ಗ್ರಾಮಗಳಲ್ಲಿ ಕಾಡುತ್ತಿದೆ ನೀರಿನ ಸಮಸ್ಯೆ

ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿಗೇ ಪರದಾಟ • ಮಳೆ ಅಭಾವದಿಂದ ಕೊಳವೆ ಬಾವಿಯಲ್ಲಿ ನೀರಿಲ್ಲ

Team Udayavani, May 31, 2019, 10:46 AM IST

tumkur-tdy–1..

ಟ್ಯಾಂಕರ್‌ ನೀರಿಗಾಗಿ ಸರದಿ ಸಾಲಿನಲ್ಲಿ ನಿಂತಿರುವ ಸಾರ್ವಜನಿಕರು.

ತುರುವೇಕೆರೆ: ತಾಲೂಕಿನಲ್ಲಿ ಸಮರ್ಪಕ ಮುಂಗಾರು ಮಳೆಯಾಗದೇ ಬರದ ಛಾಯೆ ಆವರಿಸಿದ್ದು, ತಾಲೂಕಿನ ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ.

ತಾಲೂಕಿನಲ್ಲಿ ದಬ್ಬೇಘಟ್ಟ, ಮಾಯಸಂದ್ರ, ಕಸಬಾ, ದಂಡಿನಶಿವರ ಹೋಬಳಿ ವ್ಯಾಪ್ತಿಯ ಸುಮಾರು 256 ಗ್ರಾಮಗಳನ್ನು ಹೊಂದಿದೆ. ಇದರಲ್ಲಿ ಅನೇಕ ಗ್ರಾಮ ಗಳಲ್ಲಿ ನೀರಿ ಪ್ರಮಾಣ ಕಡಿಮೆ ಇದೆ.

ಸುಮಾರು 12 ಗ್ರಾಮಗಳಲ್ಲಿ ಮಾತ್ರ ಹನಿ ಕುಡಿಯುವ ನೀರಿಗೂ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ದಿನಗಳಿಂದ ಹಿಂದೆಂದೂ ಕಾಣದಷ್ಟು ಬಿಸಿಲಿನ ತಾಪ ಹೆಚ್ಚಾ ಗಿದ್ದು, ಜನರು ಬಿಸಿಲಿನ ತಾಪಕ್ಕೆ ತತ್ತರಿಸಿ ಹೋಗಿದ್ದಾರೆ. ಮಳೆಯ ಅಭಾವ, ಕೊಳವೆ ಬಾವಿಗಳ ನೀರಿನ ತೊಂದರೆ ಯಿಂದಾಗಿ ತೆಂಗು, ಅಡಕೆ, ಬಾಳೆ ತೋಟಗಳು ಓಣಗಿ ಹೋಗುತ್ತಿದ್ದು, ರೈತರು ಮೂಕ ಪ್ರೇಕ್ಷಕರಾಗಿದ್ದಾರೆ.

ಕೆರೆ ಕಟ್ಟೆಗಳಲ್ಲಿ ನೀರು ಖಾಲಿ: ಪಟ್ಟಣಕ್ಕೆ ನೀರನ್ನು ಕಲ್ಪಿಸುವ ಮಲ್ಲಾಘಟ್ಟ ಕೆರೆ ಈಗಾಗಲೇ ಅರ್ಧ ಖಾಲಿ ಯಾಗಿದೆ. ಅದೇ ರೀತಿಯಲ್ಲಿ ಸಾರಿಗೆ ಹಳ್ಳಿ, ಅಮ್ಮಸಂದ್ರ, ಮಾಯಸಂದ್ರ, ಕೊಂಡಜ್ಜಿ, ತುರುವೇಕೆರೆ, ಸಂಪಿಗೆ ಸೇರಿದಂತೆ ತಾಲೂಕಿನ ಹಲವು ಕೆರೆಗಳಲ್ಲಿ ನೀರು ಖಾಲಿಯಾಗುತ್ತಿವೆ.

ಗ್ರಾಮಗಳಲ್ಲಿ ನೀರಿನ ಅಭಾವ: ತಾಲೂಕಿನ ಸುಮಾರು ಗ್ರಾಮಗಳಲ್ಲಿ ನೀರಿನ ಅಭಾವ ಕಾಡುತ್ತಿದೆ.

ಜನರು ಕುಡಿಯುಲು ಹನಿ ಹನಿ ನೀರಿಗೂ ಪರದಾಡು ವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಮಾಯಸಂದ್ರ ಹೋಬಳಿಯ ಭೈತರಹೊಸಹಳ್ಳಿ ಗ್ರಾಪಂ ದೊಡ್ಡಬೀರನ ಕೆರೆ, ಶೆಟ್ಟಿಗೊಂಡನಹಳ್ಳಿ ಗ್ರಾಪಂ ಚಟ್ಟನಹನಳ್ಳಿ, ನರಿಗೇಹಳ್ಳಿ, ಚನ್ನಿಂಗಯ್ಯನ ಪಾಳ್ಯ, ಮುತ್ತುಗದಹಳ್ಳಿ ಗ್ರಾಪಂ ಕಾಚೀಹಳ್ಳಿ, ಹೆಡ್ಡನಕಟ್ಟೆ, ಮಣಿಚಂಡೂರು ಗ್ರಾಪಂ ದೊಡ್ಡೇರಿಹಟ್ಟಿ, ಹನುಮಾಪುರ, ದಬ್ಬೇಘಟ್ಟ ಹೋಬಳಿಯ ಅರೆಮಲ್ಲೇನಹಳ್ಳಿ ಗ್ರಾಪಂ ರಂಗನಾಥ ಪುರ, ದಂಡಿನಶಿವರ ಹೋಬಳಿ ಕೊಂಡಜ್ಜಿ ಗ್ರಾಪಂನ ಡಿ.ಶೆಟ್ಟಿಹಳ್ಳಿ, ದೊಂ.ಗೊಲ್ಲರಹಟ್ಟಿ, ಹೊಸಕಟ್ಟೆ, ಸೊಪ್ಪನ ಹಳ್ಳಿ, ಹಡವನಹಳ್ಳಿ ಗ್ರಾಪಂ ಹೆಗ್ಗೆರೆ, ಕಸಬಾ ಹೋಬಳಿಯ ತಾಳಕೆರೆ ಗ್ರಾಪಂ ಚಂಡೂರು, ಲೋಕಮ್ಮನಹಳ್ಳಿ ಗ್ರಾಪಂ ಬಸವನಹಳ್ಳಿ, ಮೂನಿ ಯೂರು ಗ್ರಾಪಂನ ಮಾದಪಟ್ಟಣ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಕಾಡುತ್ತಿದೆ.

ತಾಲೂಕು ಆಡಳಿತದಿಂದ ನೀರಿನ ವ್ಯವಸ್ಥೆ: ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ತಾಲೂಕು ಆಡಳಿತ ಗ್ರಾಮ ಪಂಚಾಯ್ತಿ ವತಿಯಿಂದ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುತ್ತಿದೆ.

ಕೆಲವು ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳ ನೆರವು ಪಡೆದು ನೀರು ಪೂರೈಸಲಾಗುತ್ತಿದೆ. ದಿನೇ ದಿನೆ ತಾಲೂಕಿನ ಹಲವು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗುತ್ತಿದ್ದು, ತಾಲೂಕು ಆಡಳಿತ ಹರಸಾಹಸ ಪಡುವಂತಾಗಿದೆ.

48 ಹೊಸ ಕೊಳವೆ ಬಾವಿ: ಎನ್‌ಆರ್‌ಡಿಪಿ ಇಲಾಖೆ ಯಿಂದ ಕುಡಿಯುವ ನೀರಿಗಾಗಿ ತಾಲೂಕಿನಲ್ಲಿ 48 ಹೊಸ ಕೊಳವೆ ಬಾವಿ ಕೊರೆಸಲಾಗಿದೆ. ಅದರಲ್ಲಿ ದೊಂಬರನಹಳ್ಳಿ, ಡಿ.ಶಟ್ಟಿಹಳ್ಳಿ, ಬಳ್ಳೆಕಟ್ಟೆ, ಮಾಚೇನ ಹಳ್ಳಿ, ಹನುಮಾಪುರ ಗ್ರಾಮಗಳಲ್ಲಿನ 6 ಕೊಳವೆ ಬಾವಿಗಳು ವಿಫ‌ಲವಾಗಿದೆ.

79 ಶುದ್ಧ ನೀರಿನ ಘಟಕ: ತಾಲೂಕಿನಲ್ಲಿ ಕೆಆರ್‌ಡಿಎಲ್, ಕೆಎಂಎಫ್, ಎನ್‌ಆರ್‌ಡಿ ಸಂಸದರನಿಧಿಯಿಂದ ಸುಮಾರು 79 ಶುದ್ಧ ನೀರಿನ ಘಟಕ ಗಳನ್ನು ಪ್ರಾರಂಭಿಸಲಾಗಿದೆ.

ಅವುಗಳಲ್ಲಿ ಮಾಯ ಸಂದ್ರ, ಬಾಣಸಂದ್ರ, ಹರಿದಾಸನಹಳ್ಳಿ, ದೊಡ್ಡ ಗೊರಘಟ್ಟ, ಭೂವನಹಳ್ಳಿ ನೀರಿಲ್ಲದೇ ಸ್ಥಗಿತಗೊಂಡಿವೆ. ಗಿರಿನಹಳ್ಳಿ, ಮುದ್ದನಹಳ್ಳಿ ರಾಮಡಿಹಳ್ಳಿ ಇನ್ನೂ ಕೂಡ ಪ್ರಾರಂಭ ಮಾಡಿಲ್ಲ.

● ಎಸ್‌.ದೇವರಾಜ್‌

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.