ಡಾಂಬರು ಮೇಲೆದ್ದ ರಸ್ತೆ : ನಿತ್ಯ ಸಂಕಷ್ಟ

ಕೆರೆಗೋಡಿ-ರಂಗಾಪುರ, ದಸರೀಘಟ್ಟಕ್ಷೇತ್ರಕ್ಕೆ ಹೋಗುವ ರಸ್ತೆ ದುರಸ್ತಿಗೊಳಿಸಿ

Team Udayavani, Oct 12, 2020, 4:02 PM IST

tk-tdy-01

ತಿಪಟೂರು : ನಗರದ ಹಾಸನ ರಸ್ತೆಯಿಂದ ಅನಗೊಂಡನಹಳ್ಳಿ ಮಾರ್ಗದಿಂದ ಕೆರೆಗೋಡಿ-ರಂಗಾಪುರಕ್ಕೆ ಸಂಪರ್ಕ ಕಲ್ಪಿಸುವರಸ್ತೆ ಸಂಪೂರ್ಣ ಹಾಳಾಗಿದ್ದು ವಾಹನಗಳ ಓಡಾಟಕ್ಕೆ ತೀವ್ರ ತೊಂದರೆಯಾಗುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳು ಶೀಘ್ರವಾಗಿ ರಸ್ತೆ ದುರಸ್ತಿಗೊಳಿಸಬೇಕೆಂದು ಈ ಭಾಗದ ವಾಹನ ಸವಾರರು ಹಾಗೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಹರಸಾಹಸ: ಈ ರಸ್ತೆಯು ಕೆರೆಗೋಡಿ-ರಂಗಾಪುರ ಹಾಗೂ ದಸರೀಘಟ್ಟಪುಣ್ಯ ಕ್ಷೇತ್ರಗಳಿಗೆ ಸಂಪರ್ಕ ಕಲ್ಪಿಸುವರಸ್ತೆಯಾಗಿದ್ದು, ಪ್ರತಿನಿತ್ಯ ಅಪಾರ ಸಂಖ್ಯೆಯಲ್ಲಿಭಕ್ತರು ಈ ಕ್ಷೇತ್ರಗಳಿಗೆ ಬಂದುಹೋಗುತ್ತಾರೆ. ಆದರೆ ರಸ್ತೆ ಬಹಳಷ್ಟು ಕಡೆಗಳಲ್ಲಿ ಹಾಳಾಗಿದ್ದು, ಉದ್ದುದ್ದ ಗುಂಡಿಗಳು ಬಿದ್ದಿರುವುದರಿಂದ ವಾಹನ ಸವಾರರು ಹರಸಾಹಸ ಮಾಡಿಕೊಂಡು ವಾಹನಗಳನ್ನು ಚಲಾಯಿಸಬೇಕಾಗಿದೆ. ನೂರಾರು ವಾಹನಗಳು ಇಲ್ಲಿ ಸಂಚರಿಸು ತ್ತಿರುವುದರಿಂದ ಪ್ರತಿನಿತ್ಯ ಒಂದಲ್ಲೊಂದು ಅವಘಡ, ಅಪಘಾತಗಳು ಸಂಭವಿಸುತ್ತಿವೆ. ಮಳೆ ಬಂದರಂತೂ ಕೆಸರು ಗದ್ದೆಯಾಗುತ್ತಿವೆ.

ನಿತ್ಯ ವಾಹನ ದಟ್ಟಣೆ: ಸಾರ್ವಜನಿಕರು ಹಾಗೂ ಸವಾರರಂತೂ ಹಿಡಿ ಶಾಪ ಹಾಕಿ ಕೊಂಡೇ ಓಡಾಡುತ್ತಿದ್ದಾರೆ. ಅಲ್ಲದೆ ಈ ಕ್ಷೇತ್ರ ಗಳಿಗೆ ಗಾಂಧಿನಗರ ಕಡೆಯಿಂದ ಹೋಗುವಮುಖ್ಯ ರಸ್ತೆಯು ಯುಜಿಡಿ ಕಾಮಗಾರಿಯಿಂದಾಗಿ ಕೆಸರು ಗದ್ದೆಯಂತಾಗಿದ್ದುಗುಂಡಿಗಳು ಬಿದ್ದಿರುವ ಕಾರಣ ಓಡಾಡಲು ಸಾಧ್ಯವಾಗದೇ ವಾಹನ ಸವಾರರು ಅನಗೊಂಡನಹಳ್ಳಿ ರಸ್ತೆಯಲ್ಲಿಯೇ ಸಂಚರಿಸುತ್ತಿದ್ದಾರೆ. ಇದರಿಂದಾಗಿ ಪ್ರತಿನಿತ್ಯ ವಾಹನಗಳದಟ್ಟಣೆ ಹೆಚ್ಚಾಗಿರುತ್ತದೆ.

ಕ್ಯಾರೆ ಎನ್ನದ ಅಧಿಕಾರಿಗಳು: ಈ ರಸ್ತೆಯಲ್ಲಿ 2-3ಕಡೆ ಸೇತುವೆ ಕುಸಿತವುಂಟಾಗಿದ್ದು ರಾತ್ರಿ ಸಮಯದಲ್ಲಿ ಓಡಾಡಲು ಕಷ್ಟಸಾಧ್ಯ. ರಸ್ತೆಯ ಎರಡೂ ಅಂಚಿನಲ್ಲಿ ಗಿಡ-ಗಂಟಿಗಳು ಬೆಳೆದು ರಸ್ತೆಯನ್ನೇ ಆಕ್ರಮಿಸಿಕೊಂಡಿರುವುದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ರಾತ್ರಿ ಸಂಚರಿಸುವ ಸವಾರರಂತೂ ಪ್ರಾಣಿಗಳು ಅಡ್ಡಬಂದು ಅಪಘಾತವಾಗುತ್ತದೆಯೋ ಎಂದು ತಮ್ಮ ಜೀವ ಕೈಯಲ್ಲಿಡಿದುಕೊಂಡು ಮನೆ ತಲುಪುವಂತಾಗಿದೆ. ಹತ್ತು ಹಲವು ಅಪಘಾತಗಳಿಗೆ ಕಾರಣವಾಗುತ್ತಿದ್ದರೂ ಜನಪ್ರತಿನಿಧಿಗಳು, ಸಂಬಂಧಪಟ್ಟ ಅಧಿಕಾರಿಗಳ್ಯಾರೂ ಕ್ಯಾರೇ ಅನ್ನುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದ್ದರಿಂದ ಕೂಡಲೇ ಸಂಬಂಧಪಟ್ಟ ಇಲಾಖಾಧಿಕಾರಿಗಳು ರಸ್ತೆ ಡಾಂಬರೀಕರಣಗೊಳಿಸಿ, ಅಕ್ಕಪಕ್ಕದ ರಾಕ್ಷಸ ಗಾತ್ರದ ಮುಳ್ಳು ಬೇಲಿ ತೆರವುಗೊಳಿಸಿ, ವಾಹನ ಅಪಘಾತಕ್ಕೆ ತುತ್ತಾಗ ದಂತೆ ಸವಾರರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಸವಾರರ ಒತ್ತಾಯವಾಗಿದೆ.ಒಂದುವೇಳೆರಸ್ತೆದುರಸ್ತಿಗೊಳಿಸದಿದ್ದರೆ ಜಿಪಂ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಗ್ರಾಮಸ್ಥರು ಹಾಗೂ ವಾಹನ ಸವಾರರು ಎಚ್ಚರಿಕೆ ನೀಡಿದ್ದಾರೆ.

ಶ್ರೀಮಠಕ್ಕೆ ಭಕ್ತರು ಬರಲು ಹಾಗೂ ಈ ಭಾಗದ ಹತ್ತಾರು ಹಳ್ಳಿಗಳ ಜನತೆ ಓಡಾಡಲು ಈ ರಸ್ತೆಯೇ ಮುಖ್ಯವಾಗಿದೆ.ಕೂಡಲೇ ಶಾಸಕರು, ಅಧಿಕಾರಿಗಳು ಈ ರಸ್ತೆಗೆ ಡಾಂಬರೀಕರಣಮಾಡಿಸಿಕೊಡಬೇಕೆಂದುಆಗ್ರಹಿಸುತ್ತೇನೆ. – ಶ್ರೀಗುರುಪರದೇಶಿ ಕೇಂದ್ರ ಸ್ವಾಮೀಜಿ, ಕೆರೆಗೋಡಿ- ರಂಗಾಪುರ ಸುಕ್ಷೇತ

ರಸ್ತೆ ರಿಪೇರಿ ಮಾಡಿಸಿಕೊಡಲು ಶಾಸಕರು, ಅಧಿಕಾರಿಗಳು, ಜಿಪಂ ಸದಸ್ಯರಿಗೆ ಈಗಾಗಲೇ ಹತ್ತಾರು ಬಾರಿ ಮನವಿ ಮಾಡಲಾಗಿದೆ. ಆದರೆ,ಯಾವುದೇಕ್ರಮ ಕೈಗೊಂಡಿಲ್ಲ.ಕೂಡಲೇರಸ್ತೆಗೆ ಡಾಂಬರೀಕರಣ ಮಾಡದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ. ದೇವರಾಜು, ಕೆರೆಗೋಡಿ

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shobha-Kharandlaje

Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್‌ ಸರ್ಕಾರ: ಕೇಂದ್ರ ಸಚಿವೆ ಶೋಭಾ 

5-tumkur

Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ

4-koratagere

Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ

1-ewewqe

Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.