Nutrition Food ಫ‌ಲಾನುಭವಿಗಳ ಕೈಸೇರದ ಪೌಷ್ಟಿಕ ಆಹಾರ; ಕೊರಗ,ಮಲೆಕುಡಿಯ ಸಮುದಾಯದವರ ಸಂಕಷ್ಟ

ಉಡುಪಿಯಲ್ಲಿ 3,200, ದ.ಕ. ಜಿಲ್ಲೆಯಲ್ಲಿ 2,968 ಮಂದಿ ಸಂತ್ರಸ್ತರು

Team Udayavani, Sep 25, 2023, 7:45 AM IST

Nutrition Food ಫ‌ಲಾನುಭವಿಗಳ ಕೈಸೇರದ ಪೌಷ್ಟಿಕ ಆಹಾರ; ಕೊರಗ,ಮಲೆಕುಡಿಯ ಸಮುದಾಯದವರ ಸಂಕಷ್ಟ

ಉಡುಪಿ: ರಾಜ್ಯದ ಎಂಟು ಜಿಲ್ಲೆ ಸಹಿತ ಅವಿಭಜಿತ ದಕ್ಷಿಣ ಕನ್ನಡದಲ್ಲಿ ವಾಸವಾಗಿರುವ ಮೂಲ ನಿವಾಸಿ ಕೊರಗ ಮತ್ತು ಮಲೆಕುಡಿಯ ಸಮುದಾಯ ಕುಟುಂಬಗಳಿಗೆ ರಾಜ್ಯ ಸರಕಾರದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ (ಐಟಿಡಿಪಿ)ಯ ಮೂಲಕ ನೀಡುವ 2022-23ನೇ ಸಾಲಿನ ಪೌಷ್ಟಿಕ ಆಹಾರ ಸಾಮಗ್ರಿ ಇನ್ನೂ ಪೂರೈಕೆಯಾಗಿಲ್ಲ.

ಕೊರಗ ಮತ್ತು ಮಲೆಕುಡಿಯ ಸಮುದಾಯದ ಕುಟುಂಬಗಳಿಗೆ ಐಟಿಡಿಪಿಯು ಜುಲೈಯಿಂದ ಡಿಸೆಂಬರ್‌ ತನಕ 6 ಬಾರಿ ಪೌಷ್ಟಿಕ ಆಹಾರ ಒದಗಿಸುವ ಯೋಜನೆ 2008ರಿಂದ ಜಾರಿಯಲ್ಲಿದೆ. ಆ ಪ್ರಕಾರ ಪ್ರಥಮ ಕಿಟ್‌ ಗಳನ್ನು ಜುಲೈಯಲ್ಲಿ ನೀಡಬೇಕಿತ್ತು. ಆದರೆ ಈಗ ಸೆಪ್ಟಂಬರ್‌ ಕಳೆಯುತ್ತಿದ್ದರೂ ಸಾಮಗ್ರಿ ಫ‌ಲಾನುಭವಿಗಳ ಕೈ ಸೇರಿಲ್ಲ.

ಸರಬರಾಜು ಹೇಗೆ?
ಇಲಾಖೆಯ ನಿಯಮ ಪ್ರಕಾರ ಆಯಾ ತಿಂಗಳ 5ರಿಂದ 20ನೇ ದಿನಾಂಕದೊಳಗೆ ಆಹಾರ ಕಿಟ್‌ಗಳನ್ನು ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಅವರ ಸಮಿತಿ ಪರಿಶೀಲಿಸಿದ ಬಳಿಕ ಅಂಗನವಾಡಿ ಕೇಂದ್ರಗಳಿಗೆ ಪೂರೈಕೆಯಾಗಿ ಫ‌ಲಾನುಭವಿಗಳಿಗೆ ನೀಡಬೇಕು. ಆದರೆ ಜುಲೈ ತಿಂಗಳ ಸಾಮಗ್ರಿಯೇ ಇನ್ನೂ ಬಿಡುಗಡೆಯಾಗದೆ ಫ‌ಲಾನುಭವಿಗಳು ತೊಂದರೆ ಅನುಭವಿಸುತ್ತಿದ್ದಾರೆ.

ಕಿಟ್‌ನಲ್ಲಿ ಏನಿರುತ್ತದೆ?
16 ಕೆಜಿ ಕುಚ್ಚಿಲು ಅಕ್ಕಿ, 2 ಕೆಜಿ ತೊಗರಿ ಬೇಳೆ, ತಲಾ ಒಂದು ಕೆಜಿ ಕಡಲೆಕಾಳು, ಶೇಂಗಾ ಬೀಜ, ಅಲಸಂಡೆ ಕಾಳು, ಹುರುಳಿ ಕಾಳು, ಹೆಸರು ಕಾಳು, ಸಕ್ಕರೆ, ಬೆಲ್ಲ, 30 ಮೊಟ್ಟೆ, 1 ಲೀ. ಅಡುಗೆ ಎಣ್ಣೆ, ಅರ್ಧ ಕೆಜಿ ನಂದಿನಿ ತುಪ್ಪ ಕಿಟ್‌ನಲ್ಲಿರುತ್ತದೆ. ಇದನ್ನು ಫ‌ಲಾನುಭವಿಗಳಿಗೆ ತಲುಪಿಸುವ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರಿಗೆ ಒಂದು ಕುಟುಂಬಕ್ಕೆ 10 ರೂ.ನಂತೆ ಸಂಭಾವನೆ ಐಟಿಡಿಪಿ ಕಚೇರಿಯಿಂದ ಪಾವತಿಯಾಗುತ್ತದೆ.

ಕುಲಕಸುಬಿನಿಂದಲೇ ಜೀವನ
ರಾಜ್ಯದ ಉಡುಪಿ, ದ.ಕ., ಕಾರವಾರ, ಚಿಕ್ಕಮಗಳೂರು, ಮೈಸೂರು, ಚಾಮರಾಜ ನಗರ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗ ಳಲ್ಲಿ ಮಾತ್ರ ಈ ಸಮುದಾಯಗಳಿವೆ.

ಉಡುಪಿಯಲ್ಲಿ 3,200 ಹಾಗೂ ದ.ಕ.ದಲ್ಲಿ 2,968 ಫ‌ಲಾನುಭವಿಗಳಿದ್ದಾರೆ. ಶೇ. 70ರಷ್ಟು ಮಂದಿ ಈಗಲೂ ಕುಲಕಸುಬು ಮಾಡಿಕೊಂಡೇ ಜೀವಿ ಸುತ್ತಿದ್ದಾರೆ. ಮಳೆಗಾಲದಲ್ಲಿ ಅವರಿಗೆ ಉದ್ಯೋಗ ಕಡಿಮೆ. ಸರಕಾರ ನೀಡುವ ಆಹಾರ ಸಾಮಗ್ರಿಯನ್ನೇ ನಂಬಿಕೊಂಡು ಹಲವಾರು ಕುಟುಂಬಗಳು ದಿನದೂಡುತ್ತಿವೆ. ಆದರೆ ಆಹಾರ ಸಾಮಗ್ರಿ ಬಾರದೆ ಬಡಕುಟುಂಬಗಳು ಸಂಕಷ್ಟಕ್ಕೊಳಗಾಗಿವೆ.

ರಾಜ್ಯದ ಸರಕಾರಿ
ಅಂಗಸಂಸ್ಥೆಯ ಮೂಲಕವೇ ಎಲ್ಲರಿಗೂ ವಿತರಿಸಲು ಉದ್ದೇಶಿಸಲಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ವಿತರಣೆ ವಿಳಂಬವಾಗಿದೆ. ಈ ಬಗ್ಗೆ ಸರಕಾರದ ಗಮನಕ್ಕೆ ತರಲಾಗಿದ್ದು, ಶೀಘ್ರ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ.
-ದೂದ್‌ಪೀರ್‌,
ಯೋಜನಾ ಸಮನ್ವಯಾಧಿಕಾರಿ,
ಐಟಿಡಿಪಿ, ಉಡುಪಿ

– ಪುನೀತ್‌ ಸಾಲ್ಯಾನ್‌

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.