ಜಿಲ್ಲೆ ಜೆಡಿಎಸ್‌ ಭದ್ರಕೋಟೆಗೆ ಎಚ್‌ಡಿಕೆ ಸಂಕಲ್ಪ


Team Udayavani, Dec 5, 2022, 5:12 PM IST

ಜಿಲ್ಲೆ ಜೆಡಿಎಸ್‌ ಭದ್ರಕೋಟೆಗೆ ಎಚ್‌ಡಿಕೆ ಸಂಕಲ್ಪ

ತುಮಕೂರು: ರಾಜ್ಯದಲ್ಲಿ 2023 ರ ಚುನಾವಣೆಗೆ ಮೂರು ರಾಜಕೀಯ ಪಕ್ಷಗಳು ಸಜ್ಜಾಗಲು ಯಾತ್ರೆಗಳನ್ನು ಆರಂಭಿಸಿದ್ದು, ಕಲ್ಪತರು ನಾಡಿನಲ್ಲಿ ಜೆಡಿಎಸ್‌ ಆರಂಭಿಸಿರುವ ಪಂಚರತ್ನ ಯಾತ್ರೆಗೆ ಉತ್ತಮ ಜನಸ್ಪಂದನೆ ದೊರೆಯುತ್ತಿದ್ದು, ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರಿಗೆ ಹೊಸ ಚೈತನ್ಯ ಮೂಡುತ್ತಿದೆ.

ರಾಜ್ಯದಲ್ಲಿ ಚುನಾವಣೆ ಹತ್ತಿರ ಬರುತ್ತಿರುವಂತೆಯೇ ರಾಜಕೀಯ ಪಕ್ಷಗಳು ರಾಜ್ಯದಲ್ಲಿ ಯಾತ್ರೆಗಳನ್ನು ಆರಂಭಿ ಸಿದ್ದು, ಕಾಂಗ್ರೆಸ್‌ ಭಾರತ್‌ ಜೋಡೋ ಯಾತ್ರೆ, ಬಿಜೆಪಿ ಸಂಕಲ್ಪ ಯಾತ್ರೆ, ಈಗ ಜೆಡಿಎಸ್‌ನಿಂದ ಪಂಚರತ್ನ ಯಾತ್ರೆ ನಡೆ ಯುತ್ತಿದ್ದು, ಜೆಡಿಎಸ್‌ ಪ್ರಾಬಲ್ಯವಿರುವ ಕಡೆ ಗಳಲ್ಲಿ ಜೆಡಿಎಸ್‌ಇನ್ನೂ ಪ್ರಾಬಲ್ಯ ಸಾಧಿಸಲು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಸಂಕಲ್ಪತೊಟ್ಟು ಆರಂಭಿಸಿರುವ ಪಂಚರತ್ನ ಯಾತ್ರೆಗೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ದೊರೆತಿದೆ.

ಜಿಲ್ಲೆ ಮೊದಲಿನಿಂದಲೂ ಜೆಡಿಎಸ್‌ ಭದ್ರಕೋಟೆ. ಈ ಹಿಂದೆ ನಡೆದ ವಿಧಾನಸಭಾ ಚುನಾವಣೆ ಯಲ್ಲಿ ಜಿಲ್ಲೆಯ 11 ಕ್ಷೇತ್ರಗಳ ಪೈಕಿ 9ರಲ್ಲಿ ಜೆಡಿಎಸ್‌ ಗೆಲುವು ಸಾಧಿಸಿತ್ತು.

ನಾಲ್ಕು ಕ್ಷೇತ್ರದಲ್ಲಿ ಗೆಲುವು: 2018ರ ವಿಧಾನ ಸಭಾ ಚುನಾವಣೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದಿಂದ ಡಿ.ಸಿ. ಗೌರಿಶಂಕರ್‌, ಗುಬ್ಬಿ ಎಸ್‌.ಆರ್‌.ಶ್ರೀನಿ ವಾಸ್‌, ಮಧುಗಿರಿ ವೀರಭದ್ರಯ್ಯ, ಶಿರಾ ಕ್ಷೇತ್ರದಿಂದ ಬಿ. ಸತ್ಯನಾರಾಯಣ್‌ ಗೆಲುವು ಸಾಧಿಸಿದ್ದರು. ಪಾವಗಡದ ಕ್ಷೇತ್ರದಿಂದ ಮಾಜಿ ಶಾಸಕ ತಿಮ್ಮರಾಯಪ್ಪ, ಕೊರಟಗೆರೆ ಮಾಜಿ ಶಾಸಕ ಸುಧಾಕರಲಾಲ್‌, ತುಮಕೂರು ನಗರ ಎನ್‌. ಗೋವಿಂದ ರಾಜ್‌, ಕುಣಿಗಲ್‌ ಮಾಜಿ ಸಚಿವ ಡಿ.ನಾಗರಾಜಯ್ಯ, ತುರುವೇಕೆರೆ ಮಾಜಿ ಶಾಸಕ ಎಂ.ಟಿ. ಕೃಷ್ಣಪ್ಪ, ಚಿಕ್ಕನಾಯಕನ ಹಳ್ಳಿ ಮಾಜಿ ಶಾಸಕ ಬಿ. ಸುರೇಶ್‌ ಗೌಡ, ತಿಪಟೂರು ಕ್ಷೇತ್ರದಿಂದ ಲೋಕೇಶ್ವರ್‌ ಸ್ಪರ್ಧಿಸಿ ಕೆಲವೇ ಮತಗಳ ಅಂತರದಲ್ಲಿ ಸೋಲು ಕಂಡಿದ್ದರು.

ಬದಲಾದ ರಾಜ ಕೀಯ ಹಿನ್ನೆಲೆಯಲ್ಲಿ ಜೆಡಿಎಸ್‌ ಶಾಸಕ ಗುಬ್ಬಿ ಕ್ಷೇತ್ರದ ಎಸ್‌. ಆರ್‌.ಶ್ರೀನಿವಾಸ್‌ ಜೆಡಿಎಸ್‌ ತೊರೆದಿದ್ದಾರೆ. ಶಿರಾ ಕ್ಷೇತ್ರ ದಿಂದ ಗೆದ್ದಿದ್ದ ಬಿ.ಸತ್ಯನಾರಾಯಣ್‌ ನಿಧನ ಹೊಂದಿದ ಮೇಲೆ ನಡೆದ ಉಪಚುನಾವಣೆಯಲ್ಲಿ ಆಕ್ಷೇತ್ರ ಬಿಜೆಪಿ ಪಾಲಾಗಿದೆ. ಈಗ ಜಿಲ್ಲೆಯಲ್ಲಿ ಜೆಡಿಎಸ್‌ನಿಂದ ನಡೆಸುತ್ತಿರುವ ಪಂಚರತ್ನ ಯಾತ್ರೆಗೆ ವ್ಯಾಪಕ ಜನ ಬೆಂಬಲ ವ್ಯಕ್ತವಾಗುತ್ತಿದೆ.

ಜನ ಬೆಂಬಲಕ್ಕೆ ಪುಳಕಿತ: ಕಳೆದ ಚುನಾವಣೆ ಯಲ್ಲಿ ಕಡಿಮೆ ಅಂತರದಲ್ಲಿ ಸೋತ ಅಭ್ಯರ್ಥಿ ಗಳನ್ನು ಗೆಲ್ಲಿಸಿಕೊಳ್ಳಬೇಕು ಎಂದು ನಿರ್ಧರಿಸಿರುವ ಕುಮಾರಸ್ವಾಮಿ, ಆ ಕ್ಷೇತ್ರಗಳ ಬಗ್ಗೆ ಹೆಚ್ಚಿನ ಗಮನ ಹರಿಸಿದ್ದಾರೆ. ಈ ಗಾಗಲೇ ತುಮಕೂರು, ಮಧುಗಿರಿ, ಕೊರಟಗೆರೆಯಲ್ಲಿ ಮತ್ತು ಭಾನು ವಾರ ಪಾವಗಡದಲ್ಲಿ ನಡೆದ ಪಂಚರತ್ನ ಯಾತ್ರೆಯಲ್ಲಿ ತೋರಿ ಬಂದ ಜನ ಬೆಂಬಲಕ್ಕೆ ಪುಳಕಿತರಾಗಿದ್ದು, ಈ ಹಿಂದೆ ಜಿಲ್ಲೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆದ್ದಂತೆ ಮುಂಬರುವ ಚುನಾವಣೆಯಲ್ಲಿ ಜೆಡಿಎಸ್‌ ಹೆಚ್ಚು ಸ್ಥಾನ ಗೆಲ್ಲುತ್ತದೆ ಎನ್ನುವ ವಿಶ್ವಾಸ ಹೊಂದಿದ್ದಾರೆ.

1994, 2004 ಮರುಕಳಿಸುವಿಕೆ: ತುಮಕೂರು ಜಿಲ್ಲೆಯಲ್ಲಿ 1994ರಲ್ಲಿ ಜನತಾದಳ ಹಾಗೂ 2004ರಲ್ಲಿ ಜೆಡಿಎಸ್‌ ಅತ್ಯಧಿಕ ಸ್ಥಾನ ಗಳಲ್ಲಿ ಗೆಲುವು ಸಾಧಿಸಿದ್ದು, ಈ ಬಾರಿಯೂ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಯಾಗಲು ಜಿಲ್ಲೆಯ 11 ಸ್ಥಾನಗಳಲ್ಲೂ ಜೆಡಿಎಸ್‌ ಗೆಲ್ಲಲು ಚುನಾವಣಾ ರಣತಂತ್ರ ರೂಪಿಸುವಲ್ಲಿ ನಾವು ಹಿಂದುಳಿದಿಲ್ಲ. 1994, 2004ರ ಚುನಾ ವಣಾ ಫ‌ಲಿತಾಂಶ ಮರುಕಳುಹಿಸಲಿದೆ ಎನ್ನುತ್ತಾರೆ ಜೆಡಿಎಸ್‌ ಮುಖಂಡರು.

2023 ರ ಚುನಾವಣೆಯಲ್ಲಿ ಹಣದಾಹಿ ಬಿಜೆಪಿ, ಕಾಂಗ್ರೆಸ್‌ ಪಕ್ಷಗಳನ್ನು ಬರುವ ಚುನಾವಣೆಯಲ್ಲಿ ಸೋಲಿಸಿ ರೈತಪರ, ಜನಪರ ಸರ್ಕಾರವನ್ನು ಅಧಿಕಾರಕ್ಕೆ ತರಲು ಜೆಡಿಎಸ್‌ ಗೆ ಪೂರ್ಣ ಬಹುಮತ ನೀಡಿ ಜಿಲ್ಲೆಯಲ್ಲಿ ಹೆಚ್ಚು ಸ್ಥಾನದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲಿಸಿರಿ ನಾನು ಘೋಷಿಸಿರುವ ಪಂಚರತ್ನ ಯೋಜನೆಗಳನ್ನು ನಾನು ಜಾರಿಗೆ ತರಲು ಸಿದ್ಧನಿದ್ದೇನೆ. -ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

ಜಿಲ್ಲೆಯಲ್ಲಿ 11 ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್‌ ಗೆಲ್ಲಲು ಶ್ರಮ ಹಾಕುತ್ತೇವೆ. ಎಚ್‌.ಡಿ. ಕುಮಾರ ಸ್ವಾಮಿ ಯವರು ಸಂಕಲ್ಪ ತೊಟ್ಟು ಪಂಚರತ್ನ ಯಾತ್ರೆಯ ಮೂಲಕ ಪಕ್ಷ ಬಲ ಪಡಿಸುತ್ತಿದ್ದು, ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲುವುದು ಖಚಿತ. ಕುಮಾರ ಸ್ವಾಮಿ ಅವರು ಮತ್ತೂಮ್ಮೆ ಸಿಎಂ ಆಗ ಬೇಕೆಂದು ಜನ ಬಯಸಿದ್ದಾರೆ. – ಆರ್‌.ಸಿ.ಆಂಜನಪ್ಪ, ಜಿಲ್ಲಾಧ್ಯಕ್ಷರು ಜೆಡಿಎಸ್‌

ತುಮಕೂರು ನಗರದಲ್ಲಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಪಂಚರತ್ನ ಯಾತ್ರೆ ಯಿಂದ ನಗರದಲ್ಲಿ ಜೆಡಿಎಸ್‌ಗೆ ಭಾರೀ ಪ್ರಮಾಣದಲ್ಲಿ ಜನ ಬೆಂಬಲ ವ್ಯಕ್ತವಾಗಿದೆ. ಜಿಲ್ಲೆಯಲ್ಲಿಯೂ ಉತ್ತಮ ಸ್ಪಂದನೆ ದೊರೆ ತಿದ್ದು ಮುಂಬರುವ ವಿಧಾನಸಭಾ ಚುನಾವ ಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವುದು ಖಚಿತ. -ಎನ್‌.ಗೋವಿಂದರಾಜು, ತುಮಕೂರು ನಗರ ಜೆಡಿಎಸ್‌ ಅಭ್ಯರ್ಥಿ

-ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.