ಕುಣಿಗಲ್: ಮಳೆಯ ನೀರಿನಲ್ಲಿ ಕೊಚ್ಚಿಕೊಂಡು ಹೋದ ಯುವಕ
Team Udayavani, Aug 2, 2022, 5:12 PM IST
ಕುಣಿಗಲ್: ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಯುವಕನೋರ್ವ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಘಟನೆ ತಾಲೂಕಿನ ಹುತ್ರಿದುರ್ಗ ಹೋಬಳಿ ಶಿವಪುರ ಗ್ರಾಮದಲ್ಲಿ ನಡೆದಿದೆ.
ಚಿಕ್ಕನಾಯಕನಹಳ್ಳಿ ತಾಲೂಕು ಅಂದಲಗೆರೆ ಹೋಬಳಿ ಮಾದಾಪುರ ತಾಂಡ್ಯ ಗ್ರಾಮದ ನಾಗರಾಜು (28) ಮೃತ ಯುವಕ.
ಘಟನೆ ವಿವರ: ಮಾದಾಪುರ ತಾಂಡ್ಯ ಗ್ರಾಮದ ನಾಗರಾಜು, ಗೋವಿಂದರಾಜು, ರಾಮು ಎಂಬುವರು ಕುಣಿಗಲ್ ತಾಲೂಕಿನ ಹುತ್ರಿದುರ್ಗ ಹೋಬಳಿ ಶಿವಪುರ ಗ್ರಾಮಕ್ಕೆ ಚೆಕ್ ಡ್ಯಾಂಮ್ ನಿರ್ಮಾಣ ಮಾಡಲು ಬಂದಿದ್ದರು. ಅದರ ಪಕ್ಕದಲ್ಲಿಯೇ ಶೆಡ್ ನಿರ್ಮಿಸಿಕೊಂಡು ವಾಸವಾಗಿದ್ದರು ಎನ್ನಲಾಗಿದ್ದು, ಇದರ ಸಮೀಪ ಶಿವಪುರ ಹಾಗೂ ದೀಪಾಂಬುದಿ ಕೆರೆ ಸಂಪರ್ಕಿಸುವ ನಾಲೆ ಇತ್ತು. ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ನಾಲೆ ತುಂಬಿ ಹರಿಯುತ್ತಿತು, ಈ ವೇಳೆ ಮೂತ್ರ ವಿಸರ್ಜನೆಗೆಂದು ನಾಗರಾಜು ಹೊರಗಡೆ ಬಂದ ವೇಳೆಯಲ್ಲಿ ತೊರೆಯ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಈ ಸಂಬಂಧ ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತೆಯರು
2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ