ತುಮಕೂರು: ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆ


Team Udayavani, May 22, 2020, 6:20 AM IST

16arikw

ತುಮಕೂರು: ಕಲ್ಪತರು ನಾಡಿನಲ್ಲಿ ಕೋವಿಡ್‌ 19 ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಗುರುವಾರ ಮತ್ತೂಂದು ಪ್ರಕರಣ ಬೆಳಕಿಗೆ ಬಂದಿದ್ದು ಈಗ ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಹೊರ ರಾಜ್ಯ, ಹೊರ ಜಿಲ್ಲೆಯಿಂದ ಬರುವವರ  ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು ಜಿಲ್ಲೆಯ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಹೊರಗಡೆಯಿಂದಲೇ ಸೋಂಕು: ಈವರೆಗೆ ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕು ಕಾಣಿಸಿ ಕೊಂಡಿರುವುದು ರೋಗ ಹರಡುತ್ತಿರುವುದು ಬೇರೆ ಭಾಗದಿಂದ ಜಿಲ್ಲೆಗೆ ಬಂದಿರುವವ ರಿಂದಲೇ ಆಗಿದ್ದು, ಇಲ್ಲಿಯ ಮೂಲ ನಿವಾಸಿಗಳಿಗೆ ಸೋಂಕು  ಕಾಣಿಸಿ ಕೊಂಡಿಲ್ಲ ಆದರೆ ಸೋಂಕಿನ ಸಂಪರ್ಕದಲ್ಲಿ ಇದ್ದವರಿಗೆ ಕೋವಿಡ್‌ 19 ತನ್ನ ಕದಂಬ ಬಾಹು ಚಾಚಿದೆ. ಸೋಂಕು ಪ್ರಕರಣಗಳು ಕಡಿಮೆ ಇದ್ದ ಜಿಲ್ಲೆಯಲ್ಲಿ ಈಗ ದಿಢೀರನೆ ಪ್ರತಿದಿನ ಹೊರ ರಾಜ್ಯಗಳಿಂದ ಜಿಲ್ಲೆಗೆ ಬಂದವರಿಗೆ  ಸೋಂಕು ಕಾಣಿಸಿ ಕೊಳ್ಳುತ್ತಿರುವುದು ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ.

ಮುಂಬೈ ನಂಜು: ಮುಂಬೈನಿಂದ ಬಂದಿದ್ದ ಪಿ-1401, 28 ವರ್ಷದ ಮಹಿಳೆ, 1402, 30 ವರ್ಷದ ಮಹಿಳೆ, ಪಿ-1402, 10 ವರ್ಷದ ಹುಡುಗ, ಪಿ-1404, 12 ವರ್ಷದ ಹುಡುಗಿ ಗೆ ಕಾಣಿಸಿ ಕೊಂಡಿತ್ತು ಇವರೆಲ್ಲರೂ ಮುಂಬೈ ನಿಂದ ಬಂದವರೇ,  ಬುಧವಾರ ಸೋಂಕಿತರ ಸಂಖ್ಯೆ 15 ಇತ್ತು ಆದರೆ ಗುರುವಾರ ಮತ್ತೂಂದು ಕಾಣಿಸಿ ಕೊಂಡಿದೆ. ಈಗ ಕಾಣಿಸಿ ಕೊಂಡಿರುವ 16ನೇ ಸೋಂಕಿತ ತುಮಕೂರಿನ ಖಾದರ್‌ ನಗರ ನಿವಾಸಿ ಲಾರಿ ಚಾಲಕ ಪಿ.1561 ಎಂದು ಗುರುತಿಸ ಲಾಗಿದೆ. ಈಗ  ಬರುತ್ತಿರುವ ಪ್ರಕರಣಗಳಲ್ಲಿ ಮುಂಬೈ ನಂಜೇ ಹೆಚ್ಚಾಗಿದೆ.

9 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ…: ಜಿಲ್ಲೆಗೆ ಹೊರ ರಾಜ್ಯ, ಜಿಲ್ಲೆಯಿಂದ ಬರುವವರ ಸಂಖ್ಯೆ ಹೆಚ್ಚುತ್ತಿದೆ. ಹೊರ ರಾಜ್ಯದಿಂದಲೇ ಈವರೆಗೆ 439 ಮಂದಿ ಬಂದಿದ್ದಾರೆ ಅವರನ್ನು ತಕ್ಷಣ ಕ್ವಾರೆಂಟೈನ್‌ ಮಾಡಲಾಗಿದೆ ಬೇರೆ ಕಡೆ ಯಿಂದ  ಜಿಲ್ಲೆಗೆ ಬಂದಿರುವ 1014 ಜನರ ಲ್ಯಾಬ್‌ ವರದಿ ಬರಬೇಕಾಗಿದೆ. ಈ ವರೆಗೆ 8,077 ಜನರ ಗಂಟಲು ದ್ರವ ಪರೀಕ್ಷೆ ನಡೆದಿದೆ, ಅದರಲ್ಲಿ 7099 ಜನರ ವರದಿ ನೆಗೆಟಿವ್‌ ಬಂದಿದೆ. ಈಗ 2,019 ಜನರನ್ನು ಹೋಂ ಕ್ವಾರೈಂಟೈನ್‌ ಮಾಡಲಾಗಿದ್ದು,  863 ಜನ ಐಸೋಲೇಷನ್‌ ನಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಈ ವರೆಗೆ ಜಿಲ್ಲೆಯಲ್ಲಿ 16 ಜನರಲ್ಲಿ ಕೋವಿಡ್‌ 19 ಮಹಾಮಾರಿ ಕಾಣಿಸಿ ಕೊಂಡು ಐವರು ಗುಣ ಮುಖರಾಗಿದ್ದಾರೆ, ಇಬ್ಬರು ಮೃತಪಟ್ಟಿದ್ದಾರೆ. ಇನ್ನೂ ಒಂಬತ್ತು ಜನರಿಗೆ  ಕೋವಿಡ್‌ -19 ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.

ತುಮಕೂರಿನ ಖಾದರ್‌ ನಗರದ ವಾಸಿ 58 ವರ್ಷದ ಲಾರಿ ಚಾಲಕ ಪಿ.1561 ಎನ್ನುವ ವ್ಯಕ್ತಿಗೆ ಸೋಂಕು ಇರುವುದು ದೃಢಪಟ್ಟಿದೆ. ಈತ ಮುಂಬೈಗೆ ಹೋಗಿ ಬಂದು ಮನೆಯಲ್ಲಿದ್ದ ಜಿಲ್ಲಾಡಳಿತದಿಂದಲೇ ಈತನನ್ನು ಪತ್ತೆ ಹಚ್ಚಿ  ಕ್ವಾರೈಂಟೈನ್‌ ಮಾಡಲಾಗಿ ಆತನ ಗಂಟಲು ದ್ರವ ಪರೀಕ್ಷೆ ಮಾಡಿಸಿದಾಗ ಆತನಲ್ಲಿ ಕೋವಿಡ್‌ 19 ಸೋಂಕು ಇರುವುದು ತಿಳಿದು ಬಂದಿದೆ, ಖಾದರ್‌ ನಗರ ವನ್ನು ಕಂಟೈನ್ಮೆಂಟ್‌ ವಲಯ ಎಂದು ಪರಿಗಣಿಸಿ ಸೀಲ್‌ಡೌನ್‌ ಮಾಡಲಾಗಿದೆ. ಆತನ  ಸಂಪರ್ಕದಲ್ಲಿರುವ ಹೆಂಡತಿ ಮತ್ತು ಮಗುವನ್ನು ಕ್ವಾರೈಂಟೈನ್‌ ಮಾಡಲಾಗಿದೆ. 
-ಡಾ.ಕೆ.ರಾಕೇಶ್‌ ಕುಮಾರ್‌, ಜಿಲ್ಲಾಧಿಕಾರಿ

* ಚಿ.ನಿ.ಪುರುಷೊತ್ತಮ್‌

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur; ನನ್ನನ್ನು ಬರಿಗೈಯಲ್ಲಿ ಕಳುಹಿಸಬೇಡಿ: ಸೋಮಣ್ಣ

Tumkur; ನನ್ನನ್ನು ಬರಿಗೈಯಲ್ಲಿ ಕಳುಹಿಸಬೇಡಿ: ಸೋಮಣ್ಣ

12-pavagada

Pavagada: ರಸ್ತೆ ಅಪಘಾತ; ವ್ಯಕ್ತಿ ಸ್ಥಳದಲ್ಲೇ ಸಾವು

ಮನೆಗೆ ಬರುತ್ತೇನೆಂದ ಸೋಮಣ್ಣಗೆ “ಬರಬೇಡಿ’ ಎಂದ ಮಾಧುಸ್ವಾಮಿ!

ಮನೆಗೆ ಬರುತ್ತೇನೆಂದ ಸೋಮಣ್ಣಗೆ “ಬರಬೇಡಿ’ ಎಂದ ಮಾಧುಸ್ವಾಮಿ!

1-qweqewq

Koratagere;ಕಾರು ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು: ಇಬ್ಬರು ಗಂಭೀರ

9-pavagada

Pavagada: ಪತ್ನಿಯನ್ನು ಹತ್ಯೆ ಮಾಡಿ ಪತಿ ಪರಾರಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.