ನ್ಯಾಯಾಧೀಶರು, ಅಪರ ಜಿಲ್ಲಾಧಿಕಾರಿಯವರನ್ನು ನೀಡಿದ ಮುನಿಯಾಲು ಸರಕಾರಿ ಹಿ.ಪ್ರಾ. ಶಾಲೆ

104 ವರ್ಷಗಳ ಇತಿಹಾಸದೊಂದಿಗೆ ಮುನ್ನಡೆಯುತ್ತಿರುವ ಸರಕಾರಿ ಕನ್ನಡ ಶಾಲೆ

Team Udayavani, Nov 10, 2019, 5:15 AM IST

dd-34

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

1915 ಶಾಲೆ ಸ್ಥಾಪನೆ
ದಾಖಲೆ ಪ್ರಮಾಣದಲ್ಲಿ ಇಂದಿಗೂ ವಿದ್ಯಾರ್ಥಿಗಳು

ಅಜೆಕಾರು: ದೇಶದ ಕಾರ್ಯಾಂಗ, ನ್ಯಾಯಾಂಗಕ್ಕೆ ಸೇವೆ ಸಲ್ಲಿಸಲು ಅಧಿಕಾರಿಗಳನ್ನು ನೀಡಿದ ಸರಕಾರಿ ಹಿ. ಪ್ರಾ. ಶಾಲೆ ಮುನಿಯಾಲು 104 ವರ್ಷಗಳನ್ನು ಕಳೆದು ಪ್ರಗತಿಪಥದಲ್ಲಿ ಮುನ್ನಡೆಯುತ್ತಿದೆ. ಮುನಿಯಾಲು ಪರಿಸರದ ಆಸುಪಾಸಿನಲ್ಲಿ ಶಾಲೆಗಳಿಲ್ಲದೆ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿರುವುದನ್ನು ಮನಗಂಡ ಸ್ಥಳಿಯರು ಮುನಿಯಾಲು ಸಮೀಪದ ವರಂಗದಲ್ಲಿ 1915ರಲ್ಲಿ ಮುಳಿಹುಲ್ಲಿನ ಕಟ್ಟಡದಲ್ಲಿ ಪ್ರಾಥಮಿಕ ಶಾಲೆಯನ್ನು ಅರಂಭಿಸಿದರು. ಅನಂತರ 1921ರಲ್ಲಿ ಮುನಿಯಾಲಿಗೆ ಸ್ಥಳಾಂತರಗೊಂಡಿತು.

ನಾಲ್ಕೂರು ರಾಮಚಂದ್ರ ಪೈ ಹಾಗೂ ಕಬ್ಬಿನಾಲೆ ಕುಚ್ಚಾರು ನರಸಿಂಹ ಹೆಬ್ಟಾರ್‌ ಶಾಲೆಗೆ ಜಾಗವನ್ನು ದಾನವಾಗಿ ನೀಡಿದ್ದರು. ಶಾಲೆ ಆರಂಭವಾದ ದಿನಗಳಲ್ಲಿ ಮುಟ್ಲುಪಾಡಿ, ಮುನಿಯಾಲು, ವರಂಗ, ಕಾಡುಹೊಳೆ, ಪಡುಕುಡೂರು, ಎಳ್ಳಾರೆ, ಗ್ರಾಮಗಳಿಂದ ವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದರು. ಈಗ ಈ ವ್ಯಾಪ್ತಿಯಲ್ಲಿ ಇತರ 7
ಶಾಲೆಗಳು ಆರಂಭಗೊಂಡಿದ್ದರೂ ಸಹ ದಾಖಲೆ ಪ್ರಮಾಣದಲ್ಲಿ ಇಂದಿಗೂ ಶಾಲೆಯಲ್ಲಿ ವಿದ್ಯಾರ್ಥಿಗಳಿದ್ದಾರೆ.

ಸಾಧಕ ಹಳೆ ವಿದ್ಯಾರ್ಥಿಗಳು
ಈ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಉನ್ನತ ಹುದ್ದೆಯಲ್ಲಿದ್ದು ಶಾಲೆಯ ಹೆಸರನ್ನು ಅಜರಾಮರಗೊಳಿಸಿದ್ದಾರೆ. ಇಲ್ಲಿನ ಹಳೆ ವಿದ್ಯಾರ್ಥಿಗಳಾದ ಎಳ್ಳಾರೆ ಸದಾಶಿವ ಪ್ರಭು ಅವರು ಉಡುಪಿ ಜಿಲ್ಲೆ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಚ್ಚಿದಾನಂದ ನಾಯಕ್‌ ಕಾಡುಹೊಳೆಯವರು ಭಾರತೀಯ ಸೇನೆಯಲ್ಲಿ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೃಷ್ಣಮೂರ್ತಿಯವರು ಆದಾಯ ತೆರಿಗೆ ಇಲಾಖೆಯ ಅಧಿಕಾರಿಯಾಗಿದ್ದಾರೆ. ಡಾ| ವಿಜಯ ಭಾನು ಶೆಟ್ಟಿ ಮಣಿಪಾಲದಲ್ಲಿ ಮುನಿಯಾಲು ಆಯುರ್ವೇದಿಕ್‌ ಸಂಸ್ಥೆ ಮುನ್ನಡೆಸುತ್ತಿದ್ದಾರೆ. ಅಲ್ಲದೆ ಹಲವಾರು ಮಂದಿ ಡಾಕ್ಟರ್, ಇಂಜಿನಿಯರ್, ನೂರಾರು ಮಂದಿ ಶಿಕ್ಷಕರಾಗಿ, ಹಲವಾರು ಮಂದಿ ಬ್ಯಾಂಕ್‌ ಉದ್ಯೋಗಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಹಳಷ್ಟು ಮಂದಿ ಖ್ಯಾತ ಉದ್ಯಮಿಗಳು, ಗುತ್ತಿಗೆದಾರರಾಗಿದ್ದಾರೆ.

2017ರಲ್ಲಿ ಶತಮಾನೋತ್ಸವ ಆಚರಣೆ
ಶಾಲೆಯು 2017ನೇ ಸಾಲಿನಲ್ಲಿ ಶತಮಾನೋತ್ಸವ ವನ್ನು ಹಳೆ ವಿದ್ಯಾರ್ಥಿ ಎಂ. ದಿನೇಶ್‌ ಪೈ ಅವರ ಅಧ್ಯಕ್ಷತೆಯಲ್ಲಿ ಆಚರಿಸಿದ್ದು ಈ ಸಂದರ್ಭ ದಾನಿಗಳ ಸಹಕಾರದಿಂದ ರಂಗಮಂದಿರ, ಸ್ವಾಗತ ಕಮಾನು, ಧ್ವಜಸ್ತಂಭ ಹಾಗೂ ಶಾಲೆಗೆ ಅಗತ್ಯವಿರುವ ಮೂಲ ಸೌಕರ್ಯ ಒದಗಿಸಿಕೊಳ್ಳಲಾಗಿದೆ. ಕುಡಿಯುವ ನೀರಿನ ವ್ಯವಸ್ಥೆ ಶಾಲೆ ಒಳಗೊಂಡಿದ್ದು ವಾಚನಾಲಯ, ಕ್ರೀಡಾ ಉಪಕರಣಗಳು ಇವೆ. ಭಾರತ ಸೇವಾದಳ, ಗೈಡ್ಸ್‌, ಯೋಗಾಭ್ಯಾಸ, ಇಂಗ್ಲಿಷ್‌ ನ್ಪೋಕನ್‌ ತರಗತಿಗಳನ್ನು ನಡೆಸಲಾಗುತ್ತಿದೆ.

ಪ್ರಸ್ತುತ 389 ವಿದ್ಯಾರ್ಥಿಗಳು
ಆರಂಭದ ವರ್ಷಗಳಲ್ಲಿ ಶಾಲೆಯ ಮುಖ್ಯ ಶಿಕ್ಷಕರಾಗಿ ಬೊಗ್ಗು ಶೆಟ್ಟಿ ಅಂಡಾರು ಸೇವೆ ಸಲ್ಲಿಸಿದ್ದರು. ಪ್ರಸ್ತುತ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ಆಗಿ ಪರಿವರ್ತನೆಗೊಂಡಿದ್ದು ಶಾಲೆ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಒಳಗೊಂಡಿದೆ. ಪ್ರಸ್ತುತ ಶಾಲೆಯಲ್ಲಿ 1 ರಿಂದ 7ನೇ ತರಗತಿವರೆಗೆ 290 ವಿದ್ಯಾರ್ಥಿಗಳಿದ್ದು ಎಲ್‌ಕೆಜಿ, ಯುಕೆಜಿಯಲ್ಲಿ  99 ವಿದ್ಯಾರ್ಥಿಗಳು ವಿದ್ಯಾರ್ಜನೆ ನಡೆಸುತ್ತಿದ್ದು ಶಾಲೆಯಲ್ಲಿ ಒಟ್ಟು 389 ವಿದ್ಯಾರ್ಥಿಗಳಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕಿಯಾಗಿ ಸುಭಾಷಿಣಿ ಕಾರ್ಯನಿರ್ವಹಿಸುತ್ತಿದ್ದು ಸಹಶಿಕ್ಷಕರು 7, ಅತಿಥಿ ಶಿಕ್ಷಕರು 2, ಎಲ್‌ಕೆಜಿ, ಯುಕೆಜಿಗೆ 3 ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ. ಶಾಲೆಯು ಸುಮಾರು 2 ಎಕ್ರೆ ಜಾಗವನ್ನು ಒಳಗೊಂಡಿದೆ.

ಮುನಿಯಾಲು ಸರಕಾರಿ ಹಿ.ಪ್ರಾ. ಶಾಲೆಯು ಗ್ರಾಮಸ್ಥರ, ದಾನಿಗಳ ಸಹಕಾರದೊಂದಿಗೆ ಶತಮಾನ ಕಂಡು ಪ್ರಗತಿಪಥದಲ್ಲಿ ಮುನ್ನಡೆಯುತ್ತಿದೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ನಿರಂತರ ಶ್ರಮಿಸಲಾಗುತ್ತಿದೆ. -ಸುಭಾಷಿಣಿ ಹೆಗ್ಡೆ, , ಪ್ರಭಾರ ಮುಖ್ಯ ಶಿಕ್ಷಕಿ, ಸ.ಹಿ.ಪ್ರಾ. ಶಾಲೆ ಮುನಿಯಾಲು

ಶಾಲೆ ಹಾಗೂ ದೇವಸ್ಥಾನ ಗ್ರಾಮದ ಕಣ್ಣುಗಳಿದ್ದಂತೆ. ಶಿಕ್ಷಣ ಸಂಸ್ಥೆಗಳಿಗೆ ಎಷ್ಟೇ ದಾನ ನೀಡಿದರೂ ಕಡಿಮೆಯೇ. ಮುನಿಯಾಲು ಪರಿಸರದಲ್ಲಿ ಶಿಕ್ಷಣ ವಂಚಿತರಾಗುತ್ತಿರುವ ಮಕ್ಕಳನ್ನು ಮನಗಂಡು ಹಿರಿಯರು ಶಾಲೆ ಆರಂಭಿಸಿದ್ದರು. ಗುಣಮಟ್ಟದ ಶಿಕ್ಷಣದಿಂದಾಗಿ ಶಾಲೆಯು ಇಂದಿಗೂ ಪ್ರಗತಿಪಥದಲ್ಲಿ ಮುನ್ನಡೆಯುತ್ತಿದೆ.
-ಎಂ. ಶ್ರೀಧರ ಪೈ, ನಿವೃತ್ತ ಬ್ಯಾಂಕ್‌ ಉದ್ಯೋಗಿ

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEW-SCHOOL

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜಿಲ್ಲೆಯ ಮೊದಲ ಕ್ರಿಶ್ಚಿಯನ್‌ ಪ್ರೌಢಶಾಲೆಗೆ 121ರ ಸಂಭ್ರಮ

430514561342IMG-20191203-WA0023

ಅನಂತೇಶ್ವರ ದೇಗುಲದ ಪೌಳಿಯಲ್ಲಿ ಪ್ರಾರಂಭವಾದ ಶಾಲೆಗೆ 128ರ ಸಂಭ್ರಮ

sx-22

ಸ್ವಾತಂತ್ರ್ಯಹೋರಾಟಗಾರರನ್ನು ನೀಡಿದ ಶಾಲೆಗೆ 111 ವರ್ಷಗಳ ಸಂಭ್ರಮ

ds-24

112 ವರ್ಷ ಕಂಡಿರುವ ಮೂಡುಬಿದಿರೆಯ ಡಿ.ಜೆ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

ds-35

ಮನೆಯ ಚಾವಡಿಯಲ್ಲಿ ಪ್ರಾರಂಭಗೊಂಡಿದ್ದ ಶಾಲೆಗೆ 105ರ ಸಂಭ್ರಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.