![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-415x218.jpg)
ಜಮೀನು ಪಡೆದ ರೈತರಿಂದ ವಸೂಲಿ: ಆರೋಪ
Team Udayavani, May 30, 2020, 6:45 AM IST
![jameenu-padeda](https://www.udayavani.com/wp-content/uploads/2020/05/jameenu-padeda-620x361.jpg)
ಕುಣಿಗಲ್: ತಾಲೂಕಿನ ಹುಲಿಯೂರುದುರ್ಗ ಹೋಬಳಿ ದೊಡ್ಡಮಾವತ್ತೂರು ಸಮೀಪ ಕೆಶಿಫ್ ರಸ್ತೆ ಟೋಲ್ ಸಂಗ್ರಹ ಮಾಡುತ್ತಿರುವುದನ್ನು ವಿರೋಧಿಸಿ ರೈತ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಲು ಮುಂದಾದಾಗ ಪೊಲೀಸರು ಮಧ್ಯ ಪ್ರವೇಶ ಮಾಡಿ ಕೊರೊನಾ ಲಾಕ್ಡೌನ್ ಕಾರಣ ನೀಡಿ ಪ್ರತಿಭಟನೆ ತಡೆದ ಘಟನೆ ನಡೆದಿದೆ.
ಕೊರಟಗೆರೆಯಿಂದ ಕೊಳ್ಳೇಗಾಲ ರಾಜ್ಯ ಹೆದ್ದಾರಿ 33ರ ಕುಣಿಗಲ್ನಿಂದ ಹುಲಿಯೂರುದುರ್ಗ ಮಾರ್ಗ ಮಧ್ಯೆ ಹಾದುಹೋಗಿದ್ದು ದೊಡ್ಡಮಾವತ್ತೂರು ಗ್ರಾಮದ ಬಳಿ ಟೋಲ್ ನಿರ್ಮಾಣ ಮಾಡಿದ್ದು ಕೆಶಿಫ್ ನಿಂದ ಟೋಲ್ ಸಂಗ್ರಹ ಆರಂಭಿಸಿದೆ. ಈ ಸಂಬಂಧ ಈ ಹಿಂದೆಯೇ ರೈತ ಸಂಘ ಟೋಲ್ ಸಂಗ್ರಹ ಮಾಡಬಾರದೆಂದು ಖಂಡಿಸಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ಅದರೂ ಟೋಲ್ ಸಂಗ್ರಹ ಮಾಡಲು ಕೆಶಿಫ್ ಕಂಪನಿ ಅಧಿಕಾರಿಗಳು ಮುಂದಾಗಿದ್ದಾರೆ. ವಿಚಾರ ತಿಳಿದ ಜಿಲ್ಲಾ ರೈತ ಸಂಘದ ಅಧ್ಯಕ್ಷ ಅನಂದ್ ಪಟೇಲ್ ಹಾಗೂ ತಾಲೂಕು ರೈತ ಸಂಘದ ಅಧ್ಯಕ್ಷ ಅನಿಲ್ ರೈತರೊಂದಿಗೆ ಟೋಲ್ ಬಳಿ ಜಮಾವಣೆಗೊಂಡು ಪ್ರತಿಭಟನೆಗೆ ಮುಂದಾದರು. ಸ್ಥಳದಲ್ಲಿ ಹಾಜರಿದ್ದ ಸಿಪಿಐ ನಿರಂಜನ ಕುಮಾರ್ ಹಾಗೂ ಪಿಎಸ್ಐ ಪುಟ್ಟೇಗೌಡ ಕೊರೊನಾ ಲಾಕ್ ಡೌನ್ ಜಾರಿಯಲ್ಲಿದೆ.
ಜೊತೆಗೆ ನಿಷೇಧಾಜ್ಞೆ ಜಾರಿ ಇರು ವುದರಿಂದ ಪ್ರತಿಭಟನೆ ನಡೆಸಲು ಅವಕಾಶ ನೀಡುವು ದಿಲ್ಲ ಹಾಗೇನಾದರೂ ಪ್ರತಿಭಟನೆ ನಡೆಸಿದರೆ ಕಾನೂನು ಕ್ರಮಕೈಗೊಳ್ಳಲಾಗುವುದೆಂದು ರೈತರ ಸಂಘದ ಪದಾಧಿಕಾರಿಗಳಗೆ ನೋಟಿಸ್ ಜಾರಿ ಮಾಡಿದರು. ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರತಿಭಟನೆ ನಡೆಸುವುದಾಗಿ ಪೊಲೀಸರು ಹಾಗೂ ರೈತ ಸಂಘದ ಪದಾಧಿಕಾರಿಗಳ ನಡುವೆ ಮಾತಿನಚಕಮಕಿ ನಡೆಯಿತು.
ರೈತ ಸಂಘದ ಒತ್ತಡಕ್ಕೆ ಪೊಲೀಸರು ಮಣಿಯದ ಕಾರಣ ರೈತ ಸಂಘದ ಪ್ರತಿಭಟನೆಯನ್ನು ತಾಲೂಕು ಕಚೇರಿಗೆ ಸ್ಥಳಾಂತರಿಸಿ ತಹಶೀಲ್ದಾರ್ ವಿ.ಆರ್.ವಿಶ್ವನಾಥ್ಗೆ ಮನವಿ ಸಲ್ಲಿಸಿದರು.ಜಿಲ್ಲಾ ರೈತ ಸಂಘದ ಆನಂದ್ ಪಟೇಲ್ ಇತರರು ಇದ್ದರು.
ಟಾಪ್ ನ್ಯೂಸ್
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-415x218.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shobha-Kharandlaje](https://www.udayavani.com/wp-content/uploads/2024/07/Shobha-Kharandlaje-150x90.jpg)
Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್ ಸರ್ಕಾರ: ಕೇಂದ್ರ ಸಚಿವೆ ಶೋಭಾ
![5-tumkur](https://www.udayavani.com/wp-content/uploads/2024/07/5-tumkur-150x90.jpg)
Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ
![4-koratagere](https://www.udayavani.com/wp-content/uploads/2024/07/4-koratagere-150x90.jpg)
Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ
![1-ewewqe](https://www.udayavani.com/wp-content/uploads/2024/07/1-ewewqe-150x85.jpg)
Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.