ತುರುವೇಕೆರೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಕಲ ಸಿದ್ಧತೆ


Team Udayavani, Jun 25, 2020, 6:17 AM IST

uruvekere

ತುರುವೇಕೆರೆ: ಕೋವಿಡ್‌ 19 ಹಿನ್ನೆಲೆಯಲ್ಲಿ ಗುರುವಾರ ದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯುತ್ತಿದ್ದು ಶಿಕ್ಷಣ ಇಲಾಖೆ ಸರ್ಕಾರಗಳ ಮಾನದಂಡ ಅನ್ವಯ ಅಗತ್ಯ ಮುಂಜಾಗ್ರತೆ ಕ್ರಮದೊಂದಿಗೆ ಸಕಲ ಸಿದ್ಧತೆಗಳನ್ನು  ಕೈಗೊಂಡಿದ್ದು, ಈ ಬಗ್ಗೆ ಪೋಷಕರಾಗಲಿ, ವಿದ್ಯಾರ್ಥಿಗಳಾಗಲಿ ಆತಂಕಗೊಳ್ಳುವ ಪ್ರಮೇಯವಿಲ್ಲ. ತಾಲೂಕಾದ್ಯಂತ 17 ಸರ್ಕಾರಿ, 27 ಅನುದಾನಿತ, 11 ಅನುದಾನ ರಹಿತ ಸೇರಿದಂತೆ ಒಟ್ಟು 55 ಪ್ರೌಢಶಾಲೆಗಳಿವೆ. ಪ್ರಸ್ತುತ 2020ರ  ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 1946 ಹೊಸ, 73 ಪುನರಾವರ್ತಿತ ವಿದ್ಯಾರ್ಥಿಗಳು ಸೇರಿ, 2016 ಮಂದಿ ಪರೀಕ್ಷೆ ಬರೆಯಲಿದ್ದಾರೆ.

ಪರೀಕ್ಷಾ ಕೇಂದ್ರಗಳು: ತುರುವೇಕೆರೆ ಪಟ್ಟಣದ ಜಿಜೆಸಿ ಸರಸ್ವತಿ ಪ್ರೌಢಶಾಲೆ, ಮಾಯಸಂದ್ರದ ನೆಹರು  ಬಾಲಿಕ ಪ್ರೌಢಶಾಲೆ, ಸೊರವನಹಳ್ಳಿ ವೃತ್ತದ ಎಸ್‌.ಬಿ.ಜೆ ಪ್ರೌಢಶಾಲೆ, ದಬ್ಬೇಘಟ್ಟ ಸರ್ಕಾರಿ ಶಾಲೆ, ದಂಡಿನಶಿವರ ಕೆ.ಪಿ.ಎಸ್‌.ಶಾಲೆ, ಹುಲ್ಲೇಕೆರೆಯ ಬಸವೇಶ್ವರ ಪ್ರೌಢಶಾಲೆ, ಒಳಗೊಂಡಂತೆ 8 ಕೇಂದ್ರಗಳನ್ನು ನಿಗದಿಗೊಳಿಸಿದೆ. ಎಲ್ಲಾ  ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ. ಕ್ಯಾಮೆರಾ ಅಳವಡಿಸಿದೆ.

ಕೋವಿಡ್‌ 19 ಮಂಜಾಗ್ರತೆ ಹಿನ್ನೆಲೆಯಲ್ಲಿ ಪ್ರತಿ ವಿದ್ಯಾರ್ಥಿಯಿಂದ ವಿದ್ಯಾರ್ಥಿಗೆ 1 ಮೀಟರ್‌ ಅಂತರ ಕಾಯ್ದುಕೊಳ್ಳಲು ಒಂದು ಡೆಸ್ಕ್ಗೆ  ಇಬ್ಬರು ವಿದ್ಯಾರ್ಥಿಗಳು, ಪ್ರವೇಶ  ರದಲ್ಲೇ ಥರ್ಮಲ್‌ ಸ್ಕ್ರೀನಿಂಗ್‌ ವ್ಯವಸ್ಥೆ, ಸ್ಯಾನಿಟೈಸರ್‌ ವ್ಯವಸ್ಥೆ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳಲ್ಲಿ ಅನಿರೀಕ್ಷಿತ ಕೆಮ್ಮು, ಜ್ವರ ಕಾಣಿಸಿಕೊಂಡರೆ ಅಂತಹ ವಿದ್ಯಾರ್ಥಿಗಳನ್ನು ಉಳಿದ ವಿದ್ಯಾರ್ಥಿಗಳಿಂದ ಬೇರ್ಪಡಿಸಲು ಎಲ್ಲಾ ಕೇಂದ್ರಗಳಲ್ಲಿ  ಪ್ರತ್ಯೇಕ ಕೊಠಡಿ ಮೀಸಲಿರಿಸಿದೆ.

ಸಿಬ್ಬಂದಿ ಹಾಗೂ ಸಿದ್ಧತೆ: 8 ಮಂದಿ ಚೀಪ್‌ ಕಸ್ಟೋಡಿಯರ್‌, 8 ಮಂದಿ ಸಂಚಾರ ಕಸ್ಟೋಡಿಯನ್‌, ಪ್ರತಿ ಕೊಠಡಿಗೆ ಒಬ್ಬ ಇನ್ವಿಜಿಲೇಟರ್‌, ಸಹಾಯಕರು, ಹೆಚ್ಚುವರಿ ಸಿಬ್ಬಂದಿ ಹಾಗೂ ಸ್ಕೌಟ್ಸ್‌ ಅಂಡ್‌ ಗೈಡ್ಸ್‌ ಸಿಬ್ಬಂದಿ ಸೇರಿ ಅಗತ್ಯ  ಸಿಬ್ಬಂದಿಗಳನ್ನು ಈಗಾಗಲೇ ನೇಮಿಸಿಕೊಳ್ಳಲಾಗಿದೆ. ಪ್ರತಿ ವಿದ್ಯಾರ್ಥಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಶಿಕ್ಷಣ ಇಲಾಖೆ ಸಹ ಮಾಸ್ಕ್ ನೀಡಲಿದೆ.

ಕುಡಿಯುವ ನೀರಿನ ವ್ಯವಸ್ಥೆ ಪರೀಕ್ಷಾ ಕೇಂದ್ರದಲ್ಲಿ ಇದ್ದರೂ ವಿದ್ಯಾರ್ಥಿಗಳ ಆರೋಗ್ಯ  ದೃಷ್ಟಿಯಿಂದ ಸ್ವಂತ ಬಾಟಲಿಯಲ್ಲಿ ನೀರು ಹಾಗೂ ಅವರಿಗೆ ಊಟೋ ಪಚಾರದ ವ್ಯವಸ್ಥೆಯನ್ನು ಅವರ ಪೋಷಕರೇ ಪೂರೈಸಬೇಕು ಹಾಗೂ ಸಂಚಾರದ ವೇಳೆ ಸಾಮಾಜಿಕ ಅಂತರ ಕಾಯ್ದುಕೊಂಡು ಇರಬೇಕು. ಪರೀಕ್ಷಾ ಮಂಡಳಿ  ಪ್ರಮಾಣಿತ ಎಸ್‌.ಒ.ಪಿ ಯಂತೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪೋಲಿಸ್‌, ಆರೋಗ್ಯ ಇಲಾಖೆ, ಸ್ಥಳೀಯ ಗ್ರಾಪಂ ಪಟ್ಟಣ ವ್ಯಾಪ್ತಿಯ ಪುರಸಭೆಗಳು ಸ್ವತ್ಛತೆ, ನೈರ್ಮಲ್ಯ ಆರೋಗ್ಯ, ರಕ್ಷಣಾ ವ್ಯವಸ್ಥೆ ಎಲ್ಲವನ್ನೂ ಸುಗಮವಾಗಿ ನೋಡಿಕೊಳ್ಳುವ  ವ್ಯವಸ್ಥೆ ಕೈಗೊಳ್ಳಲಾಗಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.