15ನೇ ಹಣಕಾಸು ಆಯೋಗ: ನಿಗದಿಯಾಗಿದ್ದ ಬಹುಪಾಲು ಅನುದಾನ ಬಿಡುಗಡೆ


Team Udayavani, Jan 30, 2023, 6:40 AM IST

15ನೇ ಹಣಕಾಸು ಆಯೋಗ: ನಿಗದಿಯಾಗಿದ್ದ ಬಹುಪಾಲು ಅನುದಾನ ಬಿಡುಗಡೆ

ಉಡುಪಿ : ಉಭಯ ಜಿಲ್ಲೆಯ ಗ್ರಾಮ ಪಂಚಾಯತ್‌ಗಳಿಗೆ 2021-22ನೇ ಸಾಲಿನಲ್ಲಿ 15ನೇ ಹಣಕಾಸು ಆಯೋಗದಿಂದ ನಿಗದಿಪಡಿಸಲಾಗಿರುವ ಬಹುಪಾಲು ಅನುದಾನ ಬಿಡುಗಡೆಯಾಗಿದ್ದು, ನಿರ್ದಿಷ್ಟ ಉದ್ದೇಶಕ್ಕೆ ಬಳಕೆಯೂ ಆಗುತ್ತಿದೆ.

2022-23ನೇ ಸಾಲಿಗೆ ಈಗಾಗಲೇ ಕ್ರಿಯಾಯೋಜನೆ ಸಿದ್ಧಪಡಿಸಿ ಕಳುಹಿಸಲಾಗಿದ್ದು, ಆಯೋಗದಿಂದ ಅನುದಾನ ಹಂಚಿಕೆಯ ಆಧಾರದಲ್ಲಿ ನೇರವಾಗಿ ಗ್ರಾ.ಪಂ.ಗಳಿಗೆ ಹಣ ಬರಲಿದೆ. ಇದರಲ್ಲಿ ಜಿ.ಪಂ. ಹಾಗೂ ತಾ.ಪಂ. ಪಾಲನ್ನು ಸರಕಾರವೇ ಪ್ರತ್ಯೇಕಿಸಲಿದೆ.

ದ.ಕ.ದಲ್ಲಿ ಪೂರ್ಣ ಬಳಕೆ
ದ.ಕ. ಜಿಲ್ಲೆಯ 223 ಗ್ರಾ.ಪಂ.ಗಳಿಗೆ 15ನೇ ಹಣಕಾಸು ಆಯೋಗದಿಂದ 2021-22ನೇ ಸಾಲಿಗೆ 67.65 ಕೋ.ರೂ.ಗಳ ಅನುದಾನ ನಿಗದಿಪಡಿಸಿ, ಪೂರ್ಣ ಪ್ರಮಾಣದಲ್ಲಿ ಬಿಡುಗಡೆಯನ್ನು ಮಾಡಲಾಗಿದೆ. ಉಡುಪಿ ಜಿಲ್ಲೆಯ 155 ಗ್ರಾ.ಪಂ.ಗಳಿಗೆ ನಿಗದಿ ಪಡಿಸಿದ್ದ 50.17 ಕೋ.ರೂ.ಗಳಲ್ಲಿ 46.24 ಕೋ.ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ದ.ಕ. ಜಿಲ್ಲೆಯಲ್ಲಿ ಹಂಚಿಕೆಯಾಗಿರುವ ಅನು ದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳಲಾಗಿದೆ. ಉಡುಪಿ ಜಿಲ್ಲೆಗೆ ಇನ್ನು ಅನುದಾನ ಬರಬೇಕಿದೆ. ಹಾಗೆಯೇ ರಾಜ್ಯ ಸರಕಾರ ಶಾಸನಬದ್ಧ ಅನುದಾನದಡಿ ಉಡುಪಿ ಜಿಲ್ಲೆಗೆ 23.45 ಕೋ.ರೂ.ಗೂ ಅಧಿಕ ಹಾಗೂ ದ. ಕ. ಜಿಲ್ಲೆಗೆ 33.77 ಕೋ.ರೂ. ಗೂ ಅಧಿಕ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಕ್ರಿಯಾಯೋಜನೆ
ಪ್ರತಿ ವರ್ಷವೂ ಗ್ರಾ. ಪಂ.ನಿಂದ ಹಣಕಾಸು ಆಯೋಗದ ಅನುದಾನಕ್ಕೆ ಕ್ರಿಯಾಯೋಜನೆ ಸಿದ್ಧಪಡಿಸಿ ಕಳುಹಿಸಬೇಕು. ಆರ್ಥಿಕ ವರ್ಷದ ಆರಂಭದಲ್ಲಿ ಕ್ರಿಯಾಯೋಜನೆಯ ಅನುಸಾರ ಆಯಾ ಗ್ರಾ.ಪಂ.ಗಳಿಗೆ ನೇರವಾಗಿ ಅನುದಾನ ಬಿಡುಗಡೆ ಮಾಡಲಾಗುತ್ತದೆ. ಸರಕಾರದಿಂದ ಗ್ರಾ.ಪಂ., ತಾ.ಪಂ. ಹಾಗೂ ಜಿ.ಪಂಗಳಿಗೆ ಪ್ರತ್ಯೇಕವಾಗಿ ಅನುದಾನವನ್ನು ಮೀಸಲಿಟ್ಟು ಬಿಡುಗಡೆ ಮಾಡಲಾಗುತ್ತದೆ. ಕ್ರಿಯಾಯೋಜನೆಯಲ್ಲಿ ಸೂಚಿಸಿರುವಂತೆ ಅನುದಾನದ ಬಳಕೆಯನ್ನು ಮಾಡಬೇಕಾಗುತ್ತದೆ.

ಬಳಕೆ ಹೇಗೆ?
ಮೀಸಲಿಟ್ಟಿರುವ ಒಟ್ಟು ಅನುದಾನದ ಶೇ.40ರಷ್ಟು ಮೂಲ ಅನುದಾನದ ರೂಪದಲ್ಲಿ ಶೇ.60ರಷ್ಟು ನಿರ್ಬಂದಿತ ಅನುದಾನವಾಗಿ ಪರಿಗಣಿಸಲಾಗುತ್ತದೆ. ಮೂಲ ಅನುದಾನವನ್ನು ಕಚೇರಿ ವೆಚ್ಚ ಅಥವಾ ಸಂಬಳ ಪಾವತಿ ಇತ್ಯಾದಿಗಳಿಗೆ ಬಳಸಲು ಅವಕಾಶ ಇರುವುದಿಲ್ಲ. ಶೇ.60ರಷ್ಟು ಅನುದಾನವನ್ನು ನೈರ್ಮಲ್ಯತೆಗೆ ಆದ್ಯತೆ ನೀಡಿ, ಬಯಲು ಬಹಿರ್ದೆಸೆ ಮುಕ್ತಗೊಳಿಸುವ ನಿಟ್ಟಿನಲ್ಲಿ ಕ್ರಮ ವಹಿಸಲು ಬಳಕೆ ಮಾಡಲಾಗುತ್ತದೆ. ಕುಡಿಯುವ ನೀರು ಸರಬರಾಜು, ಮಳೆ ನೀರ ಕೊಯ್ಲು ಮತ್ತು ಮಳೆ ನೀರ ಮರುಬಳಕೆ ಉದ್ದೇಶದಿಂದ ಈ ಅನುದಾನ ಬಳಸಲಾಗುತ್ತದೆ. ಶೇ.60ರಷ್ಟು ಅನುದಾನದಲ್ಲಿ ನಿರ್ದಿಷ್ಟ ಪ್ರಮಾಣವನ್ನು ಕಡ್ಡಾಯವಾಗಿ ಕುಡಿಯುವ ನೀರು ಪೂರೈಕೆಗೆ ಮೀಸಲಿಡಲೇಬೇಕು.

ನೇರ ಗ್ರಾ.ಪಂ.ಗೆ
15ನೇ ಹಣಕಾಸು ಆಯೋಗದಿಂದ ನಿಗದಿಪಡಿಸಿರುವ ಅನುದಾನದಲ್ಲಿ ಬಹುಪಾಲು ಬಂದಿದೆ. ಈ ಅನುದಾನವು ನೇರವಾಗಿ ಆಯಾ ಗ್ರಾ.ಪಂ.ಗಳಿಗೆ ತಲುಪಲಿದೆ. ನಿರ್ದಿಷ್ಟ ಮಾರ್ಗಸೂಚಿಯಂತೆ ಆಯಾ ಉದ್ದೇಶಕ್ಕೆ ಗ್ರಾ. ಪಂ.ಗಳಲ್ಲಿ ಬಳಕೆ ಮಾಡಿಕೊಳ್ಳಲಾಗುತ್ತಿದೆ.
– ಪ್ರಸನ್ನ ಎಚ್‌., ಸಿಇಒ, ಜಿ.ಪಂ. ಉಡುಪಿ

ಟಾಪ್ ನ್ಯೂಸ್

tdy-8

ಗಂಗಾವತಿ: ದಾಖಲೆ ಇಲ್ಲದೇ 60 ಲಕ್ಷ ರೂ.ಸಾಗಾಟ; ನಗದು ಸಮೇತ ಕಾರು ವಶಕ್ಕೆ

Aram arvind swamy first look released

‘ಆರಾಮ್‌ ಅರವಿಂದ್‌ ಸ್ವಾಮಿ‘ ಫ‌ಸ್ಟ್‌ ಲುಕ್‌ ರಿಲೀಸ್‌

ಬಾತ್ ರೂಮ್‌ ನಲ್ಲಿ ಏಕಾಏಕಿ ಕುಸಿದು ಬಿದ್ದು ಖ್ಯಾತ ನಟಿ ನೀಲು ಕೊಹ್ಲಿ ಅವರ ಪತಿ ಮೃತ್ಯು

ಬಾತ್ ರೂಮ್‌ ನಲ್ಲಿ ಏಕಾಏಕಿ ಕುಸಿದು ಬಿದ್ದು ಖ್ಯಾತ ನಟಿ ನೀಲು ಕೊಹ್ಲಿ ಅವರ ಪತಿ ಮೃತ್ಯು

Health Article: ಒಂದು ಬಾಟಲ್ ಬಿಯರ್ ಕುಡಿದ್ರೆ ಆರೋಗ್ಯಕ್ಕೆ ಹಾನಿಯಾಗುವುದಿಲ್ಲವೇ?

Health: ಒಂದು ಬಾಟಲ್ ಬಿಯರ್/ 1 ಪೆಗ್ ಕುಡಿಯೋದರಿಂದ ಆರೋಗ್ಯದ ಮೇಲೆ ಬೀರುವ ಪರಿಣಾಮ ಗೊತ್ತಾ?

ಪ್ರಧಾನಿ ಮೋದಿ ಮತ್ತು ಬಿಜೆಪಿಯ ನಿರಂಕುಶಾಧಿಪತ್ಯ ಸಾಬೀತು: ಬಿ.ಕೆ. ಹರಿಪ್ರಸಾದ್

ಪ್ರಧಾನಿ ಮೋದಿ ಮತ್ತು ಬಿಜೆಪಿಯ ನಿರಂಕುಶಾಧಿಪತ್ಯ ಸಾಬೀತು: ಬಿ.ಕೆ. ಹರಿಪ್ರಸಾದ್

pentagon movie trailer

ಐದು ಕಥೆಗಳ ಸುತ್ತ ಪೆಂಟಗನ್; ಭರವಸೆ ಮೂಡಿಸಿದ ಟ್ರೇಲರ್

ಸನಾತನ ಸಂಸ್ಥೆ ನಿಷೇಧಿತ …ಸಂಘಟನೆ ಅಲ್ಲ: ಬಾಂಬೆ ಹೈಕೋರ್ಟ್, ಏನಿದು ಪ್ರಕರಣ?

ಸನಾತನ ಸಂಸ್ಥೆ ನಿಷೇಧಿತ …ಸಂಘಟನೆ ಅಲ್ಲ: ಬಾಂಬೆ ಹೈಕೋರ್ಟ್, ಏನಿದು ಪ್ರಕರಣ?



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸೆಸೆಲ್ಸಿ ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ 13,753 ವಿದ್ಯಾರ್ಥಿಗಳು

ಎಸೆಸೆಲ್ಸಿ ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ 13,753 ವಿದ್ಯಾರ್ಥಿಗಳು

ಭ್ರಷ್ಟಾಚಾರಕ್ಕೆ ಕಡಿವಾಣ: ಪ್ರಮೋದ್‌ ಮುತಾಲಿಕ್‌

ಭ್ರಷ್ಟಾಚಾರಕ್ಕೆ ಕಡಿವಾಣ: ಪ್ರಮೋದ್‌ ಮುತಾಲಿಕ್‌

ಉಡುಪಿ: ಕೆವೈಸಿ ಅಪ್‌ಡೇಟ್‌ ನೆಪದಲ್ಲಿ ವಂಚನೆ

ಉಡುಪಿ: ಕೆವೈಸಿ ಅಪ್‌ಡೇಟ್‌ ನೆಪದಲ್ಲಿ ವಂಚನೆ

1-wqewqwqe

ರಾಹುಲ್ ಗಾಂಧಿ ಅನರ್ಹತೆ ಪ್ರಜಾಪ್ರಭುತ್ವಕ್ಕೆ ಸಂದ ಗೌರವ: ಕುಯಿಲಾಡಿ ಸುರೇಶ್ ನಾಯಕ್

1-ewr-ew-rwer

ಪಳ್ಳಿ ಶ್ರೀ ಉಮಾಮಹೇಶ್ವರ- ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

tdy-8

ಗಂಗಾವತಿ: ದಾಖಲೆ ಇಲ್ಲದೇ 60 ಲಕ್ಷ ರೂ.ಸಾಗಾಟ; ನಗದು ಸಮೇತ ಕಾರು ವಶಕ್ಕೆ

Aram arvind swamy first look released

‘ಆರಾಮ್‌ ಅರವಿಂದ್‌ ಸ್ವಾಮಿ‘ ಫ‌ಸ್ಟ್‌ ಲುಕ್‌ ರಿಲೀಸ್‌

protest by State Farmers Union at Mangaluru

ಬೆಳೆ ಪರಿಹಾರ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ರಾಜ್ಯ ರೈತ ಸಂಘದಿಂದ ಧರಣಿ

ಬಾತ್ ರೂಮ್‌ ನಲ್ಲಿ ಏಕಾಏಕಿ ಕುಸಿದು ಬಿದ್ದು ಖ್ಯಾತ ನಟಿ ನೀಲು ಕೊಹ್ಲಿ ಅವರ ಪತಿ ಮೃತ್ಯು

ಬಾತ್ ರೂಮ್‌ ನಲ್ಲಿ ಏಕಾಏಕಿ ಕುಸಿದು ಬಿದ್ದು ಖ್ಯಾತ ನಟಿ ನೀಲು ಕೊಹ್ಲಿ ಅವರ ಪತಿ ಮೃತ್ಯು

Health Article: ಒಂದು ಬಾಟಲ್ ಬಿಯರ್ ಕುಡಿದ್ರೆ ಆರೋಗ್ಯಕ್ಕೆ ಹಾನಿಯಾಗುವುದಿಲ್ಲವೇ?

Health: ಒಂದು ಬಾಟಲ್ ಬಿಯರ್/ 1 ಪೆಗ್ ಕುಡಿಯೋದರಿಂದ ಆರೋಗ್ಯದ ಮೇಲೆ ಬೀರುವ ಪರಿಣಾಮ ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.