1ನೇ ತರಗತಿ ದಾಖಲಾತಿ ವಯಸ್ಸು: ಈ ಬಾರಿಯೂ ಗೊಂದಲ


Team Udayavani, Apr 29, 2018, 6:00 AM IST

28.jpg

ಉಡುಪಿ: ಒಂದನೇ ತರಗತಿಗೆ ದಾಖಲಾಗುವ ಮಕ್ಕಳಿಗೆ ಜೂ. 1ಕ್ಕೆ 5 ವರ್ಷ 10 ತಿಂಗಳು ಪೂರ್ಣಗೊಂಡಿರಬೇಕು ಎಂಬ ನಿಯಮ ಈ ಶೈಕ್ಷಣಿಕ ಸಾಲಿನಲ್ಲಿಯೂ ಗೊಂದಲ ಸೃಷ್ಟಿಸಿದೆ. ಕಳೆದ ಬಾರಿ ಇಂಥ ಪರಿಸ್ಥಿತಿ ಉಂಟಾದಾಗ ಇಲಾಖೆ ನಿಯಮ ಮಾರ್ಪಡಿಸಿ ವಯಸ್ಸನ್ನು 5 ವರ್ಷ 5 ತಿಂಗಳಿಗೆ ಮರು ನಿಗದಿಗೊಳಿಸಿತ್ತು. ಆದರೆ ಈ ಬಾರಿ ಇದುವರೆಗೆ ಅಂತಹ ಮಾರ್ಪಾಡು ಆದೇಶ ಬಂದಿಲ್ಲ.

ಕಳೆದ ಶೈಕ್ಷಣಿಕ ವರ್ಷದ ಆರಂಭಕ್ಕೆ ಇಲಾಖೆ ಹೊರಡಿಸಿದ್ದ ಆದೇಶದಲ್ಲಿ 1ನೇ ತರಗತಿಗೆ ದಾಖಲಾಗಲು 5 ವರ್ಷ 10 ತಿಂಗಳು, ಎಲ್‌ಕೆಜಿಗೆ 3 ವರ್ಷ 10 ತಿಂಗಳು ಎಂದು ನಿಗದಿಗೊಳಿಸಿತ್ತು. ಇದಕ್ಕೆ ಆಕ್ಷೇಪ ಬಂದ ಬಳಿಕ ಹೊಸ ಸುತ್ತೋಲೆ ಹೊರಡಿಸಿ, ಒಂದನೇ ತರಗತಿಗೆ 5 ವರ್ಷ 5 ತಿಂಗಳು ಎಂದು ನಿಗದಿಪಡಿಸಿತ್ತು. ಎಲ್‌ಕೆಜಿಗೆ ಇದ್ದ ಮಿತಿ 3 ವರ್ಷ 10 ತಿಂಗಳನ್ನು ಹಾಗೆಯೇ ಮುಂದುವರಿಸಲು ತಿಳಿಸಲಾಗಿತ್ತು. 2015-16ನೇ ಹಾಗೂ 2016-17ನೇ ಸಾಲಿನಲ್ಲಿ 3 ವರ್ಷ 10 ತಿಂಗಳು ತುಂಬದೆಯೂ ಎಲ್‌ಕೆಜಿಗೆ ದಾಖಲಾದ ಮಕ್ಕಳು ಒಂದನೆಗೆ ದಾಖಲಾಗಬಹುದು, ಅವರಿಗೆ 5 ವರ್ಷ 10 ತಿಂಗಳಿನ ವಯೋಮಿತಿ ಅನ್ವಯವಾಗುವುದಿಲ್ಲ ಎಂದು ತಿಳಿಸಲಾಗಿತ್ತು. ಆದರೆ ಕಳೆದ ವರ್ಷ ಯುಕೆಜಿಯಲ್ಲಿ ಇದ್ದ ಮಕ್ಕಳು ಈ ವರ್ಷ ಒಂದನೇ ತರಗತಿಗೆ ದಾಖಲಾಗುವಾಗ ಕೆಲವು ಶಾಲೆಗಳು ಆಕ್ಷೇಪ ವ್ಯಕ್ತಪಡಿಸಿವೆ. ಹಾಗಾಗಿ ಹೆತ್ತವರಲ್ಲಿ ಆತಂಕ ಉಳಿದುಕೊಂಡಿದೆ.

ಎಲ್‌ಕೆಜಿಗೆ 3 ವರ್ಷ 10 ತಿಂಗಳು ಕಳೆದ ವರ್ಷ ಕಡ್ಡಾಯಗೊಳಿಸಲಾಗಿತ್ತಾದರೂ ಕೆಲವು ಶಾಲೆಗಳು ಅದಕ್ಕಿಂತ ಸ್ವಲ್ಪ ಕಡಿಮೆ ಪ್ರಾಯದ ಮಕ್ಕಳನ್ನು ನಾನಾ ಕಾರಣದ (ಒತ್ತಡ, ಹೆತ್ತವರ ನಿರಂತರ ಮನವಿ ಇತ್ಯಾದಿ) ಹಿನ್ನೆಲೆಯಲ್ಲಿ ದಾಖಲಿಸಿಕೊಂಡಿ
ದ್ದವು. ಆ ಮಕ್ಕಳು ಈಗ ಯುಕೆಜಿಗೆ ಬಂದಿವೆ. ಮುಂದಿನ ವರ್ಷ ಅವರು ಒಂದನೆಗೆ ದಾಖಲಾಗುವ ಸಂದರ್ಭದಲ್ಲಿ ಮತ್ತೆ ಗೊಂದಲ ಉಂಟಾ ಗುತ್ತದೆ.  

“ರಿಸ್ಕ್’ ಮೇಲೆ ದಾಖಲಾತಿ
5 ವರ್ಷ 10 ತಿಂಗಳಿಗಿಂತ ಕಡಿಮೆ ಇದ್ದರೆ 1ನೇ ತರಗತಿಗೆ ದಾಖಲಾತಿ ಇಲ್ಲ ಎಂದು ಅನೇಕ ಶಾಲೆಗಳು ಮಕ್ಕಳನ್ನು ವಾಪಸು ಕಳುಹಿಸಿವೆ. ಇನ್ನು ಕೆಲವು ಶಾಲೆಗಳು “ರಿಸ್ಕ್’ ತೆಗೆದುಕೊಂಡು ದಾಖಲಾತಿ ಮಾಡಿಕೊಂಡಿವೆ. “ಒಂದು ವೇಳೆ ಶಿಕ್ಷಣ ಇಲಾಖೆ ವಯೋಮಿತಿಯನ್ನು ಇಳಿಕೆ ಮಾಡದಿದ್ದರೆ ನಿಮ್ಮ ಮಗುವನ್ನು 2ನೇ ತರಗತಿಯಲ್ಲಿ ಒಂದು ವರ್ಷ ಇರಿಸಿಕೊಳ್ಳುತ್ತೇವೆ. ಇಲ್ಲವಾದರೆ ಮುಂದೆ ಎಸೆಸೆಲ್ಸಿಗೆ ಸಮಸ್ಯೆಯಾಗುತ್ತದೆ’ ಎಂದು ತಿಳಿಸಿದ್ದಾರೆ. ಇದಕ್ಕೆ ಅನೇಕ ಹೆತ್ತವರು ಒಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಪಠ್ಯಪುಸ್ತಕಗಳನ್ನು ಮಕ್ಕಳ ಮನೋವೈಜ್ಞಾನಿಕ ಸಾಮರ್ಥ್ಯದ ಆಧಾರದಲ್ಲಿ ರೂಪಿಸಲಾಗಿರುತ್ತದೆ. ಹಾಗಾಗಿ ನಿಗದಿತ ವಯಸ್ಸಿಗಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ದಾಖಲು ಮಾಡಿಕೊಂಡರೆ ಮಕ್ಕಳ ಬೌದ್ಧಿಕ ಬೆಳವಣಿಗೆ ಮೇಲೆಯೂ ವ್ಯತಿರಿಕ್ತ ಪರಿಣಾಮ ಬೀರಬಹುದು. ಅಲ್ಲದೆ ಆರ್‌ಟಿಇ ಕಾಯಿದೆಯಡಿ ಎಲ್‌ಕೆಜಿಗೆ 3 ವರ್ಷ 10 ತಿಂಗಳು, ಒಂದನೇ ತರಗತಿಗೆ 10 ತಿಂಗಳು ಅಗತ್ಯ ಎಂದು ತಿಳಿಸಿದ್ದು, ಆ ಹಿನ್ನೆಲೆಯಲ್ಲಿಯೂ ವಯಸ್ಸಿನ ಮಿತಿ ನಿಗದಿಗೊಳಿಸಿರಬಹುದು ಎಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿ ಯೋರ್ವರು ಅಭಿಪ್ರಾಯಪಟ್ಟಿದ್ದಾರೆ. ಎಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಆಯಾ ಶೈಕ್ಷಣಿಕ ವರ್ಷದ ಮಾ. 31ಕ್ಕೆ 15 ವರ್ಷ ಆಗಿರಬೇಕು ಎಂಬ ನಿಯಮವೂ ಇದೆ. 

ಹಣ ಪಾವತಿಯಾಗಿತ್ತು, ವಯಸ್ಸು ಗೊತ್ತಿಲ್ಲ!
ಈ ಹಿಂದೆ ಒಂದನೆಗೆ 5 ವರ್ಷ 5 ತಿಂಗಳಾದಾಗ ಮಗುವನ್ನು ಸೇರ್ಪಡೆ ಮಾಡಲಾಗುತ್ತಿತ್ತು. ಆದರೆ ಕಳೆದ ವರ್ಷ 5 ವರ್ಷ 10 ತಿಂಗಳು ಎಂದು ನಿಗದಿ ಮಾಡಿದ ಅನಂತರ ಗೊಂದಲ ಸೃಷ್ಟಿಯಾಯಿತು. ಗೊಂದಲ ಸರಿಪಡಿಸಲು ಕಳೆದ ಜೂನ್‌ನಲ್ಲಿ ಹೊಸ ಸುತ್ತೋಲೆ ಕಳುಹಿಸಲಾಯಿತು. ಈ ಬಾರಿ ಇದುವರೆಗೂ ಹೊಸ ಆದೇಶ ಬಂದಿಲ್ಲ. ಕಳೆದ ವರ್ಷ ಹೆಚ್ಚಿನ ಎಲ್ಲ ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಫೆಬ್ರವರಿ-ಮಾರ್ಚ್‌ನಲ್ಲಿಯೇ ಎಲ್‌ಕೆಜಿ ದಾಖಲಾತಿ ಬಹುತೇಕ ಪೂರ್ಣಗೊಂಡು ಶುಲ್ಕ ಪಾವತಿಯೂ ಆಗಿತ್ತು. ಈ ಬಾರಿಯೂ ಹೀಗೆಯೇ ಆಗಿದೆ. ದಾಖಲಾತಿ ವಯೋಮಿತಿಯನ್ನು ಶಾಲಾರಂಭಕ್ಕೆ ಕನಿಷ್ಠ ಆರು ತಿಂಗಳು ಮೊದಲೇ ನಿಗದಿಗೊಳಿಸಿ ಆದೇಶ ಹೊರಡಿಸಿದರೆ ಗೊಂದಲ ಉಂಟಾಗದು. ಈ ಬಾರಿಯ ಹೊಸ ಆದೇಶದಲ್ಲಿ ಮುಂದಿನ ಎಲ್ಲ ವರ್ಷಗಳಿಗೂ ಒಂದನೇ ತರಗತಿ ಸೇರ್ಪಡೆಗೆ 5 ವರ್ಷ 5 ತಿಂಗಳು ವಯಸ್ಸಿನ ಮಿತಿ ನಿಗದಿಗೊಳಿಸಬಹುದು ಎಂಬ ನಿರೀಕ್ಷೆಗಳೂ ಇವೆ. 

ಕಳೆದ ಬಾರಿ ಆದೇಶ ನೀಡುವಾಗ 2017-18 ಶೈಕ್ಷಣಿಕ ಸಾಲಿನಲ್ಲಿ ಯುಕೆಜಿಯಲ್ಲಿ ಇರುವ ಮಕ್ಕಳು 4 ವರ್ಷ 10 ತಿಂಗಳಿಗಿಂತ ಕಡಿಮೆ ಇದ್ದರೂ ಮುಂದಿನ ವರ್ಷ ಅವರಿಗೆ ಒಂದನೇ ತರಗತಿಗೆ ಅವಕಾಶ ನೀಡಲಾಗುವುದು (5 ವರ್ಷ 10 ತಿಂಗಳಿಗಿಂತ ಕಡಿಮೆ ಇದ್ದರೂ) ಎಂದು ಅಧಿಕಾರಿಗಳು ಹೇಳಿದ್ದರು. ಆದರೆ ಈಗ ಅವಕಾಶ ನಿರಾಕರಿಸಲಾಗುತ್ತಿದೆ.
ಸುಧಾಕರ್‌

ಉಡುಪಿ ಕಳೆದ ಸಾಲಿನಲ್ಲಿ ಆಕ್ಷೇಪಗಳು ವ್ಯಕ್ತವಾಗಿದ್ದವು. ಅನಂತರ ಇಲಾಖೆ ಇನ್ನೊಂದು ಸುತ್ತೋಲೆ ಹೊರಡಿಸಿತ್ತು. ಈ ಬಾರಿಯೂ ಪೋಷಕರ ಆತಂಕವನ್ನು ಹಿರಿಯ ಅಧಿಕಾರಿಗಳಿಗೆ ತಿಳಿಸಿದ್ದೇವೆ, ಬದಲಾವಣೆಯಾಗುವ ನಿರೀಕ್ಷೆ ಇದೆ. ಹೆತ್ತವರು ಗೊಂದಲಕ್ಕೆ ಒಳಗಾಗಬೇಕಾಗಿಲ್ಲ.
ಡಿಡಿಪಿಐ ಉಡುಪಿ

ಸಂತೋಷ್‌ ಬೊಳ್ಳೆಟ್ಟು 

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.