4.5 ಕೋ.ರೂ. ವೆಚ್ಚದಲ್ಲಿ ಕುಂದಾಪುರ ಬಸ್‌ ಡಿಪೋ ನವೀಕರಣ

ಮುಂದಿನ ಮಾಸಾಂತ್ಯದೊಳಗೆ ಟೆಂಡರ್‌ ಪ್ರಕ್ರಿಯೆ ಅಂತಿಮ; 80ಕ್ಕೂ ಹೆಚ್ಚು ಬಸ್‌ ನಿಲ್ಲಿಸಲು ಅವಕಾಶ

Team Udayavani, Jul 2, 2019, 5:00 AM IST

0107KDPP2

ಕುಂದಾಪುರ ಬಸ್‌ ಡಿಪೋದಲ್ಲಿ ನಿಲ್ಲಿಸಿರುವ ಬಸ್‌ಗಳು.

ಕುಂದಾಪುರ: ಇಲ್ಲಿನ ಕೆಎಸ್‌ಆರ್‌ಟಿಸಿ ಬಸ್‌ ಡಿಪೋದ ಕಟ್ಟಡ ಹಾಗೂ ಎಲ್ಲ ಸೌಕರ್ಯಗಳನ್ನು 4.5 ಕೋ.ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಈಗಾಗಲೇ ಇಲಾಖೆಯು ಯೋಜನೆ ಸಿದ್ಧಪಡಿಸಿದ್ದು, ಮುಂದಿನ ತಿಂಗಳಾಂತ್ಯದೊಳಗೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳ್ಳುವ ಸಾಧ್ಯತೆಯಿದೆ.


ಮುಂದಿನ ತಿಂಗಳೊಳಗೆ ಅಂತಿಮ
ಕುಂದಾಪುರದ ಕೆಎಸ್‌ಆರ್‌ಟಿಸಿ ಘಟಕದ ಕಟ್ಟಡ ಸಹಿತ ಬಸ್‌ ಬೇ, ಇಲ್ಲಿನ ಎಲ್ಲ ರೀತಿಯ ಸೌಕರ್ಯಗಳನ್ನು ಪುನರ್‌ ನವೀಕರಿಸಲು ರಾಜ್ಯ ರಸ್ತೆ ಸಾರಿಗೆ ನಿಗಮದಿಂದ 4.5 ಕೋ.ರೂ. ಮಂಜೂರಾಗಿತ್ತು. ಈ ವಿಚಾರವನ್ನು ಕಳೆದ ನವೆಂಬರ್‌ನಲ್ಲಿ ಕುಂದಾಪುರಕ್ಕೆ ಭೇಟಿ ನೀಡಿದ್ದ ರಾಜ್ಯ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಅವರೇ ಘೋಷಿಸಿದ್ದರು. ಆ ಬಳಿಕ ಚುನಾವಣಾ ನೀತಿ ಸಂಹಿತೆ ಸಹಿತ ಇತರೆ ಕಾರಣಗಳಿಂದ ವಿಳಂಬವಾಗಿತ್ತು. ಆದರೆ ಈಗ ಟೆಂಡರ್‌ ಪ್ರಕ್ರಿಯೆ ನಡೆಯುತ್ತಿದ್ದು, ಮುಂದಿನ ತಿಂಗಳೊಳಗೆ ಅಂತಿಮವಾಗಲಿದೆ.

ಹೆಚ್ಚು ಬಸ್‌ ನಿಲುಗಡೆ
ಈಗ ಸುಮಾರು 56-60 ಬಸ್‌ಗಳನ್ನು ಈ ಘಟಕದಲ್ಲಿ ಪ್ರತಿ ನಿತ್ಯ ನಿಲ್ಲಿಸಲಾಗುತ್ತದೆ. ಹೊಸದಾಗಿ ಡಿಪೋ ನವೀಕರಣಗೊಂಡ ಬಳಿಕ 80ಕ್ಕೂ ಹೆಚ್ಚು ಬಸ್‌ಗಳ ನಿಲುಗಡೆಗೆ ಜಾಗ ಸಿಗಲಿದೆ ಎನ್ನುವ ಮಾಹಿತಿ ಸಿಕ್ಕಿದೆ.

ಕುಂದಾಪುರದಿಂದ ಬೆಂಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಹುಬ್ಬಳ್ಳಿ ಸಹಿತ ಹೆಚ್ಚಿನ ಎಲ್ಲ ಜಿಲ್ಲೆಗಳಿಗೂ ಬಸ್‌ ಸಂಪರ್ಕವಿದೆ. ಇನ್ನು ಬಸ್‌ ಸಂಪರ್ಕವಿಲ್ಲದ ಕೆಲವು ಕಡೆಗಳಿಗೆ ಹೊಸದಾಗಿ ಬಸ್‌ ಆರಂಭಿಸಲು ಕೂಡ ಇದು ಅನುಕೂಲವಾಗಲಿದೆ.

ಏನೇನು ಇರಲಿದೆ?
ಬಸ್ರೂರು ಮೂರುಕೈ ಸಮೀಪ ಈಗಿರುವ ಕೆಎಸ್‌ಆರ್‌ಟಿಸಿ ಡಿಪೋ ಜಾಗದಲ್ಲಿಯೇ ಅದನ್ನು ಕೆಡವಿ ಹೊಸದಾಗಿ ಕಟ್ಟಡ, ಬಸ್‌ ನಿಲ್ಲಿಸುವ ಬೇ, ಹೊಸ ಜನರೇಟರ್‌, ಚಾಲಕ – ನಿರ್ವಾಹಕರಿಗೆ ವಿಶ್ರಾಂತಿ ಕೊಠಡಿ, ವಾಷಿಂಗ್‌ ರ್‍ಯಾಂಪ್‌, ಆವರಣ ಗೋಡೆ ಸಹ ಹೊಸದಾಗಿ ನಿರ್ಮಾಣವಾಗಲಿದೆ.

ಬೈಂದೂರು ಡಿಪೋ ವಿಳಂಬ
ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಬೈಂದೂರಿನಲ್ಲಿ ಬಸ್‌ ಡಿಪೋ ಆರಂಭಕ್ಕೆ ಹಸುರು ನಿಶಾನೆ ಸಿಕ್ಕಿದ್ದು, ಆದರೆ ಅಲ್ಲಿ ಬಸ್‌ ಡಿಪೋಗೆ ಬೇಕಾದ ಜಾಗದ ತಕರಾರು ಇರುವುದರಿಂದ ಇನ್ನೂ ಕೂಡ ಡಿಪೋ ಆರಂಭವಾಗಿಲ್ಲ. ಹಿಂದೆ ಬೈಂದೂರು ಶಾಸಕರಾಗಿದ್ದ ಗೋಪಾಲ ಪೂಜಾರಿಯವರು ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿದ್ದ ವೇಳೆ ಬೈಂದೂರು ಹಾಗೂ ಕಾರ್ಕಳಕ್ಕೆ ಬಸ್‌ ಡಿಪೋ ಘೋಷಿಸಿದ್ದರು. ಇದಕ್ಕಾಗಿ 5 ಕೋ.ರೂ. ಅನುದಾನ ಕೂಡ ಮಂಜೂರಾಗಿದೆ. ಆದರೆ ಭೂವಿವಾದದಿಂದಾಗಿ ಡಿಪೋ ಆರಂಭ ಮತ್ತಷ್ಟು ತಡವಾಗುವ ಸಾಧ್ಯತೆಗಳಿವೆ.

ಶೀಘ್ರ ನವೀಕರಣ ಕಾರ್ಯ
ಈಗಾಗಲೇ ಕುಂದಾಪುರ ಕೆಎಸ್‌ಆರ್‌ಟಿಸಿ ಘಟಕದ ಪುನರ್‌ ನವೀಕರಣ ಸಂಬಂಧ ಕರಡು ಯೋಜನೆ ಸಿದ್ಧಪಡಿಸಿ, ನಿಗಮಕ್ಕೆ ಕಳುಹಿಸಲಾಗಿದೆ. 4.5 ಕೋ.ರೂ. ವೆಚ್ಚದಲ್ಲಿ ಡಿಪೋ ಅಭಿವೃದ್ಧಿಗೊಳ್ಳಲಿದೆ. ಈಗ ಟೆಂಡರ್‌ ಕರೆಯಲಾಗಿದ್ದು, ಮುಂದಿನ ತಿಂಗಳೊಳಗೆ ಟೆಂಡರ್‌ ಪ್ರಕ್ರಿಯೆ ಅಂತಿಮಗೊಳ್ಳಲಿದೆ. ಆ ಬಳಿಕ ನವೀಕರಣ ಕಾರ್ಯ ಆರಂಭವಾಗಲಿದೆ.
-ವಾಸುದೇವ ಗುಡಿಗಾರ್‌, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌,
ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗ

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.