ಖಾಸಗಿ ಆಸ್ಪತ್ರೆಗೆ ಬರಲ್ಲ : 108 ಆ್ಯಂಬುಲೆನ್ಸ್ ಸಿಬಂದಿ ನಿರಾಕರಣೆ
Team Udayavani, Jul 3, 2018, 8:53 AM IST
ಉಡುಪಿ: ತುರ್ತು ಸಂದರ್ಭಗಳಲ್ಲಿ 108 ಆರೋಗ್ಯ ಕವಚ ಆ್ಯಂಬುಲೆನ್ಸ್ ಸೇವೆಗೆ ಲಭ್ಯವಾಗದೆ ಇರುವ ಕುರಿತು ಸಾರ್ವಜನಿಕರಿಂದ ಆಕ್ಷೇಪಗಳು ಕೇಳಿಬಂದಿವೆ. ಸಂಬಂಧಿಕರು ಸೂಚಿಸಿದ ಆಸ್ಪತ್ರೆಗೆ ರೋಗಿಯನ್ನು ಸಾಗಿಸಲು ತುರ್ತು ಸೇವೆ ನಿರಾಕರಿಸುತ್ತಿದ್ದು, ಆಕ್ಷೇಪ ವ್ಯಕ್ತಪಡಿಸಿದರೆ ಆ್ಯಂಬುಲೆನ್ಸ್ ಸಿಬಂದಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಜಿಲ್ಲಾಸ್ಪತ್ರೆ ವರೆಗೂ 24×7 ವೈದ್ಯಕೀಯ ಸೇವೆ ನೀಡಲು ಮೂಲ ಸೌಕರ್ಯಗಳಿಲ್ಲ. ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆಗೆ ಹೋಗಲು ಸೂಚಿಸಿದಾಗ ಆ್ಯಂಬುಲೆನ್ಸ್ಗೆ ಕರೆ ಮಾಡಿದರೆ ಸೂಕ್ತ ಪ್ರತಿಕ್ರಿಯೆ ಸಿಗುವುದಿಲ್ಲ. ಖಾಸಗಿ ಆಸ್ಪತ್ರೆಗೆ ದಾಖಲಿಸಲು ನಿರಾಕರಿಸುತ್ತಾರೆ ಎನ್ನಲಾಗುತ್ತಿದೆ.
ಬಡವರಿಗೂ ಸಿಗದ ಆ್ಯಂಬುಲೆನ್ಸ್
ಖಾಸಗಿ ಆ್ಯಂಬುಲೆನ್ಸ್ ಸೇವೆ ದುಬಾರಿ. ತುರ್ತು ಚಿಕಿತ್ಸೆಗೆ ಸೌಲಭ್ಯ ಇರುವುದಿಲ್ಲ. ಆಕ್ಸಿಜನ್ ಪೂರೈಕೆ ಇಲ್ಲದೆ ಎಷ್ಟೋ ರೋಗಿಗಳು ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. 108 ಆ್ಯಂಬುಲೆನ್ಸ್ ಸೇವೆ ಗಗನ ಕುಸುಮವಾಗಿದೆ.
ಲೋಕಾಯುಕ್ತರ ಗಮನಕ್ಕೆ
ಉಡುಪಿಗೆ ಬಂದಿದ್ದ ಲೋಕಾಯುಕ್ತ ಜ| ವಿಶ್ವನಾಥ ಶೆಟ್ಟಿ ಅವರಿಗೆ ಈ ಅವ್ಯವಸ್ಥೆ ಕುರಿತು ವಿಶು ಶೆಟ್ಟಿ ಅಂಬಲಪಾಡಿ ದೂರು ನೀಡಿದ್ದರು. ಜಿಲ್ಲಾಧಿಕಾರಿಗೂ ದೂರು ಸಲ್ಲಿಸಿದ್ದಾರೆ. ಸಿಬಂದಿ ನಿರ್ಲಕ್ಷ್ಯದಿಂದ 108 ಆರೋಗ್ಯ ಕವಚ ಸಾರ್ವಜನಿಕ ಸೇವೆಗೆ ಲಭ್ಯವಾಗದೆ ಇರುವ ಕುರಿತು ವಿವರಿಸಿ, ಕ್ರಮಕ್ಕೆ ಆಗ್ರಹಿಸಿದ್ದಾರೆ.
ಡಿಎಚ್ಓ ಹೇಳಿಕೆ
ತುರ್ತು ಆರೋಗ್ಯ ತಂತ್ರಜ್ಞರು (ಇಎಂಟಿ) ಇಲ್ಲದಿರುವಾಗ, ವಾಹನ ದುರಸ್ತಿ ಅಥವಾ ಬೇರೆ ಸೇವೆಯಲ್ಲಿ ರುವಾಗ 108 ಆರೋಗ್ಯ ಕವಚ ಸೇವೆ ಲಭ್ಯವಾಗುತ್ತಿಲ್ಲ. ಖಾಸಗಿ ಆಸ್ಪತ್ರೆಗಳಿಗೆ ರೋಗಿಗೆ ತೆರಳಲು ಕಡ್ಡಾಯವಾಗಿ ವ್ಯವಸ್ಥೆ ಮಾಡಬೇಕೆನ್ನುವ ಸೂಚನೆಯನ್ನು ಈ ಹಿಂದೆಯೇ ನೀಡಿದ್ದೇನೆ ಎಂದು ಡಿಎಚ್ಒ ಡಾ| ರೋಹಿಣಿ ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ