ಯಾವುದೇ ಕಾರಣಕ್ಕೂ ಜಮೀನು ನೀಡೆವು

ಸಭೆಯಲ್ಲಿ ಜಿಲ್ಲಾಧಿಕಾರಿ ರಾಕೇಶ್‌ ಕುಮಾರ್‌ ವಿರುದ್ಧ ವಸಂತನರಸಾಪುರ ರೈತರ ದೃಢ ನಿರ್ಧಾರ

Team Udayavani, Aug 27, 2019, 5:27 PM IST

tk-tdy-1

ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‌ಕುಮಾರ್‌ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಹಲವಾರು ವಸಂತನರಸಾಪುರ ಭಾಗದ ರೈತರು ಭಾಗವಹಿಸಿದ್ದರು.

ತುಮಕೂರು: ಯಾವುದೇ ಕಾರಣಕ್ಕೂ ನಮ್ಮ ಜಮೀನುಗಳನ್ನು ನಾವು ಬಿಟ್ಟು ಕೊಡುವುದಿಲ್ಲ. ನೀವು ನೋಟಿಸ್‌ ನೀಡಿದ್ದೀರಾ, ನಾವು ಸಭೆಗೆ ಬಂದಿದ್ದೇವೆ, ನೀವು ಎಷ್ಟೇ ಪರಿಹಾರ ಕೊಡುತ್ತೇವೆಂದರೂ ನಾವು ಜಮೀನು ನೀಡಲು ಸಿದ್ಧರಿಲ್ಲ. ಜಪಾನೀಸ್‌ ಟೌನ್‌ಶಿಪ್‌ ನಿರ್ಮಾಣ ಮಾಡಲು ನಮ್ಮ ಬದುಕನ್ನು ಏಕೆ ಬಲಿ ಕೊಡುತ್ತೀರಾ ಎಂದು ರೈತರು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್‌ ಅವರನ್ನೇ ಪ್ರಶ್ನಿಸಿದ ಘಟನೆ ನಡೆದಿದೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‌ಕುಮಾರ್‌ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ, ವಸಂತನರಸಾಪುರ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರು ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ, ಬೆಸ್ಕಾಂ ಸೇರಿದಂತೆ ಇತರೆ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ರೈತರ ಜಮೀನುಗಳಿಗೆ ಪರಿಹಾರ ನೀಡುವ ಕುರಿತು ಪ್ರಸ್ತಾಪ ಮಾಡಿದರು.

ರೈತರು ಮಾತನಾಡಿ, ಈಗಾಗಲೇ ನಮ್ಮ ಜಮೀನುಗಳಲ್ಲಿ ವಿದ್ಯುತ್‌ ಲೈನ್‌ಗಳು ಹಾದು ಹೋಗಿವೆ. ಅದರ ತೊಂದರೆಯನ್ನೆ ನಮ್ಮ ಕೈಯಲ್ಲಿ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ, ಮತ್ತೆ 400 ಕೆ.ವಿ ವಿದ್ಯುತ್‌ ತಂತಿಗಳನ್ನು ನಮ್ಮ ಜಮೀನುಗಳಲ್ಲಿ ಸಾಗಿಸಿದರೆ ಹೇಗೆ, ನಾವು ಯಾವುದೇ ಕಾರಣಕ್ಕೂ ನಮ್ಮ ಜಮೀನುಗಳನ್ನು ಬಿಟ್ಟುಕೊಡುವುದಿಲ್ಲ ಎಂದು ಪಟ್ಟು ಹಿಡಿದರು.

ಇದಕ್ಕೆ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‌ಕುಮಾರ್‌ ಪ್ರತಿಕ್ರಿಯಿಸಿ ಇದು ಸಭೆ. ಎಲ್ಲರಿಗೂ ಮಾತನಾಡುವ ಹಕ್ಕಿದೆ. ನಿಮ್ಮ ಅಭಿಪ್ರಾಯವನ್ನು ನೀವು ತಿಳಿಸಿ, ನಮ್ಮ ಅಭಿಪ್ರಾಯವನ್ನೂ ಕೇಳಿ. ಆ ನಂತರ ಸಭೆಯ ನಡಾವಳಿಯನ್ನು ಸರ್ಕಾರಕ್ಕೆ ಕಳುಹಿಸುತ್ತೇವೆ ಎಂದರು. ಈ ಹಿಂದೆ ಜಿಲ್ಲಾಧಿಕಾರಿಗಳು ಮಾಡಿರುವ ಆದೇಶದಂತೆ ಎಕರೆಗೆ 50 ಲಕ್ಷ ರೂ. ನೀಡುತ್ತೇವೆ, ಜಪಾನೀಸ್‌ ಟೌನ್‌ಶಿಪ್‌ ಮಾಡುತ್ತಿರುವ ಹಿನ್ನೆಲೆಯಲ್ಲಿ ವಿದ್ಯುತ್‌ ತಂತಿಗಳು ಅಲ್ಲಿ ಹಾದು ಹೋಗಿವೆ. ಅದನ್ನು ಬದಲಾಯಿಸಬೇಕಾಗಿದೆ. ಇದಕ್ಕೆ ಒಪ್ಪಿಗೆ ಸೂಚಿಸಿ ಮುಂದೆ ಬರುವ ರೈತರಿಗೆ ಪರಿಹಾರ ನೀಡಲಾಗುವುದು. ಭೂಮಿ ಸ್ವಾಧೀನ ಪಡಿಸಿಕೊಳ್ಳುವ ಮುನ್ನ ರೈತರ ಒಪ್ಪಿಗೆ ಅವಶ್ಯ ಎಂದು ಹೇಳಿದರು.

ಬಳಿಕ ಎಲ್ಲಾ ರೈತರು ಒಗ್ಗಟ್ಟಿನಿಂದಲೇ ಮಾತನಾಡಿ, ಜಪಾನೀಸ್‌ ಕಂಪನಿಯ ಉದ್ದಾರಕ್ಕೆ ನಮ್ಮ ಜಮೀನುಗಳನ್ನು ಏಕೆ ಕೊಡಬೇಕು. ನೀವೆಷ್ಟೆ ಪರಿಹಾರ ನೀಡಿದರೂ ನಾವು ಜಮೀನು ನೀಡುವುದಿಲ್ಲ, ಇದಕ್ಕೆ ನಾವು ಬದ್ಧರಾಗಿದ್ದೇವೆ, ಈಗ ಹಾದುಹೋಗಿರುವ ಜಾಗದಲ್ಲೇ ವಿದ್ಯುತ್‌ ಲೈನ್‌ ಹೋಗಲಿ. ಆದರೆ ಮತ್ತೆ ಬೇರೆ ಕಡೆ ವಿದ್ಯುತ್‌ ಲೈನ್‌ ಸ್ಥಳಾಂತರ ಮಾಡಲು ನಮ್ಮ ವಿರೋಧವಿದೆ ಎಂದು ಸುತ್ತ-ಮುತ್ತಲಿನ ಗ್ರಾಮಗಳ ರೈತರು ತಮ್ಮ ಅಭಿಪ್ರಾಯವನ್ನು ತಿಳಿಸಿದರು.

ಟಾಪ್ ನ್ಯೂಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur; ನನ್ನನ್ನು ಬರಿಗೈಯಲ್ಲಿ ಕಳುಹಿಸಬೇಡಿ: ಸೋಮಣ್ಣ

Tumkur; ನನ್ನನ್ನು ಬರಿಗೈಯಲ್ಲಿ ಕಳುಹಿಸಬೇಡಿ: ಸೋಮಣ್ಣ

12-pavagada

Pavagada: ರಸ್ತೆ ಅಪಘಾತ; ವ್ಯಕ್ತಿ ಸ್ಥಳದಲ್ಲೇ ಸಾವು

ಮನೆಗೆ ಬರುತ್ತೇನೆಂದ ಸೋಮಣ್ಣಗೆ “ಬರಬೇಡಿ’ ಎಂದ ಮಾಧುಸ್ವಾಮಿ!

ಮನೆಗೆ ಬರುತ್ತೇನೆಂದ ಸೋಮಣ್ಣಗೆ “ಬರಬೇಡಿ’ ಎಂದ ಮಾಧುಸ್ವಾಮಿ!

1-qweqewq

Koratagere;ಕಾರು ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು: ಇಬ್ಬರು ಗಂಭೀರ

9-pavagada

Pavagada: ಪತ್ನಿಯನ್ನು ಹತ್ಯೆ ಮಾಡಿ ಪತಿ ಪರಾರಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.