ತುಮಕೂರು: ಲಾಕ್‌ಡೌನ್‌ಗೆ ಸ್ಪಂದನೆ


Team Udayavani, Jul 6, 2020, 6:57 AM IST

pqrs-lockdown

ತುಮಕೂರು: ಕೋವಿಡ್‌ 19 ಮಹಾಮಾರಿ ನಿಯಂತ್ರಣಕ್ಕೆ ಸರ್ಕಾರ ನೀಡಿರುವ ಭಾನುವಾರದ ಲಾಕ್‌ಡೌನ್‌ ಆದೇಶಕ್ಕೆ ಇಡೀ ಜಿಲ್ಲೆಯಲ್ಲಿ ಜನರಿಂದ ಉತ್ತಮ ಪ್ರತಿಕ್ರಿಯೆ ಕಂಡು ಬಂದಿದ್ದು, ಎಲ್ಲಾ ಕಡೆ ಜನರು ಮನೆಯಿಂದ ಹೊರ  ಬರದೇ ಕೋವಿಡ್‌ 19 ವೈರಸ್‌ ಹರಡದಂತೆ ಜಾಗೃತಿ ವಹಿಸಿದ್ದಾರೆ.

ಸಂಪೂರ್ಣ ಸ್ತಬ್ಧ: ಕೋವಿಡ್‌ 19 ಸೋಂಕು ಈಗ ಗ್ರಾಮಗಳಿಗೆ ವ್ಯಾಪಿಸುತ್ತಿರುವಂತೆಯೇ ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ಕಡೆ ಭಾನುವಾರ ಲಾಕ್‌ಡೌನ್‌ಗೆ ಆದೇಶ ಮಾಡಿದ ಹಿನ್ನೆಲೆಯಲ್ಲಿ ಕಲ್ಪತರು ನಾಡಿನಲ್ಲಿ ಲಾಕ್‌ಡೌನ್‌ಗೆ ಉತ್ತಮ  ಪ್ರತಿಕ್ರಿಯೆ ವ್ಯಕ್ತವಾಗಿದ್ದು ಅಗತ್ಯ ವಸ್ತುಗಳ ಅಂಗಡಿ ಬಿಟ್ಟು ಎಲ್ಲಾ ಅಂಗಡಿ ಮುಂಗಟ್ಟು ಮುಚ್ಚಿ ಜನ ಸಂಚಾರ ಸಂಪೂರ್ಣ ಸ್ತಬ್ಧಗೊಂಡ ಪರಿಣಾಮ ಭಾನು ವಾರ ಇಡೀ ತುಮಕೂರು ಬಿಕೋ ಎನ್ನುತ್ತಿತ್ತು.

ಸರ್ಕಾರಕ್ಕೆ ಬೆಂಬಲ: ಲಾಕ್‌ಡೌನ್‌ ಸಡಿಲಿಕೆ ಗೊಂಡ ನಂತರ ಎಲ್ಲಾ ಕಡೆ ಜನಸಂಚಾರ ಹೆಚ್ಚಿ ಇಡೀ ರಾಜ್ಯದಲ್ಲಿ ಮತ್ತು ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕಿತರು ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಪರಿಣಾಮ ಜೊತೆಗೆ ರಕ್ಕಸ ಕೋವಿಡ್‌ 19  ದಿಂದ ಬಲಿಯಾಗುತ್ತಿರುವವರ ಸಂಖ್ಯೆಯೂ ತೀವ್ರವಾಗುತ್ತಿರುವಾಗ ಸರ್ಕಾರ ಕರೆ ನೀಡಿರುವ ಭಾನುವಾರದ ಲಾಕ್‌ಡೌನ್‌ಗೆ ಕಲ್ಪತರು ನಾಡಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ರಸ್ತೆಗಿಳಿಯದ ವಾಹನಗಳು: ದಿನಸಿ, ಮಟನ್‌ – ಚಿಕನ್‌, ತರಕಾರಿ, ಔಷಧಿ ಅಂಗಡಿಗಳನ್ನು ಬಿಟ್ಟು ಮಿಕ್ಕೆಲ್ಲ ಅಂಗಡಿಗಳು ಮುಚ್ಚಿದ್ದವು. ಆಟೋ, ಬಸ್‌ ಸಂಚಾರ ಸಂಪೂರ್ಣ ಸ್ಥಗಿತವಾಗಿತ್ತು ಎಲ್ಲಾ ಕಡೆ ಪೊಲೀಸ್‌ ಭದ್ರತೆ ಇದ್ದ  ಕಾರಣದಿಂದ ದ್ವಿಚಕ್ರ ವಾಹನ ಸವಾರರು ರಸ್ತೆಗಿಳಿಯಲಿಲ್ಲ ಅನಾವಶ್ಯಕ ವಾಗಿ ಓಡಾಡಿ ದರೆ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಡಳಿತ ಸೂಚನೆ ನೀಡಿದ್ದರ ಹಿನ್ನೆಲೆಯಲ್ಲಿ ಮನೆ ಬಿಟ್ಟು ಯಾರೂ ಹೊರಗಡೆ ಬರದ  ಹಿನ್ನೆಲೆಯಲ್ಲಿ ಜನರಿಂದ ತುಂಬಿರುತ್ತಿದ್ದ ಎಂ.ಜಿ.ರಸ್ತೆ, ಬಿ.ಎಚ್‌.ರಸ್ತೆ, ಟೌನ್‌ ಹಾಲ್‌ ಸರ್ಕಲ್‌, ಬಸ್‌ ನಿಲ್ದಾಣ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತ ಗೊಂಡಿತ್ತು. ಕಾರಣ ವಿಲ್ಲದೇ ರಸ್ತೆಗಿಳಿದವಗೆ ಪೊಲೀಸರು ಲಾಠಿ ರುಚಿ  ತೋರಿಸಿದ್ದಾರೆ.

ಉತ್ತಮ ಬೆಂಬಲ: ಕೋವಿಡ್‌ 19 ನಿಯಂತ್ರಣಕ್ಕೆ ಸರ್ಕಾರ ಮೊದಲು ಇಡೀ ದೇಶವನ್ನು ಲಾಕ್‌ಡೌನ್‌ ಮಾಡಿತ್ತು. ಆಗ ಇನ್ನೂ ಕೋವಿಡ್‌ 19 ಹರಡುವ ಆರಂಭದ ದಿನಗಳು, ಈಗ ಎಲ್ಲಾ ಕಡೆ ಕೋವಿಡ್‌ 19 ಮಹಾಮಾರಿಯ ಅಟ್ಟಹಾಸ  ತೀವ್ರವಾಗುತ್ತಿದೆ. ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ, ಇಂತಹ ಸಂದರ್ಭದಲ್ಲಿ ಲಾಕ್‌ಡೌನ್‌ ತೆರವು ಮಾಡಲಾಗಿದೆ. ಇದು ಸೋಂಕು ಹೆಚ್ಚಲು ಕಾರಣ ಎನ್ನುವ ಆರೋಪ ಕೇಳಿ ಬರುತ್ತಿರುವ ವೇಳೆಯಲ್ಲಿ ರಾಜ್ಯ ಸರ್ಕಾರ ಆದೇಶಿ ಸಿರುವ  ಭಾನುವಾರದ ಲಾಕ್‌ಡೌನ್‌ ಗೆ ಉತ್ತಮ ಜನಸ್ಪಂದನೆ ಸಿಕ್ಕಿದೆ. ಹಳ್ಳಿಗಳಲ್ಲಿ ಹರಡುತ್ತಿರುವ ಈ ಕೋವಿಡ್‌ 19 ನಿಯಂತ್ರಣಕ್ಕೆ ಸರ್ಕಾರ ಮತ್ತೆ ಲಾಕ್‌ ಡೌನ್‌ ಮಾಡಿ ಸೋಂಕು ಹೆಚ್ಚು ಹರಡದಂತೆ ತಡೆಗಟ್ಟಲಿ ಎನ್ನುವ ಒತ್ತಾಯ ಕೇಳಿಬರುತ್ತಿದೆ.

ಟಾಪ್ ನ್ಯೂಸ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.