15ನೇ ಹಣಕಾಸು ಆಯೋಗ: ನಿಗದಿಯಾಗಿದ್ದ ಬಹುಪಾಲು ಅನುದಾನ ಬಿಡುಗಡೆ


Team Udayavani, Jan 30, 2023, 6:40 AM IST

15ನೇ ಹಣಕಾಸು ಆಯೋಗ: ನಿಗದಿಯಾಗಿದ್ದ ಬಹುಪಾಲು ಅನುದಾನ ಬಿಡುಗಡೆ

ಉಡುಪಿ : ಉಭಯ ಜಿಲ್ಲೆಯ ಗ್ರಾಮ ಪಂಚಾಯತ್‌ಗಳಿಗೆ 2021-22ನೇ ಸಾಲಿನಲ್ಲಿ 15ನೇ ಹಣಕಾಸು ಆಯೋಗದಿಂದ ನಿಗದಿಪಡಿಸಲಾಗಿರುವ ಬಹುಪಾಲು ಅನುದಾನ ಬಿಡುಗಡೆಯಾಗಿದ್ದು, ನಿರ್ದಿಷ್ಟ ಉದ್ದೇಶಕ್ಕೆ ಬಳಕೆಯೂ ಆಗುತ್ತಿದೆ.

2022-23ನೇ ಸಾಲಿಗೆ ಈಗಾಗಲೇ ಕ್ರಿಯಾಯೋಜನೆ ಸಿದ್ಧಪಡಿಸಿ ಕಳುಹಿಸಲಾಗಿದ್ದು, ಆಯೋಗದಿಂದ ಅನುದಾನ ಹಂಚಿಕೆಯ ಆಧಾರದಲ್ಲಿ ನೇರವಾಗಿ ಗ್ರಾ.ಪಂ.ಗಳಿಗೆ ಹಣ ಬರಲಿದೆ. ಇದರಲ್ಲಿ ಜಿ.ಪಂ. ಹಾಗೂ ತಾ.ಪಂ. ಪಾಲನ್ನು ಸರಕಾರವೇ ಪ್ರತ್ಯೇಕಿಸಲಿದೆ.

ದ.ಕ.ದಲ್ಲಿ ಪೂರ್ಣ ಬಳಕೆ
ದ.ಕ. ಜಿಲ್ಲೆಯ 223 ಗ್ರಾ.ಪಂ.ಗಳಿಗೆ 15ನೇ ಹಣಕಾಸು ಆಯೋಗದಿಂದ 2021-22ನೇ ಸಾಲಿಗೆ 67.65 ಕೋ.ರೂ.ಗಳ ಅನುದಾನ ನಿಗದಿಪಡಿಸಿ, ಪೂರ್ಣ ಪ್ರಮಾಣದಲ್ಲಿ ಬಿಡುಗಡೆಯನ್ನು ಮಾಡಲಾಗಿದೆ. ಉಡುಪಿ ಜಿಲ್ಲೆಯ 155 ಗ್ರಾ.ಪಂ.ಗಳಿಗೆ ನಿಗದಿ ಪಡಿಸಿದ್ದ 50.17 ಕೋ.ರೂ.ಗಳಲ್ಲಿ 46.24 ಕೋ.ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ದ.ಕ. ಜಿಲ್ಲೆಯಲ್ಲಿ ಹಂಚಿಕೆಯಾಗಿರುವ ಅನು ದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳಲಾಗಿದೆ. ಉಡುಪಿ ಜಿಲ್ಲೆಗೆ ಇನ್ನು ಅನುದಾನ ಬರಬೇಕಿದೆ. ಹಾಗೆಯೇ ರಾಜ್ಯ ಸರಕಾರ ಶಾಸನಬದ್ಧ ಅನುದಾನದಡಿ ಉಡುಪಿ ಜಿಲ್ಲೆಗೆ 23.45 ಕೋ.ರೂ.ಗೂ ಅಧಿಕ ಹಾಗೂ ದ. ಕ. ಜಿಲ್ಲೆಗೆ 33.77 ಕೋ.ರೂ. ಗೂ ಅಧಿಕ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಕ್ರಿಯಾಯೋಜನೆ
ಪ್ರತಿ ವರ್ಷವೂ ಗ್ರಾ. ಪಂ.ನಿಂದ ಹಣಕಾಸು ಆಯೋಗದ ಅನುದಾನಕ್ಕೆ ಕ್ರಿಯಾಯೋಜನೆ ಸಿದ್ಧಪಡಿಸಿ ಕಳುಹಿಸಬೇಕು. ಆರ್ಥಿಕ ವರ್ಷದ ಆರಂಭದಲ್ಲಿ ಕ್ರಿಯಾಯೋಜನೆಯ ಅನುಸಾರ ಆಯಾ ಗ್ರಾ.ಪಂ.ಗಳಿಗೆ ನೇರವಾಗಿ ಅನುದಾನ ಬಿಡುಗಡೆ ಮಾಡಲಾಗುತ್ತದೆ. ಸರಕಾರದಿಂದ ಗ್ರಾ.ಪಂ., ತಾ.ಪಂ. ಹಾಗೂ ಜಿ.ಪಂಗಳಿಗೆ ಪ್ರತ್ಯೇಕವಾಗಿ ಅನುದಾನವನ್ನು ಮೀಸಲಿಟ್ಟು ಬಿಡುಗಡೆ ಮಾಡಲಾಗುತ್ತದೆ. ಕ್ರಿಯಾಯೋಜನೆಯಲ್ಲಿ ಸೂಚಿಸಿರುವಂತೆ ಅನುದಾನದ ಬಳಕೆಯನ್ನು ಮಾಡಬೇಕಾಗುತ್ತದೆ.

ಬಳಕೆ ಹೇಗೆ?
ಮೀಸಲಿಟ್ಟಿರುವ ಒಟ್ಟು ಅನುದಾನದ ಶೇ.40ರಷ್ಟು ಮೂಲ ಅನುದಾನದ ರೂಪದಲ್ಲಿ ಶೇ.60ರಷ್ಟು ನಿರ್ಬಂದಿತ ಅನುದಾನವಾಗಿ ಪರಿಗಣಿಸಲಾಗುತ್ತದೆ. ಮೂಲ ಅನುದಾನವನ್ನು ಕಚೇರಿ ವೆಚ್ಚ ಅಥವಾ ಸಂಬಳ ಪಾವತಿ ಇತ್ಯಾದಿಗಳಿಗೆ ಬಳಸಲು ಅವಕಾಶ ಇರುವುದಿಲ್ಲ. ಶೇ.60ರಷ್ಟು ಅನುದಾನವನ್ನು ನೈರ್ಮಲ್ಯತೆಗೆ ಆದ್ಯತೆ ನೀಡಿ, ಬಯಲು ಬಹಿರ್ದೆಸೆ ಮುಕ್ತಗೊಳಿಸುವ ನಿಟ್ಟಿನಲ್ಲಿ ಕ್ರಮ ವಹಿಸಲು ಬಳಕೆ ಮಾಡಲಾಗುತ್ತದೆ. ಕುಡಿಯುವ ನೀರು ಸರಬರಾಜು, ಮಳೆ ನೀರ ಕೊಯ್ಲು ಮತ್ತು ಮಳೆ ನೀರ ಮರುಬಳಕೆ ಉದ್ದೇಶದಿಂದ ಈ ಅನುದಾನ ಬಳಸಲಾಗುತ್ತದೆ. ಶೇ.60ರಷ್ಟು ಅನುದಾನದಲ್ಲಿ ನಿರ್ದಿಷ್ಟ ಪ್ರಮಾಣವನ್ನು ಕಡ್ಡಾಯವಾಗಿ ಕುಡಿಯುವ ನೀರು ಪೂರೈಕೆಗೆ ಮೀಸಲಿಡಲೇಬೇಕು.

ನೇರ ಗ್ರಾ.ಪಂ.ಗೆ
15ನೇ ಹಣಕಾಸು ಆಯೋಗದಿಂದ ನಿಗದಿಪಡಿಸಿರುವ ಅನುದಾನದಲ್ಲಿ ಬಹುಪಾಲು ಬಂದಿದೆ. ಈ ಅನುದಾನವು ನೇರವಾಗಿ ಆಯಾ ಗ್ರಾ.ಪಂ.ಗಳಿಗೆ ತಲುಪಲಿದೆ. ನಿರ್ದಿಷ್ಟ ಮಾರ್ಗಸೂಚಿಯಂತೆ ಆಯಾ ಉದ್ದೇಶಕ್ಕೆ ಗ್ರಾ. ಪಂ.ಗಳಲ್ಲಿ ಬಳಕೆ ಮಾಡಿಕೊಳ್ಳಲಾಗುತ್ತಿದೆ.
– ಪ್ರಸನ್ನ ಎಚ್‌., ಸಿಇಒ, ಜಿ.ಪಂ. ಉಡುಪಿ

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.