ಅವೈಜ್ಞಾನಿಕ ಪೈಪ್‌ಲೈನ್‌ ಕಾಮಗಾರಿಗೆ 19 ಲಕ್ಷ ರೂ.!

ಸಾಲಿಗ್ರಾಮ: ಮುಖ್ಯ ರಸ್ತೆಯೊಳಗಿದ್ದ ನೀರಿನ ಪೈಪ್‌ಲೈನ್‌ ಸರ್ವಿಸ್‌ ರಸ್ತೆಯೊಳಕ್ಕೆ

Team Udayavani, Nov 22, 2019, 5:26 AM IST

2111KOTA1EA

ಕೋಟ: ಕೋಟ ಗೋ ಆಸ್ಪತ್ರೆ ಸಮೀಪ ವಿರುವ ಸರಕಾರಿ ಬಾವಿಯಿಂದ ಸಾಲಿಗ್ರಾಮ ಪ.ಪಂ. ವ್ಯಾಪ್ತಿಯ ಹಲವು ಭಾಗಕ್ಕೆ ನೀರು ಸರಬರಾಜಾ ಗುತ್ತಿದ್ದು, ಇದಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಹತ್ತಾರು ವರ್ಷದ ಹಿಂದೆ ಪೈಪ್‌ಲೈನ್‌ ಮಾಡಲಾಗಿತ್ತು. ಆದರೆ ಚತುಷ್ಪಥ ಕಾಮಗಾರಿಯ ಸಂದರ್ಭ ರಸ್ತೆ ವಿಸ್ತರಣೆಗೊಂಡಿದ್ದರಿಂದ ಕುಂದಾಪುರ-ಉಡುಪಿ ಕಡೆಯ ಮುಖ್ಯ ರಸ್ತೆಯ ಮಧ್ಯದಲ್ಲಿ ಪೈಪ್‌ಲೈನ್‌ ಸೇರಿಕೊಂಡಿದೆ.

ಹೀಗಾಗಿ ಆಗಾಗ ಪೈಪಿಗೆ ಹಾನಿಯಾಗುತ್ತಿದ್ದು ದುರಸ್ತಿ ನಡೆಸಲು ಸಾಧ್ಯ ವಾಗುತ್ತಿಲ್ಲ. ಈ ಸಮಸ್ಯೆ ಬಗೆಹರಿಸಲು ಪ.ಪಂ. 14ನೇ ಹಣಕಾಸು ನಿಧಿಯಿಂದ ಇದೀಗ 19.35ಲಕ್ಷ ರೂ. ವೆಚ್ಚದಲ್ಲಿ ಹೊಸದಾಗಿ ಪೈಪ್‌ಲೈನ್‌ ಕಾಮಗಾರಿ ಕೈಗೆತ್ತಿಕೊಂಡಿದೆ. ಆದರೆ ವಿಚಿತ್ರವೆಂಬಂತೆ ಮತ್ತೆ ಪುನಃ ಸರ್ವೀಸ್‌ ರಸ್ತೆಗೆ ಮೀಸಲಿಟ್ಟಿರುವ ಜಾಗದಲ್ಲೇ ಹೊಸ ಕಾಮಗಾರಿ ನಡೆಸಲಾಗುತ್ತಿದೆ.

ಸರ್ವಿಸ್‌ ರಸ್ತೆಯೊಳಗೆ ಪೈಪ್‌ಲೈನ್‌
ಇದೀಗ ಕಾಮಗಾರಿ ನಡೆಯುತ್ತಿರುವ ಸ್ಥಳ ಸರ್ವಿಸ್‌ ರಸ್ತೆಗೆ ಮೀಸಲಿರಿಸಿದ ಜಾಗವಾಗಿದೆ. ಸಾಲಿಗ್ರಾಮ ಗಿರಿಜಾ ಕಲ್ಯಾಣಮಂಟಪದಿಂದ ಮೀನು ಮಾರುಕಟ್ಟೆ ತನಕ ಎರಡೂ ಕಡೆಗಳಲ್ಲಿ 6ಮೀ. ಸರ್ವಿಸ್‌ರಸ್ತೆ ಹಾಗೂ 1 ಮೀ. ಚರಂಡಿ ಪ್ರಥಮ ಹಂತದಲ್ಲೇ ಮಂಜೂರಾಗಿದ್ದು ಶೀಘ್ರದಲ್ಲೇ ಕೆಲಸ ಆರಂಭವಾಗಲಿದೆ. ಕೋಟ ಹೈಸ್ಕೂಲ್‌ ಭಾಗದಲ್ಲೂ ಹೆಚ್ಚುವರಿಯಾಗಿ ಸರ್ವಿಸ್‌ ರಸ್ತೆಯ ಬೇಡಿಕೆ ಇದೆ. ಆದ್ದರಿಂದ ಈಗ ಹೊಸದಾಗಿ ನಿರ್ಮಿಸುತ್ತಿರುವ ಪೈಪ್‌ಲೈನ್‌ ಕೂಡ ಸರ್ವಿಸ್‌ ರಸ್ತೆ ಒಳಭಾಗಕ್ಕೆ ಸೇರುವುದು ಖಚಿತವಾಗಿದ್ದು ಲಕ್ಷಾಂತರ ರೂ. ವ್ಯರ್ಥವಾಗಲಿದೆ.

ಮುಂದಾಲೋಚನೆ ಕೊರತೆ
ಸಾಲಿಗ್ರಾಮದಲ್ಲಿ ಸರ್ವಿಸ್‌ ರಸ್ತೆಗೆ ಮಂಜೂರಾತಿ ದೊರೆತಿರುವುದು ಹಾಗೂ ಕೋಟ ಹೈಸ್ಕೂಲ್‌ ಆಸುಪಾಸಿನಲ್ಲಿ ಬೇಡಿಕೆ ಇರುವುದು ಸ್ಥಳೀಯಾಡಳಿತದ ಗಮನದಲ್ಲಿದೆ. ಇದನ್ನು ತಿಳಿದೂ ಕಾಮಗಾರಿಗೆ ಮುಂದಾಗಿರುವುದು ವಿಪರ್ಯಾಸ. ಚತುಷ್ಪಥ ಕಾಮಗಾರಿ ಸಂದರ್ಭ ರಸ್ತೆಯ ಅಕ್ಕ-ಪಕ್ಕದ 30ಮೀ. ಜಾಗವನ್ನು ವಶಪಡಿಸಿಕೊಳ್ಳಲಾಗಿತ್ತು. ಹೀಗಾಗಿ ಈ ಸ್ಥಳದಲ್ಲಿ ಪೈಪ್‌ಲೈನ್‌ ನಡೆಸಲು ಯಾವುದೇ ಸಮಸ್ಯೆ ಇಲ್ಲ. ಆದರೆ ಹೆದ್ದಾರಿ ಪ್ರಾಧಿಕಾರ ಮತ್ತು ನವಯುಗದವರು ಸೂಕ್ತ ಸಹಕಾರ ನೀಡಿಲ್ಲ ಎನ್ನುವ ಕಾರಣಕ್ಕೆ ಈ ರೀತಿ ಕಾಮಗಾರಿ ನಡೆಸಲಾಗುತ್ತಿದೆ.

ಕಾಮಗಾರಿ ಸ್ಥಗಿತಕ್ಕೆ ಆಗ್ರಹ
ಅವೈಜ್ಞಾನಿಕವಾಗಿ ಕಾಮಗಾರಿ ನಡೆಸಿ ಲಕ್ಷಾಂತರ ರೂ. ವ್ಯರ್ಥ ಮಾಡುತ್ತಿರುವ ಪ.ಪಂ.ನ ಕಾರ್ಯ ವೈಖರಿಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ ಮತ್ತು ಕಾಮಗಾರಿಯನ್ನು ತತ್‌ಕ್ಷಣ ಸ್ಥಗಿತಗೊಳಿಸಬೇಕಾಗಿ ಆಗ್ರಹಿಸಿದ್ದಾರೆ.

ಪೇಟೆ ವಾರ್ಡ್‌ನಲ್ಲಿ ಕಾಮಗಾರಿಗೆ ಅವಕಾಶವಿಲ್ಲ
ಕಾಮಗಾರಿ ಸಂಪೂರ್ಣ ಅವೈಜ್ಞಾನಿಕವಾಗಿದ್ದು 14ನೇ ಹಣಕಾಸು ನಿಧಿಯ 19.35ಲಕ್ಷ ಹಣವನ್ನು ವ್ಯರ್ಥ ಮಾಡುತ್ತಿದ್ದಾರೆ. ಈ ಕುರಿತು ನಮಗೆ ಯಾವುದೇ ಮಾಹಿತಿ ನೀಡಿಲ್ಲ. ಪೇಟೆ ವಾರ್ಡ್‌ನಲ್ಲಿ ಸರ್ವಿಸ್‌ ರಸ್ತೆ ಜಾಗದಲ್ಲಿ ಪೈಪ್‌ಲೈನ್‌ ಮಾಡಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ.
-ರತ್ನಾ ನಾಗರಾಜ್‌,ಪೇಟೆ ವಾರ್ಡ್‌ ಸದಸ್ಯರು

ಕಾಮಗಾರಿ ಸ್ಥಳದ ಮಾಹಿತಿ ಇಲ್ಲ
ತುರ್ತು ಕುಡಿಯುವ ನೀರಿನ ಕಾಮಗಾರಿ ಎನ್ನುವ ಕಾರಣಕ್ಕೆ ಅನುಮತಿ ನೀಡಿದ್ದೇನೆ. ಆದರೆ ಸರ್ವಿಸ್‌ ರಸ್ತೆ ಜಾಗದಲ್ಲಿ ಪೈಪ್‌ಲೈನ್‌ ಮಾಡಲಾಗುತ್ತಿದೆ ಎನ್ನುವುದು ತಿಳಿದಿಲ್ಲ. ಈ ಕುರಿತು ಪರಿಶೀಲನೆ ನಡೆಸುತ್ತೇನೆ.
-ಕಿರಣ್‌ ಗೋರಯ್ಯ,
ಕಾರ್ಯನಿರ್ವಹಣಾಧಿಕಾರಿ ಪ.ಪಂ.

ಎನ್‌.ಎಚ್‌.ಎ.ಐ. ಅನುಮತಿ ಪಡೆಯಲಾಗಿದೆ
ಹೆದ್ದಾರಿ ಪ್ರಾಧಿಕಾರ ಹಾಗೂ ನವಯುಗ ಸ್ಥಳಪರಿಶೀಲಿಸಿ ಕಾಮಗಾರಿ ನಡೆಸಲು ಅನುಮತಿ ನೀಡಿದ್ದಾರೆ ಮತ್ತು ಸರ್ವಿಸ್‌ ರಸ್ತೆ ನಿರ್ಮಾಣವಾದರೂ ಯಾವುದೇ ಸಮಸ್ಯೆ ಇಲ್ಲ ಎಂದು ಭರವಸೆ ನೀಡಿದ್ದಾರೆ.
-ಅರುಣ್‌ ಕುಮಾರ್‌,ಮುಖ್ಯಾಧಿಕಾರಿ ಪ.ಪಂ.

-ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.