ರಾ.ಹೆ. 169ಎಯಲ್ಲಿ 140 ಮರಗಳ ಕಟಾವು; ವೃಕ್ಷ ನಾಶಕ್ಕೆ ತೀವ್ರ ಆಕ್ಷೇಪ


Team Udayavani, Sep 5, 2019, 5:00 AM IST

t-6

ಉಡುಪಿ: ರಾ.ಹೆ. 169ಎ 77 ಕಿ.ಮೀ.ನಿಂದ 87 ಕಿ.ಮೀ. ವರೆಗಿನ (ಪರ್ಕಳ ದೇವಿನಗರದಿಂದ ಆದಿ ಉಡುಪಿ ಕರಾವಳಿ ಜಂಕ್ಷನ್‌ ವರೆಗೆ) ರಸ್ತೆಯ ಚತುಷ್ಪಥ ಕಾಮಗಾರಿಯ ಬಗ್ಗೆ ರಸ್ತೆಯ ಇಕ್ಕೆಡೆಗಳಲ್ಲಿ ಅಡಚಣೆಯಾಗಿರುವ 140 ಮರಗಳನ್ನು ಕಡಿಯಲು ಉದ್ದೇಶಿಸಿರುವುದರ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಯಿತು.

ವಲಯ ಅರಣ್ಯಾಧಿಕಾರಿ ಉಡುಪಿ ವಲಯ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸಾರ್ವಜನಿಕ ಅಹವಾಲು ಸಭೆಯಲ್ಲಿ ಸಾರ್ವಜನಿಕರು, ವಿವಿಧ ಸಂಘಟನೆಗಳು ಹಲವು ಬೇಡಿಕೆ, ಆಗ್ರಹಗಳನ್ನೊಳಗೊಂಡ ಮನವಿಯನ್ನು ಕುಂದಾಪುರ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಲೋಹಿತ್‌ ಅವರಿಗೆ ನೀಡಿದರು.

ಈಗಾಗಲೇ ಕಡಿದ ಮರಗಳು ಎಲ್ಲಿಗೆ ಹೋಗಿವೆ? ಎನ್ನುವ ಬಗ್ಗೆ ಇಲಾಖೆಯಿಂದ ತನಿಖೆಯಾಗಬೇಕು. ಮರ ಕಡಿಯುವ ಮುನ್ನ ರಾ.ಹೆ. ಪ್ರಾಧಿಕಾರ, ಅರಣ್ಯ ಇಲಾಖೆ ಮತ್ತು ಸಾರ್ವಜನಿಕರ ಸಮಿತಿ ರಚಿಸಿ ಜಂಟಿ ಸರ್ವೇ ಕಾರ್ಯ ನಡೆಸಬೇಕು. ಹಲವಾರು ವರ್ಷಗಳಿಂದ ಪ್ರಸ್ತುತ ಕಡಿಯಲುದ್ದೇಶಿಸಿರುವ ಮರಗಳಲ್ಲಿ ಸಾಕಷ್ಟು ಪಕ್ಷಿ ಸಂಕುಲಗಳು ಜೀವಿಸುತ್ತಿವೆ. ಅಲ್ಲದೆ ಮನುಷ್ಯ ಜೀವನಕ್ಕೆ ಬೇಕಾದ ಆಮ್ಲಜನಕ, ಗಾಳಿ, ಬೆಳಕು, ಕಾಲಕ್ಕೆ ಸರಿಯಾಗಿ ಮಳೆ ಬರುವುದಕ್ಕೆ ಅನುಕೂಲವಾಗಿರುವ ಮರಗಳನ್ನು ಉಳಿಸಬೇಕು. ಸಾರ್ವಜನಿಕರಿಂದ ಕೊಡಲ್ಪಟ ಮನವಿಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದರು.

ಸಾರ್ವಜನಿಕರ ಆಕ್ಷೇಪಣೆ, ಅಹವಾಲುಗಳನ್ನು ಸ್ವೀಕರಿಸಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಲೋಹಿತ್‌ ಮಾತನಾಡಿ, ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆ ಪ್ರಕರಣದಡಿ 50ಕ್ಕಿಂತ ಹೆಚ್ಚು ಮರಗಳನ್ನು ಕಡಿಯಬೇಕಾದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಕ್ರಮ ಕೈಗೊಳ್ಳಬೇಕಾದ ನೆಲೆಯಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಸಲಾಯಿತು. 30 ಸೆಂ.ಮೀ. ಸುತ್ತಳತೆ, 2 ಮೀ. ಎತ್ತರವಿರುವುದು ‘ಮರ’ ಎಂದು ಪರಿಗಣಿಸಲ್ಪಡುತ್ತದೆ. ಮರಗಳನ್ನು ಕಡಿಯಲೇಬೇಕೆನ್ನುವ ಉದ್ದೇಶ ಇಲಾಖೆಗಿಲ್ಲ. ಆದರೆ ಅಭಿವೃದ್ಧಿ ದೃಷ್ಟಿಯಿಂದ ಮರ ಕಡಿಯಬೇಕಾದುದು ಅನಿವಾರ್ಯ. ಒಂದು ಮರ ಕಡಿದರೆ ಹತ್ತು ಗಿಡಗಳನ್ನು ನೆಟ್ಟು ಬೆಳೆಸಬೇಕೆನ್ನುವ ನೆಲೆಯಲ್ಲಿ ಲಭ್ಯ ಸ್ಥಳಗಳಲ್ಲಿ ಗಿಡಗಳನ್ನು ಬೆಳೆಸಲಾಗುತ್ತದೆ ಎಂದರು.

ಮರ ಸ್ಥಳಾಂತರ ಕಾರ್ಯಕ್ಕೆ ದುಬಾರಿ ವೆಚ್ಚ, ಸಾಕಷ್ಟು ಸಮಯ ಬೇಕಾಗುತ್ತದೆ. ಅಲ್ಲದೆ ಸ್ಥಳಾಂತರ ಮಾಡುವಾಗ ಮರದ ತಾಯಿ ಬೇರಿನೊಂದಿಗೆ ಅದರ ಸನಿಹದ ಮಣ್ಣನ್ನೂ ಸ್ಥಳಾಂತರಿಸಬೇಕು. ಸ್ಥಳಾಂತರಗೊಂಡ ಮರಗಳಲ್ಲಿ ಆಲ, ಅರಳಿ ಮಾತ್ರ ಉಳಿಯಲಿದೆ. 2005ರಲ್ಲಿ ಬಂದ ಜೆಸಿಬಿ, ಹಿಟಾಚಿಗಳಿಂದ ಇದುವರೆಗೆ ಸಾಕಷ್ಟು ಅರಣ್ಯ ನಾಶವಾಗಿದೆ. ಇದನ್ನು ತಡೆಗಟ್ಟಲು ಅರಣ್ಯ ಇಲಾಖೆಯಿಂದ ಮಾತ್ರ ಸಾಧ್ಯವಾಗದು. ಇದಕ್ಕೆ ಸಾರ್ವಜನಿಕರ ಸಂಪೂರ್ಣ ಸಹಕಾರ ಅವಶ್ಯವಿದೆ. ಸಾರ್ವಜನಿಕರು ನೀಡಿದ ಮನವಿಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದರು.

ಪರಿಸರ ವಿಜ್ಞಾನಿ, ಪರಿಸರ ಪ್ರೇಮಿ ಬಾಲಕೃಷ್ಣ ಮಧ್ದೋಡಿ, ಪರಿಸರ ವಾದಿಗಳಾದ ಸ್ವಚ್ಛ ಉಡುಪಿ ಬ್ರಿಗೇಡ್‌ನ‌ ಕಾರ್ಯದರ್ಶಿ ಸುಧಾಕರ ಪ್ರಭು, ರೋಟರಿ ಉಡುಪಿ ರಾಯಲ್ ಅಧ್ಯಕ್ಷ ಯಶವಂತ್‌ ಬಿ.ಕೆ., ನಗರಸಭೆ ಸದಸ್ಯ ಮಂಜುನಾಥ ಮಣಿಪಾಲ, ಸಾಮಾಜಿಕ ಕಾರ್ಯಕರ್ತ ರತ್ನಾಕರ ಇಂದ್ರಾಳಿ, ನೇತಾಜಿ ಸ್ಪೋರ್ಟ್ಸ್ ಕ್ಲಬ್‌ ಅಧ್ಯಕ್ಷ ಬಾಲಕೃಷ್ಣ ಪರ್ಕಳ, ನೇಟಿವ್‌ ಯೂತ್‌ ಸಂಸ್ಥೆಯ ಪ್ರೇಮಾನಂದ ಕಲ್ಮಾಡಿ, ರ್ಯಾನ್‌ ಫೆರ್ನಾಂಡಿಸ್‌, ನಮ್ಮ ಭೂಮಿ ಕುಂದಾಪುರ ರಾಮಾಂಜಿ ಇನ್ನಿತರರು ವೃಕ್ಷ ಉಳಿಸುವ ಬಗ್ಗೆ ಹಲವಾರು ಪ್ರಶ್ನೆಗಳನ್ನು ಕೇಳಿದ್ದಲ್ಲದೆ, ವೃಕ್ಷ ಉಳಿಸುವಂತೆ ಮನವಿ ಸಲ್ಲಿಸಿದರು.

2 ಅಶ್ವತ್ಥ, 5 ಗೋಳಿ, 1 ಆಲ, 2 ಅತ್ತಿ, ದೇವದಾರು ಸೇರಿದಂತೆ ಇನ್ನಿತರ ಜಾತಿಯ 140 ಮರಗಳನ್ನು ಕಡಿಯಲು ಈಗಾಗಲೇ ಗುರುತಿಸಲಾಗಿದೆ. ಈ ಎಲ್ಲ ಮರಗಳನ್ನು ಕಡಿದ ಬಳಿಕ ಅವುಗಳನ್ನು ಬೇರೆಡೆಗೆ ಸ್ಥಳಾಂತರಿಸುವ ಬಗ್ಗೆ ಇಲಾಖೆ ಚಿಂತನೆ ನಡೆಸಬೇಕು. ಮಣಿಪಾಲದ ಕ್ಯಾನ್ಸರ್‌ ಆಸ್ಪತ್ರೆಯ ಎದುರಿನಲ್ಲಿದ್ದ 4 ಸಾಗುವಾನಿ ಮರಗಳನ್ನು ಈಗಾಗಲೇ ಕಡಿಯಲಾಗಿದ್ದು, ಈ ಬಗ್ಗೆ ರಾ.ಹೆ. ಪ್ರಾಧಿಕಾರಕ್ಕೆ ಅರಣ್ಯ ಇಲಾಖೆಯಿಂದ ಅನುಮತಿ ನೀಡಲಾಗಿದೆಯೇ?, ಅನುಮತಿ ನೀಡದೇ ಇದ್ದರೂ ಮರಗಳನ್ನು ಕಡಿದ ಬಗ್ಗೆ ಪ್ರಾಧಿಕಾರಕ್ಕೆ ನೋಟೀಸ್‌ ಜಾರಿಗೊಳಿಸಬೇಕು. ಅಲ್ಲದೆ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದರು.

ಸಾರ್ವಜನಿಕರ ಆಗ್ರಹ
2 ಅಶ್ವತ್ಥ, 5 ಗೋಳಿ, 1 ಆಲ, 2 ಅತ್ತಿ, ದೇವದಾರು ಸೇರಿದಂತೆ ಇನ್ನಿತರ ಜಾತಿಯ 140 ಮರಗಳನ್ನು ಕಡಿಯಲು ಈಗಾಗಲೇ ಗುರುತಿಸಲಾಗಿದೆ. ಈ ಎಲ್ಲ ಮರಗಳನ್ನು ಕಡಿದ ಬಳಿಕ ಅವುಗಳನ್ನು ಬೇರೆಡೆಗೆ ಸ್ಥಳಾಂತರಿಸುವ ಬಗ್ಗೆ ಇಲಾಖೆ ಚಿಂತನೆ ನಡೆಸಬೇಕು. ಮಣಿಪಾಲದ ಕ್ಯಾನ್ಸರ್‌ ಆಸ್ಪತ್ರೆಯ ಎದುರಿನಲ್ಲಿದ್ದ 4 ಸಾಗುವಾನಿ ಮರಗಳನ್ನು ಈಗಾಗಲೇ ಕಡಿಯಲಾಗಿದ್ದು, ಈ ಬಗ್ಗೆ ರಾ.ಹೆ. ಪ್ರಾಧಿಕಾರಕ್ಕೆ ಅರಣ್ಯ ಇಲಾಖೆಯಿಂದ ಅನುಮತಿ ನೀಡಲಾಗಿದೆಯೇ?, ಅನುಮತಿ ನೀಡದೇ ಇದ್ದರೂ ಮರಗಳನ್ನು ಕಡಿದ ಬಗ್ಗೆ ಪ್ರಾಧಿಕಾರಕ್ಕೆ ನೋಟೀಸ್‌ ಜಾರಿಗೊಳಿಸಬೇಕು. ಅಲ್ಲದೆ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.