1) ಮಧ್ಯಾಹ್ನ 12 ಗಂಟೆಯ ಹೊತ್ತಿಗೆ ಸೀಟಿನ ಮನೆಯಲ್ಲಿ ಇಟ್ಟಿದ್ದ ಜಿಲಿಟಿನ್ ಕಡ್ಡಿ. ಬಿಸಿಲಿನ ತಾಪಕ್ಕೆ ಸ್ಫೋಟಗೊಂಡಿದೆ. ಈ ವೇಳೆ ಮನೆಯ ಹೊರಗಿದ್ದ ಸುವರ್ಣಮ್ಮ ಎಂಬುವರಿಗೆ ಸಿಮೆಂಟ್ ಶೀಟು ತಗುಲಿ ಸಣ್ಣಪುಟ್ಟ ಗಾಯವಾಗಿದೆ. ಇವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ
ಸ್ಪೋಟದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹೆಬ್ಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: 2021 ಬಜೆಟ್ ಮಂಡನೆ ನಂತರ ಭಾರತ ಮತ್ತು ಜಾಗತಿಕ ಮಾರುಕಟ್ಟೆಯಲ್ಲಾದ ಬದಲಾವಣೆ ಏನು?
ತುಮಕೂರು ಜಿಲ್ಲೆಯಲ್ಲಿ ಕಲ್ಲು ಗಣಿಗಾರಿಕೆ ಹೆಚ್ಚಿನ ಪ್ರಮಾಣದಲ್ಲಿ ನಡೆಸಲಾಗುತ್ತಿದ್ದು, ಕಲ್ಲು ಸ್ಪೋಟಿಸಲು ಜಿಲಿಟಿನ್ ಉಪಯೋಗಿಸುತ್ತಾರೆ. ಈ ಹಿಂದೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಅವಳಗೆರೆ ಸಮೀಪ ಅಂಕನಬಾವಿ ಬಳಿ 2003 ರಲ್ಲಿ ಜಿಲಿಟಿನ್ ಸ್ಫೋಟದಿಂದ 8 ಜನ ಮೃತಪಟ್ಟಿದ್ದರು.
ಇದನ್ನೂ ಓದಿ: ತ್ರಿಪುರಾ-ಬಾಂಗ್ಲಾ ಗಡಿಯಲ್ಲಿ ಗೋ ಕಳ್ಳ ಸಾಗಣೆ, ಬಿಎಸ್ ಎಫ್ ಮೇಲೆ ಹಲ್ಲೆ: ಗುಂಡಿನ ದಾಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
Lok Sabha Election: ಬಿಜೆಪಿ-ಜೆಡಿಎಸ್ “ಜಂಟಿ ಸಮರಾಭ್ಯಾಸ’
Congress; ಕೋಲಾರಕ್ಕೆ ಗೌತಮ್ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು
MUST WATCH
ಹೊಸ ಸೇರ್ಪಡೆ
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ