ತುರುವೇಕೆರೆ ಶಾಸಕನ ಪುತ್ರನ ಮೇಲೆ ಹಲ್ಲೆ: ಹಾಲಿ-ಮಾಜಿ ಶಾಸಕರ ವಾಗ್ಯುದ್ಧ

ಪುತ್ರನ ಮೇಲೆ ಹಲ್ಲೆ, ಚೂರಿ ಇರಿತ ಕೇಸ್‌ಗೆ ಎಂ.ಟಿ.ಕೃಷ್ಣಪ್ಪ ಕಾರಣ: ಶಾಸಕ ! ನ್ಯಾಯಕ್ಕಾಗಿ ಠಾಣೆ ಬಳಿ ಧರಣಿ: ಎಂ.ಟಿ.ಕೃಷ್ಣಪ್ಪ

Team Udayavani, Apr 9, 2021, 9:02 PM IST

Untitled-3

ಗುಬ್ಬಿ: ನನ್ನ ಪುತ್ರ ತೇಜು ಮೇಲೆ ನಡೆದ ಹಲ್ಲೆ ಹಾಗೂ ಇಡಗೂರು ಚೂರಿ ಇರಿತ ಪ್ರಕರಣ ಈ ಎರಡೂ ಘಟನೆಗಳಿಗೆ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಕಾರಣ ಎಂದು ತುರುವೇಕೆರೆ ಶಾಸಕ ಮಸಾಲಾ ಜಯರಾಮ್‌ ಆರೋಪಿಸಿದರು.

ಗುಬ್ಬಿ ತಾಲೂಕಿನ ಸಿ.ಎಸ್‌.ಪುರ ಹೋಬಳಿ ತಮ್ಮ ಸ್ವಗ್ರಾಮ ಅಂಕಳಕೊಪ್ಪ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ತುರುವೇಕೆರೆ ವಿಧಾನಸಭಾ ಕ್ಷೇತ್ರವಾದ ನನ್ನ ಕ್ಷೇತ್ರವು ಅಭಿವೃದ್ಧಿಯ ಕಡೆ ಸಾಗುತ್ತಿರುವುದನ್ನು ಕಂಡ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಹತಾಶೆಗೆ ಒಳಗಾಗಿ ತನ್ನ ಇರುವಿಕೆ ತೋರ್ಪಡಿಸಿಕೊಳ್ಳಲು ಸಿ.ಎಸ್‌.ಹೋಬಳಿಯಲ್ಲಿ ರಕ್ತಪಾತ ನಡೆಸಿ ಪ್ರಬುದ್ಧತೆ ನಡೆಸಲು ಮುಂದಾಗಿದ್ದು, ಅದಕ್ಕೆ ಪೂರಕವಾಗಿ ನೆಟ್ಟಿಕೆರೆ ಕ್ರಾಸ್‌ ಬಳಿ ಘಟನೆ ನಡೆದಿದೆ ಎಂದರು.

ಹೈಡ್ರಾಮಾ: ಬೆಂಗಳೂರಿನಿಂದ ಅಂಕಳಕೊಪ್ಪ ಗ್ರಾಮಕ್ಕೆ ಬರುತ್ತಿದ್ದ ತಮ್ಮ ಮಗ ತೇಜು ಕಾರು ಹಿಂಬಾಲಿಸಿ ಬಂದ ಕೃಷ್ಣಪ್ಪ ಬೆಂಬಲಿಗರ ಗುಂಪು ಹೆಬ್ಬೂರು ಬಳಿ ಜಗಳ ಆರಂಭಿಸಿ ನೆಟ್ಟೆಕೆರೆ ಕ್ರಾಸ್‌ವರೆಗೆ ಹಿಂಬಾಲಿಸಿ ಮಾರಕಾಸ್ತ್ರ ತೋರಿಸಿ ಬೆದರಿಕೆಯೊಡ್ಡಿ ದ್ದಾರೆ. ಈ ಘಟನೆಗೆ ಕೃಷ್ಣಪ್ಪ ಪೋಷಿಸಿರುವ ರೌಡಿಸಂ ಗುಂಪು ಕಾರಣ. ರಾಜಕಾರಣದಿಂದ ಹೊರತಾದ 21 ವರ್ಷದ ನನ್ನ ಪುತ್ರನ ಮೇಲೆ ತೋರಿದ ಪೌರುಷ ಹೇಡಿತನದ ಇನ್ನೊಂದು ಮುಖ ಎಂದು ಛೇಡಿಸಿದರು. ಜನ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿದ್ದಾರೆ. ರಾಜಕಾರಣ ದ್ವೇಷಕ್ಕೆ ಅಮಾಯಕರ ಮೇಲೆ ಹಲ್ಲೆ ನಡೆಸುವುದು ಮಾಡುವ ಕೃಷ್ಣಪ್ಪ ಇಡಗೂರು ಪ್ರಕರಣಲ್ಲೂ ಹೈಡ್ರಾಮಾ ರಚಿಸಿದ್ದಾರೆಂದರು.

ವಿಳಂಬ ಬೇಡ:

ತನ್ನದೇ ಪಟಾಲಂನ ರೌಡಿ ಶೀಟರ್‌ ಆನಂದ್‌ನ ಬಳಸಿ ಚೂರಿ ಇರಿತ ನಾಟಕ ನಡೆಸಿದ್ದಾರೆ. ರೌಡಿ ಶೀಟರ್‌ ಆಗಿರುವ ಆತ ಬೆಂಗಳೂರಿನಲ್ಲಿ 8 ಪ್ರಕರಣಗಳಲ್ಲಿ ಬೇಕಾಗಿದ್ದಾನೆ. ಜತೆಗೆ ತಮ್ಮ ಮಗನ ಮೇಲೆ ಹಲ್ಲೆಗೆ ಮುಂದಾದ ಅವ್ವೆàರಹಳ್ಳಿ ಕೃಷ್ಣನ ಇತಿಹಾಸವೂ ಬೆಂಗಳೂರಿನ ಕ್ರಿಮಿನಲ್‌ ಹಿನ್ನೆಲೆಯುಳ್ಳದ್ದಾಗಿದೆ. ಇವರು ಕೃಷ್ಣಪ್ಪ ಅವರ ಬಂಟರು. ಎಂ.ಟಿ.ಕೃಷ್ಣಪ್ಪ ಅವರ ಮೇಲಿರುವ 150 ಕೇಸುಗಳು ಎಲ್ಲರಿಗೂ ತಿಳಿದಿದೆ ಎಂದರು. ತಮ್ಮ ಮಗನ ಹಲ್ಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ವಿಳಂಬ ಮಾಡಿದ್ದಲ್ಲಿ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತೇನೆ ಎಂದು ಪೊಲೀಸ್‌ ಇಲಾಖೆಗೆ ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.