ಸಂಚಾರಿಗಳಿಗೆ ಸಂಚಕಾರ: ಬಾಳ್ಕಟ್ಟು ತಿರುವು

 10 ಕೋಟಿ ರೂ. ಕಾಮಗಾರಿ ನಡೆದರೂ ರಾ.ಹೆ. ತಿರುವಿಗೆ ಮುಕ್ತಿ ಸಿಕ್ಕಿಲ್ಲ

Team Udayavani, Jan 23, 2020, 5:24 AM IST

2210SIDE4-BALKATTU-TIRUU

ಹಲವು ಜಿಲ್ಲೆಗಳನ್ನು ಕರಾವಳಿಯೊಂದಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿ ಯಾಗಿದ್ದರೂ ಲೋಕೋಪಯೋಗಿ ಇಲಾಖೆ ತಿರುವು ನೇರಗೊಳಿಸುವ ಪ್ರಯತ್ನ ನಡೆಸಿಲ್ಲ.

ಸಿದ್ದಾಪುರ: ಕುಂದಾಪುರ- ಶಿವಮೊಗ್ಗ ರಾಜ್ಯ ಹೆದ್ದಾರಿಯ ಅಂಪಾರು- ಸಿದ್ದಾಪುರ ಮಧ್ಯೆ ಇರುವ ಬಾಳ್ಕಟ್ಟು ತಿರುವು ವಾಹನ ಸವಾರರ ಪಾಲಿಗೆ ತೀವ್ರ ಅಪಾಯಕಾರಿ ಸ್ಥಳ. ಇಲ್ಲಿ ರಸ್ತೆ ಕಾಮಗಾರಿ ನಡೆದರೂ ತಿರುವಿಗೆ ಮಾತ್ರ ಮುಕ್ತಿ ಸಿಗದ್ದರಿಂದ ಅಪಘಾತದ ತಾಣ ಇನ್ನೂ ಹಾಗೆಯೇ ಇದೆ.

ಕೇಂದ್ರ ಸರಕಾರದ ಸಿಆರ್‌ಎಫ್‌ ಫಂಡ್‌ನ‌ಲ್ಲಿ ಈ ಭಾಗದಲ್ಲಿ ರಸ್ತೆ ಕಾಮಗಾರಿ ನಡೆದಿತ್ತು. ಅಷ್ಟೇ ಅಲ್ಲದೇ ಇದರ ನಿರ್ವಹಣೆ ಅವಧಿಯೂ ಮುಗಿಯುತ್ತ ಬಂದಿದೆ. ಆದರೆ ಈ ಪ್ರದೇಶದಲ್ಲಿರುವ ತಿರುವು ಮಾತ್ರ ಹಾಗೆಯೇ ಇದೆ.

10 ಕೋ. ರೂ. ಕಾಮಗಾರಿ; ಫ‌ಲಿತಾಂಶ ಶೂನ್ಯ
ಕುಂದಾಪುರ- ಶಿವಮೊಗ್ಗ ರಾಜ್ಯ ಹೆದ್ದಾರಿಯಾಗಿದ್ದರೂ ಕೂಡ, ಹೆದ್ದಾರಿಯ ಅಭಿವೃದ್ಧಿಗಾಗಿ ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದವರಿಗೆ 2017-18ನೇ ಸಾಲಿನಲ್ಲಿ ರಸ್ತೆಯನ್ನು ಹಸ್ತಾಂತರಿಸಲಾಗಿದೆ. ಕುಂದಾಪುರ ವಡೇರಹೋಬಳಿಯಿಂದ ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಯ ಗಡಿ ಭಾಗದವರೆಗೆ 45 ಕಿ. ಮೀ. ಉದ್ದದ ರಸ್ತೆಯನ್ನು ಸಿಆರ್‌ಎಫ್‌ ಫಂಡ್‌ನ‌ಲ್ಲಿ ಕಾಮಗಾರಿ ನಡೆಸಲು 10 ಕೋಟಿ ರೂ. ಮಂಜೂರಾಗಿ ಕಾಮಗಾರಿಯೂ ನಡೆದಿತ್ತು. ಆದರೆ ತಿರುವನ್ನು ಸರಿಪಡಿಸುವ ಗೋಜಿಗೆ ಹೋಗಿಲ್ಲ. ತಿರುವು ಸರಿಪಡಿಸುವಂತೆ ಈ ಭಾಗದ ಜನರು ಮತ್ತು ವಾಹನ ಸವಾರರು ಆಗ್ರಹಿಸಿದ್ದರೂ ಫ‌ಲಿತಾಂಶ ಮಾತ್ರ ಶೂನ್ಯವಾಗಿದೆ. ತಿರುವು ಸರಿಪಡಿಸುವ ಕೂಗು ಇಲಾಖೆಯವರಿಗೆ ಇನ್ನೂ ಕೇಳಿಲ್ಲ.

“ಊ’ ಆಕಾರದ ತಿರುವು
ಮೂಡುಬಗೆ ಗಣಪತಿ ದೇವಸ್ಥಾನದಿಂದ ಬಡಬಾಳು ತನಕ ರಸ್ತೆ “ಊ’ ಆಕಾರದಲ್ಲಿದೆ. ವಾಹನಗಳು ಹಾವು ಹೋಗುವ ರೀತಿಯಲ್ಲಿ ಸಾಗಬೇಕಾಗಿರುವುದರಿಂದ ಪರಸ್ಪರ ಗೋಚರವಾಗುವುದಿಲ್ಲ. ವಾಹನ ದಟ್ಟಣೆ ಇರುವ ಈ ರಸ್ತೆಯ ತಿರುವಿನಲ್ಲಿ$ಸೂಚನ ಫ‌ಲಕಗಳೂ ಇಲ್ಲ. ವಾಹನ ದಟ್ಟಣೆ ಹೆಚ್ಚಿದ್ದರೂ ರಸ್ತೆ ಸ್ವರೂಪ ಮಾತ್ರ ಹಾಗೆಯೇ ಇದೆ.

ಸೂಚನ ಫಲಕಗಳೂ ಇಲ್ಲಿಲ್ಲ
ತಿರುವುನಲ್ಲಿ ಪ್ರತಿ ವರ್ಷವೂ ದುರಸ್ತಿ ಎಂಬಂತೆ ತೇಪೆ ಕಾರ್ಯ ನಡೆಯುತ್ತದೆ ಹೊರತು ನೇರವಾಗಿಸುವ ಕಾರ್ಯ ಆಗುವುದೇ ಇಲ್ಲ. ವಾಹನ ದಟ್ಟಣೆ ಇರುವ ಈ ರಸ್ತೆಯ ತಿರುವಿನಲ್ಲಿ$ಜಾಗೃತಾ ಸೂಚನ ಫಲಕಗಳೂ ಇಲ್ಲ.

ನಿತ್ಯ ಸಾವಿರಾರು ವಾಹನಗಳ ಸಂಚಾರ ಇದ್ದರೂ ಕೂಡ ಇಂದಿಗೂ ಈ ತಿರುವನ್ನು ನೇರವಾಗಿಸುವ ಪ್ರಯತ್ನಕ್ಕೆ ಇಲಾಖೆ ಮುಂದಾಗಿಲ್ಲ. ಪರಿಣಾಮ ದಿನ ನಿತ್ಯ ಸಣ್ಣಪುಟ್ಟ ಅಪಘಾತಗಳು ನಡೆಯುತ್ತಿರುತ್ತವೆ.

ಕೂಡಲೇ ಗಮನಹರಿಸಿ
ಇಲ್ಲಿ ವಾಹನ ದಟ್ಟಣೆ ಹೆಚ್ಚು. ಬಾಳ್ಕಟ್ಟು ತಿರುವು ಅಪಾಯಕಾರಿಯಾಗಿರುವುದರಿಂದ ಆಗಾಗ ಅಪ ಘಾತಗಳೂ ಸಾಮಾನ್ಯ. ತಿರುವನ್ನು ನೇರವಾಗಿಸಿದರೆ ಅಪಘಾತವಾಗುವುದನ್ನು ತಪ್ಪಿಸಬಹುದು. ಕಾಮಗಾರಿ ನಡೆಯುವಾಗ ಇಲಾಖೆಯ ಗಮನಕ್ಕೆ ತಂದರೂ, ಈ ಬಗ್ಗೆ ಗಮನಹರಿಸಿಲ್ಲ. ಇನ್ನಾದರೂ ಇಲಾಖೆ ಹಾಗೂ ಜನಪ್ರತಿನಿಧಿಗಳು ಗಮನ ಹರಿಸಬೇಕು.
-ಉದಯಕುಮಾರ ಶೆಟ್ಟಿ ಮೂಡುಬಗೆ,
ಸದಸ್ಯರು ಗ್ರಾ. ಪಂ. ಅಂಪಾರು

ರಸ್ತೆ ನೇರವಾಗಿಸಲು ಯತ್ನ
ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದವರಿಗೆ 2017-18ನೇ ಸಾಲಿನಲ್ಲಿ ರಸ್ತೆಯನ್ನು ಹಸ್ತಾಂತರಿಸಲಾಗಿದ್ದು 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯೂ ನಡೆದಿದೆ. 2ವರ್ಷದ ಮೆಂಟೆನೆನ್ಸ್‌ ಕೂಡ ಮುಗಿಯುತ್ತ ಬಂದಿದೆ. ಲೋಕೋಪಯೋಗಿ ಇಲಾಖೆಗೆ ಪುನಃ ಹೆದ್ದಾರಿ ಹಸ್ತಾಂತರಿಸಿದಾಗ ಮತ್ತೆ ಕ್ರಿಯಾಯೋಜನೆ ಸಿದ್ಧ ಪಡಿಸಿ, ಹೆದ್ದಾರಿ ನೇರವಾಗಿಸುವ ಬಗ್ಗೆ ಪ್ರಯತ್ನಿಸುತ್ತೇವೆ.
-ರಾಘವೇಂದ್ರ ನಾಯ್ಕ,
ಎಂಜಿನಿಯರ್‌ಲೋಕೋಪಯೋಗಿ ಇಲಾಖೆ ಉಡುಪಿ ಜಿಲ್ಲೆ ಕುಂದಾಪುರ ಉಪ ವಿಭಾಗ

ವರದಿ ಸಲ್ಲಿಕೆ
ಪೊಲೀಸ್‌ ಇಲಾಖೆ ವತಿಯಿಂದ ಅಪಘಾತ ವಲಯವೆಂದು ಲೋಕೋಪಯೋಗಿ ಇಲಾಖೆಗೆ ವರದಿ ಸಲ್ಲಿಸಲಾಗಿದೆ. ಈ ವರದಿ ಅನ್ವಯ ರಸ್ತೆಯ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆ ಮುಂದಾಗಬೇಕಾದುದು ಸವಾರರ ಸುರಕ್ಷೆಯ ಹಿತದೃಷ್ಟಿಯಿಂದ ತುರ್ತು ಅಗತ್ಯವಾಗಿದೆ.
-ಶ್ರೀಧರ್‌ ನಾಯ…R, ಉಪನಿರೀಕ್ಷಕರು ಶಂಕರನಾರಾಯಣ ಪೊಲೀಸ್‌ ಠಾಣೆ

ಅಪಘಾತ ವಲಯ
ಈ ರಸ್ತೆ ಕೇವಲ ಎರಡು ಜಿಲ್ಲೆಯ ಮಧ್ಯೆ ಸಂಪರ್ಕ ಸೇತು ಮಾತ್ರವಾಗಿದ್ದರೆ ಬಳ್ಳಾರಿ-ದಾವಣಗೆರೆ ಮತ್ತಿತರ ಜಿಲ್ಲೆಗಳನ್ನು ಕರಾವಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿಯಾಗಿದೆ. ನಿತ್ಯ ಸಾವಿರಾರು ವಾಹನಗಳು ಇಲ್ಲಿ ಸಂಚರಿಸುತ್ತವೆ. ಪರಿಣಾಮ ಇಲ್ಲಿ ಅಪಘಾತ ನಿತ್ಯವೂ ಆಗುತ್ತಿರುತ್ತವೆ. ರಸ್ತೆಯ ಇಕ್ಕೆಲಗಳಲ್ಲಿ ಬೆಳೆದು ನಿಂತ ಬೃಹತ್‌ ಮರಗಳು ಮತ್ತು ಪೊದೆ-ಗಿಡಗಂಟಿಗಳಿಂದ ತಿರುವಿನಲ್ಲಿ ಎದುರು ಕಡೆಯಿಂದ ಬರುವ ವಾಹನಗಳು ಗೋಚರಿಸದೆ ಅಪಘಾತ ಸಂಭವಿಸುತ್ತಿರುತ್ತವೆ.

-ಸತೀಶ್‌ ಆಚಾರ್‌ ಉಳ್ಳೂರ್‌

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.