ಕೊರಟಗೆರೆಯ ಮಕ್ಕಳಿಗೆ ಅನಾರೋಗ್ಯ

15 ದಿನದಿಂದ ಚಿಕ್ಕ ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ ಹೆಚ್ಚಳ |ಪೋಷಕರಿಗೆ ಆತಂಕ

Team Udayavani, Oct 5, 2021, 6:34 PM IST

ಕೊರಟಗೆರೆಯ ಮಕ್ಕಳಿಗೆ ಅನಾರೋಗ್ಯ

ಕೊರಟಗೆರೆ: ಕೊರೊನಾ ಅಲೆಯ ತೀವ್ರತೆಯಿಂದ ನಲುಗಿರುವ ಜನತೆಗೆ 3ನೇ ಅಲೆ ಮಕ್ಕಳಿಗೆ ಹೆಚ್ಚು ಬಾಧಿಸಲಿದೆ ಎಂಬ ತಜ್ಞರ ಎಚ್ಚರಿಕೆ ನಡುವೆ ಕೊರಟಗೆರೆ ತಾಲೂಕಿನ ಮಕ್ಕಳಲ್ಲಿ ಜ್ವರ, ನೆಗಡಿ, ಕೆಮ್ಮು ಪ್ರಕರಣಗಳು ಹೆಚ್ಚುತ್ತಿರುವುದು ಪೋಷಕರಲ್ಲಿ ನಿದ್ದೆ ಕೆಡಿಸಿದಂತಾಗಿದೆ.

ಕೊರಟಗೆರೆ ತಾಲೂಕಿನಲ್ಲಿ ಕಳೆದ 15 ದಿನದಿಂದ ಚಿಕ್ಕ ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ ಹೆಚ್ಚಾಗಿದ್ದು, ಪೋಷಕರಲ್ಲಿ ಆತಂಕ ಹುಟ್ಟಿಸಿದೆ. ಕೊರೊನಾ ಮೊದಲ ಹಾಗೂ ಎರಡನೇ ಅಲೆ ಸಾರ್ವಜನಿಕರ ಬದುಕನ್ನು ಸಂಕಷ್ಟಗೊಳಿಸಿ, ದಿಕ್ಕು ಕಾಣದಂತೆ ಮಾಡಿದಂತ ಸನ್ನಿವೇಶದಲ್ಲಿ ಮೂರನೇ ಅಲೆ ಚಿಕ್ಕ ಮಕ್ಕಳ ಮೇಲೆ ಹೆಚ್ಚು ಪರಿಣಾಮಕಾರಿಯಾಗಲ್ಲಿದೆ ಎನ್ನುವ ಸಂದರ್ಭದಲ್ಲಿ ತಾಲೂಕಿನಲ್ಲಿ ಮಕ್ಕಳಿಗೆ ಜ್ವರ, ಕೆಮ್ಮು, ನೆಗಡಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ.

ಮಕ್ಕಳಲ್ಲಿ ಕೊರೊನಾ ಲಕ್ಷಣ: ಕಳೆದ 1-2 ತಿಂಗಳಿನಿಂದ ಕೊರಟಗೆರೆ ತಾಲೂಕಿನಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿದ್ದು, ಸಾರ್ವಜನಿಕರು ನಿಟ್ಟುಸಿರು ಬಿಡುವ ಸಂದರ್ಭದಲ್ಲಿ ಮತ್ತೆ ಮಕ್ಕಳಲ್ಲಿ ಕೊರೊನಾ ಲಕ್ಷಣಗಳು ಕಂಡು ಬಂದಿರುವುದು ಪೋಷಕರಲ್ಲಿ ನೆಮ್ಮದಿ ಕೆಡಿಸಿದೆ. ಚಿಕ್ಕ ಮಕ್ಕಳು ತಮ್ಮ ಪರಿಸ್ಥಿತಿಯನ್ನು ಹೇಳಿಕೊಳ್ಳಲಾಗದೆ, ಅಳುತ್ತಿರುವ ದೃಶ್ಯ ಪಾಲಕರು ತಲೆ ಕೆಡಿಸಿಕೊಳ್ಳುವಂತಾಗಿದೆ.

ಇದನ್ನೂ ಓದಿ;- ಬನಹಟ್ಟಿ: ತಂದೆ-ತಾಯಿ ಮಾತಿಗೆ ಸಿಟ್ಟಾಗಿ ಆತ್ಮಹತ್ಯೆ ಮಾಡಿಕೊಂಡ ಮಗಳು

ಸುರಕ್ಷತೆ ಬಗ್ಗೆ ಹೆಚ್ಚು ಕಾಳಜಿ: ರಾಜ್ಯದಲ್ಲೇ ಕೊರೊನಾ ಲಕ್ಷಣಗಳು ಕಡಿಮೆಯಾಗಿ, ಸರ್ಕಾರ ಹಂತ ಹಂತವಾಗಿ ಶಾಲೆ, ಕಾಲೇಜು ಆರಂಭಿಸುವ ಆಲೋಚನೆಯಲ್ಲಿದೆ. ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಹೆಚ್ಚು ಕಾಳಜಿವಹಿಸಿ ಅನೇಕ ಬದಲಾವಣೆ ಮಾಡುತ್ತಿರುವ ಸನ್ನಿವೇಶದಲ್ಲೇ ಚಿಕ್ಕ ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿಯಂತಹ ರೋಗ ಲಕ್ಷಣಗಳು ಕಾಣಿಸಿಕೊಳ್ಳುತ್ತಿರುವುದು ಪೋಷಕರಿಗೆ ದಿಕ್ಕು ಕಾಣದೇ ದೇವರಿಗೆ ಮೊರೆ ಹೋಗುತ್ತಿದ್ದಾರೆ.

ರಾಜ್ಯ ಸರ್ಕಾರ ಕೊರೊನಾದ ನಿಯಮಸಡಿಲಿಸಿ, ಜನ ಜೀವನ ಯಥಾಸ್ಥಿತಿಗೆ ಮರಳಿದ್ದು, ಶಾಲಾ ಕಾಲೇಜುಗಳು ಪ್ರಾರಂಭಗೊಂಡು ವಿದ್ಯಾರ್ಥಿಗಳು ಶಾಲೆಗಳತ್ತ ಮುಖಮಾಡುವ ಸಂದರ್ಭದಲ್ಲಿ ಮಕ್ಕಳಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಳ್ಳುತ್ತಿರುವುದು ಆತಂಕ ಮೂಡಿಸಿದ್ದು, ಕೊರಟಗೆರೆ ತಾಲೂಕಿನಲ್ಲೇ ಸಾವಿರಾರು ಜನ ಕೊರೊನಾ ಲಕ್ಷಣಗಳಿಂದ ನಿತ್ಯ ಆಸ್ಪತ್ರೆಗೆ ಹೋಗುವಂತಾಗಿದೆ.

ಮಕ್ಕಳಿಗೆ ಕೊರೊನಾ ಲಕ್ಷಣಗಳು ಕಂಡ ಕೂಡಲೇ ಆಸ್ಪತ್ರೆಗೆ ಹೋಗುತ್ತಿದ್ದು, ಜಿಲ್ಲಾ ಹಾಗೂ ತಾಲೂಕು ಆರೋಗ್ಯ ಇಲಾಖೆ ಮಕ್ಕಳ ಆರೋಗ್ಯ ರಕ್ಷಣೆಗೆ ಹೆಚ್ಚು ಗಮನ ನೀಡಬೇಕಾಗಿದೆ. ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ. ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಬಿಕೋ ಎನ್ನುತ್ತಿದೆ ತಾಲೂಕು ಆಸ್ಪತ್ರೆ: ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಡಾ.ನಾಗಭೂಷನ್‌, ಡಾ.ಪ್ರಕಾಶ್‌, ಡಾ. ಅನಿಲ್‌ ಹಾಗೂ ಡಾ.ಜಯಂತ್‌ ಎಂಬ ವೈದ್ಯರು ಇಲ್ಲದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಆರೋಗ್ಯ ಇಲಾಖೆ ವೈದ್ಯರು ಉತ್ತಮವಾಗಿ ಸ್ಪಂದಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.