347 ವಿದ್ಯಾಸಂಸ್ಥೆಗಳು ತಂಬಾಕುಮುಕ್ತ: ವಿದ್ಯಾಸಂಸ್ಥೆಗಳಲ್ಲಿ ತಂಬಾಕು ನಿಯಂತ್ರಣ ಸಮಿತಿ
Team Udayavani, Jun 3, 2023, 3:46 PM IST
ಉಡುಪಿ: ಜಿಲ್ಲಾಡಳಿತ, ಜಿ.ಪಂ. ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಉಡುಪಿ ಇವರ ಸಹಯೋಗದಲ್ಲಿ ಉಡುಪಿ ಜಿಲ್ಲೆಯಲ್ಲಿ 2017ರಿಂದ ಇಲ್ಲಿಯವರೆಗೂ ಒಟ್ಟು 510 ಸರಕಾರಿ ಅನುದಾನಿತ ಹಾಗೂ ಖಾಸಗಿ ಶಾಲಾ ಕಾಲೇಜುಗಳಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಕುರಿತು ತರಬೇತಿ ನೀಡಲಾಗಿದ್ದು, ಒಟ್ಟು 1,10,563 ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಂಡಿದ್ದಾರೆ. ಎಲ್ಲ ವಿದ್ಯಾ ಸಂಸ್ಥೆಗಳಲ್ಲಿ ತಂಬಾಕು ನಿಯಂತ್ರಣ ಸಮಿತಿ ರಚಿಸಲಾಗಿದ್ದು, ಒಟ್ಟು 347 ವಿದ್ಯಾಸಂಸ್ಥೆಗಳನ್ನು ತಂಬಾಕು ಮುಕ್ತ ವಿದ್ಯಾಸಂಸ್ಥೆಗಳೆಂದು ಘೋಷಿಸಲಾಗಿದೆ.
ವಿವಿಧ ಇಲಾಖೆಗಳ ಅಧಿಕಾರಿಗಳಿಗೆ, ಸಂಘ- ಸಂಸ್ಥೆಗಳಿಗೆ, ತಂಬಾಕು ಮಾರಾಟಗಾರರಿಗೆ ಒಟ್ಟು 30 ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಕುರಿತ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಒಟ್ಟು 1,338 ಫಲಾನುಭವಿಗಳು ಭಾಗವಹಿಸಿ ಪ್ರಯೋಜನ ಪಡೆದುಕೊಂಡಿದ್ದಾರೆ.
ಕೋಟ್ಪಾ ಪ್ರಕರಣಗಳು
ಜಿಲ್ಲೆಯಲ್ಲಿ 2017ರಿಂದ ಇಲ್ಲಿಯವರೆಗೂ ಕೋಟ್ಪಾ 2003ರ ಕಾಯ್ದೆಯನ್ನು ಉಲ್ಲಂಘಿ ಸುವವರ ವಿರುದ್ದ ಒಟ್ಟು 185 ದಾಳಿ ಮಾಡಲಾಗಿದ್ದು, ವಿವಿಧ ಸೆಕ್ಷನ್ಗಳಡಿ ಒಟ್ಟು 3,777 ಪ್ರಕರಣಗಳನ್ನು ದಾಖಲಿಸಿ 5.2 ಲ.ರೂ. ದಂಡ ಸಂಗ್ರಹಿಸಲಾಗಿದೆ. ಕೋಟಾ³-2003 ರ ಕಾಯ್ದೆಯ ಅಡಿಯಲ್ಲಿ ಗೃಹ ಇಲಾಖೆಯು ಇಲ್ಲಿಯವರೆಗೂ ಒಟ್ಟು 8,294 ಪ್ರಕರಣಗಳನ್ನು ದಾಖಲಿಸಿ 10.84 ಲ.ರೂ. ದಂಡವಾಗಿ ಸಂಗ್ರಹಿಸಲಾಗಿದೆ.
ವಿವಿಧ ಜಾಗೃತಿ
ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮ ಗಳ ಹಾಗೂ ಕೋಟಾ³ ಕಾಯ್ದೆ ಕುರಿತಂತೆ ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಹೋರ್ಡಿಂಗ್ಸ್, ಕರಪತ್ರಗಳು, ಭಿತ್ತಿಪತ್ರ ಗಳು, ಗೋಡೆ ಬರಹಗಳು, ಬೀದಿ ನಾಟಕಗಳು, ಎಲ್ಇಡಿ ಪ್ರದರ್ಶನಗಳು, ಆಕಾಶವಾಣಿ ಕಾರ್ಯ ಕ್ರಮಗಳು, ಗುಲಾಬಿ ಆಂದೋಲನಗಳು ಹಾಗೂ ಸ್ಥಳೀಯ ದೂರದರ್ಶನದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
5,779 ಮಂದಿಗೆ
ಆಪ್ತ ಸಮಾಲೋಚನೆ,
3,356 ಚಿಕಿತ್ಸೆ, 190 ತಂಬಾಕು ಮುಕ್ತರು ಜಿಲ್ಲಾ ಆಸ್ಪತ್ರೆ ಕೊಠಡಿ ಸಂಖ್ಯೆ 34 ರಲ್ಲಿ ತಂಬಾಕು ವ್ಯಸನದಿಂದ ಹೊರಬರುವ ವ್ಯಕ್ತಿಗಳಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ತಂಬಾಕು ವ್ಯಸನಮುಕ್ತ ಕೇಂದ್ರವನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ 2017 ರಿಂದ ಇಲ್ಲಿಯವರೆಗೂ ಒಟ್ಟು 5,779 ಮಂದಿಗೆ ಅಪ್ತಸಮಾಲೋಚನೆ ಮಾಡಿ ಅದರಲ್ಲಿ 3,356 ತಂಬಾಕು ಬಳಕೆ ಮಾಡುವ ರೋಗಿಗಳಿಗೆ ಎನ್.ಆರ್.ಟಿ. ಚಿಕಿತ್ಸೆ ನೀಡಲಾಗಿದೆ. ಇದರಲ್ಲಿ 190 ಜನರು ತಂಬಾಕು ವ್ಯಸನವನ್ನು ತ್ಯಜಿಸಿದ್ದಾರೆ.
– ಡಾ| ನಾಗರತ್ನಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ