ಆಧಾರ್‌ಗೆ ಟೋಕನ್‌ ಪಡೆಯಲು ಪರದಾಟ


Team Udayavani, Jan 18, 2020, 5:54 PM IST

tk-tdy-1

ಕೊರಟಗೆರೆ: ಎರಡು ಲಕ್ಷಕ್ಕೂ ಅಧಿಕ ಜನಸಂಖ್ಯೆ ಇರುವ ಕೊರಟಗೆರೆ ಕ್ಷೇತ್ರದ ಕೇವಲ ಎರಡು ಕಡೆಯಷ್ಟೇ ಆಧಾರ್‌ ಕಾರ್ಡ್‌ ಕೇಂದ್ರ ವಿರುವುದರಿಂದ ಟೋಕನ್‌ ಪಡೆಯಲು ವಿದ್ಯಾರ್ಥಿಗಳ ಜೊತೆ ರೈತಾಪಿವರ್ಗ ರಾತ್ರಿಯಿಡಿ ಕಾವಲು ಕಾಯುವಪರಿಸ್ಥಿತಿ ಎದುರಾಗಿದೆ.

ಪ್ರತಿನಿತ್ಯ ನೀಡುತ್ತಿದ್ದ ಟೋಕನ್‌ ನಿಲ್ಲಿಸಿ ವಾರಕ್ಕೊಮ್ಮೆ ಸೋಮವಾರ ನಿಗದಿತ ಸಮಯದಲ್ಲಿ ವಿತರಿಸುವುದರಿಂದ ಸಮಸ್ಯೆ ಬಿಗಡಾಯಿಸಿದೆ. ಪಟ್ಟಣದ ಕಂದಾಯ ಇಲಾಖೆ ಬ್ಯಾಂಕಿನ ಎರಡು ಕಡೆಯಲ್ಲಷ್ಟೇ ಆಧಾರ್‌ ಕೇಂದ್ರ ತೆರೆಯಲಾಗಿದೆ. ಆಧಾರ್‌ ಕಾರ್ಡ್‌ನ ಬೇಡಿಕೆ ಸೃಷ್ಟಿಸುವ ಉದ್ದೇಶದಿಂದ ಪ್ರತಿದಿನ 30 ನೀಡುತ್ತಿದ್ದ ಟೋಕನ್‌ ದಿಢೀರ್‌ ನಿಲ್ಲಿಸಿವಾರಕ್ಕೊಮ್ಮೆ ಪ್ರತಿ ಸೋಮವಾರ 180 ಟೋಕನ್‌ ನೀಡಲು ಏಕಾಏಕಿ ತೀರ್ಮಾನ ತೆಗೆದುಕೊಂಡಿರುವುದರಿಂದ ಸಮಸ್ಯೆ ಹೆಚ್ಚಾಗಿದ್ದರೂ ಕಂದಾಯ ಇಲಾಖೆ ಮೌನಕ್ಕೆ ಶರಣಾಗಿದೆ.

ಎರಡೇ ಆಧಾರ್‌ ಕೇಂದ್ರ!: ಕೊರಟಗೆರೆಯ 4 ಹೋಬಳಿಯ 24 ಗ್ರಾಮ ಪಂಚಾಯಿತಿಯ 356 ಗ್ರಾಮಗಳಲ್ಲಿ 2ಲಕ್ಷ 50 ಸಾವಿರಕ್ಕೂ ಹೆಚ್ಚು ಜನರಿದ್ದಾರೆ. ಸರ್ಕಾರಿ ಮತ್ತು ಖಾಸಗಿ ಶಾಲೆ, ಕಾಲೇಜಿನಲ್ಲಿ 20,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಪಟ್ಟಣದಲ್ಲಿ ಎರಡು ಆಧಾರ್‌ ಕೇಂದ್ರವಿರುವುದು ಸಮಸ್ಯೆಗೆ ಮೂಲ ಕಾರಣವಾಗಿದೆ. ಹತ್ತಾರು ಕಿ.ಮೀದೂರದಿಂದ ಬರುವ ರೈತರು ಮತ್ತು ಶಾಲೆ-ಕಾಲೇಜಿಗೆರಜೆ ಹಾಕಿ ಆಧಾರ್‌ ತಿದ್ದುಪಡಿಗೆ ಹಾಜರಾಗುವ ವಿದ್ಯಾರ್ಥಿಗಳು ಟೋಕನ್‌ಗೆ ಭಾನುವಾರ ರಾತ್ರಿಯೇ ಬರಬೇಕು. ವಾರಕ್ಕೆ ನೀಡುವ 180 ಟೋಕನ್‌ನಲ್ಲಿ 120 ಮಾತ್ರ ವಿತರಿಸಲಾಗುತ್ತದೆ. ಉಳಿದ 60 ಟೋಕನ್‌ಗಳಿಗೆ ಬೇಡಿಕೆ ಸೃಷ್ಟಿಸಿ ಸಿಬ್ಬಂದಿ ಕೇಳಿದಷ್ಟು ಹಣವನ್ನು ರೈತರು ನೀಡಬೇಕಾಗಿದೆ. ವಿದ್ಯಾರ್ಥಿವೇತನ, ಪಡಿತರ ಚೀಟಿ, ವೃದ್ಧಾಪ್ಯ ವೇತನ, ಬ್ಯಾಂಕ್‌ ಖಾತೆ, ಜಾತಿ ಮತ್ತು ಆಧಾಯ ದೃಢೀಕರಣ ಪತ್ರದ ಜೋಡಣೆಗೆ ಆಧಾರ್‌ ಕಾರ್ಡ್‌ ನೋಂದಣಿ ಮತ್ತು ತಿದ್ದುಪಡಿಗೆ ನೀಡಬೇಕಾದ ದರದ ನಾಮಫ‌ಲಕ ಹಾಕದೇ ಸಿಬ್ಬಂದಿಗಳು ರೈತರಿಂದ ವಸೂಲಿಗೆ ಮುಂದಾಗಿದ್ದಾರೆ. ಏಜೆಂಟರು ಮಾಡಿದ್ದೇ ನಿಯಮ ವಾಗಿದ್ದು, ಅಧಿಕಾರಿಗಳೂ ಇದರಲ್ಲಿ ಶಾಮೀಲಾಗಿರವ ಅನುಮಾನ ವ್ಯಕ್ತವಾಗಿದೆ.

ಜೋಡಣೆ ಸಮಸ್ಯೆ: ಪಟ್ಟಣ ಮತ್ತು ಗ್ರಾಮೀಣ ಸೇರಿ ಒಟ್ಟು 84 ಆಹಾರ ವಿತರಣಾ ಕೇಂದ್ರದಲ್ಲಿ 43,559 ಪಡಿತರ ಕಾರ್ಡ್‌ಗಳಿವೆ. ಪ್ರತಿ ತಿಂಗಳು ಉಚಿತ ಅಕ್ಕಿ ಪಡೆಯಲು ಪಡಿತರ ಚೀಟಿಗೆ 1,35,812 ಜನರು ಆಧಾರ್‌ ಕಾರ್ಡ್‌ ಜೋಡಣೆ ಮಾಡಬೇಕಾಗಿದೆ. ಐದು ವರ್ಷ ಒಳಗಿನ ಮಕ್ಕಳಿಗೆ ಆಧಾರ ಕಾರ್ಡ್‌ನ ಜೋಡಣೆ ಮಾಡಿಸಿದರಷ್ಟೇ ಅಕ್ಕಿ ಸಿಗುತ್ತದೆ. ಸರ್ಕಾರದಆದೇಶದಂತೆ ಕೊರಟಗೆರೆಯ 24 ಗ್ರಾಪಂ, 4ನಾಡಕಚೇರಿ, ಅಂಚೆ ಇಲಾಖೆ ಮತ್ತು ಬ್ಯಾಂಕಿನಲ್ಲಿ ಆಧಾರ್‌ ಕಾರ್ಡ್‌ ಸೇರ್ಪಡೆ ಮತ್ತು ತಿದ್ದುಪಡಿ ಮಾಡಬೇಕಾಗಿದೆ. ಕೊರಟಗೆರೆ ತಾಲೂಕು ಆಡಳಿತದ ವೈಫ‌ಲ್ಯ ಹಾಗೂ ನಿರ್ಲಕ್ಷ್ಯದಿಂದ ರೈತರು, ವಿದ್ಯಾರ್ಥಿಗಳು ಪಟ್ಟಣದಲ್ಲಿ ಪ್ರತಿನಿತ್ಯ ರಾತ್ರಿ ಜಾಗರಣೆ ಮಾಡಿ ಆಧಾರ್‌ ಕಾರ್ಡ್‌ ಪಡೆಯಲು ಹಾಗೂ ತಿದ್ದುಪಡಿಗೆ ಪರದಾಟ ತಪ್ಪಿಸಲು ಶಾಸಕರು ಕ್ರಮ ಕೈಗೊಳ್ಳಬೇಕಿದೆ.

ಪಡಿತರ ಚೀಟಿಗೆ ಆಧಾರ ಕಾರ್ಡ್‌ನ ಜೋಡಣೆಯಿಂದ ಸಮಸ್ಯೆ ಹೆಚ್ಚಾಗಿದೆ. ಆಧಾರ್‌ ಕಾರ್ಡ್‌ ನೋಂದಣಿ ಉಚಿತ ಮತ್ತು ತಿದ್ದುಪಡಿಗೆ 50 ರೂ. ಪಡೆಯಬೇಕು. ಅಧಿಕ ಹಣ ಕೇಳಿದರೆ ನನ್ನ ಗಮನಕ್ಕೆ ತಂದರೆ ತಕ್ಷಣ ಕ್ರಮ ಕೈಗೊಳ್ಳುತ್ತೇನೆ. ಹೊಳವನಹಳ್ಳಿ, ಕೋಳಾಲ ಮತ್ತು ಅಂಚೆ ಕಚೇರಿಯಲ್ಲಿ ತಕ್ಷಣ ಆಧಾರ್‌ ಕಾರ್ಡ್‌ ತಿದ್ದುಪಡಿ ಮಾಡಲು ಸೂಚಿಸುತ್ತೇನೆ. ಗೋವಿಂದರಾಜು, ತಹಶೀಲ್ದಾರ್‌

 

-ಎನ್‌.ಪದ್ಮನಾಭ್‌

ಟಾಪ್ ನ್ಯೂಸ್

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

14

LS Polls: ಮಂಜುನಾಥನಿಗೂ ನನಗೂ ವಯಕ್ತಿಕ ಗಲಾಟೆ, ರಾಜಕೀಯವಲ್ಲ: ಬೋರೇಗೌಡ

1-ewqeqweqw

Congress vs BJP+JDS :ಅಂಚೆಪಾಳ್ಯ, ನಡೆಮಾವಿನಪುರ ಘಟನೆಗೆ ಹೊಸ ತಿರುವು!!

gagambl

Tumkur: ಜೂಜಾಟದಲ್ಲಿ ತೊಡಗಿದ್ದ 291 ಮಂದಿಯ ಬಂಧನ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.