ಎಪಿಎಂಸಿ ಯಲ್ಲಿ 4 ನೂತನ ಗೋದಾಮು ಕೊಠಡಿ


Team Udayavani, Jul 1, 2019, 5:37 AM IST

GODAM

ಉಡುಪಿ: ಉತ್ಪನ್ನ ಮಾರಾಟಗಾರರಿಗೆ, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆದಿಉಡುಪಿಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನೂತನವಾಗಿ 4 ಸುಸಜ್ಜಿತ ಗೋದಾಮುಗಳನ್ನು ನಿರ್ಮಿಸಲಾಗಿದೆ. ಈಗಾಗಲೆ ಮಾರುಕಟ್ಟೆ ಜಾಗದಲ್ಲಿ 30 ಗೋದಾಮುಗಳಿದ್ದು, ಎಲ್ಲವೂ ಬಳಕೆಯಲ್ಲಿವೆ. ಇಲ್ಲಿ ಹೆಚ್ಚುವರಿ ಗೋದಾಮುಗಳ ಬೇಡಿಕೆ ಇದ್ದ ಹಿನ್ನೆಲೆ ಯಲ್ಲಿ 86 ಲಕ್ಷ ರೂ. ವೆಚ್ಚದಲ್ಲಿ ಇದನ್ನು ನಿರ್ಮಿಸಲಾಗಿದೆ.

ಇಲಿಗಳ ಸಮಸ್ಯೆ ಇಲ್ಲ

ನಾಲ್ಕು ಗೋದಾಮುಗಳು 1,350 ಚದರ ಅಡಿ ಹೊಂದಿದ್ದು, 150 ಮೆಟ್ರಿಕ್‌ ಟನ್‌ ಸಾಮಥ್ಯ ಹೊಂದಿದೆ. ಮೇಲ್ಭಾಗದಲ್ಲಿ ಶೀಟ್ ಅಳವಡಿಸಲಾಗಿದೆ. ಇಲಿ, ಹೆಗ್ಗಣ, ಹಾವುಗಳು ಗೋದಾಮಿಗೆ ಬಾರದ ರೀತಿಯಲ್ಲಿ ಗೋದಾಮು ಸುತ್ತಲೂ ರ್ಯಾಟ್ ಪ್ರೂಫ್ ವ್ಯವಸ್ಥೆ ಮಾಡಲಾಗಿದೆ.

ವೈಜ್ಞಾನಿಕ ಗೋದಾಮು

ಎಪಿಎಂಸಿಯಲ್ಲಿ ಈಗಾಗಲೆ 30 ಗೋದಾಮುಗಳಿದ್ದು, ದಿನಸಿ ಪದಾರ್ಥಗಳು, ಹಣ್ಣು, ತರಕಾರಿ ಸಂಗ್ರಹಿಸಿ ಇಡಲು ಅನುಕೂಲವಾಗಿವೆ. ಒಂದು ತಿಂಗಳ ಹಿಂದೆ 1.10 ಕೋಟಿ ರೂ., ವೆಚ್ಚದಲ್ಲಿ ಹಣ್ಣು, ತರಕಾರಿ, ದಿನಸಿ ಪದಾರ್ಥಗಳು ಕೆಡದಂತೆ ವೈಜ್ಞಾನಿಕ ಗೋದಾಮು ಸಹ ನಿರ್ಮಿಸಲಾಗಿದೆ. 30 ಲಕ್ಷ ರೂ. ಮತ್ತು 13 ಲಕ್ಷ ರೂ., ವೆಚ್ಚದಲ್ಲಿ ಇತ್ತೀಚೆಗೆ ಮುಚ್ಚು ಹರಾಜು ಕಟ್ಟೆಯನ್ನು ನಿರ್ಮಿಸಲಾಗಿದೆ.

ಆದಾಯ ವೃದ್ಧಿ

ಎಪಿಎಂಸಿ ಮಾರುಕಟ್ಟೆಯಲ್ಲಿ ಶುಲ್ಕದಿಂದ ಬರುವ ಆದಾಯದಲ್ಲಿ ಸಾಕಷ್ಟು ಹೆಚ್ಚಳವಾಗಿದೆ. 2015ಕ್ಕಿಂತ ಮೊದಲು ಎಪಿಎಂಸಿ ಆದಾಯ 1 ಕೋಟಿ ರೂ., ಮೀರಿರಲಿಲ್ಲ. 2015ರ ಬಳಿಕ ವಾರ್ಷಿಕ 2.5 ಕೋಟಿ ರೂ. ಆದಾಯ ಎಪಿಎಂಸಿಗೆ ಬರುತ್ತಿದೆ. ಗೋದಾಮುಗಳ ಶುಲ್ಕ ಮಾಸಿಕ, ಮಾರುಕಟ್ಟೆ ವ್ಯಪಾರಸ್ಥರಿಂದ ಪ್ರತೀವಾರ ಶುಲ್ಕ ಸಂಗ್ರಹವಾಗುತ್ತದೆ.

ಮೂಲಸೌಲಭ್ಯದ ನಿರೀಕ್ಷೆ
ಎಪಿಎಂಸಿ ಅಭಿವೃದ್ಧಿ ಕಾರ್ಯಗಳು ಹಂತಹಂತವಾಗಿ ನಡೆಯಲಿದೆ. ಅಭಿವೃದ್ಧಿ ಕಾರ್ಯದ ಜತೆಗೆ ಕೆಲವು ಮೂಲ ಅವಶ್ಯಕತೆಗಳನ್ನು ನಗರಸಭೆ ಒದಗಿಸಬೇಕಾಗಿದೆ. ಎಪಿಎಂಸಿಯಿಂದ ನಗರಸಭೆಗೆ ವಾರ್ಷಿಕ 60 ರಿಂದ 70 ಸಾವಿರ ರೂ. ತೆರಿಗೆ ಪಾವತಿಸಲಾಗುತ್ತದೆ. ಇಲ್ಲಿಗೆ ಒಳಚರಂಡಿ ಸಹಿತ ಮೂಲ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ನಗರಸಭೆ ಕ್ರಮ ತೆಗೆದುಕೊಳ್ಳಬೇಕಿದೆ.

-ಕೆ.ಶ್ಯಾಮ ಪ್ರಸಾದ್‌ ಭಟ್, ಎಪಿಎಂಸಿ ಅಧ್ಯಕ್ಷ

ಸುಸಜ್ಜಿತ ಗೋದಾಮು
ಕೃಷಿ ಉತ್ಪನ್ನ ಮಾರಾಟಗಾರರಿಗೆ, ರೈತರಿಗೆ ಅನುಕೂಲವಾಗವ ನಿಟ್ಟಿನಲ್ಲಿ ಬೇಡಿಕೆ ಅನುಗುಣವಾಗಿ 4 ಸುಸಜ್ಜಿತ ಗೋದಾಮುಗಳನ್ನು ನಿರ್ಮಿಸಲಾಗಿದೆ. ಎಪಿಎಂಸಿ ವತಿಯಿಂದ ಮುಂದಿನ ಹಂತದಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ಸಮಿತಿ ನಿಧಿಯಿಂದ ನಡೆಯಲಿದೆ. ರೈತಭವನ, ವಾಣಿಜ್ಯ ಸಂಕೀರ್ಣ ನಿರ್ಮಿಸುವ ಬಗ್ಗೆ ಯೋಜನೆ ರೂಪಿಸಲಾಗಿದೆ.

-ರಾಮಚಂದ್ರ ಕೆ.ನಾಯ್ಕ, ಎಪಿಎಂಸಿ ಸಹಾಯಕ ನಿರ್ದೇಶಕರು

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.