ಡಿ.ಸಿ.ಗೌರಿಶಂಕರ್‌ ವಿರುದ್ಧ ಸ್ತ್ರೀಯರ ಆಕ್ರೋಶ

ಬಿಜೆಪಿ ಮಹಿಳಾ ಕಾರ್ಯಕರ್ತೆಯರ ಬಗ್ಗೆ ಜೆಡಿಎಸ್‌ ಕಾರ್ಯಕರ್ತರಿಂದ ಫೇಸ್‌ಬುಕ್‌ನಲ್ಲಿ ಅವಹೇಳನ

Team Udayavani, May 18, 2019, 4:54 PM IST

trumkur-tdy-2..0

ತುಮಕೂರು ತಾಲೂಕಿನ ಗೂಳೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತ ರೆಯರು ಶುಕ್ರವಾರ ಶಾಸಕರ ಡಿ.ಸಿ.ಗೌರಿಶಂಕರ್‌ ಹಾಗೂ ಅವರ ಸಾಮಾಜಿಕ ಜಾಲತಾಣದ ಸಿಬ್ಬಂದಿ ವಿರುದ್ಧ ಪ್ರತಿಭಟನೆ ನಡೆಸಿದರು.

ತುಮಕೂರು: ಗ್ರಾಮಾಂತರ ಶಾಸಕರ ಬೆಂಬಲಿಗ ಹಾಗೂ ಜೆಡಿಎಸ್‌ ಕಾರ್ಯಕರ್ತ ಬಿಜೆಪಿ ಮಹಿಳೆಯರ ಬಗ್ಗೆ ಅವಹೇಳನಕಾರಿ ಯಾಗಿ ಫೇಸ್‌ಬುಕ್‌ನಲ್ಲಿ ಕಮೆಂಟ್ ಮಾಡಿ ರುವುದನ್ನು ವಿರೋಧಿಸಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರೆಯರು ಶುಕ್ರವಾರ ಶಾಸಕರ ವಿರುದ್ಧ ಹಾಗೂ ಡಿ.ಸಿ.ಗೌರಿಶಂಕರ್‌ ಅವರ ಸಾಮಾಜಿಕ ಜಾಲತಾಣದ ಸಿಬ್ಬಂದಿ ವಿರುದ್ಧ ಪ್ರತಿಭಟನೆ ನಡೆಸಿದರು.

ತಾಲೂಕಿನ ಗೂಳೂರು ಹೋಬಳಿ ಡಿ. ಕೊರಟಗೆರೆ ಗ್ರಾಮದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ರಸ್ತೆ ತಡೆ ಚಳವಳಿ ಮಾಡಿ, ಪೊರಕೆ ಹಿಡಿದು ಪ್ರತಿಭಟನೆಯ ನಡೆಸಿ ಗ್ರಾಮಾಂತರ ಶಾಸಕ ಹಾಗೂ ಅವರ ಬೆಂಬಲಿಗನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಮಹಿಳಾ ಆಯೋಗಕ್ಕೆ ದೂರು: ಪ್ರತಿಭಟನೆ ನೇತೃತ್ವ ವಹಿಸಿದ್ದ ಜಿಪಂ ಸದಸ್ಯೆ ಅನಿತಾ ಸಿದ್ದೇಗೌಡ ಮಾತನಾಡಿ, ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರೆಯನ್ನು ಗೋವಾಗೆ ಹನಿಮೂನಿಗೆ ಕರೆದುಕೊಂಡು ಹೋಗುವು ದಾಗಿ ಫೇಸ್‌ಬುಕ್‌ನಲ್ಲಿ ಕಮೆಂಟ್ ಮಾಡಿರು ವುದನ್ನು ಖಂಡಿಸಿದರು. ಶಾಸಕ ಡಿ.ಸಿ. ಗೌರಶಂಕರ್‌ ಮತ್ತು ಗೌರಿಶಂಕರ್‌ ಸೋಶಿ ಯಲ್ ಮೀಡಿ ಯಾದ ಮುಖ್ಯಸ್ಥನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡ ಲಾಗುವುದು ಎಂದು ಹೇಳಿದರು.

ಮೋಜಿಗಾಗಿ ಹಾಲಿ ಶಾಸಕರು ವಿದೇಶಿ ಪ್ರವಾಸ: ತುಮಕೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಬರಗಾಲ ಇರುವ ಹಿನ್ನೆಲೆಯಲ್ಲಿ ಹಾಲಿ ಶಾಸಕರು ಮೋಜು ಮಸ್ತಿಗಾಗಿ ವಿದೇಶಿ ಪ್ರವಾಸಕ್ಕಾಗಿ ಸಿಂಗಾಪುರಕ್ಕೆ ಹೋಗಿರುವ ಬಗ್ಗೆ ಸುರೇಶಗೌಡರ ಪ್ಯಾನ್‌ ಪೇಜಿನಲ್ಲಿ ನಮ್ಮ ಕಾರ್ಯಕರ್ತರು ಪೋಸ್ಟ್‌ ಮಾಡಿರುವುದು ತಪ್ಪೇನು? ಹಾಲಿ ಶಾಸಕರಿಗೆ ಬರಗಾಲ ಕಾಣದೆ ಮೋಜು ಮಸ್ತಿಗಾಗಿ ಸಿಂಗಾಪುರಕ್ಕೆ ಹೋಗಿರು ವುದು ಎಷ್ಟು? ಸರಿ ಇದನ್ನು ಕೇಳಿದ ನಮ್ಮ ಪಕ್ಷದ ಕಾರ್ಯಕರ್ತರಿಗೆ ಈಗೆಲ್ಲ ಅವಹೇಳನಾ ಕಾರಿಯಾಗಿ ಮಾತನಾಡಿರುವುದು ಖಂಡ ನೀಯ. ಡಿ.ಸಿ. ಗೌರಿಶಂಕರ ಅವರು ಜೆಡಿಎಸ್‌ ಕಾರ್ಯಕರ್ತರಿಗೆ ಮತ್ತು ಅವರ ಬೆಂಬಲಿಗರಿಗೆ ಇದೇನಾ ಕಲಿಸಿರುವುದು. ಅವರ ಮನೆಯಲ್ಲಿ ಹೆಣ್ಣು ಮಕ್ಕಳು ಇಲ್ವಾ? ಬಾಯಿಗೆ ಬಂದ ಹಾಗೆ ಮನಸ್ಸಿಗೆ ತೋಚಿದ ರೀತಿಯಲ್ಲಿ ಹಿಂದೂ ಹೆಣ್ಣು ಮಕ್ಕಳ ಬಿಜೆಪಿ ಕಾರ್ಯಕರ್ತರ ಬಗ್ಗೆ ಮಾತನಾಡುವ ರೀತಿ ನೀತಿ ಇದೆನಾ ಇದ್ಯಾವ ಸಂಸ್ಕೃತಿ ಎಂದು ಪ್ರಶ್ನಿಸಿದರು.

ಕಿಡಿಗೇಡಿಗಳ‌ನ್ನು ಗಡಿಪಾರು ಮಾಡಲು ಆಗ್ರಹ: ಗ್ರಾಮಾಂತರ ಕ್ಷೇತ್ರದ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಕಲಾವತಿ ಮಾತನಾಡಿ, ಹಿಂದೂ ಹೆಣ್ಣು ಮಕ್ಕಳ ಬಗ್ಗೆ ಅವಹೇಳನವಾಗಿ ಫೇಸ್‌ಬುಕ್‌ನಲ್ಲಿ ಕಮೆಂಟ್ ಮಾಡಿರುವ ಕಿಡಿಗೇಡಿಗಳ‌ನ್ನು ಬಂಧಿಸಿ ಗಡಿಪಾರು ಮಾಡುವಂತೆ ಆಗ್ರಹಿಸಿದರು.

ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲ: ಜಿಪಂ ಸದಸ್ಯ ವೈ,ಎಚ್.ಹುಚ್ಚಯ್ಯ ಮಾತನಾಡಿ, ಹಿಂದೂ ಹೆಣ್ಣು ಮಕ್ಕಳಿಗೆ ಅಪಮಾನ ಮಾಡಿರುವುದು ಅಲ್ಲದೆ, ಅವಮಾನ ಮಾಡಿದ್ದಾರೆ. ಶಾಸಕ ಡಿ.ಸಿ. ಗೌರಿಶಂಕರ ಮತ್ತು ಅವರ ಬೆಂಬಲಿಗರಿಂದ ಗ್ರಾಮಾಂತರ ಕ್ಷೇತ್ರದ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಾಗಿದೆ. ನಮಗೆ ಸೂಕ್ತ ರಕ್ಷಣೆ ನೀಡಬೇಕು. ನಮ್ಮ ಕ್ಷೇತ್ರದ ಹೆಣ್ಣು ಮಕ್ಕಳಿಗೆ ಏನಾದರೂ ಆದರೆ, ಶಾಸಕ ಡಿ.ಸಿ.ಗೌರಿಶಂಕರ ಮತ್ತು ಜೆಡಿಎಸ್‌ ಬೆಂಬಲಿಗರೇ ಕಾರಣರಾಗುತ್ತಾರೆ ಎಂದು ತಿಳಿಸಿದರು.

ನಾಗವಲ್ಲಿ ಗ್ರಾಪಂ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಬಿಜೆಪಿ ಮುಖಂಡ ಸಾಸಲು ಮೂರ್ತಿ ಮಾತನಾಡಿದರು. ತಾಲೂಕು ಪ್ರಧಾನ ಕಾರ್ಯದರ್ಶಿ ಸಿದ್ದೇಗೌಡ, ಜಿಪಂ ಸದಸ್ಯ ಶಿವಕುಮಾರ್‌, ತಾಪಂ ಮಾಜಿ ಅಧ್ಯಕ್ಷ ನರಸಿಂಹಮೂರ್ತಿ, ಹೊನ್ನುಡಿಕೆ ಮಾಜಿ ಅಧ್ಯಕ್ಷ ಶಿವರಾಜು, ಮಾಜಿ ಉಪಾಧ್ಯಕ್ಷ ಕಾಂತರಾಜು, ಹೊಳಕಲ್ಲು ಕಿರಣ ಅಂಜಿನಪ್ಪ, ಗಿರೀಶ ನರುಗನಹಳ್ಳಿ, ಕುಮಾರ್‌, ಗಂಗಮ್ಮ, ಶಿವಮ್ಮ, ಅಕ್ಕಮ್ಮ, ಲಕ್ಮಕ್ಕ, ದ್ರಾಕ್ಷಾಯಿಣಿ ಸೇರಿದಂತೆ ಮತ್ತಿತರರು ಹಾಜರಿದ್ದರು.

Ad

ಟಾಪ್ ನ್ಯೂಸ್

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

Australia Vs West Indies; ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

AUS Vs WI: ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

T20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾಕ್ಕೆ ಗೆಲುವು

T20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾಕ್ಕೆ ಗೆಲುವು

Supreme Court: ದ್ವೇಷ ಭಾಷಣ ನಿಯಂತ್ರಿಸಿ: ಸರಕಾರಕ್ಕೆ ಸುಪ್ರೀಂ ಸೂಚನೆ

Supreme Court: ದ್ವೇಷ ಭಾಷಣ ನಿಯಂತ್ರಿಸಿ: ಸರಕಾರಕ್ಕೆ ಸುಪ್ರೀಂ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24

Koratagere: ಕೈಕೊಟ್ಟ ಮಳೆರಾಯ; ಬಿತ್ತನೆ ಕಾರ್ಯ ಮುಗಿಸದ ರೈತ; ತಾಲೂಕಿನಲ್ಲಿ ಬರದ ಛಾಯೆ

2

ಬಿಲ್ ಪಾವತಿಸದ ಸರ್ಕಾರಿ ಆಸ್ಪತ್ರೆಯ ವಿದ್ಯುತ್ ಸಂಪರ್ಕ ಕಡಿತ: ಡಯಾಲಿಸಿಸ್ ರೋಗಿಗಳ ಪರದಾಟ

ಸುರ್ಜೇವಾಲರಿಂದ ಅಭಿಪ್ರಾಯ ಸಂಗ್ರಹಕ್ಕೆ ರಾಜಣ್ಣ ಅಸಮಾಧಾನ

Congress: ಸುರ್ಜೇವಾಲರಿಂದ ಅಭಿಪ್ರಾಯ ಸಂಗ್ರಹಕ್ಕೆ ರಾಜಣ್ಣ ಅಸಮಾಧಾನ

ಯಾರು ಕೈ ಹಿಡಿದು ಬಸ್‌ ಹತ್ತಿಸುತ್ತಾರೋ ಅವರ ಜತೆ ಹೋಗುವೆ : ಮಾಧುಸ್ವಾಮಿ

ಯಾರು ಕೈ ಹಿಡಿದು ಬಸ್‌ ಹತ್ತಿಸುತ್ತಾರೋ ಅವರ ಜತೆ ಹೋಗುವೆ : ಮಾಧುಸ್ವಾಮಿ

9-koratagere

ಸಾರ್ವಜನಿಕ ಸ್ಮಶಾನದ ಅಭಿವೃದ್ಧಿಗೆ ಮೀನಾಮೇಷ: ಎ.ಸಿ., ಡಿ.ಸಿ. ಸೂಚನೆಗೂ ಕೇರ್ ಮಾಡದ ಗ್ರಾ.ಪಂ.

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

suicide (2)

Mangaluru:ಕಾರು ಪಲ್ಟಿಯಾಗಿ ಗಂಭೀರ ಗಾಯಗೊಂಡ ಯುವಕ ಸಾ*ವು

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

1-aa-aa-RSS

ಗುರುದಕ್ಷಿಣೆ ಸಮರ್ಪಿಸಿ ಕೊನೆಯುಸಿರೆಳೆದ ಆರೆಸ್ಸೆಸ್‌ ಕಾರ್ಯಕರ್ತ ಬಾಬು ದೇವಾಡಿಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.