ಪರಿಸರದ ಅಭಿವೃದ್ಧಿಗೆ ವಿನಿಯೋಗವಾಗದ 5 ಕೋ.ರೂ.


Team Udayavani, Dec 21, 2018, 1:45 AM IST

gangolli-20-12.jpg

ಗಂಗೊಳ್ಳಿ: ಕೋಡಿ ಹಾಗೂ ಗಂಗೊಳ್ಳಿಯಲ್ಲಿ ಬ್ರೇಕ್‌ ವಾಟರ್‌ ಕಾಮಗಾರಿಗೆ ನೀಡಲಾದ 102 ಕೋ.ರೂ. ಅನುದಾನದಲ್ಲಿ 5 ಕೋ.ರೂ. ಅಲ್ಲಿನ ರಸ್ತೆ, ಪರಿಸರದ ಅಭಿವೃದ್ಧಿಗೆ ವಿನಿಯೋಗಿಸಬೇಕು ಎನ್ನುವ ಕರಾರು ಇದ್ದರೂ, ಬ್ರೇಕ್‌ ವಾಟರ್‌ ಕಾಮಗಾರಿ ಮಾತ್ರ ಮುಗಿಸಿ ಕೈತೊಳೆದುಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. 
ಬ್ರೇಕ್‌ ವಾಟರ್‌ ಕಾಮಗಾರಿ ಸಲುವಾಗಿ ಟೆಟ್ರಾಫೈಡ್‌ ಸಹಿತ ಭಾರೀ ಗಾತ್ರದ ಸರಕು ವಸ್ತುಗಳನ್ನು ಘನ ವಾಹನಗಳ ಮೂಲಕ ಸಾಗಾಟ ಮಾಡಿದ್ದರಿಂದ ಗಂಗೊಳ್ಳಿ ಪರಿಸರದ ಸುಮಾರು 5 ಕ್ಕೂ ಹೆಚ್ಚಿನ ಒಳ ರಸ್ತೆಗಳೆಲ್ಲ ಸಂಪೂರ್ಣ ಹಾಳಾಗಿ ಹೋಗಿದೆ. ಕೆಲವು ರಸ್ತೆಗಳಲ್ಲಿ ಅಂತೂ ಡಾಮರೇ ಕಿತ್ತು ಹೋಗಿದೆ. ಮತ್ತೆ ಕೆಲವು ರಸ್ತೆಗಳಲ್ಲಿ ಹೊಂಡ – ಗುಂಡಿಗಳಿಂದಾಗಿ ಸಂಚಾರ ಕಷ್ಟಕರವಾಗಿದೆ. 102 ಕೋ.ರೂ. ಬ್ರೇಕ್‌ವಾಟರ್‌ ಕಾಮಗಾರಿಯಲ್ಲಿ ಗುತ್ತಿಗೆದಾರರು 5 ಕೋ.ರೂ. ರಸ್ತೆ, ಪರಿಸರ ಅಭಿವೃದ್ಧಿಗೆ ಬಳಸಬೇಕು ಎನ್ನುವುದು ಕಾಮಗಾರಿ ಆರಂಭದಲ್ಲೇ ಮಾತುಕತೆಯಾಗಿತ್ತು. ಈಗ ಕಾಮಗಾರಿ ಮುಗಿದಿದೆ. ಆದರೆ ಇಲ್ಲಿನ ರಸ್ತೆ ಅಥವಾ ಪರಿಸರದ ಅಭಿವೃದ್ಧಿ ಸಂಬಂಧ ಈ 5 ಕೋ.ರೂ. ಮಾತ್ರ ಬಳಕೆಯಾದಂತೆ ಕಾಣುತ್ತಿಲ್ಲ.


ಸಚಿವರಿಗೂ ಮನವಿ

ಬ್ರೇಕ್‌ ವಾಟರ್‌ ಕಾಮಗಾರಿಯ ಅನುದಾನದಲ್ಲಿ ಅಲ್ಪ ಹಣವನ್ನು ಇಲ್ಲಿನ ಪರಿಸರದ ಅಭಿವೃದ್ಧಿಗೆ ಬಳಸದ ಹಿನ್ನೆಲೆಯಲ್ಲಿ ಕಳೆದ ಜುಲೈನಲ್ಲಿ ಗಂಗೊಳ್ಳಿ ಬಂದರಿಗೆ ಮೀನುಗಾರಿಕಾ ಸಚಿವರು ಭೇಟಿ ಕೊಟ್ಟ ವೇಳೆ ಅವರಿಗೂ ಈ ಬಗ್ಗೆ ದೂರು ನೀಡಲಾಗಿತ್ತು. ಕೂಡಲೇ ಕ್ರಮ ವಹಿಸಲಾಗುವುದು ಎಂದವರು ಆಗ ಭರವಸೆ ನೀಡಿದ್ದರು. ಅದಲ್ಲದೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮೀನುಗಾರರು, ಗುತ್ತಿಗೆದಾರರ ಜಂಟಿ ಸಭೆಯಲ್ಲಿ ಇಲ್ಲಿನ ಪರಿಸರದ ಅಭಿವೃದ್ಧಿ ಮಾಡಿಕೊಡಲಾಗುವುದು ಟೆಂಡರ್‌ ವಹಿಸಿಕೊಂಡವರು ತಿಳಿಸಿದ್ದರು. 

ಕೂಡಲೇ ಮಾಡಲಿ
ಬ್ರೇಕ್‌ ವಾಟರ್‌ ಸಹಿತ ಇನ್ನಿತರ ಕಾಮಗಾರಿಗಾಗಿ ಸರಕು ವಸ್ತುಗಳನ್ನು ಸಾಗಿಸಲು ಇಲ್ಲಿನ ಒಳ ರಸ್ತೆಗಳನ್ನೇ ಬಳಸಿದ್ದರಿಂದ ರಸ್ತೆಗಳು ಈಗ ಸಂಪೂರ್ಣ ಅಧೋಗತಿಯಲ್ಲಿದೆ. ಇಲ್ಲಿನ ರಸ್ತೆಗಳಲ್ಲಿ ಸಂಚರಿಸುವುದೇ ಅಸಾಧ್ಯ ಎನ್ನುವ ಪರಿಸ್ಥಿತಿಯಿದೆ. ಡಿಸಿ ಜತೆಗಿನ ಸಭೆಯಲ್ಲಿಯೂ 97 ಕೋ.ರೂ. ವೆಚ್ಚದಲ್ಲಿ ಬ್ರೇಕ್‌ ವಾಟರ್‌ ಕಾಮಗಾರಿ ಬಾಕಿ ಉಳಿದ 5 ಕೋ.ರೂ. ಹಣವನ್ನು ಇಲ್ಲಿನ ಪರಿಸರ ಸಹಿತ ಇನ್ನಿತರ ಅಭಿವೃದ್ಧಿಗೆ ಬಳಸಲಾಗುವುದು ಎಂದು ತಿಳಿಸಿದ್ದರು. ಇನ್ನಾದರೂ ಅದನ್ನು ಕೂಡಲೇ ಮಾಡಿಕೊಡಲು ಮುಂದಾಗಲಿ. 
– ರಮೇಶ್‌ ಕುಂದರ್‌, ಮೀನುಗಾರ ಮುಖಂಡರು

ಪರಿಶೀಲಿಸಿದ ಬಳಿಕ ನಿರ್ಧಾರ
ಅಂದಾಜು ಪಟ್ಟಿಯಲ್ಲಿ ಏನಿದೆ ಅಂತಾ ನೋಡಿಕೊಂಡು, ಆ ಬಳಿಕ ಏನು ಮಾಡಬೇಕು ಅನ್ನುವುದರ ಕುರಿತು ನಿರ್ಧಾರ ಮಾಡಲಾಗುವುದು. ನಾನು ಹೊಸದಾಗಿ ಬಂದಿರುವುದರಿಂದ ಈ ಬಗ್ಗೆ ತಿಳಿದುಕೊಂಡು ಆ ಬಳಿಕ ಮಾಹಿತಿ ನೀಡುತ್ತೇನೆ. ಸಾಮಾನ್ಯವಾಗಿ ಪರಿಸರದ ಅಭಿವೃದ್ಧಿಗೆ ಬಳಸಬೇಕು ಎನ್ನುವ ನಿಯಮವಿರುತ್ತದೆ. ಆದರೆ ಕೆಲವೊಮ್ಮೆ ಅನುದಾನ ಪೂರ್ತಿ ಬಂದಿಲ್ಲ ಅಂದರೆ ಅದು ಸಾಧ್ಯವಾಗುವುದಿಲ್ಲ. 
– ಉದಯ ಕುಮಾರ್‌, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌, ಮೀನುಗಾರಿಕಾ ಮತ್ತು ಬಂದರು ಇಲಾಖೆ

— ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.