ಮಾರ್ಕೋನಹಳ್ಳಿ ಅಚ್ಚುಕಟ್ಟು ಪ್ರದೇಶಕ್ಕೆ ನೀರು

ಸಾಲು ಕೆರೆ, 15 ಸಾವಿರ ಎಕರೆ ರಾಗಿ ಬೆಳೆಗೆ ಅನುಕೂಲಕರ | ಹರಿವಿಗೆ ಚಾಲನೆ ನೀಡಿದ ಶಾಸಕ

Team Udayavani, Aug 17, 2019, 1:08 PM IST

tk-tdy-1

ಮಾರ್ಕೋನಹಳ್ಳಿ ಅಚ್ಚು ಕಟ್ಟು ಪ್ರದೇಶದ ಸಾಲು ಕೆರೆಗೆ ಗೇಟ್ವಾಲ್ ತಿರುಗಿಸುವ ಮೂಲಕ ಶಾಸಕ ಡಾ.ರಂಗನಾಥ್‌ ನೀರು ಹರಿವಿಗೆ ಚಾಲನೆ ನೀಡಿದರು.

ಕುಣಿಗಲ್: ನೀರಾವರಿ ಸಲಹಾ ಸಮಿತಿ ತೀರ್ಮಾನದಂತೆ ಶುಕ್ರವಾರ ಮಾರ್ಕೋನಹಳ್ಳಿ ಜಲಾಶಯದ ಅಚ್ಚುಕಟ್ಟು ಪ್ರದೇಶದ ಸಾಲು ಕೆರೆಗಳಿಗೆ ಮತ್ತು ರಾಗಿ ಬೆಳೆಗೆ ನೀರು ಬಿಡಲಾಯಿತು.

ನೀರು ಹರಿವಿಗೆ ಚಾಲನೆ ನೀಡಿದ ಬಳಿಕ ಮಾರ್ಕೋನಹಳ್ಳಿ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಡಾ.ರಂಗನಾಥ್‌, ಜಲಾಶಯದ ಪೂರ್ಣ ನೀರಿನ ಮಟ್ಟ 88.50 ಅಡಿ ಇದ್ದು, ಪ್ರಸ್ತುತ 82 ಅಡಿ ನೀರಿದೆ. ಮಲೆನಾಡು ಪ್ರದೇಶದಲ್ಲಿ ಉತ್ತಮ ಮಳೆಯಾಗಿ ಗೂರೂರು ಜಲಾಶಯ ಪರಿಪೂರ್ಣವಾಗಿ ತುಂಬಿದೆ. ಅಮೃತೂರು ಹೋಬಳಿ ವ್ಯಾಪ್ತಿಯಲ್ಲಿ ಕೆರೆ ಕಟ್ಟೆಗಳು ಬರಿದಾಗಿ ಅಂತರ್ಜಲ ಮಟ್ಟ ಕುಸಿದಿದ್ದು, ಕೊಳವೆ ಬಾವಿಗಳು ಬರಿದಾಗಿ ಜನ-ಜಾನುವಾರುಗಳ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಈಗ ಜಲಾಶಯದಲ್ಲಿ ಲಭ್ಯವಿರುವ ನೀರಿನ ಮಟ್ಟದ ಅನುಗುಣವಾಗಿ ಈ ವ್ಯಾಪ್ತಿಯಲ್ಲಿ ಸಾಲು ಕೆರೆ ತುಂಬಿಸಿ ಅಂರ್ತಜಲ ಮಟ್ಟ ಹೆಚ್ಚಿಸಿ ಕುಡಿಯುವ ನೀರಿಗೆ ಅನುಕೂಲ ಮಾಡಿಕೊಡುವುದರ ಜತೆಗೆ ಸುಮಾರು 15 ಸಾವಿರ ಎಕರೆ ರಾಗಿ ಬೆಳೆಗೆ ನೀರು ಕೊಡಲು ನೀರಾವರಿ ಸಲಹಾ ಸಮಿತಿ ತೀರ್ಮಾನದಂತೆ ನೀರು ಹರಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯ ನೀರಿನ ಪಾಲು ಕೊಡಿ: ತುಮಕೂರು ಜಿಲ್ಲೆಯ ಪಾಲಿನ 24 ಟಿ.ಎಂ.ಸಿ, ಕುಣಿಗಲ್ ಪಾಲಿನ 4 ಟಿ.ಎಂ.ಸಿ ನೀರು ನಿಗದಿತ ಅವಧಿಯೊಳಗೆ ಹರಿಸಬೇಕು. ಹೇಮಾವತಿ ನದಿ ಉಕ್ಕಿ ಹರಿಯುತ್ತಿದ್ದು, ನೀರು ಸಮುದ್ರ ಸೇರುವ ಮುನ್ನ ಜಿಲ್ಲೆಗೆ 24 ಟಿಎಂಸಿ ಹರಿಸಲು ಸರ್ಕಾರ ಹಾಗೂ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಎರಡು ದಿನದಲ್ಲಿ ಕಾಮಗಾರಿ ಪೂರ್ಣ: ಮಾಜಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌, ಮಾರ್ಕೋನಹಳ್ಳಿ ಎಡ ಮತ್ತು ಬಲದಂಡೆ ನಾಲಾ ಅಗಲೀಕರಣಕ್ಕೆ ಸುಮಾರು 60 ಕೋಟಿ ರೂ. ಅನುದಾನ ನೀಡಿದ್ದರು. ಅನುದಾನ ಬಳಸಿ ನಾಲೆ ಆಧುನೀಕರಣಗೊಳಿಸಲಾಗಿದೆ. ಇನ್ನು ಶೇ.2 ರಷ್ಟು ಕಾಮಗಾರಿ ಬಾಕಿ ಇದ್ದು, ಎರಡು ದಿನದಲ್ಲಿ ಪೂರ್ಣಗೊಳಿಸಿ ಜಮೀನುಗಳಿಗೆ ನೀರು ಹರಿಸಲಾಗುವುದು ಎಂದು ಭರವಸೆ ನೀಡಿದರು.

ಸಿಎಂ ವಿಶ್ವಾಸ ದ್ರೋಹ ಮಾಡಲ್ಲ: 25 ವರ್ಷದಿಂದ ಕುಣಿಗಲ್ ತಾಲೂಕಿಗೆ ಹರಿಯಬೇಕಾದ ಹೇಮೆ ನೀರು ಹರಿಯಲಿಲ್ಲ, ಇದರಿಂದ ತಾಲೂಕಿನ ನಾಗರಿಕರು ಮತ್ತು ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಇದನ್ನು ಅರಿತು ಸಂಸದ ಡಿ.ಕೆ.ಸುರೇಶ್‌ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, 614 ಕೋಟಿ ರೂ. ವೆಚ್ಚದಲ್ಲಿ ಲಿಂಕ್‌ ಕೆನಾಲ್ಗೆ ಅನುಮೋದನೆ ನೀಡಿದ್ದರಯರು. ಈ ಸಂಬಂಧ ಈಗಾಗಲೇ ಇ-ಟೆಂಡರ್‌ ಕರೆಯಲಾಗಿದೆ. ಆದರೆ ಇದನ್ನು ವಿರೋಧಿಸಿ ತುಮಕೂರು ಬಿಜೆಪಿಯ ಕೆಲ ಮುಖಂಡರು ಸಿಎಂ ಯಡಿಯೂರಪ್ಪಗೆ ದೂರು ಸಲ್ಲಿಸಿದ್ದಾರೆ. ಈ ಸಂಬಂಧ ಯಡಿಯೂರಪ್ಪ ಅವರನ್ನು ಭೇಟಿಯಾದಾಗ ‘ನೀರಿನ ವಿಚಾರದಲ್ಲಿ ರಾಜಕಾರಣ ಮಾಡುವುದಿಲ್ಲ’ ಎಂದು ಭರವಸೆ ನೀಡಿದ್ದಾರೆ. ಹಾಗಾಗಿ ಸಿಎಂ ವಿಶ್ವಾಸ ದ್ರೋಹ ಮಾಡುವುದಿಲ್ಲ ಎಂದು ನಂಬಿರುವುದಾಗಿ ಶಾಸಕರು ತಿಳಿಸಿದರು.

ತಹಶಿಲ್ದಾರ್‌ ವಿ.ಆರ್‌. ವಿಶ್ವನಾಥ್‌, ಇಇ ಮಂಜೇಶ್‌ಗೌಡ, ಎಇಇ ಗಂಗಾಧರ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.