ತುಮಕೂರು-ಯಶವಂತಪುರ ಪ್ಯಾಸೆಂಜರ್ ರೈಲು ಸಂಚಾರ


Team Udayavani, Dec 8, 2020, 3:53 PM IST

ತುಮಕೂರು-ಯಶವಂತಪುರ ಪ್ಯಾಸೆಂಜರ್ ರೈಲು ಸಂಚಾರ

ತುಮಕೂರು: ಕೋವಿಡ್ ಮಹಾಮಾರಿಯಿಂದಾಗಿ ಕಳೆದ 9 ತಿಂಗಳಿನಿಂದ ಸ್ಥಗಿತಗೊಂಡಿದ್ದ ತುಮಕೂರು-ಯಶವಂತಪುರ ಪ್ಯಾಸೆಂಜರ್‌ರೈಲು ಸಂಚಾರ ಸೋಮವಾರದಿಂದ ಆರಂಭ ಗೊಂಡಿದ್ದು ಸಂಸದ ಜಿ.ಎಸ್‌.ಬಸವರಾಜ್‌ ರೈಲು ಆರಂಭಕ್ಕೆ ಚಾಲನೆ ನೀಡಿದರು.

ಸೋಮವಾರ ಬೆಳಗ್ಗೆ 7.30ಕ್ಕೆ ತುಮಕೂರು-  ಯಶವಂತಪುರ ಪ್ಯಾಸೆಂಜರ್‌ ರೈಲು ಸಂಚಾರ ಆರಂಭಿಸಿದ್ದು, ಪ್ರತಿನಿತ್ಯ ಬೆಂಗಳೂರಿಗೆ ವಿವಿಧಉದ್ಯೋಗಗಳಿಗೆ ತೆರಳುವವರು ಸಂತಸದಿಂದಲೇ ಪ್ರಯಾಣ ಬೆಳೆಸಿದರು. ಕಳೆದ 9 ತಿಂಗಳ ಹಿಂದೆ ಕೋವಿಡ್ ಸೋಂಕಿ ನಿಂದ ಜನರನ್ನು ರಕ್ಷಿಸಲು ಕೇಂದ್ರ ಸರ್ಕಾರ ರೈಲು ಸಂಚಾರ ಸ್ಥಗಿತಗೊಳಿಸಿತ್ತು. ಅಂದಿನಿಂದ ಇಂದಿನ ವರೆಗೆ ಪ್ಯಾಸೆಂಜರ್‌ ರೈಲುಗಳು ಓಡಾಟ ಮಾಡುತ್ತಿರಲಿಲ್ಲ. ಕೋವಿಡ್ ಆರ್ಭಟ ದೇಶಾದ್ಯಂತ ಇಳಿ ಮುಖವಾಗಿರುವ ಹಿನ್ನೆಲೆಯಲ್ಲಿ ಎಲ್ಲ ಮುಂಜಾ ಗ್ರತಾ ಕ್ರಮಗಳನ್ನು ಕೈಗೊಂಡು ತುಮಕೂರು-ಯಶವಂತಪುರ ಪ್ಯಾಸೆಂಜರ್‌ ರೈಲು ಸಂಚಾರಕ್ಕೆ ಸಂಸದ ಜಿ.ಎಸ್‌. ಬಸವರಾಜು ಅವರು ಪ್ರಯಾಣಿಕರಿಗೆ ಮಾಸ್ಕ್ ವಿತರಿಸುವ ಮೂಲಕ ಚಾಲನೆ ನೀಡಿದರು.

ನಂತರ ಮಾತನಾಡಿದ ಸಂಸದ ಜಿ.ಎಸ್‌. ಬಸವರಾಜು, ಕಳೆದ 9 ತಿಂಗಳಿನಿಂದ ಸ್ಥಗಿತಗೊಂಡಿದ್ದ ಪ್ಯಾಸೆಂಜರ್‌ ರೈಲು ಸಂಚಾರ ಇಂದು ಆರಂಭವಾಗಿದ್ದು, ತುಮಕೂರಿನಿಂದ ಯಶವಂತಪುರಕ್ಕೆ ಪ್ರತಿನಿತ್ಯ ತೆರಳುತ್ತಿದೆ. ಸದ್ಯಕ್ಕೆ ಯಶವಂತಪುರದ ಬದಲು ಕೆಂಪೇಗೌಡ ರೈಲುನಿಲ್ದಾಣದವರೆಗೂ ಈ ರೈಲು ಸಂಚರಿಸುವಂತೆಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ರೈಲ್ವೆ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು.

ಸಂಪೂರ್ಣವಾಗಿ ರೈಲು ಸಂಚಾರ ಆರಂಭ ವಾಗುವವರೆಗೂ ಮೆಜೆಸ್ಟಿಕ್‌ ವರೆಗೆ ಈ ರೈಲು ತೆರಳಲಿ. ರೈಲುಗಳ ಸಂಚಾರ ಸಂಪೂರ್ಣವಾಗಿಆರಂಭವಾದ ಬಳಿಕ ಯಶವಂತಪುರಕ್ಕೆ ಸೀಮಿತ ಗೊಳಿಸಲಿ ಎಂದು ತಿಳಿಸಿದರು.

ಪಾಲಿಕೆ ಸದಸ್ಯೆ ಗಿರಿಜಾ ಧನಿಯಾಕುಮಾರ್‌ ಮಾತನಾಡಿ, ಕಳೆದ 9 ತಿಂಗಳಿನಿಂದ ಸ್ಥಗಿತಗೊಂ ಡಿದ್ದ ಪ್ಯಾಸೆಂಜರ್‌ ರೈಲು ಸಂಚಾರವನ್ನು ಮತ್ತೆ ಆರಂಭಿಸಿರುವುದು ಸ್ವಾಗತಾರ್ಹ. ಇದರಿಂದ ಪ್ರತಿನಿತ್ಯ ಬೆಂಗಳೂರಿಗೆ ಕೆಲಸ ಕಾರ್ಯಗಳಿಗೆ ತೆರಳುವವರಿಗೆ ತುಂಬಾ ಅನುಕೂಲವಾಗಲಿದೆ ಎಂದರು. ತುಮಕೂರು-ಯಶವಂತಪುರಪ್ಯಾಸೆಂ

ಜರ್‌ ರೈಲಿಗೆ ಮಾತ್ರ ನಗರದ ರೈಲ್ವೆ ನಿಲ್ದಾಣದ ಕೌಂಟರ್‌ನಲ್ಲಿ ಪ್ರಯಾಣಿಕರಿಗೆ ಕಾಯ್ದಿರಿಸದಟಿಕೆಟ್‌ ವಿತರಿಸಲಾಗುತ್ತದೆ. ಉಳಿದ ಇನ್ಯಾವುದೇರೈಲುಗಳಿಗೆ ಕೌಂಟರ್‌ನಲ್ಲಿ ಟಿಕೆಟ್‌ ನೀಡಲಾಗುವುದಿಲ್ಲ. ಉಳಿದ ರೈಲುಗಳಿಗೆ ಆನ್‌ಲೈನ್‌ನಲ್ಲೇ ಟಿಕೆಟ್‌ ಬುಕ್ಕಿಂಗ್‌ ಮಾಡಿಕೊಳ್ಳ ಬಹುದಾಗಿದೆ. ಹಾಗೆಯೇ ಶಿವಮೊಗ್ಗ-ಬೆಂಗಳೂರು ಇಂಟರ್‌ ಸಿಟಿ ಎಕ್ಸ್‌ಪ್ರೆಸ್‌, ರಾಣಿಚೆನ್ನಮ್ಮ ಎಕ್ಸ್‌ಪ್ರೆಸ್‌, ಧಾರ ವಾಡ ಇಂಟರ್‌ಸಿಟಿ ಹಾಗೂ ರಾತ್ರಿ ಹೊಸಪೇಟೆ ಎಕ್ಸ್‌ಪ್ರೆಸ್‌ ರೈಲುಗಳು ಇಂದಿನಿಂದ ಸಂಚಾರ ಆರಂಭಿಸಿವೆ.ಈ ರೈಲುಗಳಿಗೆಕಾಯ್ದಿರಿಸದಟಿಕೆಟ್‌ ನೀಡಲಾಗುವುದಿಲ್ಲ. ಆನ್‌ಲೈನ್‌ನಲ್ಲೇ ಟಿಕೆಟ್‌ ಕಾಯ್ದಿರಿಸಬೇಕಾಗಿದೆ ಎಂದು ರೈಲ್ವೆ ಇಲಾಖೆ ವಾಣಿಜ್ಯ ನಿರೀಕ್ಷಕ ಧನಂಜಯ್ಯ ತಿಳಿಸಿದರು.

ಆರಂಭವಾಗಿರುವ ಪ್ಯಾಸೆಂಜರ್‌ ರೈಲಿನಲ್ಲಿ ಕೋವಿಡ್‌ ತಡೆಗಾಗಿ ಪ್ರಯಾಣಿಕರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು,ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಯಾವುದೇ ಕಾರಣಕ್ಕೂ ಕೋವಿಡ್‌ ಮುಂಜಾಗ್ರತೆ ಕಾಪಾಡದವರಿಗೆ ರೈಲಿ ನಲ್ಲಿ ಪ್ರಯಾಣಿಸಲು ಅವಕಾಶ ಇರುವುದಿಲ್ಲ ಎಂದು ತಿಳಿಸಿದ್ದಾರೆ. ರೈಲ್ವೆ ಇಲಾಖೆಯ ಬೆಂಗಳೂರುವಿಭಾಗದಎಡಿಆರ್‌ಎಲ್‌ಲಕ್ಷ್ಮಣ್‌ಸಿಂಗ್‌, ಎಸಿಎಂ ಇಕ್ಬಾಲ್‌ ಅಹಮದ್‌, ಸ್ಟೇಷನ್‌ ಮ್ಯಾನೇ ಜರ್‌ ರಮೇಶ್‌ಬಾಬು ಇತರರು ಇದ್ದರು.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.