1.75 ಲಕ್ಷ ರೂ. ಮೌಲ್ಯದಲ್ಲಿ 25 ಸಾವಿರ ಹಣತೆ ಗುರಿ

ಭಿನ್ನ ಸಾಮರ್ಥ್ಯದ ಮಕ್ಕಳ ಕೈಯಲ್ಲಿ ಅರಳುತ್ತಿದೆ ಅಲ್ಯುಮೀನಿಯಂ ಹಣತೆ

Team Udayavani, Nov 10, 2020, 4:01 AM IST

1.75 ಲಕ್ಷ ರೂ. ಮೌಲ್ಯದಲ್ಲಿ 25 ಸಾವಿರ ಹಣತೆ ಗುರಿ

ಕಾರ್ಕಳ: ವಿಶೇಷ ಸಾಮರ್ಥ್ಯವುಳ್ಳ ಮಕ್ಕಳಲ್ಲಿ ಸ್ವಾವಲಂಬಿ ಪ್ರೇರಣೆ ನೀಡುವ ನಿಟ್ಟಿನಲ್ಲಿ ಕಾರ್ಕಳದ ಅಯ್ಯಪ್ಪನಗರ ವಿಜೇತ ವಿಶೇಷ ವಸತಿ ಶಾಲೆಯು ವಿನೂತನ ಪ್ರಯತ್ನವನ್ನು ಮಾಡುತ್ತಿದೆ.

ಅಯ್ಯಪ್ಪನಗರ ವಿಜೇತ ವಿಶೇಷ ವಸತಿ ಶಾಲೆಯಲ್ಲಿರುವ ಭಿನ್ನ ಸಾಮರ್ಥ್ಯದ 24 ಮಂದಿ ಮಕ್ಕಳು ಅಲ್ಯುಮೀನಿಯಂ ಹಣತೆ ತಯಾರಿ ಮಾಡುವ ಮೂಲಕ ದೀಪಾವಳಿಗೆ ಕಷ್ಟದ ಅಂಧಕಾರ ಹೋಗಲಾಡಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಹಣತೆ ಮಾರಾಟದಿಂದ ಬಂದ ಹಣವನ್ನು ಮಕ್ಕಳ ಶಾಲೆಯ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಲು ನಿರ್ಧಾರಿಸಲಾಗಿದೆ. ಮಕ್ಕಳ ಜತೆ ಹೆತ್ತವರು ಕೂಡ ಈ ಕಾರ್ಯಕ್ಕೆ ಸಾಥ್‌ ನೀಡುತ್ತಿದ್ದಾರೆ.

ಶಾಲೆಯಲ್ಲಿ ವಿಭಿನ್ನ ಸಾಮರ್ಥ್ಯದ 75 ಮಕ್ಕಳಿದ್ದು ಕೊರೊನಾ ಹಿನ್ನೆಲೆಯಲ್ಲಿ ಮಕ್ಕಳು ಈಗ ತಮ್ಮ ಪೋಷಕರ ಜತೆ ಮನೆಗಳಲ್ಲಿ ಉಳಿದುಕೊಂಡಿದ್ದಾರೆ. ಶಾಲೆಯಲ್ಲೀಗ ಅನಾಥ 5 ಮಂದಿ ಮಕ್ಕಳಷ್ಟೇ ಇದ್ದಾರೆ. ಅವರ ಪೈಕಿ 24 ಮಂದಿ ಮಕ್ಕಳು 25 ವಯಸ್ಸಿಗಿಂತ ಮೇಲ್ಪಟ್ಟವರು. ಅವರು ಮನೆಗಳಲ್ಲಿ ಹೆತ್ತವರ ನೆರವಿನಿಂದ ಹಣತೆಗಳನ್ನು ಸಿದ್ಧಗೊಳಿಸುತ್ತಿದ್ದು, ಅವರಿಗೆ ತರಬೇತಿ ಕೂಡ ನೀಡಲಾಗಿದೆ. ಈ ಬಾರಿಯ ದೀಪಾವಳಿಗೆ 25 ಸಾವಿರ ಹಣತೆಗಳನ್ನು ಸಿದ್ಧಗೊಳಿಸುವ ಗುರಿಯಿಂದ ತಯಾರಿ ಆರಂಭವಾಗಿದೆ. 20 ಸಾವಿರ ಹಣತೆಗಳು ಸಿದ್ಧಗೊಂಡಿವೆ. ಗುರಿ ತಲುಪಲು 5ಸಾವಿರ ಹಣತೆಗಳ ತಯಾರಿ ಬಾಕಿಯಿದೆ.

ಮಕ್ಕಳು ಸಿದ್ಧಪಡಿಸಿದ ಹಣತೆಗಳನ್ನು ತಲಾ 12ರಂತೆ ಪ್ಯಾಕ್‌ ಮಾಡಲಾಗುತ್ತಿದೆ. ಪ್ಯಾಕೊಂದರ ಬೆಲೆ 85 ರೂ. ಎಂದು ನಿಗದಿಪಡಿಸಲಾಗಿದೆ. ಮಂಗಳೂರು ಮೂಲದ ವೆಬ್‌ಸೈಟ್‌ ಮೂಲಕ ಹಾಗೂ ಸ್ಥಳಿಯ ಅಂಗಡಿಗಳಲ್ಲಿ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ (ವಿಶೇಷ ಶಾಲೆ) ವಿದ್ಯಾರ್ಥಿಗಳು ಹಣತೆ ತಯಾರಿಸುತ್ತಿದ್ದಾರೆ ಎಂದಾಗ ಅಚ್ಚರಿ ಜತೆಗೆ ಮಾನವೀಯತೆಯ ಭಾವನೆಯಿಂದ ನೋಡುವವರೇ ಹೆಚ್ಚು. ವಿಷಯ ತಿಳಿದ ಅನೇಕ ಮಂದಿ ಬಡ ಮಕ್ಕಳಿಗೆ ನೆರವಾಗಲೆಂದು ನೇರ ಶಾಲೆಗೆ ಬಂದು ಹಣತೆ ಖರೀದಿಸಿ ತೆರಳುತ್ತಿದ್ದಾರೆ. 15 ಸಾವಿರ ಹಣತೆ ವಿವಿಧ ರೂಪಗಳಲ್ಲಿ ಈಗಾಗಲೇ ಮಾರಾಟವಾಗಿದೆ.

ವಿಜೇತ ವಿಶೇಷ ವಸತಿಯುತ ಶಾಲೆ 2016ರಲ್ಲಿ ಆರಂಭಗೊಂಡಿದೆ. ಮಕ್ಕಳ ಬೆಳವಣಿಗೆಗೆ ಪೂರಕ ವ್ಯವಸ್ಥೆಗಳು ಇಲ್ಲಿವೆ. ಮಕ್ಕಳ ಪೋಷಕರು ಬಡವರೇ ಆದ ಕಾರಣ ಅವರ ಮೇಲೆ ಯಾವುದೇ ಹೊರೆಯನ್ನು ಹೊರೆಸುತ್ತಿಲ್ಲ. ಹುಟ್ಟುಹಬ್ಬ ಆಚರಣೆ, ವಿಶೇಷ ಕಾರ್ಯಕ್ರಮಗಳ ಮೂಲಕ ದಾನಿಗಳು ಆರ್ಥಿಕ ಜತೆಗೆ ವಿವಿಧ ರೂಪದಲ್ಲಿ ದೇಣಿಗೆ, ವಸ್ತು ರೂಪದಲ್ಲಿ ಕೊಡುಗೆಗಳನ್ನು ನೀಡುತ್ತ ಮಕ್ಕಳ ಮೇಲೆ ಪ್ರೀತಿ ತೋರಿಸುತ್ತಾರೆ. ಈ ನಂಬಿಕೆಯಲ್ಲೆ ಶಾಲೆ ಉತ್ತಮವಾಗಿ ನಡೆಯುತ್ತಿದೆ ಎನ್ನುತ್ತಾರೆ ಸಂಸ್ಥಾಪಕಿ ಕಾಂತಿ ಹರೀಶ್‌.

ಎಲ್ಲ ರೀತಿಯ ನೆರವು
ಹಣತೆ ತಯಾರಿಸಲು 1.75 ಲಕ್ಷ ರೂ. ಹಣ ವೆಚ್ಚ ಮಾಡಲಾಗುತ್ತಿದೆ. ವಿಜೇತ ಶಾಲೆಯಿಂದ ಮನೆಗಳಲ್ಲಿ ಸಿದ್ಧಪಡಿಸಲು ಎಲ್ಲ ರೀತಿಯ ಸಾಮಗ್ರಿ ಗಳನ್ನು ನೀಡಲಾಗುತ್ತಿದೆ. ಅಲ್ಯುಮೀನಿಯಂ ನಿಂದ ಹಣತೆ ಸಿದ್ಧಪಡಿಸಲಾಗುತ್ತಿದೆ.

ಖುಷಿಯಾಗುತ್ತಿದೆ
ನನಗೆ ಹಣತೆ ತಯಾರಿಸಲು ತರಬೇತಿ ನೀಡಿದ್ದರಿಂದ ಸುಲಭವಾಗಿ ಹಣತೆ ಮಾಡುವುದನ್ನು ಕಲಿತೆ. ಇದರಿಂದ ಮನಸ್ಸಿಗೆ ಖುಷಿಯಾಗುತ್ತಿದೆ. ಸಮಯವೂ ಕಳೆದು ಹೋಗುತ್ತಿದೆ.
-ಸುರೇಶ್‌, ವಿಜೇತ ವಿಶೇಷ ಶಾಲೆ ವಿದ್ಯಾರ್ಥಿ

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.