ಉಡುಪಿ ಜಿಲ್ಲೆಯಲ್ಲಿಂದು 11 ಜನರಿಗೆ ಕೋವಿಡ್-19 ಸೋಂಕು ದೃಢ, ಓರ್ವ ಸಾವು
ಮುಂಬಯಿಂದ ಆಗಮಿಸಿ ತೆಕ್ಕಟ್ಟೆಯಲ್ಲಿ ಮೃತಪಟ್ಟಿದ್ದ ವ್ಯಕ್ತಿಯಲ್ಲಿ ದೃಢಪಟ್ಟ ಕೋವಿಡ್ ಸೋಂಕು
Team Udayavani, Jun 19, 2020, 6:07 PM IST
ಉಡುಪಿ: ಜಿಲ್ಲೆಯಲ್ಲಿಂದು 11 ಜನರಿಗೆ ಕೋವಿಡ್ -19 ಸೋಂಕು ದೃಢವಾಗಿದ್ದು, ಸೋಂಕಿನ ಕಾರಣದಿಂದ ಓರ್ವರು ಸಾವನ್ನಪ್ಪಿದ್ದಾರೆ.
ಮುಂಬೈನಿಂದ ಬಂದ ವ್ಯಕ್ತಿ ಸಾವನ್ನಪ್ಪಿದ್ದು, ನಂತರ ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ.
ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್-19 ಕಾರಣದಿಂದ ಎರಡನೇ ಬಲಿಯಾಗಿದ್ದರೆ, ಒಟ್ಟು ಸೋಂಕಿತರ ಸಂಖ್ಯೆ 1050ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ 13,227 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಅದರಲ್ಲಿ 1050 ಜನರಿಗೆ ಕೋವಿಡ್-19 ಪಾಸಿಟಿವ್ ವರದಿಯಾಗಿದೆ.
ಒಟ್ಟು 11,946 ಜನರ ಗಂಟಲು ದ್ರವ ಪರೀಕ್ಷೆಯಲ್ಲಿ ನೆಗೆಟಿವ್ ಎಂದು ವರದಿಯಾಗಿದೆ. ಇನ್ನೂ 231 ಜನರ ವರದಿ ಜಿಲ್ಲಾಡಳಿತರ ಕೈಸೇರಲು ಬಾಕಿಯಿದೆ.
ಇದನ್ನೂ ಓದಿ: ಮುಂಬಯಿನಿಂದ ಆಗಮಿಸಿದ ವ್ಯಕ್ತಿ ತೆಕ್ಕಟ್ಟೆಯಲ್ಲಿ ಸಾವು : ಪರಿಸರದಲ್ಲಿ ಮನೆ ಮಾಡಿದ ಆತಂಕ
ಮುಂಬೈನಿಂದ ಬಂದ ವ್ಯಕ್ತಿ ಸಾವು: ಮಹಾರಾಷ್ಟ್ರದ ಮುಂಬೈನಿಂದ ಜಿಲ್ಲೆಯ ತೆಕ್ಕಟ್ಟೆ ಗ್ರಾಮಕ್ಕೆ ಗುರುವಾರ ಮಧ್ಯಾಹ್ನ 2.30ರ ಸುಮಾರಿಗೆ ನಾಲ್ವರು ಆಗಮಿಸಿದ್ದರು. ಅಧಿಕಾರಿಗಳು ಅವರ ಥರ್ಮಲ್ ಟೆಸ್ಟ್ ನಡೆಸಿ ಹೋಂ ಕ್ವಾರಂಟೈನ್ ಗೆ ಕಳುಹಿಸಿದ್ದರು.
ಆದರೆ ಸಂಜೆ ಐದು ಗಂಟೆಗೆ ವ್ಯಕ್ತಿ ಸಾವನ್ನಪ್ಪಿದ್ದರು. ಅವರ ಕೋವಿಡ್-19 ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಪಾಸಿಟಿವ್ ವರದಿಯಾಗಿದೆ. ಈ ಮೂಲಕ ಕೋವಿಡ್ ಸೋಂಕಿಗೆ ಜಿಲ್ಲೆಯಲ್ಲಿ ಎರಡನೇ ಬಲಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ