5 ಕೋಟಿ ರೂ.ಕ್ರಿಯಾ ಯೋಜನೆಗೆ ಸಮ್ಮತಿ

ಕೋರಂಕೊರತೆಯಿಂದ 4 ಸಭೆ ಮುಂದೂಡಿಕೆ

Team Udayavani, Nov 21, 2020, 4:20 PM IST

tk-tdy-1

ತುಮಕೂರು: ಜಿಪಂ ಅಧ್ಯಕ್ಷರ ವಿರುದ್ಧ ಸಿಡಿದೆದ್ದಿದ್ದ ಜಿಪಂ ಸದಸ್ಯರು, ಕೋರಂ ಕೊರತೆಯಿಂದ 4 ಜಿಪಂ ಸಾಮಾನ್ಯ ಸಭೆ ಸಭೆಗಳು ಮುಂದೂಡುತ್ತಲೇ ಬಂದಿದ್ದವು. ಜಿಲ್ಲಾ ಉಸ್ತುವಾರಿ ಸಚಿವರ ಮನವಿ ಮೇರೆಗೆ ಜಿಪಂ ಸದಸ್ಯರು, ಶಾಸಕರು ಶುಕ್ರವಾರ ಜಿಪಂ ಸಾಮಾನ್ಯ ಸಭೆಗೆ ಹಾಜರಾಗಿ ವಾರ್ಷಿಕ ಕ್ರಿಯಾಯೋಜನೆಗೆ ಸದಸ್ಯರು ಸರ್ವಾನುಮತದಿಂದ ಅನುಮೋದನೆ ನೀಡಿದರು.

ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಜಿಪಂ ಅಧ್ಯಕ್ಷೆ ಲತಾ ರವಿಕುಮಾರ್‌ ಅಧ್ಯಕ್ಷತೆಯಲ್ಲಿ ನಡೆದ ಜಿಪಂ ಸಾಮಾನ್ಯ ಸಭೆಯಲ್ಲಿ ಲಿಂಕ್‌ ಡಾಕ್ಯುಮೆಂಟ್‌ನಡಿ 2020-21ನೇ ಸಾಲಿಗಾಗಿ 529.78 ಕೋಟಿ ರೂ.ಗಳ ವಾರ್ಷಿಕ ಕ್ರಿಯಾ ಯೋಜನೆಗೆ ಅನುಮೋದನೆನೀಡಲಾಯಿತು. ಲಿಂಕ್‌ ಡಾಕ್ಯುಮೆಂಟ್‌ನಡಿ ವಿವಿಧಇಲಾಖಾ ಕಾರ್ಯಕ್ರಮಗಳ 529 ಕೋಟಿ ರೂ.ಗಳ ವಾರ್ಷಿಕ ಕ್ರಿಯಾ ಯೋಜನೆಯೊಂದಿಗೆ ಜಿಪಂ ಶಾಸನಬದ್ಧ(ಅನಿರ್ಬಂಧಿತ) ಅನುದಾನದಡಿ 6.93ಕೋಟಿ ರೂ., 15ನೇ ಹಣಕಾಸು ಯೋಜನೆಯಡಿ 8.97ಕೋಟಿ ರೂ.ಗಳ ಕ್ರಿಯಾ ಯೋಜನೆ ಅನುಮೋದನೆಗೆ ಒಮ್ಮತದಿಂದ ಒಪ್ಪಿಗೆ ಸೂಚಿಸಿದರು.

ಸಭೆಯಲ್ಲಿ ಅನುಮೋದಿಸಿದ ಲಿಂಕ್‌ ಡಾಕ್ಯುಮೆಂಟ್‌ನ ವಾರ್ಷಿಕ ಕ್ರಿಯಾ ಯೋಜನೆಯಡಿ ನಿಗದಿಪಡಿಸಲಾದ 529 ಕೋಟಿ ರೂ.ಗಳನ್ನು ಲೋಕೋಪಯೋಗಿ(ಪಂಚಾಯತ್‌ ರಾಜ್‌)ಗೆ 666ಲಕ್ಷ ರೂ., ಅಕ್ಷರದಾಸೋಹಕ್ಕಾಗಿ 8660ಲಕ್ಷ, ಸಾಮಾನ್ಯ ಶಿಕ್ಷಣಕ್ಕಾಗಿ 18275ಲಕ್ಷ, ಕ್ರೀಡಾ ಮತ್ತು ಯುವಜನ ಸೇವೆಗಾಗಿ 138ಲಕ್ಷ, ವೈದ್ಯಕೀಯ ಮತ್ತು ಜನಾರೋಗ್ಯಕ್ಕಾಗಿ 5902ಲಕ್ಷ, ಕಲೆ ಮತ್ತು ಸಂಸ್ಕೃತಿಗಾಗಿ 5ಲಕ್ಷ, ಕುಟುಂಬಕಲ್ಯಾಣ-3288ಲಕ್ಷ, ಆಯುಷ್‌-545ಲಕ್ಷ, ಪರಿಶಿಷ್ಟ ಜಾತಿ ಕಲ್ಯಾಣ-3145ಲಕ್ಷ, ಪರಿಶಿಷ್ಟ ಪಂಗಡ ಕಲ್ಯಾಣ-1214ಲಕ, ಹಿಂದುಳಿದ ವರ್ಗಗಳ ಕಲ್ಯಾಣ-5587ಲಕ್ಷ, ಅಲ್ಪಸಂಖ್ಯಾತರ ಕಲ್ಯಾಣ-490 ಲಕ್ಷ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ-126ಲಕ್ಷ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ-225ಲಕ್ಷ, ಕೃಷಿ-408ಲಕ್ಷ, ಭೂಸಾರ ಮತ್ತು ಜಲ ಸಂರಕ್ಷಣೆ-146ಲಕ್ಷ, ತೋಟಗಾರಿಕೆ-870 ಲಕ್ಷ, ಪಶು ಸಂಗೋಪನೆ-545ಲಕ್ಷ, ಮೀನುಗಾರಿಕೆ-233ಲಕ್ಷ, ಅರಣ್ಯ-959ಲಕ, ಆರ್ ಡಿಪಿಆರ್‌-440ಲಕ್ಷ, ಸ‌ಣ್ಣ ನೀರಾವರಿ-204ಲಕ್ಷ, ರೇಷ್ಮೆ-436ಲಕ್ಷ, ಗ್ರಾಮೀಣಮತ್ತು ಸಣ್ಣ ಕೈಗಾರಿಕೆ-123ಲಕ್ಷ, ಕೈಮಗ್ಗ ಮತ್ತು ಜವಳಿ-66ಲಕ್ಷ ಹಾಗೂ ಮತ್ತಿತರ ಸಾಮಾನ್ಯ ಸೇವೆಗಳಿಗಾಗಿ ವಿನಿಯೋಗಿಸಲಾಗಿದೆ.

ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ, ಜಿಪಂನ 2020-21ನೇ ಸಾಲಿನ ಕ್ರಿಯಾ ಯೋಜನೆಅನುಮೋದನೆಗಾಗಿ ಸಭೆಗೆ ಹಾಜರಾಗಿದ್ದ ಎಲ್ಲಾ ಜಿಪಂಸದಸ್ಯರು, ಶಾಸಕರು, ತಾಪಂ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.

ಸಭೆಯಲ್ಲಿ ಜಿಪಂನ ವಿವಿಧ ಸ್ಥಾಯಿ ಸಮಿತಿಗಳ ನಡಾವಳಿಗಳಿಗೆ ಅನುಮೋದನೆ ನೀಡಲಾಯಿತು. ನಂತರ ಆರೋಗ್ಯ ಇಲಾಖೆಯಲ್ಲಿ ಸಿಸಿ ಟಿವಿ ಹಾಗೂ ಬಯೋಮೆಟ್ರಿಕ್‌ ಅಳವಡಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಬಗ್ಗೆ ಚರ್ಚಿಸ ಲಾಯಿತು. ಈ ವೇಳೆ ಸಂಸದರಾದ ಜಿ.ಎಸ್‌.ಬಸವರಾಜು, ನಾರಾಯಣಸ್ವಾಮಿ, ತೆಂಗು ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ಬಿ.ಸಿ.ನಾಗೇಶ್‌, ಜಿಪಂ ಉಪಾಧ್ಯಕ್ಷೆಶಾರದಾ ನರಸಿಂಹಮೂರ್ತಿ, ಶಾಸಕರಾದ ಡಾ.ರಂಗನಾಥ್‌, ವೆಂಕಟರಮಣಪ್ಪ, ಮಸಾಲಜಯರಾಂ, ಡಾ.ಸಿ.ಎಂ.ರಾಜೇಶ್‌ಗೌಡ, ವಿಧಾನ ಪರಿಷತ್‌ ಸದಸ್ಯ ತಿಪ್ಪೇಸ್ವಾಮಿ, ಜಿಲ್ಲಾಧಿಕಾರಿ ಡಾ.ರಾಕೇಶ್‌ಕುಮಾರ್‌, ಜಿಪಂ ಸಿಇಒ ಶುಭಾ ಕಲ್ಯಾಣ್‌, ಜಿಪಂಸದಸ್ಯರು, ತಾಪಂ ಅಧ್ಯಕ್ಷರು, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

 ನೀವೇ ಒಪ್ಪಿಗೆ ಸೂಚಿಸಿದ್ದೀರಾ :  ಜಿಲ್ಲೆ ಆಸ್ಪತ್ರೆಗಳಲ್ಲಿ ಅಳವಡಿಸಿರುವ ಬಯೋಮೆಟ್ರಿಕ್‌ ಮತ್ತು ಸಿಸಿ ಟಿವಿ ಕ್ಯಾಮರಾ ಅಳವಡಿಕೆಯಲ್ಲಿ ಭಾರೀ ಭ್ರಷ್ಟಾಚಾರವಾಗಿದೆ. ಸಭೆಯ ಅನುಮೋದನೆಪಡೆಯದೇ 1.36 ಕೋಟಿ ಅವ್ಯವಹಾರವಾಗಿದೆ. ಇದನ್ನು ಲೋಕಾಯುಕ್ತ ತನಿಖೆಗೆ ಒಪ್ಪಿಸಬೇಕು ಎಂದು ಸಭೆಯಲ್ಲಿ ಹೇಳಿದ್ದೆವು ಆ ಬಗ್ಗೆ ಸಚಿವರು ಗಮನ ಹರಿಸಬೇಕು ಎಂದು ಸದಸ್ಯರು ಒತ್ತಾಯಿಸಿದರು. ಅಂದು ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಡಾ.ನವ್ಯಾಬಾಬು ಕೂಡ ತನ್ನ ಗಮನಕ್ಕೆ ತರದೇ ಈ ರೀತಿ ಅನುಮೋದನೆ ಆಗಿದೆ ಎಂದು ಹೇಳಿದರು. ಸಚಿವರು ಎಲ್ಲರ ಮಾತು ಆಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದು ನಂತರ ನೀವೇ ಸಭೆಯಲ್ಲಿ ಒಪ್ಪಿಗೆ ಸೂಚಿಸಿದ್ದೀರಾಇಲ್ಲಿ ದಾಖಲಾಗಿದೆ ನೀವು ವಿರೋಧ ಮಾಡಿರುವುದು ಎಲ್ಲಿ ದಾಖಲಾಗಿದೆ ಎಂದು ಸದಸ್ಯರನ್ನು ಪ್ರಶ್ನಿಸಿದರು. ಅಂದು ಅಧ್ಯಕ್ಷರ ವಿರುದ್ಧ ಬಯೋಮೆಟ್ರಿಕ್‌, ಸಿಸಿಟಿವಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಹೆಚ್ಚು ಆರೋಪಿಸಿದ್ದ ಕಾಂಗ್ರೆಸ್‌ ಸದಸ್ಯರು ಈ ಸಭೆಯಲ್ಲಿ ಅಧ್ಯಕ್ಷರ ರಕ್ಷಣೆಗೆ ನಿಂತಂತೆ ಕಂಡು ಬಂದಿತು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.