ಬೆಳೆ ಕುಸಿತದಿಂದ ಗಗನಕ್ಕೇರಿದೆ ತರಕಾರಿ ಬೆಲೆ


Team Udayavani, May 16, 2019, 12:21 PM IST

tmk-1

ಹುಳಿಯಾರು: ಜನರಿಗೆ ಈಗ ತರಕಾರಿ ಬೆಲೆಯ ತಲೆ ಬಿಸಿ ಹೆಚ್ಚಾಗುತ್ತಿದೆ. ವಾರದಿಂದ ವಾರಕ್ಕೆ ತರಕಾರಿ ಬೆಲೆ ಏರಿತ್ತಿದ್ದು, ಜನ ತರಕಾರಿ ಕೊಳ್ಳಲು ಹಿಂದು ಮುಂದು ನೋಡುವಂತ್ತಾಗಿದೆ. ಹೋಟೆಲ್ಗಳಲ್ಲಂತಲೂ ತರ ಕಾರಿ ಸಾರು ಸಿಗದಾಂತಾಗಿದೆ.

ಮದುವೆ ಸೇರಿದಂತೆ ಶುಭ ಕಾರ್ಯ ಮಾಡುವವರು ತರಕಾರಿ ಬೆಲೆ ಕೇಳಿ ಬೆಚ್ಚಿ ಬೀಳುತ್ತಿದ್ದಾರೆ. ಹುಳಿಯಾರು ಮಾರುಕಟ್ಟೆಗೆ ಹಾಸನದಿಂದ ತರಕಾರಿ ಬರುತ್ತದೆ. ಆದರೆ, ಹಾಸನ ದಲ್ಲೇ ತರಕಾರಿ ಬೆಳೆ ಕುಸಿದಿದ್ದು, ಬೆಲೆ ಹೆಚ್ಚಳವಾಗಿದೆ. ಇದರ ಪರಿಣಾಮ ಹುಳಿಯಾರಿನಲ್ಲೂ ಬೆಲೆ ಗಗನ ಮುಖೀಯಾಗಿದೆ. ಇದಕ್ಕೆ ಮಳೆ ಕೊರತೆ, ಬಿಸಿಲಿನ ಝಳ ಹೆಚ್ಚಳ ಹಾಗೂ ಅಂತರ್ಜಲ ಕುಸಿತದಿಂದ ಕೃಷಿಗೆ ನೀರಿನ ಕೊರತೆ ಎದುರಾಗಿ ಸದ್ಯ ತರಕಾರಿ ಬೆಳೆಯು ವವರ ಸಂಖ್ಯೆ ಕಡಿಮೆಂಯಾಗಿರುವುದು ಕಾರಣ ಎನ್ನಲಾಗಿದೆ.

ತರಕಾರಿಗೆ ಅಧಿಕ ಬೇಡಿಕೆ: ಮದುವೆ ಮತ್ತಿತರ ಶುಭ ಕಾರ್ಯಗಳ ಹೆಚ್ಚಳ ಮತ್ತು ರಂಜಾನ್‌ ಮಾಸದ ಕಾರಣಕ್ಕೆ ತರಕಾರಿಗಳಿಗೆ ಬೇಡಿಕೆ ಸಹ ಹೆಚ್ಚಿದೆ. ಆದರೆ, ಪೂರೈಕೆಯ ಪ್ರಮಾಣ ಕಡಿಮೆ ಇದೆ. ಇದರಿಂದ ಸಹಜವಾಗಿ ಬೆಲೆ ಹೆಚ್ಚಳವಾಗಿದೆ. ವಾರದಿಂದ ವಾರಕ್ಕೆ ತರಕಾರಿ ಬೆಲೆ ಗಗನಕ್ಕೇರುತ್ತಿದೆ.

ಕೆ.ಜಿ ಹುರಳಿಕಾಯಿಗೆ 80 ರೂ.: ಕಳೆದ ವಾರಕ್ಕೆ ಹೋಲಿಸಿದರೆ ತರಕಾರಿ ಬೆಲೆಗಳಲ್ಲಿ ಏರಿಕೆ ಕಂಡು ಬಂದಿದೆ. ಜನಪ್ರಿಯ ತರಕಾರಿಗಳಲ್ಲಿ ಒಂದಾದ ಹುರಳಿಕಾಯಿ (ಬೀನ್ಸ್‌) ಕಳೆದ ವಾರ ಕೆ.ಜಿ.ಗೆ 40 ರೂ. ಇತ್ತು. ಈ ವಾರ 80 ರೂ.ಗೆ ಜಿಗಿದಿದೆ. ಹಸಿರು ಮೆಣಸಿಕಾಯಿ 60-70 ರೂ. ಆಗಿದೆ. ಕ್ಯಾರೆಟ್ 40 ರೂ. ಆಗಿದೆ. ಟೊಮೊಟೋ ಅಂತೂ ದಾಖಲೆಯ ಬೆಲೆ ಅಂದರೆ 50-60 ರೂ. ಆಗಿದೆ. ಉಳಿದಂತೆ ಬೆಂಡೆಕಾಯಿ, ಹೂ ಕೋಸು, ಮೂಲಂಗಿ, ಆಲೂಗಡ್ಡೆ, ಉಳ್ಳಾಗಡ್ಡಿ ಬೆಲೆಯಲ್ಲಿ ಅಲ್ಪಸ್ವಲ್ಪ ವ್ಯತ್ಯಾಸವಾಗಿದೆ.

ಸೊಪ್ಪಿನ ಬೆಲೆ ಸ್ವಲ್ಪ ಕಡಿಮೆ: ಹುಳಿಯಾರು ಸುತ್ತಮುತ್ತ ಸೊಪ್ಪು ಬೆಳೆಗಾರರು ಹೆಚ್ಚಾಗಿದ್ದ ಕಾರಣ ಕೊತ್ತಂಬರಿ, ಪಾಲಕ್‌, ಮೆಂತ್ಯೆ, ದಂಟು ಹೀಗೆ ವಿವಿಧ ಸೊಪ್ಪುಗಳು ಕಡಿಮೆ ದರದಲ್ಲಿ ಸಿಗುತ್ತಿತ್ತು. ಆದರೆ, ಅಂತರ್ಜಲ ಕುಸಿತವಾಗಿ ಕೊಳವೆ ಬಾವಿಯಲ್ಲಿ ನೀರು ಬಾರದಾಗಿ ಸೊಪ್ಪು ಬೆಳೆಯುವವರು ಸಹ ಕಡಿಮೆಯಾಗಿದ್ದಾರೆ. ಪರಿಣಾಮ ಸೊಪ್ಪಿನ ಬೆಲೆ ಸಹ ಹೆಚ್ಚಳವಾಗಿದೆ. ಕೆಲವೊಂದು ಸಂದರ್ಭದಲ್ಲಿ ಒಂದು ಕಟ್ಟು ಕೊತ್ತಂಬರಿ ಸೊಪ್ಪಿನ ಬೆಲೆ ಹತ್ತದಿನೈದು ರೂ.ಗಳಿಗೂ ಹೆಚ್ಚಾದ ನಿದರ್ಶನವಿದೆ.

ವ್ಯಾಪಾರಗಳಿಗೆ ನಷ್ಟವಾಗುವ ಸಾಧ್ಯತೆ: ತರಕಾರಿ ಬೆಲೆ ಜಾಸ್ತಿಯಾಗಿರುವ ಕಾರಣ ಹಿಂದೆಲ್ಲ ಕೆ.ಜಿಗಟ್ಟಲೇ ಖರೀದಿಸುತ್ತಿದ್ದವರು ಈಗ ಅರ್ಧ, ಕಾಲು ಕೆ.ಜಿ ಸಾಕೆನ್ನುತ್ತಿದ್ದಾರೆ. ಅಲ್ಲದೆ, ಬೆಲೆಗಳು ಹೆಚ್ಚಾದ ಪರಿಣಾಮ ತರಕಾರಿ ಕೊಳ್ಳುವವರ ಸಂಖ್ಯೆ ಕಡಿಮೆ ಯಾಗುತ್ತಿದೆ. ಮಾಂಸಹಾರಿಗಳಂತೂ ಕೆ.ಜಿ.ತರಕಾರಿಗೆ ಕೆ.ಜಿ.ಕೋಳಿ ಬರುತ್ತದೆ ಎಂದು ಗೇಲಿ ಮಾಡುತ್ತಿದ್ದಾರೆ.

ಸದ್ಯ ಮಾರುಕಟ್ಟೆಯಲ್ಲಿ ಗ್ರಾಹಕರು ಬೀನ್ಸ್‌, ಮೆಣಸಿನ ಕಾಯಿ, ಟೊಮೊಟೋ ಖರೀದಿಸಲು ಹಿಂದೇಟು ಹಾಕುವ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ನಮ್ಮ ವ್ಯಾಪಾರಕ್ಕೆ ಪೆಟ್ಟು ಬಿದ್ದಿದೆ ಎಂದು ತರಕಾರಿ ವ್ಯಾಪಾರಿ ಖಾಜಾಪೀರ್‌ ಹೇಳುತ್ತಾರೆ.

ಒಟ್ಟಾರೆ ಬೆಲೆ ಏರಿಕೆಯ ಬಿಸಿ ಮಧ್ಯಮ ಮತ್ತು ಬಡ ವರ್ಗದ ಮೇಲೆ ತಟ್ಟುತ್ತಿದೆ. ಅಲ್ಲದೆ, ಹೋಟೆಲ್ ಉದ್ಯಮದ ಮೇಲೂ ತರಕಾರಿ ಏರಿಕೆಯ ಬಿಸಿ ತಟ್ಟಿದೆ. ಈಗ ಮಳೆ ಬಂದು ರೈತರು ತರಕಾರಿ ಬೆಳೆಯಲು ಮುಂದಾದರೂ ಅವು ಮಾರುಕಟ್ಟೆಗೆ ಬರುವುದು ಕನಿಷ್ಠ ಎಂದರೂ ಎರಡು- ಮೂರು ತಿಂಗಳು ಬೇಕಾ ಗುತ್ತದೆ. ಅಲ್ಲಿಯವರೆವಿಗೂ ತರಕಾರಿ ಬೆಲೆ ಎಲ್ಲಿಗೆ ಹೋಗಿ ಮುಟ್ಟುತ್ತದೋ ಊಹಿಸಲಾಗದಾಗಿದೆ.

ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರು, ಈಗ ನಿತ್ಯ ಬಳಕೆಯ ತರಕಾರಿ ಬೆಲೆಯೂ ಗಗನಕ್ಕೇರುತ್ತಿ ರುವ
ಕಾರಣ ಹೈರಾಣಾಗಿ ದ್ದಾರೆ. ಮುಂಗಾರು ಪೂರ್ವ ಮಳೆ ಕೈಕೊಟ್ಟಿರುವ ಕಾರಣ ಮುಂದಿನ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಮತ್ತಷ್ಟು ಏರಿಕೆಯಾಗಲಿದೆ ಎನ್ನಲಾಗುತ್ತಿದ್ದು, ಮಹಿಳೆ ಯರಂತೂ ದಿನನಿತ್ಯ ಯಾವ ಅಡುಗೆ ಮಾಡು ವುದು ಎಂಬ ಚಿಂತೆಗೀಡಾಗಿ ಹೆಚ್ಚಾಗಿ ಸೊಪ್ಪಿನ ಸಾರು ಮಾಡಲು ಮುಂದಾಗುತ್ತಿದ್ದಾರೆ.
●ಪುಟ್ಟರಾಜು, ಗ್ರಾಹಕ, ಹುಳಿಯಾರು

● ಎಚ್.ಬಿ.ಕಿರಣ್‌ಕುಮಾರ್‌

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shobha-Kharandlaje

Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್‌ ಸರ್ಕಾರ: ಕೇಂದ್ರ ಸಚಿವೆ ಶೋಭಾ 

5-tumkur

Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ

4-koratagere

Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ

1-ewewqe

Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.