ಕರ್ತವ್ಯ ನಿರತ ಪೊಲೀಸರ ಮೇಲೆ ಲಾಠಿ ಕಸಿದು ಹಲ್ಲೆ; ಪ್ರಕರಣ ದಾಖಲು
ಗ್ರಾಮಲೆಕ್ಕಿಗ ಸೇರಿದಂತೆ ಇಬ್ಬರ ಬಂಧನ
Team Udayavani, Jan 17, 2023, 2:12 PM IST
ಕುಣಿಗಲ್: ಇಬ್ಬರು ವ್ಯಕ್ತಿಗಳು ಕರ್ತವ್ಯ ನಿರತ ಇಬ್ಬರು ಪೊಲೀಸರ ಕೈಯಲ್ಲಿದ್ದ ಲಾಠಿ ಕಿತ್ತುಕೊಂಡು ಹಲ್ಲೆ ನಡೆಸಿರುವ ಘಟನೆ ಕಳೆದ ರಾತ್ರಿ ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಡೆದಿದ್ದು, ಘಟನೆ ಸಂಬಂಧಿಸಿದಂತೆ ಗ್ರಾಮಲೆಕ್ಕಿಗ ಸೇರಿದಂತೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ.
ಕುಣಿಗಲ್ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ಗಳಾದ ಮಿಥನ್, ಸುಮನ್ ಅವರ ಮೇಲೆ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿಗಳಾದ ಗ್ರಾಮಲೆಕ್ಕಿಗ ವೆಂಕಟೇಶ್ ಹಾಗೂ ರಾಮಚಂದ್ರ ಹಲ್ಲೆ ಮಾಡಿರುವ ವ್ಯಕ್ತಿಗಳು ಎಂದು ತಿಳಿದು ಬಂದಿದೆ.
ಘಟನೆ ವಿವರ: ಕಳೆದ ರಾತ್ರಿ ಸುಮಾರು 11-45ಕ್ಕೆ ಪೊಲೀಸ್ ಕಾನ್ಸ್ಟೇಬಲ್ಗಳಾದ ಮಿಥನ್ ಹಾಗೂ ಸುಮನ್ ಹೌಸಿಂಗ್ ಬೋರ್ಡ್ ಸ್ಟೇಲ್ಲಾ ಮೇರಿಸ್ ಸ್ಕೂಲ್ ರಸ್ತೆಯಲ್ಲಿನ ಮೋದಿ ಕೇರ್ ಅಂಗಡಿಯ ಮುಂಭಾಗದಲ್ಲಿ ಸೆಲ್ಪಿ ತೆಗೆದುಕೊಳ್ಳುತ್ತಿರುವಾಗ ಅಲ್ಲೆ ಎದುರಿನ ಮನೆ ಮೇಲೆ ಇದ್ದ ಇಬ್ಬರು ವ್ಯಕ್ತಿಗಳು ಸಮವಸ್ತ್ರದಲ್ಲಿದ್ದ ಕಾನ್ಸ್ಟೇಬಲ್ಗಳನ್ನು ನೋಡಿ ಯಾರೋ ನೀವು ಮೋದಿ ಕೇರ್ ಮುಂದೆ ಸೆಲ್ಪಿ ಪೋಟೊ ತೆಗೆದುಕೊಳ್ಳುತ್ತೀರ ಎಂದು ಅವಾಚ್ಯವಾದ ಶಬ್ದಗಳಿಂದ ನಿಂದಿಸಿ ಕೂಗಾಡಿದ್ದಾರೆ. ಬಳಿಕ ಕಾನ್ಸ್ಟೇಬಲ್ಗಳು, ನಾವು ಪೊಲೀಸರು ರಾತ್ರಿ ಗಸ್ತಿಗಾಗಿ ಬಂದಿದ್ದೇವೆ. ನಮ್ಮ ಹಾಜರಾತಿಗಾಗಿ ಸೆಲ್ಪಿ ತೆಗೆದುಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಕೂಡಲೇ ಆ ಇಬ್ಬರು ವ್ಯಕ್ತಿಗಳು ಮನೆಯಿಂದ ಇಳಿದು ಬಂದು ಕುಣಿಗಲ್ನಲ್ಲಿ ಇರುವ ಎಲ್ಲಾ ಮೋದಿ ಕೇರ್ ಮುಂದೆಯೂ ಸೆಲ್ಪಿ ಪೋಟೋ ತೆಗೆದುಕೊಳ್ಳುತ್ತೀರ ಎಂದು ಏರುದ್ವನಿಯಲ್ಲಿ ಕೂಗಾಡಿ ಸಮವಸ್ತ್ರದಲ್ಲಿದ್ದ ಇಬ್ಬರು ಕಾನ್ಸ್ಟೇಬಲ್ಗಳ ಮೇಲೆ ಕೈಯಿಂದ ಹಲ್ಲೆ ನಡೆಸಿರುವುದಲ್ಲದೆ ಕಾನ್ಸ್ಟೇಬಲ್ ಕೈಯಲ್ಲಿದ್ದ ಲಾಠಿಯನ್ನು ಕಿತ್ತುಕೊಂಡು ಹಲ್ಲೆ ನಡೆಸಿದ್ದು ಮಾತ್ರವಲ್ಲದೇ ಮೊಬೈಲ್ ಕಿತ್ತುಕೊಂಡು ಹಾಳು ಮಾಡಿದ್ದಾರೆ.
ಈ ಸಂದರ್ಭದ ಕುರಿತು ಕಾನ್ಸ್ಟೇಬಲ್ ಮಿಥುನ್ ಘಟನೆಯಲ್ಲಿ ನನಗೆ ಗಾಯವಾಗಿದೆ ಎಂದು ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದು, ಕಾನ್ಸ್ಟೇಬಲ್ ಸುಮನ್ ತಕ್ಷಣ 112 ಕ್ಕೆ ಕರೆ ಮಾಡಿದ್ದು, 112 ಸಿಬ್ಬಂದಿ ಸ್ಥಳಕ್ಕೆ ಬಂದು ಜಗಳ ಮಾಡುತ್ತಿದ್ದವರಿಂದ ಕಾನ್ಸ್ಟೇಬಲ್ಗಳನ್ನು ಬಿಡಿಸಿದ್ದಾರೆ ಎಂದು ವಿವರಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪಟ್ಟಣದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತೆಯರು
2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ