ತುಮಕೂರು: ಸೋಂಕಿತರ ಸಂಖ್ಯೆ 612ಕ್ಕೆ ಏರಿಕೆ
Team Udayavani, Jul 17, 2020, 5:34 PM IST
ತುಮಕೂರು: ಜಿಲ್ಲೆಯಲ್ಲಿ ಗುರುವಾರದಂದು 15 ಹೊಸ ಕೋವಿಡ್-19 ಪ್ರಕರಣ ದೃಢ ಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 612ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ತಿಳಿಸಿದ್ದಾರೆ.
ತುಮಕೂರು ತಾಲೂಕಿನಲ್ಲಿ 12 ಮಂದಿ ಹಾಗೂ ತಿಪಟೂರು, ಶಿರಾ, ಗುಬ್ಬಿ ತಲಾ ಒಬ್ಬರು ಸೇರಿದಂತೆ ಒಟ್ಟು 15 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢ ಪಟ್ಟಿದೆ. ಅಲ್ಲದೇ ಓರ್ವ ಸೋಂಕಿನಿಂದ ಮೃತ ಪಟ್ಟಿದ್ದು ಮೃತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಒಟ್ಟು 18 ಜನ ಬಲಿ: ಜಿಲ್ಲೆಯ ಗುಬ್ಬಿ ತಾಲೂಕಿನ ಯಲಚಿಹಳ್ಳಿಯ 72 ವರ್ಷದ ವೃದ್ಧ ಕೋವಿಡ್ಗೆ ಬಲಿಯಾಗಿದ್ದಾರೆ. ಈ ಕೋವಿಡ್ವೈರಸ್ ನಿಂದ ಜಿಲ್ಲೆಯಲ್ಲಿ ಒಟ್ಟು 18 ಜನರು ಬಲಿಯಾಗಿದ್ದಾರೆ ಎಂದರು.
5 ಮಂದಿ ಗುಣಮುಖ: ತುಮಕೂರು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 5 ಮಂದಿ ಗುಣಮುಖರಾಗಿ ಬಿಡುಗಡೆ ಯಾಗಿದ್ದು, ಈವರೆಗೆ 222 ಮಂದಿ ಗುಣ ಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 372 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರು: ಚಿಕ್ಕ ನಾಯಕನಹಳ್ಳಿ – 36, ಗುಬ್ಬಿ-31, ಕೊರಟ ಗೆರೆ – 36, ಕುಣಿಗಲ್ – 29, ಮಧುಗಿರಿ – 53, ಪಾವಗಡ-61, ಶಿರಾ-53, ತಿಪಟೂರು -24, ತುಮಕೂರು-267, ತುರುವೇ ಕೆರೆ-22 ಮಂದಿ ಸೋಂಕಿತರಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚು ಕಂಡು ಬರುತ್ತಿದೆ. ಅಷ್ಟೇ ಪ್ರಮಾಣದಲ್ಲಿ ಗುಣಮುಖರಾಗುತ್ತಿದ್ದಾರೆ. ಕೋವಿಡ್ ವೈರಸ್ಗೆ ಯಾರೂ ಹೆದರಬೇಕಾಗಿಲ್ಲ. ಇಲ್ಲಿಯವರೆಗೆ 25,828 ಜನರ ಮಾದರಿ ಸಂಗ್ರಹಿಸಲಾಗಿದೆ. 21,256 ಮಾದರಿ ಗಳು ನೆಗೆಟಿವ್ ಬಂದಿವೆ, ನಿಗಾವಣಿಯಲ್ಲಿ 1545, ಜನರಿದ್ದು ಪ್ರಥಮ ಸಂಪರ್ಕದಲ್ಲಿ 666, ದ್ವಿತೀಯ ಸಂಪರ್ಕದಲ್ಲಿ 879 ಜನರಿದ್ದು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 372 ಜನರಿಗೆ ಚಿಕಿತ್ಸೆ ನೀಡುತ್ತಿದ್ದು 222 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 612 ಜನರಿಗೆ ಸೋಂಕು ಇರುವುದು ಧೃಡವಾಗಿದೆ. –ಡಾ.ನಾಗೇಂದ್ರಪ್ಪ, ಡಿಎಚ್ಒ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ
Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!
Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು
ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್ ಹೆಗಡೆಗೆ ಟಿಕೆಟ್ ತಪ್ಪಿದೆ: ಸೋಮಣ್ಣ
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು