ಆಮಿಷಕ್ಕೆ ಒಳಗಾಗದೇ ಕಡ್ಡಾಯವಾಗಿ ಮತ ಚಲಾಯಿಸಿ


Team Udayavani, Jan 26, 2019, 11:16 AM IST

lure.jpg

ತಿಪಟೂರು: ಹದಿನೆಂಟು ವರ್ಷ ತುಂಬಿದ ಪ್ರತಿಯೊಬ್ಬರು ಚುನಾವಣೆಯಲ್ಲಿ ಯಾವುದೇ ಆಮಿಷಕ್ಕೆ ಒಳಗಾಗದೆ ಆತ್ಮವಿಶ್ವಾಸದಿಂದ ಮತದಾನದ ಹಕ್ಕನ್ನು ಚಲಾಯಿಸುವ ಪ್ರಜ್ಞಾವಂತಿಕೆ ಬೆಳೆಸಿಕೊಂಡು, ಮತ ದಾನದ ಮೌಲ್ಯ ಮತ್ತು ಪ್ರಜಾಪ್ರಭುತ್ವದ ಮಹತ್ವ ಕಾಪಾಡಬೇಕೆಂದು ಉಪವಿಭಾಗಾಧಿಕಾರಿ ಎಸ್‌. ಪೂವಿತಾ ತಿಳಿಸಿದರು.

ನಗರದ ಕಲ್ಪತರು ಆಡಿಟೋರಿಯಂನಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಜಗತ್ತಿ ನಲ್ಲಿಯೇ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ 18 ವರ್ಷ ಪೂರ್ಣಗೊಂಡ ಪ್ರತಿ ಯೊಬ್ಬರು ಮತದಾನದ ಹಕ್ಕು ಪಡೆದಿರುತ್ತಾರೆ. ಅದನ್ನು ಯಾವುದೇ ಪ್ರಭಾವಕ್ಕೆ ಒಳಗಾಗದೆ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಚಲಾಯಿಸಬೇಕು. ಮತ ಚಲಾಯಿಸುವುದು ನಮ್ಮ ಹಕ್ಕು ಮತ್ತು ಕರ್ತವ್ಯವಾಗಿದ್ದು, ಚುನಾವಣಾ ಆಯೋಗ ಹಾಗೂ ಸಂವಿಧಾನದ ನಿಯಮಾವಳಿ, ಮಾರ್ಗಸೂಚಿ ಪರಿಪೂರ್ಣವಾಗಿ ಮನನ ಮಾಡಿಕೊಂಡು ಅವುಗಳ ಪಾವಿತ್ರ್ಯತೆ ಕಾಪಾಡಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ಮಂಗಳಗೌರಮ್ಮ ಮಾತನಾಡಿ, ದೇಶದ ಬಗ್ಗೆ ಅಭಿಮಾನ, ಸ್ವಾಭಿಮಾನದ ಜೊತೆಗೆ ಮತ ಚಲಾವಣೆ ಮಾಡುವುದೂ ನಮ್ಮ ದೇಶಕ್ಕೆ ಕೊಟ್ಟ ಗೌರವವಾಗಿರುತ್ತದೆ. ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ಇತರರಿಗೆ ಜಾಗೃತಿ ಮೂಡಿಸಬೇಕೆಂದರು.

ಸಂವಿಧಾನ ನೀಡಿರುವ ಹಕ್ಕು: ಪೌರಾಯುಕ್ತ ಮಧು ಮಾತನಾಡಿ, ಯುವ ಮತ್ತು ಭಾವಿ ಮತದಾರರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಪ್ರತಿವರ್ಷ ಜ.25ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಗುತ್ತದೆ. ಸಂವಿಧಾನ ನೀಡಿರುವ ಮತದಾನದ ಹಕ್ಕು ಪಡೆದು ಕೊಂಡು ಉತ್ತಮ ಪ್ರತಿನಿಧಿಯನ್ನು ಆಯ್ಕೆ ಮಾಡ ಬೇಕಿದೆ ಎಂದು ಸಲಹೆ ನೀಡಿದರು.

ಶೇ.100ರಷ್ಟು ಮತದಾನವಾಗಲಿ: ತಾಪಂ ಕಾರ್ಯ ನಿರ್ವಹಣಾಧಿಕಾರಿ ಮದನ್‌ಮೋಹನ್‌ ಮಾತನಾಡಿ, ಪ್ರಜಾಪ್ರಭುತ್ವದ ಆಧಾರ ಸ್ತಂಭವಾಗಿರುವ ಮತದಾನ ವನ್ನು 18 ವರ್ಷ ಮೇಲ್ಪಟ್ಟಿರುವವರು ಮಾಡುವ ಮೂಲಕ ದಕ್ಷ ಮತ್ತು ಪ್ರಾಮಾಣಿಕ ವ್ಯಕ್ತಿಯನ್ನು ಆಯ್ಕೆ ಮಾಡಬೇಕು. ಈ ಬಗ್ಗೆ ಜನರಲ್ಲಿ ಅರಿವು ಜಾಗೃತಿ ಮೂಡಿಸಲಾಗುತ್ತಿದ್ದು, ನಮ್ಮಲ್ಲಿ ಶೇ. 75ರಷ್ಟು ಮಾತ್ರ ಮತದಾನ ನಡೆಯುತ್ತಿದು,್ದ ಮುಂಬರುವ ದಿನಗಳಲ್ಲಿ ಶೇ. 100ರಷ್ಟು ಮತದಾನ ನಡೆಯಬೇಕಾಗಿರು ವುದರಿಂದ ಎಲ್ಲರೂ ಮಾಹಿತಿ ಪಡೆದುಕೊಂಡು ಬೇರೆಯವರಿಗೂ ಜಾಗೃತಿ ಮೂಡಿಸಬೇಕೆಂದರು.

ಈ ಸಂದರ್ಭದಲ್ಲಿ ತಹಶೀಲ್ದಾರ್‌ ಬಿ.ಆರತಿ ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ಎಲ್ಲಾ ಹೋಬಳಿಗಳ ಮತಗಟ್ಟೆ ಅಧಿಕಾರಿಗಳನ್ನು ಅಭಿನಂದಿಸ ಲಾಯಿತು. ಮತದಾನದ ವಿಧಾನದ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ತಿಳಿಸಿಕೊಡಲಾಯಿತು. ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ, ತಹಶೀಲ್ದಾರ್‌ ಹಾಗೂ ನಗರಸಭೆ ಸಿಬ್ಬಂದಿ ವರ್ಗ ದವರು, ಬಿಎಲ್‌ಒಗಳು, ಶಿಕ್ಷಕರು, ಮತದಾರರು ಭಾಗವಹಿಸಿದ್ದರು. ಉಪನ್ಯಾಸಕ ಮಹದೇವಯ್ಯ ನಿರೂಪಿಸಿ, ವಂದಿಸಿದರು.

ಪ್ರಾಮಾಣಿಕ ವ್ಯಕ್ತಿಗೆ ಮತ ಚಲಾಯಿಸಿ

ಕುಣಿಗಲ್‌: ಮತದಾನದ ಹಕ್ಕಿನ ಮಹತ್ವ ತಿಳಿದು ಪ್ರಾಮಾಣಿಕ ವ್ಯಕ್ತಿಗೆ ಮತ ಚಲಾಯಿಸಿ, ಆಯ್ಕೆ ಮಾಡುವ ಮೂಲಕ ದೇಶದಲ್ಲಿನ ಭ್ರಷ್ಟಾಚಾರ ತಡೆಗಟ್ಟ ಬೇಕೆಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಮಹಮ್ಮದ್‌ ಮೊಯುದ್ದೀನ್‌ ಸಲಹೆ ನೀಡಿದರು. ಪಟ್ಟಣದ ಕಂದಾಯ ಭವನದಲ್ಲಿ ಚುನಾವಣಾ ಆಯೋಗ ಹಾಗೂ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ಮತ ದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಭ್ರಷ್ಟಾಚಾರ ಇಳಿಮುಖವಾಗಿಲ್ಲ: ಚುನಾವಣಾ ಆಯೋಗದ ಪ್ರಕಾರ 2014ರಲ್ಲಿ ದೇಶದಲ್ಲಿ 86.68 ಕೋಟಿ ಮತದಾರರಿದ್ದಾರೆ. ಆದರೆ, ನೂರಕ್ಕೆ ನೂರಷ್ಟು ಮತದಾನ ದೇಶದಲ್ಲಿ ಎಲ್ಲೂ ನಡೆದಿಲ್ಲ, ಶೇ. 75 ರಷ್ಟು ಮಾತ್ರ ಮತದಾನವಾಗುತ್ತದೆ. ಮತದಾನದ ದಿನ ದಂದು ಪ್ರಜ್ಞಾವಂತರು ತಮ್ಮ ಹಕ್ಕು ಚಲಾಯಿಸದೆ ಕುಟುಂಬದೊಂದಿಗೆ ಪ್ರವಾಸ ಹೋಗುತ್ತಿರುವುದು ಮತದಾನ ಕಡಿಮೆಯಾಗಲು ಕಾರಣವಾಗಿದೆ. ಇದ ರಿಂದ ಪ್ರಾಮಾಣಿಕ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ಸಾಧ್ಯವಾಗದೇ ದೇಶದಲ್ಲಿ ಭ್ರಷ್ಟಾಚಾರ ಇಳಿಮುಖವಾಗಿಲ್ಲ ಎಂದು ವಿಷಾದಿಸಿದರು.

ಪ್ರಧಾನ ಸಿವಿಲ್‌ ನ್ಯಾಯಾಧೀಶ ಜೆ.ಕೃಷ್ಣ ಮಾತ ನಾಡಿ, ದೇಶದ ಅಭಿವೃದ್ಧಿಯ ಹಿತ ದೃಷ್ಟಿಯಿಂದ ಮತ ದಾನ ಮಾಡಿ ಉತ್ತಮ ಜನ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳದಿದ್ದರೇ ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಾಗೂ ಸಂವಿಧಾನಕ್ಕೆ ಅಪಮಾನ ಮಾಡಿದಂತ್ತಾಗುತ್ತದೆ ಎಂದು ಹೇಳಿದರು. ತಹಶೀಲ್ದಾರ್‌ ವಿ.ಆರ್‌ ವಿಶ್ವನಾಥ್‌ ಪ್ರತಿಜ್ಞಾನ ವಿಧಿ ಬೋಧಿಸಿದರು. ಈ ವೇಳೆ ಯುವ ಮತದಾರರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಅಪರ ಸಿವಿಲ್‌ ನ್ಯಾಯಾಧೀಶ ಕಿಶೋರ್‌ಕುಮಾರ್‌, ತಾಪಂ ಇಒ ಶಿವರಾಜಯ್ಯ, ಡಿವೈಎಸ್‌ಪಿ ಎಚ್.ಎಸ್‌.ರಾಮಲಿಂಗೇಗೌಡ, ಪುರಸಭೆ ಮುಖ್ಯಾಧಿಕಾರಿ ಆರ್‌.ರಮೇಶ್‌, ಬಿಇಒ ಎಸ್‌.ಆರ್‌.ಬಂಡಿವೀರಪ್ಪ, ಎಪಿಪಿ ರಘು ಇದ್ದರು.

ಟಾಪ್ ನ್ಯೂಸ್

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.