ಕಾಪು ಪಾಲಿಟೆಕ್ನಿಕ್‌ಗೆ 2 ಹೊಸ ಕೋರ್ಸ್‌


Team Udayavani, Aug 2, 2021, 7:32 AM IST

Untitled-2

ಕಾಪು: ಬೆಳಪುವಿನಲ್ಲಿ ನಿರ್ಮಾಣಗೊಂಡಿರುವ ಸರಕಾರಿ ಪಾಲಿಟೆಕ್ನಿಕ್‌ ಕಾಲೇಜಿಗೆ ರಾಜ್ಯದಲ್ಲೇ ಪ್ರಥಮ ಬಾರಿಗೆ ಆಟೋಮೇಶನ್‌ ಆ್ಯಂಡ್‌ ರೋಬೋಟಿಕ್ಸ್‌ ಮತ್ತು ಕೌÉಡ್‌ ಕಂಪ್ಯೂಟಿಂಗ್‌ ಆ್ಯಂಡ್‌ ಬಿಗ್‌ ಡೇಟಾ ಡಿಪ್ಲೊಮಾ ಹೆಸರಿನ 2 ಹೊಸ ಕೋರ್ಸ್‌ಗಳು ಮಂಜೂರಾಗಿದ್ದು, ಪ್ರಸಕ್ತ ಸಾಲಿನಲ್ಲಿ ಆರಂಭವಾಗಲಿವೆ.

ರಾಜ್ಯದ ಸರಕಾರಿ ಪಾಲಿ ಟೆಕ್ನಿಕ್‌ ಕಾಲೇಜುಗಳ ಪೈಕಿ ಈ ಎರಡು ಹೊಸ ಕೋರ್ಸ್‌ಗಳು ಆರಂಭವಾಗುತ್ತಿರುವ ಏಕೈಕ ಕಾಲೇಜು ಇದಾಗಿದ್ದು, ಆಲ್‌ ಇಂಡಿಯಾ ಕೌನ್ಸಿಲ್‌ ಫಾರ್‌ ಟೆಕ್ನಿಕಲ್‌ ಎಜುಕೇಶನ್‌ (ಎಐ ಸಿಟಿಇ) ಅನುಮೋದನೆ ಲಭಿಸಿದೆ. ಮೂಲಸೌಕರ್ಯಕ್ಕೆ 5 ಕೋ.ರೂ.

5.39 ಎಕ್ರೆಯಲ್ಲಿ 8 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಕಾಲೇಜು ಉಡುಪಿ ಜಿಲ್ಲೆಯ 3ನೇ ಮತ್ತು ಕಾಪು ತಾಲೂಕಿನ ಪ್ರಥಮ ಸರಕಾರಿ ಪಾಲಿಟೆಕ್ನಿಕ್‌ ಕಾಲೇಜಾಗಿದೆ. ಕಂಪ್ಯೂಟರ್‌, ಪೀಠೊಪಕರಣಗಳು, ಪ್ರಯೋಗಾಲಯ, ಗ್ರಂಥಾಲಯ, ತಾಂತ್ರಿಕ ಶಿಕ್ಷಣಕ್ಕೆ ಸಂಬಂಧಿತ ಯಂತ್ರೋ ಪಕರಣಗಳ ಜೋಡಣೆಗೆ 5 ಕೋಟಿ ರೂ. ಮೀಸಲಿಡಲಾಗಿದೆ. ವರ್ಕ್‌ ಶಾಪ್‌, ಬಾಲಕ/ಬಾಲಕಿಯರ ವಸತಿ ನಿಲಯ, ಕೆಫೆಟೇರಿಯಾ, ಭದ್ರತಾ  ಪರಿಕರಗಳ ಜೋಡಣೆ, ಆವರಣಗೋಡೆ ಮತ್ತು ಗೇಟ್‌ ಅಳವಡಿಕೆ ಇನ್ನಷ್ಟೇ ನಡೆಯಬೇಕಿದೆ.

ಸ್ಥಳೀಯರಿಗೆ ಆದ್ಯತೆಗೆ ಮನವಿ:

ಬೆಳಪು ಗ್ರಾಮ ಶೈಕ್ಷಣಿಕವಾಗಿ ಬೆಳೆಯಬೇಕೆಂಬ ಬಹುಕಾಲದ ಕನಸೊಂದು ನನಸಾಗುತ್ತಿದೆ.  ಹೊಸ ಕೋರ್ಸ್‌ಗಳೊಂದಿಗೆ ಕಾಲೇಜು ಆರಂಭಗೊಳ್ಳುತ್ತಿರುವುದು ಹೆಮ್ಮೆಯ ವಿಚಾರ. ವಿದ್ಯಾರ್ಥಿಗಳ ಆಯ್ಕೆಯಲ್ಲಿ ಮತ್ತು ಪೂರಕ ಉದ್ಯೋಗಾವಕಾಶದಲ್ಲಿ ಸ್ಥಳೀಯರಿಗೆ ಆದ್ಯತೆ ನೀಡುವಂತೆ ಸರಕಾರ ಮತ್ತು ಇಲಾಖೆಗೆ ಮನವಿ ಮಾಡಲಾಗಿದೆ ಎಂದು ಬೆಳಪು ಗ್ರಾ.ಪಂ. ಮಾಜಿ ಅಧ್ಯಕ್ಷ ಡಾ| ದೇವಿಪ್ರಸಾದ್‌ ಶೆಟ್ಟಿ ಬೆಳಪು ತಿಳಿಸಿದ್ದಾರೆ.

ಆಟೋಮೇಷನ್‌ ಆ್ಯಂಡ್‌ ರೋಬೋಟಿಕ್ಸ್‌  :

ಆಧುನಿಕ ಕಾಲಘಟ್ಟದಲ್ಲಿ ಮಾನವ ಸಂಪದದ ಬಳಕೆ ಕಡಿಮೆಯಾಗುತ್ತಿದ್ದು ಕೈಗಾರಿಕೆಗಳಲ್ಲಿ ತಂತ್ರಜ್ಞಾನದ ಅಳವಡಿಕೆ ಮತ್ತು ರೋಬೋಟ್‌ಗಳ ಉಪಯೋಗ ಹೆಚ್ಚುತ್ತಿದೆ. ಆಟೋಮೇಶನ್‌ ಆ್ಯಂಡ್‌ ರೋಬೋಟಿಕ್ಸ್‌ ಕೋರ್ಸ್‌ನಿಂದಾಗಿ ಗ್ರಾಮೀಣ ಯುವಕ – ಯುವತಿಯರಿಗೆ ರೋಬೋಟ್‌ ತಂತ್ರಜ್ಞಾನ, ರೊಬೋಟ್‌ ಡಿಸೈನಿಂಗ್‌, ಆಟೋಮೇಷನ್‌ ಮತ್ತು ನಿರ್ವಹಣೆ ಬಗ್ಗೆ ತಿಳಿದುಕೊಂಡು ತಂತ್ರಜ್ಞಾನ ಆಧಾರಿತವಾಗಿಯೂ ಬೆಳೆಯಲು ಅವಕಾಶವಿದೆ.

ಕ್ಲೌಡ್‌ ಕಂಪ್ಯೂಟಿಂಗ್‌ ಆ್ಯಂಡ್‌ ಬಿಗ್‌ ಡೇಟಾ ಡಿಪ್ಲೊಮಾ :

 

ಮಾಹಿತಿ ತಂತ್ರಜ್ಞಾನ ಮತ್ತು ದತ್ತಾಂಶಗಳ ಸಂಗ್ರಹಣೆಗೆ ದೇಶ-ವಿದೇಶಗಳಲ್ಲಿ ಹೆಚ್ಚಿನ ಬೇಡಿಕೆಯಿದೆ. ಆಧಾರ್‌ ಕಾರ್ಡ್‌, ಪಡಿತರ ಚೀಟಿ, ಚಾಲನ ಪರವಾನಿಗೆ, ಬ್ಯಾಂಕಿಂಗ್‌ ಸೇರಿದಂತೆ ಎಲ್ಲವೂ ಡಿಜಿಟಲೀಕರಣವಾಗಿರುವುದರಿಂದ ಮಾಹಿತಿಗಳ ಸಂಗ್ರಹಣೆ ಮತ್ತು ಸಮರ್ಪಕ ನಿರ್ವಹಣೆಗೆ ಕ್ಲೌಡ್‌ ಕಂಪ್ಯೂಟಿಂಗ್‌ ಆ್ಯಂಡ್‌ ಬಿಗ್‌ ಡೇಟಾ ಡಿಪ್ಲೊಮಾ ಕೋರ್ಸ್‌ ಬಹಳಷ್ಟು ಉಪಯುಕ್ತವಾಗಲಿದೆ. ಮಾಹಿತಿ ತಂತ್ರಜ್ಞಾನದ ಬಳಕೆ ಮತ್ತು ಉಪಯೋಗದ ಬಗ್ಗೆ ಪರಿಪೂರ್ಣ ಅನುಭವ ಪಡೆದುಕೊಂಡು ಸರ್ವರ್‌ ಬಳಕೆ, ಪ್ರೋಗ್ರಾಮಿಂಗ್‌ ಬಗ್ಗೆಯೂ ತಿಳಿದುಕೊಳ್ಳಲು ಅವಕಾಶವಿದೆ.

ಎರಡೂ ಕೋರ್ಸ್‌ಗಳಿಗೆ ದೇಶ-ವಿದೇಶಗಳಲ್ಲಿ ಬಹಳಷ್ಟು ಬೇಡಿಕೆಯಿದ್ದು ಮುಂದಿನ ದಿನಗಳಲ್ಲಿ ಉನ್ನತ ಉದ್ಯೋಗವಕಾಶಕ್ಕೂ ಹೆಚ್ಚಿನ ಅನುಕೂಲವಾಗಲಿದೆ.

120 ಮಂದಿಗೆ ಅವಕಾಶ :

2 ಕೋರ್ಸ್‌ಗಳಲ್ಲಿ ತಲಾ 60 ವಿದ್ಯಾರ್ಥಿಗಳಿಗೆ ಅವಕಾಶ ಇದ್ದು, ಆನ್‌ಲೈನ್‌ ಮೂಲಕ ಪ್ರವೇಶ ಪ್ರಕ್ರಿಯೆ ನಡೆಯಲಿದೆ. ಕಾಲೇಜಿಗೆ ಆಗಮಿಸಿ ಅರ್ಜಿ ಸಲ್ಲಿಸುವುದಕ್ಕೂ ಅವಕಾಶವಿದೆ. ಕೆಟಗರಿ, ಮೀಸಲಾತಿ ಮತ್ತು ಮೆರಿಟ್‌ ಆಧಾರದ ಮೇಲೆ ಸೀಟು ಹಂಚಿಕೆಯಾಗಲಿದೆ. ರಾಜ್ಯದ ಯಾವುದೇ ಜಿಲ್ಲೆಯ ವಿದ್ಯಾರ್ಥಿಗೂ ಅವಕಾಶವಿದ್ದು, ಅಧಿಕೃತ ವೆಬ್‌ಸೈಟ್‌ ಅಥವಾ ಸಮೀಪದ ಸರಕಾರಿ ಪಾಲಿಟೆಕ್ನಿಕ್‌ ಕಾಲೇಜಿನಿಂದ ಅರ್ಜಿಗಳನ್ನು  ಪಡೆದುಕೊಳ್ಳಬಹುದು. –  ಮಂಜುನಾಥ್‌ ಪ್ರಸಾದ್‌,   ಸ್ಪೆಷಲ್‌ ಆಫೀಸರ್‌,  ಬೆಳಪು ಸರಕಾರಿ ಪಾಲಿಟೆಕ್ನಿಕ್‌ ಕಾಲೇಜು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.