ಹೆಜಮಾಡಿ ಗ್ರಾಮಾಭಿವೃದ್ಧಿ ಕಾಮಗಾರಿಗೆ 21 ಕೋ.ರೂ. 


Team Udayavani, Jul 13, 2017, 3:50 AM IST

hejamadi.jpg

ಪಡುಬಿದ್ರಿ: ಹೆಜಮಾಡಿ ಗ್ರಾ.ಪಂ.ಗೆ ಸತತ 10ನೇ ಬಾರಿ ತಾನು ಭೇಟಿ ನೀಡಿದ್ದು ತನ್ನ ಶಾಸಕತ್ವದ ಅವಧಿಯಲ್ಲಿ 21 ಕೋಟಿ ರೂ.ಗಳನ್ನು ಹೆಜಮಾಡಿಯ ಗ್ರಾಮಾಭಿವೃದ್ಧಿಯ ವಿವಿಧ ಕಾಮಗಾರಿಗಳಿಗಾಗಿ ವಿನಿಯೋಗಿಸಲಾಗಿದೆ ಎಂದು ಕಾಪು ಶಾಸಕ ವಿನಯ ಕುಮಾರ್‌ ಸೊರಕೆ ಹೇಳಿದರು. 

ಅವರು ಜು. 12ರಂದು  ಸುಮಾರು 80 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಹೆಜಮಾಡಿ ಗ್ರಾ. ಪಂ. ನೂತನ ಕಟ್ಟಡದ ಶಿಲಾನ್ಯಾಸವನ್ನು ಗೈದು ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. 

ಹೆಜಮಾಡಿ ಬಂದರು ಯೋಜನೆಗಾಗಿ ಪ್ರಸ್ತಾವನೆಯನ್ನು ಕೇಂದ್ರ ಸರಕಾರಕ್ಕೆ ರವಾನಿಸಲಾಗಿದೆ. ಕ್ರೀಡಾ ಇಲಾಖೆಯಿಂದ ರಾಜೀವ್‌ ಗಾಂಧಿ ತಾ | ಕ್ರೀಡಾಂಗಣದ ಸ್ಟೇಡಿಯಂ ರಚನೆಗಾಗಿ 3ಕೋಟಿ ರೂ. ಬಿಡುಗಡೆಯಾಗಲಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯೂ ಶೀಘ್ರವೇ ಅನುಷ್ಟಾನಗೊಳ್ಳಲಿರುವುದಾಗಿ ಶಾಸಕ ಸೊರಕೆ ಹೇಳಿದರು. ಮುಖ್ಯ ಅತಿಥಿಗಳಾಗಿದ್ದ ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ಸಾಮಾಜಿಕ ನ್ಯಾಯ ಹಾಗೂ ಅಧಿಕಾರ ವಿಕೇಂದ್ರೀಕರಣದಡಿಯಲ್ಲಿ ಗ್ರಾ. ಪಂ. ವ್ಯವಸ್ಥೆಯಲ್ಲಿ ಮೀಸಲಾತಿಯನ್ನು ತರುವುದರೊಂದಿಗೆ ಸರಕಾರವು ಮಹಿಳೆಯರಿಗೂ ಗ್ರಾಮಾಭಿವೃದ್ಧಿಯಲ್ಲಿ ಪಾಲುದಾರರಾಗುವ ಅವಕಾಶಗಳು ಲಭ್ಯವಾಗಿವೆ. 

ಗ್ರಾಮಸಭೆಯ ನಿರ್ಣಯಗಳು ಇಂದು ಬಲಿಷ್ಠವೆನಿಸಿದ್ದು ಬಾಪೂಜಿ ಕೇಂದ್ರಗಳಿಂದಾಗಿ ಜನತೆಗೆ ಅಗತ್ಯವಾಗಿರುವ 100 ಸೇವೆಗಳು ಗ್ರಾಮ ಮಟ್ಟದಲ್ಲೇ ಲಭ್ಯವಾಗುತ್ತವೆ. ಹಾಗಾಗಿ ಗ್ರಾ. ಪಂ. ಗೂ ಹೊಸ ಕಟ್ಟಡ ಇತ್ಯಾದಿ ಮೂಲಭೂತ ಸೌಕರ್ಯಗಳು ಅಗತ್ಯವೆನಿಸುತ್ತವೆ ಎಂದರು. ಜಿ. ಪಂ. ಕೃಷಿ ಹಾಗೂ ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಕಾಂತ್‌ ಪಡುಬಿದ್ರಿ, ಮಾಜಿ ಶಾಸಕ ಲಾಲಾಜಿ ಆರ್‌. ಮೆಂಡನ್‌ ಮಾತನಾಡಿದರು. ವೇದಿಕೆಯಲ್ಲಿ ತಾ. ಪಂ. ಸದಸ್ಯೆ ರೇಣುಕಾ ಪುತ್ರನ್‌, ಮಾಜಿ ತಾ. ಪಂ. ಸದಸ್ಯರಾದ ನವೀನ್‌ಚಂದ್ರ ಜೆ. ಶೆಟ್ಟಿ, ನಾರಾಯಣ ಪೂಜಾರಿ, ಕೆಎಂಎಫ್‌ ನಿರ್ದೇಶಕ ಕಾಪು ದಿವಾಕರ ಶೆಟ್ಟಿ, ಪಂಚಾಯತ್‌ ರಾಜ್‌ ಎಂಜೀನಿಯರ್‌ ಸುನಿಲ್‌ ಮತ್ತಿತರರು ಉಪಸ್ಥಿತರಿದ್ದರು.ಹೆಜಮಾಡಿ ಗ್ರಾ. ಪಂ. ಅಧ್ಯಕ್ಷೆ ವಿಶಾಲಾಕ್ಷಿ ಪುತ್ರನ್‌ ಸಭಾಧ್ಯಕ್ಷತೆಯನ್ನು ವಹಿಸಿದ್ದರು.  ಗ್ರಾ. ಪಂ. ಉಪಾಧ್ಯಕ್ಷ ಸುಧಾಕರ ಕರ್ಕೇರ ಸ್ವಾಗತಿಸಿದರು. ಮಾಜಿ ಅಧ್ಯಕ್ಷ ವಾಮನ್‌ ಕೋಟ್ಯಾನ್‌ ಪ್ರಸ್ತಾವಿಸಿದರು. ಗ್ರಾ. ಪಂ. ಪಿಡಿಒ ಮಮತಾ ಶೆಟ್ಟಿ ಹಾಗೂ ಸದಸ್ಯ ಗೋವರ್ಧನ್‌ ಕೋಟ್ಯಾನ್‌ ನಿರ್ವಹಿಸಿದ ಈ ಕಾರ್ಯಕ್ರಮದಲ್ಲಿ ಸದಸ್ಯ ಪ್ರಾಣೇಶ್‌ ಹೆಜಮಾಡಿ ವಂದಿಸಿದರು.
ಶಿಲಾನ್ಯಾಸ ಕಾರ್ಯಕ್ರಮದ ಧಾರ್ಮಿಕ ವಿಧಿ ವಿಧಾನಗಳನ್ನು ವೇ | ಮೂ | ಹರಿದಾಸ ಭಟ್‌ ನಿರ್ವಹಿಸಿದರು. ಮೂಲ್ಕಿ ಚರ್ಚ್‌ನ ಧರ್ಮಗುರುಗಳಾದ ರೆ | ಫಾ | ಕ್ಸೇವಿಯರ್‌ ಗೋಮ್ಸ್‌ ಹಾಗೂ ವೇ | ಮೂ | ರಾಮಚಂದ್ರ ಭಟ್‌ ಶುಭಾಶಂಸನೆ ಗೈದರು. ಹಿರಿಯ ನಾಗರಿಕರು, ಗ್ರಾಮಸ್ಥರು ಈ ಸಮಾರಂಭದಲ್ಲಿ ಹಾಜರಿದ್ದರು. 

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.