15ನೇ ಹಣಕಾಸು ಆಯೋಗ: ನಿಗದಿಯಾಗಿದ್ದ ಬಹುಪಾಲು ಅನುದಾನ ಬಿಡುಗಡೆ
Team Udayavani, Jan 30, 2023, 6:40 AM IST
ಉಡುಪಿ : ಉಭಯ ಜಿಲ್ಲೆಯ ಗ್ರಾಮ ಪಂಚಾಯತ್ಗಳಿಗೆ 2021-22ನೇ ಸಾಲಿನಲ್ಲಿ 15ನೇ ಹಣಕಾಸು ಆಯೋಗದಿಂದ ನಿಗದಿಪಡಿಸಲಾಗಿರುವ ಬಹುಪಾಲು ಅನುದಾನ ಬಿಡುಗಡೆಯಾಗಿದ್ದು, ನಿರ್ದಿಷ್ಟ ಉದ್ದೇಶಕ್ಕೆ ಬಳಕೆಯೂ ಆಗುತ್ತಿದೆ.
2022-23ನೇ ಸಾಲಿಗೆ ಈಗಾಗಲೇ ಕ್ರಿಯಾಯೋಜನೆ ಸಿದ್ಧಪಡಿಸಿ ಕಳುಹಿಸಲಾಗಿದ್ದು, ಆಯೋಗದಿಂದ ಅನುದಾನ ಹಂಚಿಕೆಯ ಆಧಾರದಲ್ಲಿ ನೇರವಾಗಿ ಗ್ರಾ.ಪಂ.ಗಳಿಗೆ ಹಣ ಬರಲಿದೆ. ಇದರಲ್ಲಿ ಜಿ.ಪಂ. ಹಾಗೂ ತಾ.ಪಂ. ಪಾಲನ್ನು ಸರಕಾರವೇ ಪ್ರತ್ಯೇಕಿಸಲಿದೆ.
ದ.ಕ.ದಲ್ಲಿ ಪೂರ್ಣ ಬಳಕೆ
ದ.ಕ. ಜಿಲ್ಲೆಯ 223 ಗ್ರಾ.ಪಂ.ಗಳಿಗೆ 15ನೇ ಹಣಕಾಸು ಆಯೋಗದಿಂದ 2021-22ನೇ ಸಾಲಿಗೆ 67.65 ಕೋ.ರೂ.ಗಳ ಅನುದಾನ ನಿಗದಿಪಡಿಸಿ, ಪೂರ್ಣ ಪ್ರಮಾಣದಲ್ಲಿ ಬಿಡುಗಡೆಯನ್ನು ಮಾಡಲಾಗಿದೆ. ಉಡುಪಿ ಜಿಲ್ಲೆಯ 155 ಗ್ರಾ.ಪಂ.ಗಳಿಗೆ ನಿಗದಿ ಪಡಿಸಿದ್ದ 50.17 ಕೋ.ರೂ.ಗಳಲ್ಲಿ 46.24 ಕೋ.ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ದ.ಕ. ಜಿಲ್ಲೆಯಲ್ಲಿ ಹಂಚಿಕೆಯಾಗಿರುವ ಅನು ದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳಲಾಗಿದೆ. ಉಡುಪಿ ಜಿಲ್ಲೆಗೆ ಇನ್ನು ಅನುದಾನ ಬರಬೇಕಿದೆ. ಹಾಗೆಯೇ ರಾಜ್ಯ ಸರಕಾರ ಶಾಸನಬದ್ಧ ಅನುದಾನದಡಿ ಉಡುಪಿ ಜಿಲ್ಲೆಗೆ 23.45 ಕೋ.ರೂ.ಗೂ ಅಧಿಕ ಹಾಗೂ ದ. ಕ. ಜಿಲ್ಲೆಗೆ 33.77 ಕೋ.ರೂ. ಗೂ ಅಧಿಕ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ಕ್ರಿಯಾಯೋಜನೆ
ಪ್ರತಿ ವರ್ಷವೂ ಗ್ರಾ. ಪಂ.ನಿಂದ ಹಣಕಾಸು ಆಯೋಗದ ಅನುದಾನಕ್ಕೆ ಕ್ರಿಯಾಯೋಜನೆ ಸಿದ್ಧಪಡಿಸಿ ಕಳುಹಿಸಬೇಕು. ಆರ್ಥಿಕ ವರ್ಷದ ಆರಂಭದಲ್ಲಿ ಕ್ರಿಯಾಯೋಜನೆಯ ಅನುಸಾರ ಆಯಾ ಗ್ರಾ.ಪಂ.ಗಳಿಗೆ ನೇರವಾಗಿ ಅನುದಾನ ಬಿಡುಗಡೆ ಮಾಡಲಾಗುತ್ತದೆ. ಸರಕಾರದಿಂದ ಗ್ರಾ.ಪಂ., ತಾ.ಪಂ. ಹಾಗೂ ಜಿ.ಪಂಗಳಿಗೆ ಪ್ರತ್ಯೇಕವಾಗಿ ಅನುದಾನವನ್ನು ಮೀಸಲಿಟ್ಟು ಬಿಡುಗಡೆ ಮಾಡಲಾಗುತ್ತದೆ. ಕ್ರಿಯಾಯೋಜನೆಯಲ್ಲಿ ಸೂಚಿಸಿರುವಂತೆ ಅನುದಾನದ ಬಳಕೆಯನ್ನು ಮಾಡಬೇಕಾಗುತ್ತದೆ.
ಬಳಕೆ ಹೇಗೆ?
ಮೀಸಲಿಟ್ಟಿರುವ ಒಟ್ಟು ಅನುದಾನದ ಶೇ.40ರಷ್ಟು ಮೂಲ ಅನುದಾನದ ರೂಪದಲ್ಲಿ ಶೇ.60ರಷ್ಟು ನಿರ್ಬಂದಿತ ಅನುದಾನವಾಗಿ ಪರಿಗಣಿಸಲಾಗುತ್ತದೆ. ಮೂಲ ಅನುದಾನವನ್ನು ಕಚೇರಿ ವೆಚ್ಚ ಅಥವಾ ಸಂಬಳ ಪಾವತಿ ಇತ್ಯಾದಿಗಳಿಗೆ ಬಳಸಲು ಅವಕಾಶ ಇರುವುದಿಲ್ಲ. ಶೇ.60ರಷ್ಟು ಅನುದಾನವನ್ನು ನೈರ್ಮಲ್ಯತೆಗೆ ಆದ್ಯತೆ ನೀಡಿ, ಬಯಲು ಬಹಿರ್ದೆಸೆ ಮುಕ್ತಗೊಳಿಸುವ ನಿಟ್ಟಿನಲ್ಲಿ ಕ್ರಮ ವಹಿಸಲು ಬಳಕೆ ಮಾಡಲಾಗುತ್ತದೆ. ಕುಡಿಯುವ ನೀರು ಸರಬರಾಜು, ಮಳೆ ನೀರ ಕೊಯ್ಲು ಮತ್ತು ಮಳೆ ನೀರ ಮರುಬಳಕೆ ಉದ್ದೇಶದಿಂದ ಈ ಅನುದಾನ ಬಳಸಲಾಗುತ್ತದೆ. ಶೇ.60ರಷ್ಟು ಅನುದಾನದಲ್ಲಿ ನಿರ್ದಿಷ್ಟ ಪ್ರಮಾಣವನ್ನು ಕಡ್ಡಾಯವಾಗಿ ಕುಡಿಯುವ ನೀರು ಪೂರೈಕೆಗೆ ಮೀಸಲಿಡಲೇಬೇಕು.
ನೇರ ಗ್ರಾ.ಪಂ.ಗೆ
15ನೇ ಹಣಕಾಸು ಆಯೋಗದಿಂದ ನಿಗದಿಪಡಿಸಿರುವ ಅನುದಾನದಲ್ಲಿ ಬಹುಪಾಲು ಬಂದಿದೆ. ಈ ಅನುದಾನವು ನೇರವಾಗಿ ಆಯಾ ಗ್ರಾ.ಪಂ.ಗಳಿಗೆ ತಲುಪಲಿದೆ. ನಿರ್ದಿಷ್ಟ ಮಾರ್ಗಸೂಚಿಯಂತೆ ಆಯಾ ಉದ್ದೇಶಕ್ಕೆ ಗ್ರಾ. ಪಂ.ಗಳಲ್ಲಿ ಬಳಕೆ ಮಾಡಿಕೊಳ್ಳಲಾಗುತ್ತಿದೆ.
– ಪ್ರಸನ್ನ ಎಚ್., ಸಿಇಒ, ಜಿ.ಪಂ. ಉಡುಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು