ಒಂದೇ ಗ್ರಾಮದಲ್ಲಿ 6 ತಿಂಗಳಲ್ಲಿ 3 ಕ್ವಿಂ.ಪ್ಲಾಸ್ಟಿಕ್‌ ಸಂಗ್ರಹ


Team Udayavani, Apr 22, 2018, 6:00 AM IST

1904bvre1-varamballi.jpg

ಬ್ರಹ್ಮಾವರ: ಸಮರ್ಪಕ ತ್ಯಾಜ್ಯ ವಿಲೇವಾರಿಯ ಉದ್ದೇಶದೊಂದಿಗೆ ಆರಂಭ ಗೊಂಡ ವಾರಂಬಳ್ಳಿಯ ಘನ-ದ್ರವ ಸಂಪನ್ಮೂಲ- ನಿರ್ವಹಣಾ ಘಟಕ(ಎಸ್‌.ಎಲ್‌.ಆರ್‌.ಎಂ.) ಕೇವಲ 6 ತಿಂಗಳಲ್ಲಿ 3 ಕ್ವಿಂಟಾಲ್‌ಗ‌ೂ ಮಿಕ್ಕಿ ಪ್ಲಾಸ್ಟಿಕ್‌ ಸಂಗ್ರಹಿಸಿ ದಾಖಲೆ ಬರೆದಿದೆ. 
ಸುಮಾರು 250 ಮನೆಗಳು ಹಾಗೂ ವಾಣಿಜ್ಯ ಕಟ್ಟಡಗಳಿಂದ ಪ್ಲಾಸ್ಟಿಕ್‌ ಅಲ್ಲದೆ ಪ್ರತಿನಿತ್ಯ 1 ಕ್ವಿಂಟಾಲ್‌ಗ‌ೂ ಮಿಕ್ಕಿ ತ್ಯಾಜ್ಯ ಸಂಗ್ರಹಿಸುತ್ತದೆ. ಅಲ್ಲದೇ ಇದನ್ನು ಮರುಬಳಕೆಗೆ ಆಗುವಂತೆ ಮೌಲ್ಯವರ್ಧನೆಗೊಳಿಸಿ ಮಾರಾಟಕ್ಕೆ ಸಿದ್ಧಪಡಿಸುತ್ತಿದೆ. 
 
ಹೇಗಿದೆ ಘಟಕ? 
16 ಮಂದಿ ಕಾರ್ಯಕರ್ತರು ಇಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಬೆಳಗ್ಗೆ ಹಾಗೂ ಸಂಜೆಯ ಎರಡು ಅವ ಧಿಯಲ್ಲಿ ಗ್ರಾಮದ ಮನೆಗಳು, ವಾಣಿಜ್ಯ ಸಂಕೀರ್ಣಕ್ಕೆ ತೆರಳಿ ತ್ಯಾಜ್ಯ ಸಂಗ್ರಹಿಸಲಾಗುತ್ತಿದೆ. ಬಳಿಕ ತರಬೇತಿ ಪಡೆದಂತೆ ವೈಜ್ಞಾನಿಕವಾಗಿ ಬೇರ್ಪಡಿಸಲಾಗುತ್ತಿದೆ. ಬಳಿಕ ಇವುಗಳಲ್ಲಿ ಆಯ್ದವುಗಳನ್ನು ಮೌಲ್ಯವರ್ಧನೆ ಮಾಡಲಾಗುತ್ತದೆ. ಪ್ಲಾಸ್ಟಿಕ್‌ ಅನ್ನು ಪುನರ್ಬಳಕೆಗೆ ಬೇರೆ ಕೇಂದ್ರಕ್ಕೆ ಕಳಿಸಿಕೊಡಲಾಗುತ್ತದೆ. 

ಕಸದಿಂದ ರಸ
ಹೂವಿನ ತ್ಯಾಜ್ಯದಿಂದ ರಂಗೋಲಿ ಪುಡಿ ತಯಾರಿಸುವ ಹಾಗೂ ಸಾವಯವ ವಸ್ತುಗಳಿಂದ ಅಲಂಕಾರಿಕ ವಸ್ತು ತಯಾರಿಸುವ ಕಾರ್ಯ ಇಲ್ಲಿ ಪ್ರಾರಂಭಿಸಲಾಗಿದೆ. ಕೃಷಿ ಪೂರಕ ಔಷಧೋತ್ಪನ್ನಗಳ ತಯಾರಿ ಹಾಗೂ ಮಾರಾಟಕ್ಕೂ ಸಿದ್ಧತೆ ನಡೆದಿದೆ. ಈ ಬಗ್ಗೆ ತರಬೇತಿಯನ್ನು ಪಡೆದ ಕಾರ್ಯಕರ್ತರು ಉತ್ಪನ್ನ ಸಿದ್ಧಪಡಿಸಲು ತೊಡಗಿದ್ದಾರೆ.

ಮುಂದಿನ ಯೋಜನೆ
ದ್ರವತ್ಯಾಜ್ಯ ನಿರ್ವಹಣೆಯ ಮಾದರಿಯನ್ನು ನೈಸರ್ಗಿಕವಾಗಿ ಇಲ್ಲಿ ರೂಪಿಸಲಾಗಿದೆ. ಕಾಬಾಳೆಗಿಡ, ಕಾಂಪೋಸ್ಟ್‌ ತೊಟ್ಟಿಯ ಮೂಲಕ ಹೊಸ ಪ್ರಯತ್ನಗಳು ನಿರಂತರವಾಗಿ ಸಾಗಿವೆ. ಬಯೋಗ್ಯಾಸ್‌ನ್ನು ತ್ಯಾಜ್ಯದಿಂದ ತಯಾರಿಸುವ ಯೋಜನೆಗೂ ಪಂಚಾಯತ್‌ ಚಿಂತನೆ ನಡೆಸಿದೆ. ಉಡುಪಿಯ ಕೈಗಾರಿಕಾ ತರಬೇತಿ ಕಾಲೇಜು ತ್ರಿಚಕ್ರವಾಹನ ಒದಗಿಸಿದ್ದು, ಕೆಲಸಕ್ಕೆ ಉಪಯೋಗವಾಗಿದೆ. 
 
ವಿಸ್ತರಣೆ ಯೋಜನೆ
ಪ್ರಾಯೋಗಿಕವಾಗಿ 250 ಮನೆ ಹಾಗೂ ವಾಣಿಜ್ಯ ಕಟ್ಟಡಗಳಲ್ಲಿ ಪ್ರಾರಂಭಿಸಿದ ಈ ಯೋಜನೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಇನ್ನಷ್ಟು ವಿಸ್ತರಿಸಲು ಯೋಜಿಸಲಾಗಿದೆ. ಘಟಕಕ್ಕೆ ಹೆಚ್ಚಿನ ಮಾನವ ಶ್ರಮ ಅಗತ್ಯವಿರುವುದರಿಂದ ಯಂತ್ರಗಳ ಬಳಕೆಯತ್ತ ಯೋಚಿಸಲಾಗಿದೆ.

4 ಲಕ್ಷ ರೂ. ಆದಾಯ
ತ್ಯಾಜ್ಯಗಳನ್ನು ಪ್ರತ್ಯೇಕಿಸಿ, ಪುನರ್ಬಳಕೆಗೆ ಯೋಗ್ಯವಾಗುವಂತೆ ಮೌಲ್ಯವಧನೆ ಮಾಡಲಾಗಿದೆ. ಈ ಕಾರಣ ಪಂಚಾಯತ್‌ ಭರ್ಜರಿ ಲಾಭ ಪಡೆಯುವ ನಿರೀಕ್ಷೆಯಲ್ಲಿದೆ. ಕಳೆದ 6 ತಿಂಗಳಿಂದ ಮೌಲ್ಯವರ್ಧನೆಗೊಳಿಸಿದ ಉತ್ಪನ್ನಗಳು ಮಾರಾಟಕ್ಕೆ ಸಿದ್ಧವಾಗಿದ್ದು 4 ಲಕ್ಷ ರೂ. ಆದಾಯ ಬರುವ ನಿರೀಕ್ಷೆ ಇದೆ.

ಕೊಕ್ಕರ್ಣೆಯಲ್ಲಿ ಶೀಘ್ರ ಆರಂಭ
ಘನ ದ್ರವ ಸಂಪನ್ಮೂಲ ನಿರ್ವಹಣೆ ಯೋಜನೆಯಡಿ ಕೊಕ್ಕರ್ಣೆ ಗ್ರಾ.ಪಂ. ಕೂಡಾ ಆಯ್ಕೆಯಾಗಿದೆ. ಪ್ರಾಯೋಗಿಕವಾಗಿ ಪೇಟೆಯ ಸುಮಾರು 200ರಷ್ಟು ಅಂಗಡಿ, ಮನೆಗಳನ್ನು ಆಯ್ಕೆ ಮಾಡಲಾಗಿದೆ. ತ್ಯಾಜ್ಯ ಸಂಗ್ರಹಿಸಲು ಬೇಕಾದ ಬಕೆಟ್‌, ವಾಹನ ಇತ್ಯಾದಿಗಳ ಪೂರ್ವಸಿದ್ಧತೆ ನಡೆಯುತ್ತಿದ್ದು, ಶೀಘ್ರದಲ್ಲಿ ಕಾರ್ಯಾರಂಭಗೊಳ್ಳಲಿದೆ.

ಸಾರ್ವಜನಿಕರ ಸಹಭಾಗಿತ್ವ  ಅಗತ್ಯ
ಪಂಚಾಯತ್‌ ಮತ್ತು ಎಸ್‌ಎಲ್‌ಆರ್‌ಎಂ ಕಾರ್ಯಕರ್ತರ ಪ್ರಯತ್ನ ಮಾತ್ರ ಸಾಲದು, ಸಾರ್ವಜನಿಕರ ಸಹಭಾಗಿತ್ವ ಅತೀ ಅಗತ್ಯ. ಮನೆಯಲ್ಲಿಯೇ ಘನ ಹಾಗೂ ದ್ರವ ತ್ಯಾಜ್ಯವನ್ನು ವಿಂಗಡಿಸಿ ಇಡುವಲ್ಲಿ, ಕನಿಷ್ಠ ಶುಲ್ಕ ನೀಡುವಲ್ಲಿ ಸಹಕಾರ ಅವಶ್ಯ. ಆಗ ಮಾತ್ರ ಇನ್ನಷ್ಟು ಭಾಗಕ್ಕೆ ವಿಸ್ತರಿಸಲು ಸಾಧ್ಯ.

– ದಿವ್ಯಾ ಎಸ್‌. ಪಿಡಿಒ, ವಾರಂಬಳ್ಳಿ ಗ್ರಾ.ಪಂ.

– ಪ್ರವೀಣ್‌ ಮುದ್ದೂರು

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.