ಯಾವುದೇ ಕಾರಣಕ್ಕೂ ಜಮೀನು ನೀಡೆವು

ಸಭೆಯಲ್ಲಿ ಜಿಲ್ಲಾಧಿಕಾರಿ ರಾಕೇಶ್‌ ಕುಮಾರ್‌ ವಿರುದ್ಧ ವಸಂತನರಸಾಪುರ ರೈತರ ದೃಢ ನಿರ್ಧಾರ

Team Udayavani, Aug 27, 2019, 5:27 PM IST

tk-tdy-1

ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‌ಕುಮಾರ್‌ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಹಲವಾರು ವಸಂತನರಸಾಪುರ ಭಾಗದ ರೈತರು ಭಾಗವಹಿಸಿದ್ದರು.

ತುಮಕೂರು: ಯಾವುದೇ ಕಾರಣಕ್ಕೂ ನಮ್ಮ ಜಮೀನುಗಳನ್ನು ನಾವು ಬಿಟ್ಟು ಕೊಡುವುದಿಲ್ಲ. ನೀವು ನೋಟಿಸ್‌ ನೀಡಿದ್ದೀರಾ, ನಾವು ಸಭೆಗೆ ಬಂದಿದ್ದೇವೆ, ನೀವು ಎಷ್ಟೇ ಪರಿಹಾರ ಕೊಡುತ್ತೇವೆಂದರೂ ನಾವು ಜಮೀನು ನೀಡಲು ಸಿದ್ಧರಿಲ್ಲ. ಜಪಾನೀಸ್‌ ಟೌನ್‌ಶಿಪ್‌ ನಿರ್ಮಾಣ ಮಾಡಲು ನಮ್ಮ ಬದುಕನ್ನು ಏಕೆ ಬಲಿ ಕೊಡುತ್ತೀರಾ ಎಂದು ರೈತರು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್‌ ಅವರನ್ನೇ ಪ್ರಶ್ನಿಸಿದ ಘಟನೆ ನಡೆದಿದೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‌ಕುಮಾರ್‌ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ, ವಸಂತನರಸಾಪುರ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರು ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ, ಬೆಸ್ಕಾಂ ಸೇರಿದಂತೆ ಇತರೆ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ರೈತರ ಜಮೀನುಗಳಿಗೆ ಪರಿಹಾರ ನೀಡುವ ಕುರಿತು ಪ್ರಸ್ತಾಪ ಮಾಡಿದರು.

ರೈತರು ಮಾತನಾಡಿ, ಈಗಾಗಲೇ ನಮ್ಮ ಜಮೀನುಗಳಲ್ಲಿ ವಿದ್ಯುತ್‌ ಲೈನ್‌ಗಳು ಹಾದು ಹೋಗಿವೆ. ಅದರ ತೊಂದರೆಯನ್ನೆ ನಮ್ಮ ಕೈಯಲ್ಲಿ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ, ಮತ್ತೆ 400 ಕೆ.ವಿ ವಿದ್ಯುತ್‌ ತಂತಿಗಳನ್ನು ನಮ್ಮ ಜಮೀನುಗಳಲ್ಲಿ ಸಾಗಿಸಿದರೆ ಹೇಗೆ, ನಾವು ಯಾವುದೇ ಕಾರಣಕ್ಕೂ ನಮ್ಮ ಜಮೀನುಗಳನ್ನು ಬಿಟ್ಟುಕೊಡುವುದಿಲ್ಲ ಎಂದು ಪಟ್ಟು ಹಿಡಿದರು.

ಇದಕ್ಕೆ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‌ಕುಮಾರ್‌ ಪ್ರತಿಕ್ರಿಯಿಸಿ ಇದು ಸಭೆ. ಎಲ್ಲರಿಗೂ ಮಾತನಾಡುವ ಹಕ್ಕಿದೆ. ನಿಮ್ಮ ಅಭಿಪ್ರಾಯವನ್ನು ನೀವು ತಿಳಿಸಿ, ನಮ್ಮ ಅಭಿಪ್ರಾಯವನ್ನೂ ಕೇಳಿ. ಆ ನಂತರ ಸಭೆಯ ನಡಾವಳಿಯನ್ನು ಸರ್ಕಾರಕ್ಕೆ ಕಳುಹಿಸುತ್ತೇವೆ ಎಂದರು. ಈ ಹಿಂದೆ ಜಿಲ್ಲಾಧಿಕಾರಿಗಳು ಮಾಡಿರುವ ಆದೇಶದಂತೆ ಎಕರೆಗೆ 50 ಲಕ್ಷ ರೂ. ನೀಡುತ್ತೇವೆ, ಜಪಾನೀಸ್‌ ಟೌನ್‌ಶಿಪ್‌ ಮಾಡುತ್ತಿರುವ ಹಿನ್ನೆಲೆಯಲ್ಲಿ ವಿದ್ಯುತ್‌ ತಂತಿಗಳು ಅಲ್ಲಿ ಹಾದು ಹೋಗಿವೆ. ಅದನ್ನು ಬದಲಾಯಿಸಬೇಕಾಗಿದೆ. ಇದಕ್ಕೆ ಒಪ್ಪಿಗೆ ಸೂಚಿಸಿ ಮುಂದೆ ಬರುವ ರೈತರಿಗೆ ಪರಿಹಾರ ನೀಡಲಾಗುವುದು. ಭೂಮಿ ಸ್ವಾಧೀನ ಪಡಿಸಿಕೊಳ್ಳುವ ಮುನ್ನ ರೈತರ ಒಪ್ಪಿಗೆ ಅವಶ್ಯ ಎಂದು ಹೇಳಿದರು.

ಬಳಿಕ ಎಲ್ಲಾ ರೈತರು ಒಗ್ಗಟ್ಟಿನಿಂದಲೇ ಮಾತನಾಡಿ, ಜಪಾನೀಸ್‌ ಕಂಪನಿಯ ಉದ್ದಾರಕ್ಕೆ ನಮ್ಮ ಜಮೀನುಗಳನ್ನು ಏಕೆ ಕೊಡಬೇಕು. ನೀವೆಷ್ಟೆ ಪರಿಹಾರ ನೀಡಿದರೂ ನಾವು ಜಮೀನು ನೀಡುವುದಿಲ್ಲ, ಇದಕ್ಕೆ ನಾವು ಬದ್ಧರಾಗಿದ್ದೇವೆ, ಈಗ ಹಾದುಹೋಗಿರುವ ಜಾಗದಲ್ಲೇ ವಿದ್ಯುತ್‌ ಲೈನ್‌ ಹೋಗಲಿ. ಆದರೆ ಮತ್ತೆ ಬೇರೆ ಕಡೆ ವಿದ್ಯುತ್‌ ಲೈನ್‌ ಸ್ಥಳಾಂತರ ಮಾಡಲು ನಮ್ಮ ವಿರೋಧವಿದೆ ಎಂದು ಸುತ್ತ-ಮುತ್ತಲಿನ ಗ್ರಾಮಗಳ ರೈತರು ತಮ್ಮ ಅಭಿಪ್ರಾಯವನ್ನು ತಿಳಿಸಿದರು.

ಟಾಪ್ ನ್ಯೂಸ್

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.