ತುಮಕೂರು: ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆ


Team Udayavani, May 22, 2020, 6:20 AM IST

16arikw

ತುಮಕೂರು: ಕಲ್ಪತರು ನಾಡಿನಲ್ಲಿ ಕೋವಿಡ್‌ 19 ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಗುರುವಾರ ಮತ್ತೂಂದು ಪ್ರಕರಣ ಬೆಳಕಿಗೆ ಬಂದಿದ್ದು ಈಗ ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಹೊರ ರಾಜ್ಯ, ಹೊರ ಜಿಲ್ಲೆಯಿಂದ ಬರುವವರ  ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು ಜಿಲ್ಲೆಯ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಹೊರಗಡೆಯಿಂದಲೇ ಸೋಂಕು: ಈವರೆಗೆ ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕು ಕಾಣಿಸಿ ಕೊಂಡಿರುವುದು ರೋಗ ಹರಡುತ್ತಿರುವುದು ಬೇರೆ ಭಾಗದಿಂದ ಜಿಲ್ಲೆಗೆ ಬಂದಿರುವವ ರಿಂದಲೇ ಆಗಿದ್ದು, ಇಲ್ಲಿಯ ಮೂಲ ನಿವಾಸಿಗಳಿಗೆ ಸೋಂಕು  ಕಾಣಿಸಿ ಕೊಂಡಿಲ್ಲ ಆದರೆ ಸೋಂಕಿನ ಸಂಪರ್ಕದಲ್ಲಿ ಇದ್ದವರಿಗೆ ಕೋವಿಡ್‌ 19 ತನ್ನ ಕದಂಬ ಬಾಹು ಚಾಚಿದೆ. ಸೋಂಕು ಪ್ರಕರಣಗಳು ಕಡಿಮೆ ಇದ್ದ ಜಿಲ್ಲೆಯಲ್ಲಿ ಈಗ ದಿಢೀರನೆ ಪ್ರತಿದಿನ ಹೊರ ರಾಜ್ಯಗಳಿಂದ ಜಿಲ್ಲೆಗೆ ಬಂದವರಿಗೆ  ಸೋಂಕು ಕಾಣಿಸಿ ಕೊಳ್ಳುತ್ತಿರುವುದು ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ.

ಮುಂಬೈ ನಂಜು: ಮುಂಬೈನಿಂದ ಬಂದಿದ್ದ ಪಿ-1401, 28 ವರ್ಷದ ಮಹಿಳೆ, 1402, 30 ವರ್ಷದ ಮಹಿಳೆ, ಪಿ-1402, 10 ವರ್ಷದ ಹುಡುಗ, ಪಿ-1404, 12 ವರ್ಷದ ಹುಡುಗಿ ಗೆ ಕಾಣಿಸಿ ಕೊಂಡಿತ್ತು ಇವರೆಲ್ಲರೂ ಮುಂಬೈ ನಿಂದ ಬಂದವರೇ,  ಬುಧವಾರ ಸೋಂಕಿತರ ಸಂಖ್ಯೆ 15 ಇತ್ತು ಆದರೆ ಗುರುವಾರ ಮತ್ತೂಂದು ಕಾಣಿಸಿ ಕೊಂಡಿದೆ. ಈಗ ಕಾಣಿಸಿ ಕೊಂಡಿರುವ 16ನೇ ಸೋಂಕಿತ ತುಮಕೂರಿನ ಖಾದರ್‌ ನಗರ ನಿವಾಸಿ ಲಾರಿ ಚಾಲಕ ಪಿ.1561 ಎಂದು ಗುರುತಿಸ ಲಾಗಿದೆ. ಈಗ  ಬರುತ್ತಿರುವ ಪ್ರಕರಣಗಳಲ್ಲಿ ಮುಂಬೈ ನಂಜೇ ಹೆಚ್ಚಾಗಿದೆ.

9 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ…: ಜಿಲ್ಲೆಗೆ ಹೊರ ರಾಜ್ಯ, ಜಿಲ್ಲೆಯಿಂದ ಬರುವವರ ಸಂಖ್ಯೆ ಹೆಚ್ಚುತ್ತಿದೆ. ಹೊರ ರಾಜ್ಯದಿಂದಲೇ ಈವರೆಗೆ 439 ಮಂದಿ ಬಂದಿದ್ದಾರೆ ಅವರನ್ನು ತಕ್ಷಣ ಕ್ವಾರೆಂಟೈನ್‌ ಮಾಡಲಾಗಿದೆ ಬೇರೆ ಕಡೆ ಯಿಂದ  ಜಿಲ್ಲೆಗೆ ಬಂದಿರುವ 1014 ಜನರ ಲ್ಯಾಬ್‌ ವರದಿ ಬರಬೇಕಾಗಿದೆ. ಈ ವರೆಗೆ 8,077 ಜನರ ಗಂಟಲು ದ್ರವ ಪರೀಕ್ಷೆ ನಡೆದಿದೆ, ಅದರಲ್ಲಿ 7099 ಜನರ ವರದಿ ನೆಗೆಟಿವ್‌ ಬಂದಿದೆ. ಈಗ 2,019 ಜನರನ್ನು ಹೋಂ ಕ್ವಾರೈಂಟೈನ್‌ ಮಾಡಲಾಗಿದ್ದು,  863 ಜನ ಐಸೋಲೇಷನ್‌ ನಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಈ ವರೆಗೆ ಜಿಲ್ಲೆಯಲ್ಲಿ 16 ಜನರಲ್ಲಿ ಕೋವಿಡ್‌ 19 ಮಹಾಮಾರಿ ಕಾಣಿಸಿ ಕೊಂಡು ಐವರು ಗುಣ ಮುಖರಾಗಿದ್ದಾರೆ, ಇಬ್ಬರು ಮೃತಪಟ್ಟಿದ್ದಾರೆ. ಇನ್ನೂ ಒಂಬತ್ತು ಜನರಿಗೆ  ಕೋವಿಡ್‌ -19 ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.

ತುಮಕೂರಿನ ಖಾದರ್‌ ನಗರದ ವಾಸಿ 58 ವರ್ಷದ ಲಾರಿ ಚಾಲಕ ಪಿ.1561 ಎನ್ನುವ ವ್ಯಕ್ತಿಗೆ ಸೋಂಕು ಇರುವುದು ದೃಢಪಟ್ಟಿದೆ. ಈತ ಮುಂಬೈಗೆ ಹೋಗಿ ಬಂದು ಮನೆಯಲ್ಲಿದ್ದ ಜಿಲ್ಲಾಡಳಿತದಿಂದಲೇ ಈತನನ್ನು ಪತ್ತೆ ಹಚ್ಚಿ  ಕ್ವಾರೈಂಟೈನ್‌ ಮಾಡಲಾಗಿ ಆತನ ಗಂಟಲು ದ್ರವ ಪರೀಕ್ಷೆ ಮಾಡಿಸಿದಾಗ ಆತನಲ್ಲಿ ಕೋವಿಡ್‌ 19 ಸೋಂಕು ಇರುವುದು ತಿಳಿದು ಬಂದಿದೆ, ಖಾದರ್‌ ನಗರ ವನ್ನು ಕಂಟೈನ್ಮೆಂಟ್‌ ವಲಯ ಎಂದು ಪರಿಗಣಿಸಿ ಸೀಲ್‌ಡೌನ್‌ ಮಾಡಲಾಗಿದೆ. ಆತನ  ಸಂಪರ್ಕದಲ್ಲಿರುವ ಹೆಂಡತಿ ಮತ್ತು ಮಗುವನ್ನು ಕ್ವಾರೈಂಟೈನ್‌ ಮಾಡಲಾಗಿದೆ. 
-ಡಾ.ಕೆ.ರಾಕೇಶ್‌ ಕುಮಾರ್‌, ಜಿಲ್ಲಾಧಿಕಾರಿ

* ಚಿ.ನಿ.ಪುರುಷೊತ್ತಮ್‌

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.