ತುಮಕೂರು: ಸೋಂಕಿತರ ಸಂಖ್ಯೆ 28ಕ್ಕೆ ಏರಿಕೆ


Team Udayavani, May 28, 2020, 6:44 AM IST

sonku tmk drudha

ತುಮಕೂರು: ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕು ಕಡಿಮೆಯಾಗುತ್ತಿದೆ ಅಂದು ಕೊಂಡವರಿಗೆ ನಿರಾಸೆಯಾಗುತ್ತಲೇ ಇದೇ. ದಿನ ಬಿಟ್ಟು ದಿನ ಜಿಲ್ಲೆಯಲ್ಲಿ ಸೋಂಕು ಇರುವುದು ಕಂಡು ಬರುತ್ತಿದೆ. ಮಂಗಳವಾರ ಯಾವುದೇ ಸೋಂಕು  ಕಂಡು ಬರಲಿಲ್ಲ, ಆದರೆ ಬುಧವಾರ ಮತ್ತೂಬ್ಬರಲ್ಲಿ ಸೋಂಕು ಇರುವುದು ದೃಢವಾಗಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ. ಮುಂಬೈ ನಿಂದ ಬಂದವರಿಗೆ ಈ ಸೋಂಕು ಕಾಣಿಸಿ ಕೊಂಡಿದ್ದು, ಈತನಿಗೆ ಜಿಲ್ಲಾ  ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹಳ್ಳಿಗಳತ್ತ ಕೋವಿಡ್‌ 19: ಜಿಲ್ಲೆಯಲ್ಲಿ ಸೋಂಕಿ ತರ ಸಂಖ್ಯೆಯೂ ಹೆಚ್ಚುತ್ತಲೇ ಇದೆ. ಈ ಕೋವಿಡ್‌-19 ಸಾಂಕ್ರಾಮಿಕ ರೋಗ  ಜಿಲ್ಲೆಯಲ್ಲಿ ಹೆಚ್ಚು ಹರಡದಂತೆ ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕಾ ಕ್ರಮಕೈಗೊಂಡಿದ್ದರೂ ಮಹಾಮಾರಿ  ಕೋವಿಡ್‌ 19 ಈಗ ಗ್ರಾಮೀಣ ಪ್ರದೇಶಗಳತ್ತ ಮುಖ ಮಾಡಿರುವುದು ಆತಂಕ ಮೂಡಿಸುತ್ತಿದೆ.

ಜನರಲ್ಲಿ ಆತಂಕ: ಜಿಲ್ಲೆಯ ಕೋವಿಡ್‌ ಆಸ್ಪತ್ರೆ ಯಲ್ಲಿ ತಪಾಸಣೆ ನಡೆಸಿ ಕಳುಹಿಸಿರುವ ಇನ್ನೂ 544 ಜನರ ಗಂಟಲು ಸ್ರಾವದ ಮಾದರಿ ವರದಿ ಬಾಕಿ ಇದೆ, ದಿನೇ ದಿನೆ ಸೋಂಕು ಕಾಣಿಸಿ ಕೊಳ್ಳುತ್ತಿರುವುದು ಜನರಲ್ಲಿ ಆತಂಕ ಮೂಡಿದೆ.

ಆಂಧ್ರದಿಂದ ಹೆಚ್ಚು ಜನ ಆಗಮನ: ಕೋವಿಡ್‌ 19 ಜಿಲ್ಲೆಯಿಂದ ಹೋಗಿತು ಎಂದು ನಿರಾಳರಾ ಗಿದ್ದ ಜನರಿಗೆ ಬೇರೆ ರಾಜ್ಯಗಳಿಂದ 462 ಮಂದಿ ಜಿಲ್ಲೆಗೆ ಬಂದಿದ್ದು, ಅತಿ ಹೆಚ್ಚು ಸೋಂಕು ಇರುವ ರಾಜ್ಯಗಳಾದ ಆಂಧ್ರಪ್ರದೇಶ ದಿಂದಲೇ  133 ಅತಿ ಹೆಚ್ಚು ಮಂದಿ ಬಂದಿ ದ್ದಾರೆ. ಮಹಾರಾಷ್ಟ್ರದಿಂದ 113, ತಮಿಳು ನಾಡಿನಿಂದ 103 ಜನರು ಬಂದಿದ್ದಾರೆ. ಈ ವರೆಗೆ ಬಂದಿರುವ ವರದಿಗಳಲ್ಲಿ ಹೊರ ರಾಜ್ಯಗಳಾದ ದೆಹಲಿ, ಹೈದರಾಬಾದ್‌, ಮುಂಬೈ, ಗುಜರಾಜ್‌ನಿಂದ ಬಂದವರಿಗೇ ಹೆಚ್ಚು ಸೋಂಕು ಕಾಣಿಸಿ ಕೊಂಡಿರುವುದರಿಂದ ಹೊರ ರಾಜ್ಯಗಳಿಂದ ಬಂದಿರುವ ಇನ್ನೆಷ್ಟು ಜನರಿಗೆ ಈ ಮಹಾಮಾರಿ ಕಾಣಿಸಿ ಕೊಂಡಿದೆಯೋ ಎನ್ನುವ ಆತಂಕ ಜನರಲ್ಲಿದೆ.

ನಿಯಂತ್ರಿತ ವಲಯ: ತಾಲೂಕಿನ ಹೆಬ್ಬೂರು ಹೋಬಳಿಯ ಬಳ್ಳಗೆರೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಾಯಮ್ಮನ ಪಾಳ್ಯ ಹಾಗೂ ಬೆಳ್ಳಾವಿ ಹೋಬಳಿಯ ಮಾವಿನಕುಂಟೆ ಗ್ರಾಮದ ವಾಸಿ ಕೆ.ಎಸ್‌.ಆರ್‌.ಟಿ.ಸಿ .ಚಾಲಕನಿಗೆ, ಸೋಂಕು ಕಾಣಿಸಿ ಕೊಂಡಿದೆ ಜೊತೆಗೆ ಸದಾಶಿವನಗರ ಮತ್ತು ಖಾದರ್‌ ನಗರಗಳನ್ನು ನಿಯಂತ್ರಿತ ವಲಯವನ್ನಾಗಿ ಪರಿವರ್ತಿಸಲಾಗಿದೆ.

25 ಮಂದಿ ಕ್ವಾರಂಟೈನ್‌: ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ವಾಸವಿದ್ದ ಮಾವಿನಕುಂಟೆ ಗ್ರಾಮದಲ್ಲಿ ಸುಮಾರು 80ಕ್ಕೂ ಅಧಿಕ ಮನೆಗಳಿವೆ ಕೆಎಸ್‌ಆರ್‌ಟಿಸಿ ಚಾಲಕನ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 25 ಮಂದಿಯನ್ನು  ಕ್ವಾರಂಟೈನ್‌ ಮಾಡಿದ್ದಾರೆ.

ಒಬ್ಬರಿಗೆ ಕೋವಿಡ್‌ 19 ಸೋಂಕು ದೃಢ: ತುಮಕೂರು ಜಿಲ್ಲೆಯಲ್ಲಿ ಬುಧವಾರ ದಂದು ಹೊಸದಾಗಿ ಒಬ್ಬರಿಗೆ ಕೋವಿಡ್‌-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ  ತಿಳಿಸಿದ್ದಾರೆ. ಸೋಂಕಿತ ವ್ಯಕ್ತಿಯು 33 ವರ್ಷದ ಪುರುಷನಾಗಿದ್ದು, ಮುಂಬೈ ಹೋಟೆಲ್‌ವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈತನು ಮೇ 24ರಂದು ಬೆಂಗಳೂರಿಗೆ ಹೋಗುವ ಮಾರ್ಗದಲ್ಲಿ ಇಳಿದಿದ್ದಾರೆ.

ಭಾನುವಾರದಂದು  ಕರ್ಫ್ಯೂ ಜಾರಿಯಲ್ಲಿದ್ದರಿಂದ ಜಿಲ್ಲಾಸ್ಪತ್ರೆಗೆ ಬಂದಿದ್ದಾರೆ. ಇವರ ಪ್ರಯಾಣದ ಹಿಸ್ಟರಿ ಇದ್ದಿದ್ದರಿಂದ ಅವರ ಗಂಟಲು ದ್ರವ ಮಾದರಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರ ವರದಿ ಪಾಸಿಟಿವ್‌ ಬಂದಿದೆ. ಸೋಂಕಿತ ವ್ಯಕ್ತಿಯನ್ನು ಪಿ-2343 ಗುರುತಿಸಿದ್ದು,  ಈತನು ಮೈಸೂರಿನ ಮೆಟಗಳ್ಳಿ ಯವರಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಯಾವುದೇ ರೀತಿಯ ಜ್ವರ, ಉಸಿರಾಟದ ತೊಂದರೆಯಾಗಿರುವುದಿಲ್ಲ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.