ನೀರಾವರಿ ಯೋಜನೆಗೆ ಗೌರಿಶಂಕರ್‌ ಅಡ್ಡಗಾಲು

ಏತ ನೀರಾವರಿ ಯೋಜನೆ ಅವೈಜ್ಞಾನಿಕ ಎಂಬ ಹೇಳಿಕೆ ಕುಣಿಯಲಾರದವನಿಗೆ ನೆಲ ಡೊಂಕು ಎಂಬಂತಾಗಿದೆ: ಸುರೇಶ್‌ಗೌಡ ವಾಗ್ದಾಳಿ

Team Udayavani, Oct 24, 2021, 4:26 PM IST

ಏತ ನೀರಾವರಿ ಯೋಜನೆ ಅವೈಜ್ಞಾನಿಕ ಎಂಬ ಹೇಳಿಕೆ ಕುಣಿಯಲಾರದವನಿಗೆ ನೆಲ ಡೊಂಕು ಎಂಬಂತಾಗಿದೆ: ಸುರೇಶ್‌ಗೌಡ ವಾಗ್ದಾಳಿ

ತುಮಕೂರು: ಗ್ರಾಮಾಂತರ ಕ್ಷೇತ್ರದ ಹೆಬ್ಬೂರು- ಗೂಳೂರು ಹೋಬಳಿಗಳ ಏತ ನೀರಾವರಿ ಯೋಜನೆ ಅವೈಜ್ಞಾನಿಕ ಎಂದು ಹೇಳಿಕೆ ನೀಡಿರುವ ಶಾಸಕ ಡಿ.ಸಿ. ಗೌರಿಶಂಕರ್‌ ವಿರುದ್ಧ ಹರಿಹಾಯ್ದಿರುವ ಮಾಜಿ ಶಾಸಕ ಬಿ.ಸುರೇಶ್‌ಗೌಡ, “ಕೆರೆಗೆ ಬರಬೇಕಾಗಿರುವ ನೀರು ಹರಿಸಿಕೊಳ್ಳಲು ತಾಕತ್ತು ಇಲ್ಲದೆ ಕ್ಷೇತ್ರಕ್ಕೆ ಕಷ್ಟ ಬಿದ್ದು ದಶಕ ಗಳ ಕಾಲ ಹೋರಾಟ ನಡೆಸಿ ಅನುಷ್ಠಾನ ಗೊಳಿಸಿದ ನೀರಾವರಿ ಯೋಜನೆಗೆ ಅಡ್ಡಗಾಲು ಹಾಕಲು ಹೊರಟಿ ದ್ದಾರೆ’ ಎಂದು ವಾಗ್ಧಾಳಿ ನಡೆಸಿದರು.

ನಗರದಲ್ಲಿ ಶನಿವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಏತ ನೀರಾವರಿ ಯೋಜನೆ ಅವೈಜ್ಞಾನಿಕ ಎಂದು ಹೇಳಿರುವುದನ್ನು ಗಮನಿಸಿದರೆ ಕುಣಿಯಲಾರದವನಿಗೆ ನೆಲ ಡೊಂಕು ಎಂಬಂತಾಗಿದೆ. ಶಾಸಕ ಗೌರಿಶಂಕರ್‌ಗೆ ಇರುವ ನೀರನ್ನು ಹರಿಸಿಕೊಳ್ಳಲು ಶಕ್ತಿ ಇಲ್ಲ. ನರ ಸತ್ತು ಹೋಗಿದೆ ಎಂದು ಹರಿಹಾಯ್ದರು. ಹೆಬ್ಬೂರು-ಗೂಳೂರು ಏತ ನೀರಾವರಿ ಯೋಜನೆ ಕುಡಿಯುವ ನೀರಿಗಾಗಿ ಅನುಷ್ಠಾನಗೊಂಡಿದೆ. ಕೂಡಲೇ ಅಗತ್ಯ ಇರುವಷ್ಟು ನೀರನ್ನು ಹರಿಸಬೇಕು.

ಎಲ್ಲೋ ಇದ್ದ ವ್ಯಕ್ತಿಗೆ ಹೇಮಾವತಿ ನದಿ ನೀರಿಗಾಗಿ ಇಲ್ಲಿನ ಜನರು ಮಾಡಿರುವ ಹೋರಾಟ, ಪೊಲೀಸ ರಿಂದ ತಿಂದಿರುವ ಏಟುಗಳು ಹೇಗೆ ಗೊತ್ತಾಗಬೇಕು. ಸುಭಿಕ್ಷೆಯ ಕಾಲದಲ್ಲೂ ಗ್ರಾಮಾಂತರ ಕ್ಷೇತ್ರಕ್ಕೆ ಹಂಚಿಕೆ ಯಾಗಿರುವಷ್ಟು ಹೇಮಾವತಿ ನೀರನ್ನು ಬಿಡುವಂತೆ ಕೇಳದಷ್ಟು ತಾಕತ್ತು ಇಲ್ಲದ ಶಾಸಕರಾಗಿದ್ದಾರೆ. ನಾನು ಅಧಿಕಾರದಲ್ಲಿದ್ದರೆ ರಕ್ತ ಕೊಟ್ಟಾದರೂ ನೀರು ಹರಿಸುತ್ತಿದ್ದೆ ಎಂದರು.

ನೀರು ಹರಿದಿದೆ: ಗೊರೂರು ಜಲಾಶಯದಿಂದ ಜಿಲ್ಲೆಗೆ 2011-12 ರಲ್ಲಿ 19.594 ಟಿಎಂಸಿ, 2012-13 ರಲ್ಲಿ 12.975 ಟಿಎಂಸಿ, 2013-14 ರಲ್ಲಿ 21.127 ಟಿಎಂಸಿ, 2014-15 ರಲ್ಲಿ 20.401 ಟಿಎಂಸಿ, 2015- 16 ರಲ್ಲಿ 10.896 ಟಿಎಂಸಿ, 2016-17 ರಲ್ಲಿ 3.8534 ಟಿಎಂಸಿ, 2017-18 ರಲ್ಲಿ 8.856 ಟಿಎಂಸಿ, 2018- 19 ರಲ್ಲಿ 23.137 ಟಿಎಂಸಿ, 2019-20 ರಲ್ಲಿ 21.358 ಟಿಎಂಸಿ, 2020-21 ರಲ್ಲಿ 23.495 ಟಿಎಂಸಿ ಹಾಗೂ 2021-22 ರಲ್ಲಿ 12.086 ಟಿಎಂಸಿ ನೀರು ಹರಿದಿದೆ. 2016-17 ರಲ್ಲಿ ಬರಗಾಲ ಇದ್ದ ಕಾರಣ ಕೇವಲ 3 ಟಿಎಂಸಿ ನೀರು ಮಾತ್ರ ಜಿಲ್ಲೆಗೆ ಹರಿದಿದೆ. ಇಂತಹ ಪರಿಸ್ಥಿತಿಯಲ್ಲಿ ಕ್ಷೇತ್ರಕ್ಕೆ ನೀರು ಹರಿಸದಿರುವುದು ಶಾಸಕರ ಹೊಣಗೇಡಿತನ ತೋರಿಸುತ್ತದೆ ಎಂದರು.

ತಿಳಿದು ಮಾತನಾಡಲಿ: ಗ್ರಾಮಾಂತರ ಕ್ಷೇತ್ರಕ್ಕೆ ನಾನು ಶಾಸಕನಾಗಿದ್ದಾಗ ನೀರೇ ಹರಿಸಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ನಾನು 10 ವರ್ಷ ಶಾಸಕನಾಗಿದ್ದಾಗ 8 ವರ್ಷ ನಿರಂತರವಾಗಿ ನೀರು ಹರಿಸಿದ್ದೇನೆ. 2016- 17, 2017-18 ರಲ್ಲಿ ಬರಗಾಲ ಎದುರಾಗಿದ್ದರಿಂದ ಹೇಮಾವತಿ ಜಲಾಶಯದಲ್ಲಿ ನೀರು ಎಷ್ಟಿತ್ತು ಎಂಬುದನ್ನು ಮೊದಲು ತಿಳಿದುಕೊಂಡು ಮಾಹಿತಿ ನೀಡಬೇಕಿತ್ತು. ಆ ಬಗ್ಗೆ ತಿಳಿದುಕೊಳ್ಳುವ ವ್ಯವದಾನವೂ ಇಲ್ಲದಿದ್ದರೇ ಹೇಗೆ ಎಂದು ಅವರು ಪ್ರಶ್ನಿಸಿದರು.
ಇದನ್ನೂ ಓದಿ:- ಹಗ್ಗ-ಸೀಮೆ ಎಣ್ಣೆ ಹಿಡಿದು ಗ್ರಾಮಸ್ಥರ ಪ್ರತಿಭಟನೆ

 ಕೆರೆಗಳನ್ನು ನೋಡಿದರೆ ನೋವಾಗುತ್ತಿದೆ: ಶಾಸಕ ಗೌರಿಶಂಕರ್‌ಗೆ ಹೆಬ್ಬೂರು- ಗೂಳೂರು ಏತ ನೀರಾ ವರಿ ಮೂಲ ಯೋಜನೆ ಬಗ್ಗೆಯೇ ಅರಿವಿಲ್ಲ. ಆದರೆ ನಾವು ಈ ಯೋಜನೆ ಅನುಷ್ಠಾನವಾಗುವವರೆಗೂ ನಿದ್ದೆ ಮಾಡಿಲ್ಲ. ಪ್ರತಿ ಹಂತದ ಮಾಹಿತಿಯೂ ತಮಗೆ ಗೊತ್ತಿದೆ. ಪಕ್ಕದ ಎಲ್ಲ ಕ್ಷೇತ್ರಗಳಲ್ಲೂ ಎಲ್ಲ ಕೆರೆಗಳು ಹೇಮಾವತಿ ನೀರಿನಿಂದ ತುಂಬಿ ಕಂಗೊಳಿಸುತ್ತಿವೆ. ನಮ್ಮ ಕ್ಷೇತ್ರದ ಕೆರೆಗಳು ಖಾಲಿ ಇರುವುದನ್ನು ನೋಡಿದರೆ ನೋವಾಗುತ್ತದೆ ಎಂದರು.

ದುರುದ್ದೇಶ: ಹೇಮಾವತಿ ನದಿ ನೀರು ಕ್ಷೇತ್ರಕ್ಕೆ ಹರಿ ಯುವುದು ಅವರಿಗೆ ಬೇಕಾಗಿಲ್ಲ. ಹೀಗಾಗಿಯೇ ಯೋಜನೆಯೇ ಅವೈಜ್ಞಾನಿಕ ಎಂದು ಹೇಳುವ ಮೂಲಕ ಕ್ಷೇತ್ರದ ಜನರ ದಿಕ್ಕು ತಪ್ಪಿಸಿ ಮಕ್ಮಾಲ್‌ ಟೋಪಿ ಹಾಕುತ್ತಿದ್ದಾರೆ. ಯೋಜನೆಯನ್ನು ಹಾಳು ಮಾಡುವ ದುರುದ್ದೇಶದಿಂದಲೇ ಈ ರೀತಿ ಹೇಳಿಕೆ ನೀಡುತ್ತಿದ್ದಾರೆಂದರು. ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಉಮೇಶ್‌ ಗೌಡ, ಮುಖಂಡ ರಾದ ನರಸಿಂಹಮೂರ್ತಿ, ಗೂಳೂ ರು ಶಿವ ಕುಮಾರ್‌, ವಿಜಯಕುಮಾರ್‌, ಸಿದ್ದೇಗೌಡ, ಪ್ರಭಾಕರ್‌, ಅರಕೆರೆ ರವೀಶ್‌ ಮತ್ತಿತರರಿದ್ದರು.

“ಗ್ರಾಮಾಂತರ ಕ್ಷೇತ್ರಕ್ಕೆ ಸಮರ್ಪಕವಾಗಿ ಬರಬೇಕಾಗಿರುವ ಹೇಮಾವತಿ ನೀರು ಬಿಡಿಸಲು ತಾಕತ್ಇಲ್ಲದಿದ್ದರೆ ರಾಜೀನಾಮೆ ನೀಡಲಿ. ನೀರು ಬಿಡಿಸುವ ಯೋಗ್ಯತೆ ಇಲ್ಲದವರಿಗೆ ಶಾಸಕ ಸ್ಥಾನ ಏಕೆ ಬೇಕು. ಶಾಸಕರು ಮೊದಲು ಕ್ಷೇತ್ರಕ್ಕೆ ನೀರು ಹರಿಸಿಕೊಳ್ಳುವತ್ತ ಚಿತ್ತ ಹರಿಸಲಿ. ಕ್ಷೇತ್ರಕ್ಕೆ ನೀರು ಹರಿಸಬೇಕು ಎಂಬುದನ್ನು ನಮ್ಮ ಉದ್ದೇಶವಷ್ಟೆ.” –  ಬಿ.ಸುರೇಶ್ಗೌಡ, ಮಾಜಿ ಶಾಸಕ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.