1 ಕೋ.ರೂ. ಸೌಲಭ್ಯ ವಿತರಣೆ
Team Udayavani, Oct 23, 2017, 10:16 AM IST
ಉಡುಪಿ: ಉಡುಪಿ ನಗರಸಭೆ ವತಿಯಿಂದ 2017-18ನೇ ಸಾಲಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಶೇ. 24.10 ನಿಧಿಯಡಿ 29.62 ಲ. ರೂ. ಹಾಗೂ ಹಿಂದುಳಿದ ವರ್ಗದವರಿಗೆ ಶೇ. 7.25ರ ನಿಧಿಯಡಿ 70.89 ಲ.ರೂ. ಒಟ್ಟು 1 ಕೋ.ರೂ.ಗೂ ಅಧಿಕ ಮೌಲ್ಯದ ವಿವಿಧ ಸೌಲಭ್ಯಗಳನ್ನು ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ವಿತರಿಸಿದರು.
10 ಲ.ರೂ. ವಿದ್ಯಾರ್ಥಿ ವೇತನ : ಎಸೆಸೆಲ್ಸಿ , ಪಿಯುಸಿ, ಡಿಪ್ಲೊಮಾ, ಪದವಿ ಹಾಗೂ ಸ್ನಾತಕೋತ್ತರ ಪದವಿಯ 59 ವಿದ್ಯಾರ್ಥಿಗಳಿಗೆ ಪ.ಜಾತಿ ಹಾಗೂ ಪಂಗಡದ ನಿಧಿಯಡಿ ಒಟ್ಟು 3.45 ಲ.ರೂ. ವಿದ್ಯಾರ್ಥಿ ವೇತನ ಹಾಗೂ ಹಿಂದುಳಿದ ವರ್ಗದ ನಿಧಿಯಡಿ 120 ವಿದ್ಯಾರ್ಥಿಗಳಿಗೆ 7.07 ಲ.ರೂ. ವಿದ್ಯಾರ್ಥಿ ವೇತನ ವಿತರಿಸಲಾಯಿತು.
ಸೌಲಭ್ಯ ವಿತರಣೆ : ಪ.ಜಾತಿ ಹಾಗೂ ಪಂಗಡದವರಿಗೆ ಅಡುಗೆ ಅನಿಲ ಸಂಪರ್ಕದ ಸಹಾಯಧನದಡಿ 35 ಜನರಿಗೆ 1.84 ಲ ರೂ. ಶೌಚಾಲಯ ನಿರ್ಮಾಣಕ್ಕಾಗಿ ಸ್ವತ್ಛ ಭಾರತ್ ಯೋಜನೆಯಡಿ 12 ಲ. ರೂ., ಆರೋಗ್ಯ ವಿಮೆಯಡಿ 50 ಲ.ರೂ., ಹಿಂದುಳಿದ ವರ್ಗದವರಿಗೆ ಮನೆ ದುರಸ್ತಿಗೆ 1.60 ಲ. ರೂ., ಅಡುಗೆ ಅನಿಲ ಸಂಪರ್ಕಕ್ಕಾಗಿ 1.94 ಲ.ರೂ. ಹಾಗೂ ಶೌಚಾಲಯ ನಿರ್ಮಾಣಕ್ಕಾಗಿ ಸ್ವತ್ಛ ಭಾರತ್ ಯೋಜನೆಯಡಿ 18.12 ಲ.ರೂ. ಮೌಲ್ಯದ ಚೆಕ್ ವಿತರಿಸಲಾಯಿತು.
ನಗರಸಭಾಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ತಿಲಕ್ರಾಜ್, ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಕಕ್ಕುಂಜೆ ಉಪಸ್ಥಿತರಿದ್ದರು. ಪೌರಾಯುಕ್ತ ಡಿ. ಮಂಜುನಾಥಯ್ಯ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ