![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ರಾಗಿ ಬೆಳೆಗೆ ಸಮಗ್ರ ಪೋಷಕಾಂಶ ಬಳಸಿ
Team Udayavani, Sep 13, 2020, 4:49 PM IST
![ರಾಗಿ ಬೆಳೆಗೆ ಸಮಗ್ರ ಪೋಷಕಾಂಶ ಬಳಸಿ](https://www.udayavani.com/wp-content/uploads/2020/09/tk-tdy-2-620x372.jpg)
ತಿಪಟೂರು: ತಾಲೂಕಿನ ಪ್ರಮುಖ ಆಹಾರ ಬೆಳೆ ರಾಗಿಯನ್ನು ಪ್ರಸ್ತುತ 17,990 ಹೆಕ್ಟೆರ್ನಲ್ಲಿ ಬಿತ್ತಲಾಗಿದ್ದು, ರಸಗೊಬ್ಬರವನ್ನು ಕಡಿಮೆ ಮಾಡಿ ಸಾವಯವ ಗೊಬ್ಬರವನ್ನು ಬಳಸುವುದರಿಂದ ಅತಿಹೆಚ್ಚು ಇಳುವರಿಯನ್ನು ಪಡೆಯಬಹುದಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಡಾ. ಎನ್.ಕೆಂಗೇಗೌಡ ತಿಳಿಸಿದರು.
ತಾಲೂಕಿನ ಅರಳಗುಪ್ಪೆ ಗ್ರಾಮದ ರಾಗಿ ನಾಟಿ ತಾಕಿಗೆ ಭೇಟಿ ನೀಡಿ ರೈತರೊಂದಿಗೆ ತಾಂತ್ರಿಕಮಾಹಿತಿ ನೀಡಿದ ಅವರು, ಸಾರಜನಕ, ರಂಜಕ, ಪೊಟ್ಯಾಶ್ಗಳಲ್ಲಿ ಪೋಷಕಾಂಶಗಳಿದ್ದು, ಡಿಎಪಿ ಅಥವಾ ಎಂಒಪಿಯನ್ನು ಬಿತ್ತನೆ ಸಂದರ್ಭದಲ್ಲಿ ಬಳಸಿ ಉಳಿಕೆ ಅರ್ಧ ಭಾಗದ ಸಾರಜನಕವನ್ನು30-35 ದಿನಗಳ ನಂತರ 20 ಕೆ.ಜಿ ಯೂರಿಯಾ ರಸಗೊಬ್ಬರದ ಮೂಲಕ ಮೇಲು ಗೊಬ್ಬರವಾಗಿ ಕೊಡಬೇಕು. ಹೆಚ್ಚು ಯೂರಿಯಾ ರಸಗೊಬ್ಬರ ಬಳಕೆಯಿಂದ ಹುಲುಸಾಗಿ ಬೆಳೆದರೂ ರೋಗ ಕೀಟಗಳಿಗೆ ತುತ್ತಾಗುವ ಹಾಗೂ ಗಾಳಿಗೆ ಮಲಗಿ ಕಟಾವು ಕಷ್ಟಕರವಾಗಿ ಇಳುವರಿ ಕುಸಿಯುತ್ತದೆ. ಪ್ರತಿ ಎಕರೆಗೆ 5 ಕೆ.ಜಿ ಸತುವಿನ ಸಲ್ಪೇಟ್, 4 ಕೆ.ಜಿ ಬೋರಾನ್ ಲಘು ಪೋಷಕಾಂಶಗಳನ್ನು ಇಲಾಖೆಯಲ್ಲಿ ಸಹಾಯಧನದಡಿ ನೀಡಲಾಗುತ್ತಿದೆ. ಬಿತ್ತನೆಯಾದ 20ದಿನಗಳ ನಂತರ ಪ್ರತಿ 10 ದಿನಗಳಿಗೊಮ್ಮೆ ಅಂತರಬೇಸಾಯ ಕೈಗೊಳ್ಳಬೇಕು. ರಾಗಿ ಬೆಳೆಯಲ್ಲಿ ಅಕ್ಕಡಿ ಬೆಳೆಯಾಗಿ ತೊಗರಿ ಅಥವಾ ಅವರೆಬೆಳೆಗಳನ್ನು ಬೆಳೆಯುವುದರಿಂದ ರೈತರಆದಾಯ ಅಧಿಕವಾಗಲಿದೆ. ಹೆಸರು ಅಥವಾ ಅಲಸಂದೆ ಬೆಳೆದ ನಂತರ ರಾಗಿ ಬೆಳೆ ಬೆಳೆಯುವುದರಿಂದ ಮಣ್ಣಿನ ಫಲವತ್ತತೆ ಸುಧಾರಿಸಿ ಅಧಿಕ ರಾಗಿ ಇಳುವರಿ ಪಡೆಯಬಹುದು. ರಾಗಿ ಎಲೆ ಮೇಲೆ ಬೆಂಕಿರೋಗದ ಲಕ್ಷಣಗಳಾದ ಕಂದು ಬಣ್ಣದ ಕಣ್ಣಿನಾಕಾರದ ಚುಕ್ಕೆಗಳು ಹೆಚ್ಚು ಕಂಡುಬಂದಲ್ಲಿಕಾರ್ಬನ್ ಡೈಸಿಮ್ 1 ಗ್ರಾಂ ಪ್ರತಿ ಲೀಟರ್ ನೀರಿಗೆ ಬೆರಸಿ ಸಿಂಪಡಿಸಿ. ಬಿತ್ತನೆಯಾದ 40-45 ದಿನಗಳು ನಂತರ ಗರಿಗಳನ್ನು ಮೇಯಿಸುವುದರಿಂದ ಕವಲುಗಳು ಹೊಡೆದು ಇಳುವರಿ ಅಧಿಕವಾಗಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shobha-Kharandlaje](https://www.udayavani.com/wp-content/uploads/2024/07/Shobha-Kharandlaje-150x90.jpg)
Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್ ಸರ್ಕಾರ: ಕೇಂದ್ರ ಸಚಿವೆ ಶೋಭಾ
![5-tumkur](https://www.udayavani.com/wp-content/uploads/2024/07/5-tumkur-150x90.jpg)
Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ
![4-koratagere](https://www.udayavani.com/wp-content/uploads/2024/07/4-koratagere-150x90.jpg)
Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ
![1-ewewqe](https://www.udayavani.com/wp-content/uploads/2024/07/1-ewewqe-150x85.jpg)
Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.